Homeಕರ್ನಾಟಕಯುಪಿ: ಇಂದು ಕೊನೆಯ ಹಂತದ ಚುನಾವಣೆ; ವಾರಣಾಸಿಯ ಮೇಲೆ ಎಲ್ಲರ ಕಣ್ಣು

ಯುಪಿ: ಇಂದು ಕೊನೆಯ ಹಂತದ ಚುನಾವಣೆ; ವಾರಣಾಸಿಯ ಮೇಲೆ ಎಲ್ಲರ ಕಣ್ಣು

- Advertisement -
- Advertisement -

ಲಕ್ನೋ: ಉತ್ತರ ಪ್ರದೇಶದಲ್ಲಿ 7 ಹಂತದ ಮಹಾ ಚುನಾವಣೆಯ ಕೊನೆಯ ಹಂತದ ಮತದಾನ ಇಂದು ನಡೆಯುತ್ತಿದ್ದು, 54 ಕ್ಷೇತ್ರಗಳಲ್ಲಿ ಮತದಾನ ನಡೆಯತ್ತಿದೆ. ಈ ಸುತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಸಂಸದೀಯ ಕ್ಷೇತ್ರವಾದ ವಾರಣಾಸಿಯತ್ತ ಎಲ್ಲರ ಕಣ್ಣು ನೆಟ್ಟಿದೆ.

ಅಜಂಗಢ, ಮೌ, ಜೌನ್‌ಪುರ್, ಗಾಜಿಪುರ, ಚಂದೌಲಿ, ವಾರಣಾಸಿ, ಮಿರ್ಜಾಪುರ, ಭದೋಹಿ ಮತ್ತು ಸೋನ್‌ಭದ್ರ ಜಿಲ್ಲೆಗಳಲ್ಲಿನ 54 ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣೆ ನಡೆಯುತ್ತಿದೆ.

ವಾರಣಾಸಿ ಮತ್ತು ಅದರ ಪಕ್ಕದ ಜಿಲ್ಲೆಗಳಾದ ಬನಾರಸ್ ಸಿಟಿ ಸೌತ್, ಬನಾರಸ್ ಸಿಟಿ ನಾರ್ತ್, ಶಿವಪುರ, ಸೇವಾಪುರಿ, ಕಂಟೋನ್ಮೆಂಟ್, ಅಜ್ಗರ, ಪಿಂದ್ರಾ ಮತ್ತು ರೊಹನಿಯಾದ ಕ್ಷೇತ್ರಗಳು ಬಹುಕೋನ ಸ್ಪರ್ಧೆಗೆ ಸಾಕ್ಷಿಯಾಗಿವೆ.

ಕಳೆದ ಬಾರಿ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು ಈ ಪ್ರದೇಶದಲ್ಲಿ ಮುನ್ನಡೆ ಸಾಧಿಸಿದ್ದವು. ಆರು ಸ್ಥಾನಗಳು ಬಿಜೆಪಿ ಪಾಲಾಗಿವೆ. ಉಳಿದ ಎರಡರಲ್ಲಿ ಬಿಜೆಪಿ ಮಿತ್ರ ಪಕ್ಷವಾದ ಅನುಪ್ರಿಯಾ ಪಟೇಲ್ ಅವರ ಅಪ್ನಾ ದಳ (ಎಸ್) ಒಂದು ಸ್ಥಾನ, ಈಗ ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಕ್ಷದ ಪಾಲುದಾರರಾಗಿರುವ ಓಂ ಪ್ರಕಾಶ್ ರಾಜ್‌ಭರ್ ಅವರ ಸುಹೇಲ್‌ದೇವ್ ಭಾರತೀಯ ಸಮಾಜ ಪಕ್ಷ (ಎಸ್‌ಬಿಎಸ್‌ಪಿ) ಒಂದು ಸ್ಥಾನವನ್ನು ಗೆದ್ದಿವೆ.

ಐದು ಕ್ಷೇತ್ರಗಳು ಪ್ರಧಾನಿ ಮೋದಿಯವರ ಸಂಸದೀಯ ಕ್ಷೇತ್ರವಾದ ವಾರಣಾಸಿ ವ್ಯಾಪ್ತಿಯಲ್ಲಿವೆ. ಕಳೆದ ಬಾರಿ ಬಿಜೆಪಿ ಗೆದ್ದಿದ್ದ ನೆರೆಯ ಮಿರ್ಜಾಪುರ ಮತ್ತು ಜೌನ್‌ಪುರದಲ್ಲೂ ಪ್ರಬಲ ಚುನಾವಣಾ ಸಮರ ಏರ್ಪಟ್ಟಿದೆ.

3 ಲಕ್ಷ ಮುಸ್ಲಿಮರಲ್ಲದೆ ವಾರಣಾಸಿಯಲ್ಲಿ 3.25 ಲಕ್ಷ ವೈಶ್ಯರು, ಸ್ಥಳೀಯವಾಗಿ ಒಬಿಸಿ ಕುರ್ಮಿ ​​2 ಲಕ್ಷ, ಯಾದವರು 1.5 ಲಕ್ಷ, ಠಾಕೂರ್ 1 ಲಕ್ಷ, ದಲಿತರು 80,000 ಮತ್ತು ಇತರ ಒಬಿಸಿ ಜಾತಿಗಳು 70,000 ಜನರಿದ್ದಾರೆ.

ಅಖಿಲೇಶ್ ಯಾದವ್ ಅವರ ಪಾಲುದಾರರಾದ ಅಪ್ನಾ ದಳ (ಕೆ), ರಾಜ್‌ಭರ್ ಅವರ ಎಸ್‌ಬಿಎಸ್‌ಪಿ ಮತ್ತು ಬಿಜೆಪಿ ಮಿತ್ರಪಕ್ಷಗಳಾದ ಅಪ್ನಾ ದಳ, ನಿಶಾದ್ ಪಕ್ಷಗಳ ನಡುವಿನ ಸಮರವೆಂದೇ ಕೊನೆಯ ಹಂತದ ಚುನಾವಣೆಯನ್ನು ನೋಡಲಾಗುತ್ತಿದೆ.

ಅಖಿಲೇಶ್ ಯಾದವ್ ಅವರು ವಾರಣಾಸಿ ಭಾಗದಲ್ಲಿ ನಾಲ್ಕು ಕ್ಷೇತ್ರಗಳಲ್ಲಿ ಎಸ್‌ಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದಾರೆ. ಇನ್ನುಳಿದ ಸ್ಥಾನಗಳನ್ನು ಇತರ ಮಿತ್ರಪಕ್ಷಗಳಾದ ಅಪ್ನಾ ದಳ, ಎಸ್‌ಬಿಎಸ್‌ಪಿಗೆ ಬಿಟ್ಟುಕೊಟ್ಟಿದ್ದಾರೆ.

ಬಿಜೆಪಿ ಏಳು ಸ್ಥಾನಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ರೊಹಾನಿಯಾ ಕ್ಷೇತ್ರದಲ್ಲಿ ಕೇಂದ್ರ ಸಚಿವೆ ಅನುಪ್ರಿಯಾ ಪಟೇಲ್ ನೇತೃತ್ವದ ಅಪ್ನಾ ದಳ (ಎಸ್) ಅಭ್ಯರ್ಥಿ ಸ್ಪರ್ಧಿಸಿದ್ದಾರೆ.

ಈ ಚುನಾವಣೆಯು ಸಮಾಜವಾದಿ ಪಕ್ಷದ ಮುಖ್ಯಸ್ಥರಿಗೆ ಪರೀಕ್ಷೆಯೊಡ್ಡಿದೆ. ಅಖಿಲೇಶ್‌ ಅವರ ಸಂಸದೀಯ ಕ್ಷೇತ್ರವಾದ ಅಜಂಗಢ್‌ಗೆ ಸಹ ಚುನಾವಣೆ ನಡೆಯುತ್ತಿದೆ. 2017ರಲ್ಲಿ ಬಿಜೆಪಿ ಪ್ರಚಂಡ ಬಹುಮತದ ನಡುವೆಯೂ ಈ ಪ್ರದೇಶವು ಎಸ್‌ಪಿಗೆ ನಿಷ್ಠವಾಗಿತ್ತು. ಜಿಲ್ಲೆಯ 10 ಸ್ಥಾನಗಳಲ್ಲಿ ಎಸ್‌ಪಿ ಐದರಲ್ಲಿ ಗೆದ್ದಿತ್ತು.

ಉತ್ತರ ಪ್ರದೇಶ ಮತ್ತು ಇತರ ನಾಲ್ಕು ರಾಜ್ಯಗಳ ಮತ ಎಣಿಕೆಯು ಮಾರ್ಚ್ 10 ರಂದು ನಡೆಯಲಿದೆ.

ಕೋವಿಡ್‌ ಬಿಕ್ಕಟ್ಟು ನಿರ್ವಹಣೆ: ಬಿಜೆಪಿಗೆ ಮುಳುವಾಗುವುದೇ?

ಮಾನವ ಹಕ್ಕುಗಳ ಸಂಸ್ಥೆಯಾದ ಸಿಟಿಜನ್‌ ಫಾರ್‌ ಜಸ್ಟೀಸ್‌ ಅಂಡ್‌ ಫೀಸ್‌ (ಸಿಜೆಪಿ) ಹಾಗೂ ಸ್ವತಂತ್ರ ತಜ್ಞರು ಸಂಗ್ರಹಿಸಿ, ವಿಶ್ಲೇಷಿಸಿದ ದತ್ತಾಂಶಗಳು ಮಹತ್ವದ ಸಂಗತಿಯೊಂದನ್ನು ಇತ್ತೀಚೆಗೆ ಬಿಚ್ಚಿಟ್ಟಿತ್ತು. ಪ್ರಧಾನಿ ನರೇಂದ್ರ ಮೋದಿಯವರ ತವರು ಜಿಲ್ಲೆಯಾದ ವಾರಣಾಸಿಯನ್ನು ಹೊಂದಿರುವ ಪೂರ್ವ ಉತ್ತರ ಪ್ರದೇಶದ ಪೂರ್ವಂಚಲ ಭಾಗದಲ್ಲಿ ಅತಿಹೆಚ್ಚಿನ ಜನರು ಕೋವಿಡ್ ಸಾಂಕ್ರಾಮಿಕದ ವೇಳೆ ಸಾವಿಗೀಡಾಗಿದ್ದಾರೆ ಎಂದು ವರದಿ ವಿಶ್ಲೇಷಿಸಿತ್ತು.

ಸಮೀಕ್ಷೆ ನಡೆಸಿದ ಪ್ರದೇಶದ ಅಂಕಿ ಅಂಶಗಳು ಹೇಳುವುದೇನೆಂದರೆ “ಜನವರಿ 2020ರಿಂದ ಆಗಸ್ಟ್‌ 2021ರವರೆಗೆ ದಾಖಲಾದ ಸಾವಿನ ಪ್ರಮಾಣವು 2019ರ ದಾಖಲೆಗೆ ಹೋಲಿಕೆ ಮಾಡಿದರೆ ಶೇ. 60ರಷ್ಟು ಹೆಚ್ಚಾಗಿದೆ”. ಇದು ಸರ್ಕಾರಿ ದಾಖಲೆಗಳನ್ನು ಆಧರಿಸಿ ಮಾಡಿದ ವರದಿಯಾಗಿದೆ ಎಂದು ಸಿಜೆಪಿ ಹೇಳಿತ್ತು. ಈ ಎಲ್ಲ ಅಂಶಗಳು ಚುನಾವಣೆಯ ಮೇಲೆ ಪರಿಣಾಮ ಬೀರಲಿದೆಯೇ?- ಮಾರ್ಚ್ 10ರವರೆಗೆ ಕಾಯಬೇಕಷ್ಟೇ.


ಉತ್ತರ ಪ್ರದೇಶ: ಕೋವಿಡ್‌ ಅವಧಿಯಲ್ಲಿ ಮೋದಿಯ ವಾರಣಾಸಿ ಕಂಡ ಸಾವು ನೋವು: ಬೆಚ್ಚಿಬೀಳಿಸುವ ವರದಿ ಬಹಿರಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...