Homeಕರ್ನಾಟಕಯುಪಿ: ಇಂದು ಕೊನೆಯ ಹಂತದ ಚುನಾವಣೆ; ವಾರಣಾಸಿಯ ಮೇಲೆ ಎಲ್ಲರ ಕಣ್ಣು

ಯುಪಿ: ಇಂದು ಕೊನೆಯ ಹಂತದ ಚುನಾವಣೆ; ವಾರಣಾಸಿಯ ಮೇಲೆ ಎಲ್ಲರ ಕಣ್ಣು

- Advertisement -
- Advertisement -

ಲಕ್ನೋ: ಉತ್ತರ ಪ್ರದೇಶದಲ್ಲಿ 7 ಹಂತದ ಮಹಾ ಚುನಾವಣೆಯ ಕೊನೆಯ ಹಂತದ ಮತದಾನ ಇಂದು ನಡೆಯುತ್ತಿದ್ದು, 54 ಕ್ಷೇತ್ರಗಳಲ್ಲಿ ಮತದಾನ ನಡೆಯತ್ತಿದೆ. ಈ ಸುತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಸಂಸದೀಯ ಕ್ಷೇತ್ರವಾದ ವಾರಣಾಸಿಯತ್ತ ಎಲ್ಲರ ಕಣ್ಣು ನೆಟ್ಟಿದೆ.

ಅಜಂಗಢ, ಮೌ, ಜೌನ್‌ಪುರ್, ಗಾಜಿಪುರ, ಚಂದೌಲಿ, ವಾರಣಾಸಿ, ಮಿರ್ಜಾಪುರ, ಭದೋಹಿ ಮತ್ತು ಸೋನ್‌ಭದ್ರ ಜಿಲ್ಲೆಗಳಲ್ಲಿನ 54 ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣೆ ನಡೆಯುತ್ತಿದೆ.

ವಾರಣಾಸಿ ಮತ್ತು ಅದರ ಪಕ್ಕದ ಜಿಲ್ಲೆಗಳಾದ ಬನಾರಸ್ ಸಿಟಿ ಸೌತ್, ಬನಾರಸ್ ಸಿಟಿ ನಾರ್ತ್, ಶಿವಪುರ, ಸೇವಾಪುರಿ, ಕಂಟೋನ್ಮೆಂಟ್, ಅಜ್ಗರ, ಪಿಂದ್ರಾ ಮತ್ತು ರೊಹನಿಯಾದ ಕ್ಷೇತ್ರಗಳು ಬಹುಕೋನ ಸ್ಪರ್ಧೆಗೆ ಸಾಕ್ಷಿಯಾಗಿವೆ.

ಕಳೆದ ಬಾರಿ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು ಈ ಪ್ರದೇಶದಲ್ಲಿ ಮುನ್ನಡೆ ಸಾಧಿಸಿದ್ದವು. ಆರು ಸ್ಥಾನಗಳು ಬಿಜೆಪಿ ಪಾಲಾಗಿವೆ. ಉಳಿದ ಎರಡರಲ್ಲಿ ಬಿಜೆಪಿ ಮಿತ್ರ ಪಕ್ಷವಾದ ಅನುಪ್ರಿಯಾ ಪಟೇಲ್ ಅವರ ಅಪ್ನಾ ದಳ (ಎಸ್) ಒಂದು ಸ್ಥಾನ, ಈಗ ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಕ್ಷದ ಪಾಲುದಾರರಾಗಿರುವ ಓಂ ಪ್ರಕಾಶ್ ರಾಜ್‌ಭರ್ ಅವರ ಸುಹೇಲ್‌ದೇವ್ ಭಾರತೀಯ ಸಮಾಜ ಪಕ್ಷ (ಎಸ್‌ಬಿಎಸ್‌ಪಿ) ಒಂದು ಸ್ಥಾನವನ್ನು ಗೆದ್ದಿವೆ.

ಐದು ಕ್ಷೇತ್ರಗಳು ಪ್ರಧಾನಿ ಮೋದಿಯವರ ಸಂಸದೀಯ ಕ್ಷೇತ್ರವಾದ ವಾರಣಾಸಿ ವ್ಯಾಪ್ತಿಯಲ್ಲಿವೆ. ಕಳೆದ ಬಾರಿ ಬಿಜೆಪಿ ಗೆದ್ದಿದ್ದ ನೆರೆಯ ಮಿರ್ಜಾಪುರ ಮತ್ತು ಜೌನ್‌ಪುರದಲ್ಲೂ ಪ್ರಬಲ ಚುನಾವಣಾ ಸಮರ ಏರ್ಪಟ್ಟಿದೆ.

3 ಲಕ್ಷ ಮುಸ್ಲಿಮರಲ್ಲದೆ ವಾರಣಾಸಿಯಲ್ಲಿ 3.25 ಲಕ್ಷ ವೈಶ್ಯರು, ಸ್ಥಳೀಯವಾಗಿ ಒಬಿಸಿ ಕುರ್ಮಿ ​​2 ಲಕ್ಷ, ಯಾದವರು 1.5 ಲಕ್ಷ, ಠಾಕೂರ್ 1 ಲಕ್ಷ, ದಲಿತರು 80,000 ಮತ್ತು ಇತರ ಒಬಿಸಿ ಜಾತಿಗಳು 70,000 ಜನರಿದ್ದಾರೆ.

ಅಖಿಲೇಶ್ ಯಾದವ್ ಅವರ ಪಾಲುದಾರರಾದ ಅಪ್ನಾ ದಳ (ಕೆ), ರಾಜ್‌ಭರ್ ಅವರ ಎಸ್‌ಬಿಎಸ್‌ಪಿ ಮತ್ತು ಬಿಜೆಪಿ ಮಿತ್ರಪಕ್ಷಗಳಾದ ಅಪ್ನಾ ದಳ, ನಿಶಾದ್ ಪಕ್ಷಗಳ ನಡುವಿನ ಸಮರವೆಂದೇ ಕೊನೆಯ ಹಂತದ ಚುನಾವಣೆಯನ್ನು ನೋಡಲಾಗುತ್ತಿದೆ.

ಅಖಿಲೇಶ್ ಯಾದವ್ ಅವರು ವಾರಣಾಸಿ ಭಾಗದಲ್ಲಿ ನಾಲ್ಕು ಕ್ಷೇತ್ರಗಳಲ್ಲಿ ಎಸ್‌ಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದಾರೆ. ಇನ್ನುಳಿದ ಸ್ಥಾನಗಳನ್ನು ಇತರ ಮಿತ್ರಪಕ್ಷಗಳಾದ ಅಪ್ನಾ ದಳ, ಎಸ್‌ಬಿಎಸ್‌ಪಿಗೆ ಬಿಟ್ಟುಕೊಟ್ಟಿದ್ದಾರೆ.

ಬಿಜೆಪಿ ಏಳು ಸ್ಥಾನಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ರೊಹಾನಿಯಾ ಕ್ಷೇತ್ರದಲ್ಲಿ ಕೇಂದ್ರ ಸಚಿವೆ ಅನುಪ್ರಿಯಾ ಪಟೇಲ್ ನೇತೃತ್ವದ ಅಪ್ನಾ ದಳ (ಎಸ್) ಅಭ್ಯರ್ಥಿ ಸ್ಪರ್ಧಿಸಿದ್ದಾರೆ.

ಈ ಚುನಾವಣೆಯು ಸಮಾಜವಾದಿ ಪಕ್ಷದ ಮುಖ್ಯಸ್ಥರಿಗೆ ಪರೀಕ್ಷೆಯೊಡ್ಡಿದೆ. ಅಖಿಲೇಶ್‌ ಅವರ ಸಂಸದೀಯ ಕ್ಷೇತ್ರವಾದ ಅಜಂಗಢ್‌ಗೆ ಸಹ ಚುನಾವಣೆ ನಡೆಯುತ್ತಿದೆ. 2017ರಲ್ಲಿ ಬಿಜೆಪಿ ಪ್ರಚಂಡ ಬಹುಮತದ ನಡುವೆಯೂ ಈ ಪ್ರದೇಶವು ಎಸ್‌ಪಿಗೆ ನಿಷ್ಠವಾಗಿತ್ತು. ಜಿಲ್ಲೆಯ 10 ಸ್ಥಾನಗಳಲ್ಲಿ ಎಸ್‌ಪಿ ಐದರಲ್ಲಿ ಗೆದ್ದಿತ್ತು.

ಉತ್ತರ ಪ್ರದೇಶ ಮತ್ತು ಇತರ ನಾಲ್ಕು ರಾಜ್ಯಗಳ ಮತ ಎಣಿಕೆಯು ಮಾರ್ಚ್ 10 ರಂದು ನಡೆಯಲಿದೆ.

ಕೋವಿಡ್‌ ಬಿಕ್ಕಟ್ಟು ನಿರ್ವಹಣೆ: ಬಿಜೆಪಿಗೆ ಮುಳುವಾಗುವುದೇ?

ಮಾನವ ಹಕ್ಕುಗಳ ಸಂಸ್ಥೆಯಾದ ಸಿಟಿಜನ್‌ ಫಾರ್‌ ಜಸ್ಟೀಸ್‌ ಅಂಡ್‌ ಫೀಸ್‌ (ಸಿಜೆಪಿ) ಹಾಗೂ ಸ್ವತಂತ್ರ ತಜ್ಞರು ಸಂಗ್ರಹಿಸಿ, ವಿಶ್ಲೇಷಿಸಿದ ದತ್ತಾಂಶಗಳು ಮಹತ್ವದ ಸಂಗತಿಯೊಂದನ್ನು ಇತ್ತೀಚೆಗೆ ಬಿಚ್ಚಿಟ್ಟಿತ್ತು. ಪ್ರಧಾನಿ ನರೇಂದ್ರ ಮೋದಿಯವರ ತವರು ಜಿಲ್ಲೆಯಾದ ವಾರಣಾಸಿಯನ್ನು ಹೊಂದಿರುವ ಪೂರ್ವ ಉತ್ತರ ಪ್ರದೇಶದ ಪೂರ್ವಂಚಲ ಭಾಗದಲ್ಲಿ ಅತಿಹೆಚ್ಚಿನ ಜನರು ಕೋವಿಡ್ ಸಾಂಕ್ರಾಮಿಕದ ವೇಳೆ ಸಾವಿಗೀಡಾಗಿದ್ದಾರೆ ಎಂದು ವರದಿ ವಿಶ್ಲೇಷಿಸಿತ್ತು.

ಸಮೀಕ್ಷೆ ನಡೆಸಿದ ಪ್ರದೇಶದ ಅಂಕಿ ಅಂಶಗಳು ಹೇಳುವುದೇನೆಂದರೆ “ಜನವರಿ 2020ರಿಂದ ಆಗಸ್ಟ್‌ 2021ರವರೆಗೆ ದಾಖಲಾದ ಸಾವಿನ ಪ್ರಮಾಣವು 2019ರ ದಾಖಲೆಗೆ ಹೋಲಿಕೆ ಮಾಡಿದರೆ ಶೇ. 60ರಷ್ಟು ಹೆಚ್ಚಾಗಿದೆ”. ಇದು ಸರ್ಕಾರಿ ದಾಖಲೆಗಳನ್ನು ಆಧರಿಸಿ ಮಾಡಿದ ವರದಿಯಾಗಿದೆ ಎಂದು ಸಿಜೆಪಿ ಹೇಳಿತ್ತು. ಈ ಎಲ್ಲ ಅಂಶಗಳು ಚುನಾವಣೆಯ ಮೇಲೆ ಪರಿಣಾಮ ಬೀರಲಿದೆಯೇ?- ಮಾರ್ಚ್ 10ರವರೆಗೆ ಕಾಯಬೇಕಷ್ಟೇ.


ಉತ್ತರ ಪ್ರದೇಶ: ಕೋವಿಡ್‌ ಅವಧಿಯಲ್ಲಿ ಮೋದಿಯ ವಾರಣಾಸಿ ಕಂಡ ಸಾವು ನೋವು: ಬೆಚ್ಚಿಬೀಳಿಸುವ ವರದಿ ಬಹಿರಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...