Homeಕರ್ನಾಟಕಯುಪಿ: ಇಂದು ಕೊನೆಯ ಹಂತದ ಚುನಾವಣೆ; ವಾರಣಾಸಿಯ ಮೇಲೆ ಎಲ್ಲರ ಕಣ್ಣು

ಯುಪಿ: ಇಂದು ಕೊನೆಯ ಹಂತದ ಚುನಾವಣೆ; ವಾರಣಾಸಿಯ ಮೇಲೆ ಎಲ್ಲರ ಕಣ್ಣು

- Advertisement -
- Advertisement -

ಲಕ್ನೋ: ಉತ್ತರ ಪ್ರದೇಶದಲ್ಲಿ 7 ಹಂತದ ಮಹಾ ಚುನಾವಣೆಯ ಕೊನೆಯ ಹಂತದ ಮತದಾನ ಇಂದು ನಡೆಯುತ್ತಿದ್ದು, 54 ಕ್ಷೇತ್ರಗಳಲ್ಲಿ ಮತದಾನ ನಡೆಯತ್ತಿದೆ. ಈ ಸುತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಸಂಸದೀಯ ಕ್ಷೇತ್ರವಾದ ವಾರಣಾಸಿಯತ್ತ ಎಲ್ಲರ ಕಣ್ಣು ನೆಟ್ಟಿದೆ.

ಅಜಂಗಢ, ಮೌ, ಜೌನ್‌ಪುರ್, ಗಾಜಿಪುರ, ಚಂದೌಲಿ, ವಾರಣಾಸಿ, ಮಿರ್ಜಾಪುರ, ಭದೋಹಿ ಮತ್ತು ಸೋನ್‌ಭದ್ರ ಜಿಲ್ಲೆಗಳಲ್ಲಿನ 54 ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣೆ ನಡೆಯುತ್ತಿದೆ.

ವಾರಣಾಸಿ ಮತ್ತು ಅದರ ಪಕ್ಕದ ಜಿಲ್ಲೆಗಳಾದ ಬನಾರಸ್ ಸಿಟಿ ಸೌತ್, ಬನಾರಸ್ ಸಿಟಿ ನಾರ್ತ್, ಶಿವಪುರ, ಸೇವಾಪುರಿ, ಕಂಟೋನ್ಮೆಂಟ್, ಅಜ್ಗರ, ಪಿಂದ್ರಾ ಮತ್ತು ರೊಹನಿಯಾದ ಕ್ಷೇತ್ರಗಳು ಬಹುಕೋನ ಸ್ಪರ್ಧೆಗೆ ಸಾಕ್ಷಿಯಾಗಿವೆ.

ಕಳೆದ ಬಾರಿ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು ಈ ಪ್ರದೇಶದಲ್ಲಿ ಮುನ್ನಡೆ ಸಾಧಿಸಿದ್ದವು. ಆರು ಸ್ಥಾನಗಳು ಬಿಜೆಪಿ ಪಾಲಾಗಿವೆ. ಉಳಿದ ಎರಡರಲ್ಲಿ ಬಿಜೆಪಿ ಮಿತ್ರ ಪಕ್ಷವಾದ ಅನುಪ್ರಿಯಾ ಪಟೇಲ್ ಅವರ ಅಪ್ನಾ ದಳ (ಎಸ್) ಒಂದು ಸ್ಥಾನ, ಈಗ ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಕ್ಷದ ಪಾಲುದಾರರಾಗಿರುವ ಓಂ ಪ್ರಕಾಶ್ ರಾಜ್‌ಭರ್ ಅವರ ಸುಹೇಲ್‌ದೇವ್ ಭಾರತೀಯ ಸಮಾಜ ಪಕ್ಷ (ಎಸ್‌ಬಿಎಸ್‌ಪಿ) ಒಂದು ಸ್ಥಾನವನ್ನು ಗೆದ್ದಿವೆ.

ಐದು ಕ್ಷೇತ್ರಗಳು ಪ್ರಧಾನಿ ಮೋದಿಯವರ ಸಂಸದೀಯ ಕ್ಷೇತ್ರವಾದ ವಾರಣಾಸಿ ವ್ಯಾಪ್ತಿಯಲ್ಲಿವೆ. ಕಳೆದ ಬಾರಿ ಬಿಜೆಪಿ ಗೆದ್ದಿದ್ದ ನೆರೆಯ ಮಿರ್ಜಾಪುರ ಮತ್ತು ಜೌನ್‌ಪುರದಲ್ಲೂ ಪ್ರಬಲ ಚುನಾವಣಾ ಸಮರ ಏರ್ಪಟ್ಟಿದೆ.

3 ಲಕ್ಷ ಮುಸ್ಲಿಮರಲ್ಲದೆ ವಾರಣಾಸಿಯಲ್ಲಿ 3.25 ಲಕ್ಷ ವೈಶ್ಯರು, ಸ್ಥಳೀಯವಾಗಿ ಒಬಿಸಿ ಕುರ್ಮಿ ​​2 ಲಕ್ಷ, ಯಾದವರು 1.5 ಲಕ್ಷ, ಠಾಕೂರ್ 1 ಲಕ್ಷ, ದಲಿತರು 80,000 ಮತ್ತು ಇತರ ಒಬಿಸಿ ಜಾತಿಗಳು 70,000 ಜನರಿದ್ದಾರೆ.

ಅಖಿಲೇಶ್ ಯಾದವ್ ಅವರ ಪಾಲುದಾರರಾದ ಅಪ್ನಾ ದಳ (ಕೆ), ರಾಜ್‌ಭರ್ ಅವರ ಎಸ್‌ಬಿಎಸ್‌ಪಿ ಮತ್ತು ಬಿಜೆಪಿ ಮಿತ್ರಪಕ್ಷಗಳಾದ ಅಪ್ನಾ ದಳ, ನಿಶಾದ್ ಪಕ್ಷಗಳ ನಡುವಿನ ಸಮರವೆಂದೇ ಕೊನೆಯ ಹಂತದ ಚುನಾವಣೆಯನ್ನು ನೋಡಲಾಗುತ್ತಿದೆ.

ಅಖಿಲೇಶ್ ಯಾದವ್ ಅವರು ವಾರಣಾಸಿ ಭಾಗದಲ್ಲಿ ನಾಲ್ಕು ಕ್ಷೇತ್ರಗಳಲ್ಲಿ ಎಸ್‌ಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದಾರೆ. ಇನ್ನುಳಿದ ಸ್ಥಾನಗಳನ್ನು ಇತರ ಮಿತ್ರಪಕ್ಷಗಳಾದ ಅಪ್ನಾ ದಳ, ಎಸ್‌ಬಿಎಸ್‌ಪಿಗೆ ಬಿಟ್ಟುಕೊಟ್ಟಿದ್ದಾರೆ.

ಬಿಜೆಪಿ ಏಳು ಸ್ಥಾನಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ರೊಹಾನಿಯಾ ಕ್ಷೇತ್ರದಲ್ಲಿ ಕೇಂದ್ರ ಸಚಿವೆ ಅನುಪ್ರಿಯಾ ಪಟೇಲ್ ನೇತೃತ್ವದ ಅಪ್ನಾ ದಳ (ಎಸ್) ಅಭ್ಯರ್ಥಿ ಸ್ಪರ್ಧಿಸಿದ್ದಾರೆ.

ಈ ಚುನಾವಣೆಯು ಸಮಾಜವಾದಿ ಪಕ್ಷದ ಮುಖ್ಯಸ್ಥರಿಗೆ ಪರೀಕ್ಷೆಯೊಡ್ಡಿದೆ. ಅಖಿಲೇಶ್‌ ಅವರ ಸಂಸದೀಯ ಕ್ಷೇತ್ರವಾದ ಅಜಂಗಢ್‌ಗೆ ಸಹ ಚುನಾವಣೆ ನಡೆಯುತ್ತಿದೆ. 2017ರಲ್ಲಿ ಬಿಜೆಪಿ ಪ್ರಚಂಡ ಬಹುಮತದ ನಡುವೆಯೂ ಈ ಪ್ರದೇಶವು ಎಸ್‌ಪಿಗೆ ನಿಷ್ಠವಾಗಿತ್ತು. ಜಿಲ್ಲೆಯ 10 ಸ್ಥಾನಗಳಲ್ಲಿ ಎಸ್‌ಪಿ ಐದರಲ್ಲಿ ಗೆದ್ದಿತ್ತು.

ಉತ್ತರ ಪ್ರದೇಶ ಮತ್ತು ಇತರ ನಾಲ್ಕು ರಾಜ್ಯಗಳ ಮತ ಎಣಿಕೆಯು ಮಾರ್ಚ್ 10 ರಂದು ನಡೆಯಲಿದೆ.

ಕೋವಿಡ್‌ ಬಿಕ್ಕಟ್ಟು ನಿರ್ವಹಣೆ: ಬಿಜೆಪಿಗೆ ಮುಳುವಾಗುವುದೇ?

ಮಾನವ ಹಕ್ಕುಗಳ ಸಂಸ್ಥೆಯಾದ ಸಿಟಿಜನ್‌ ಫಾರ್‌ ಜಸ್ಟೀಸ್‌ ಅಂಡ್‌ ಫೀಸ್‌ (ಸಿಜೆಪಿ) ಹಾಗೂ ಸ್ವತಂತ್ರ ತಜ್ಞರು ಸಂಗ್ರಹಿಸಿ, ವಿಶ್ಲೇಷಿಸಿದ ದತ್ತಾಂಶಗಳು ಮಹತ್ವದ ಸಂಗತಿಯೊಂದನ್ನು ಇತ್ತೀಚೆಗೆ ಬಿಚ್ಚಿಟ್ಟಿತ್ತು. ಪ್ರಧಾನಿ ನರೇಂದ್ರ ಮೋದಿಯವರ ತವರು ಜಿಲ್ಲೆಯಾದ ವಾರಣಾಸಿಯನ್ನು ಹೊಂದಿರುವ ಪೂರ್ವ ಉತ್ತರ ಪ್ರದೇಶದ ಪೂರ್ವಂಚಲ ಭಾಗದಲ್ಲಿ ಅತಿಹೆಚ್ಚಿನ ಜನರು ಕೋವಿಡ್ ಸಾಂಕ್ರಾಮಿಕದ ವೇಳೆ ಸಾವಿಗೀಡಾಗಿದ್ದಾರೆ ಎಂದು ವರದಿ ವಿಶ್ಲೇಷಿಸಿತ್ತು.

ಸಮೀಕ್ಷೆ ನಡೆಸಿದ ಪ್ರದೇಶದ ಅಂಕಿ ಅಂಶಗಳು ಹೇಳುವುದೇನೆಂದರೆ “ಜನವರಿ 2020ರಿಂದ ಆಗಸ್ಟ್‌ 2021ರವರೆಗೆ ದಾಖಲಾದ ಸಾವಿನ ಪ್ರಮಾಣವು 2019ರ ದಾಖಲೆಗೆ ಹೋಲಿಕೆ ಮಾಡಿದರೆ ಶೇ. 60ರಷ್ಟು ಹೆಚ್ಚಾಗಿದೆ”. ಇದು ಸರ್ಕಾರಿ ದಾಖಲೆಗಳನ್ನು ಆಧರಿಸಿ ಮಾಡಿದ ವರದಿಯಾಗಿದೆ ಎಂದು ಸಿಜೆಪಿ ಹೇಳಿತ್ತು. ಈ ಎಲ್ಲ ಅಂಶಗಳು ಚುನಾವಣೆಯ ಮೇಲೆ ಪರಿಣಾಮ ಬೀರಲಿದೆಯೇ?- ಮಾರ್ಚ್ 10ರವರೆಗೆ ಕಾಯಬೇಕಷ್ಟೇ.


ಉತ್ತರ ಪ್ರದೇಶ: ಕೋವಿಡ್‌ ಅವಧಿಯಲ್ಲಿ ಮೋದಿಯ ವಾರಣಾಸಿ ಕಂಡ ಸಾವು ನೋವು: ಬೆಚ್ಚಿಬೀಳಿಸುವ ವರದಿ ಬಹಿರಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...