Homeಮುಖಪುಟಸರ್ಕಾರಕ್ಕೆ ನಾಗರಿಕರ ಖಾಸಗಿತನ & ವ್ಯಕ್ತಿ ಸ್ವಾತಂತ್ರ್ಯವನ್ನು ಕಸಿದುಕೊಳ್ಳುವ ಹಕ್ಕಿಲ್ಲ : ಅಲಹಾಬಾದ್‌ ಹೈಕೋರ್ಟ್‌

ಸರ್ಕಾರಕ್ಕೆ ನಾಗರಿಕರ ಖಾಸಗಿತನ & ವ್ಯಕ್ತಿ ಸ್ವಾತಂತ್ರ್ಯವನ್ನು ಕಸಿದುಕೊಳ್ಳುವ ಹಕ್ಕಿಲ್ಲ : ಅಲಹಾಬಾದ್‌ ಹೈಕೋರ್ಟ್‌

- Advertisement -
- Advertisement -

ವಿವಾದಾತ್ಮಕ ಪೌರತ್ವ ಕಾನೂನಿನ ವಿರುದ್ಧ ಪ್ರತಿಭಟನೆಯ ವೇಳೆ ಹಿಂಸಾಚಾರದ ಆರೋಪ ಹೊತ್ತವರನ್ನು ಹೆಸರಿಸಿ ಉತ್ತರ ಪ್ರದೇಶ ಸರ್ಕಾರ ಅಳವಡಿಸಿದ ಹೋರ್ಡಿಂಗ್‌ಗಳ ವಿಷಯವನ್ನು ಉತ್ತರ ಪ್ರದೇಶದ ಹೈಕೋರ್ಟ್ ವಿಚಾರಣೆ ನಡೆಸಿತು. ಮಧ್ಯಾಹ್ನ 3 ಗಂಟೆಗೆ ಪ್ರಾರಂಭವಾದ ವಿಚಾರಣೆಯಲ್ಲಿ, ನ್ಯಾಯಾಲಯವು ಸರಕಾರಕ್ಕೆ ಹಲವಾರು ಪ್ರಶ್ನೆಗಳನ್ನು ಕೇಳಿತು. ಪ್ರಶ್ನೆಗಳಿಗೆ ಸರ್ಕಾರಿ ಪ್ರತಿನಿಧಿಗಳು ಉತ್ತರಿಸಿದರು. ಈ ಕುರಿತು ನ್ಯಾಯಾಲಯವು ತೀರ್ಪನ್ನು ಕಾಯ್ದಿರಿಸಿದ್ದು, ನಾಳೆ ಮಧ್ಯಾಹ್ನ ತೀರ್ಪು ನಿರೀಕ್ಷಿಸಲಾಗಿದೆ.

ಉತ್ತರ ಪ್ರದೇಶದ ಉಚ್ಛನ್ಯಾಯಾಲಯವಾದ ಅಲಹಾಬಾದ್ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಗೋವಿಂದ್ ಮಾಥುರ್ ಈ ಪ್ರಕರಣವನ್ನು ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಂಡಿದ್ದರು. ಇಂದು ಬೆಳಿಗ್ಗೆ 10 ಗಂಟೆಗೆ ನಡೆಯಬೇಕಿದ್ದ ವಿಚಾರಣೆಯು ಸರ್ಕಾರದ ಕೋರಿಕೆಯ ಮೇಲೆ ಸಂಜೆ 3 ಕ್ಕೆ ಮುಂದೂಡಿತ್ತು. ಆ ಸಮಯದಲ್ಲಿ ಮುಖ್ಯ ನ್ಯಾಯಾಧೀಶರು ಸರಕಾರಕ್ಕೆ ನಾಗರಿಕರ ಖಾಸಗಿತನ ಮತ್ತು ವ್ಯಕ್ತಿ ಸ್ವಾತಂತ್ರ್ಯವನ್ನು ಕಸಿದುಕೊಳ್ಳುವ ಹಕ್ಕಿಲ್ಲ, ವಿಚಾರಣೆ ಪ್ರಾರಂಭವಾಗುವ ಮೊದಲೇ ಸರಕಾರ ಅದನ್ನು ಸರಿಪಡಿಸುವ ಬಗ್ಗೆ ಭರವಸೆಯಿದೆ” ಎಂದು ಹೇಳಿದ್ದರು.

“ಅಡ್ವೊಕೇಟ್ ಜನರಲ್ ಆಡಳಿತದ ಪರವಾಗಿ ಹಾಜರಾಗಿ ಸರ್ಕಾರದ ಅಭಿಪ್ರಾಯಗಳನ್ನು ಮಂಡಿಸಿದರು. ವಿಚಾರಣೆಯ ನಂತರ ನ್ಯಾಯಾಲಯವು ತನ್ನ ಆದೇಶಗಳನ್ನು ಕಾಯ್ದಿರಿಸಿದೆ, ನಾಳೆ ಮಧ್ಯಾಹ್ನ 3 ಗಂಟೆಗೆ ತೀರ್ಪು ನೀಡಬಹುದು” ಎಂದು ರಾಜ್ಯದ ಹೆಚ್ಚುವರಿ ಅಡ್ವೊಕೇಟ್ ಜನರಲ್ ನೀರಜ್ ತ್ರಿಪಾಠಿ ಸುದ್ದಿಗಾರರಿಗೆ ತಿಳಿಸಿದರು.

ಪೌರತ್ವ ಕಾನೂನಿನ ವಿರುದ್ಧ ನಡೆದ ಪ್ರತಿಭಟನೆಯ ವೇಳೆ ಹಿಂಸಾಚಾರ ಆರೋಪದ ಹೆಸರಿನಲ್ಲಿ ಉತ್ತರ ಪ್ರದೇಶ ಸರ್ಕಾರವು ಆರೋಪಿಗಳ ವಿಳಾಸ ಮತ್ತು ಫೋಟೋಗಳನ್ನು ಹೊತ್ತ ಹೋರ್ಡಿಂಗ್‌ಗಳನ್ನು ಲಕ್ನೋದ ಪ್ರಮುಖ ಸ್ಥಳಗಳಲ್ಲಿ ಅಳವಡಿಸಿತ್ತು. ಆದಿತ್ಯವಾರ ರಜಾದಿನವಾದರು ಇದರ ವಿಚಾರಣೆಯನ್ನು ಕೈಗೆತ್ತಿಕೊಳ್ಳುವುದಾಗಿ ಹೈಕೋರ್ಟ್ ಹೇಳಿತ್ತು. ಮುಖ್ಯ ನ್ಯಾಯಮೂರ್ತಿ ಗೋವಿಂದ್ ಮಾಥುರ್ ಅವರ ನ್ಯಾಯಾಲಯವು ಈ ಪ್ರಕರಣವನ್ನು ಸ್ವಯಂ ಪ್ರೇರಿತವಾಗಿ ಕೈಗೆತ್ತಿಕೊಂಡಿತ್ತು.

ಅನೇಕ ಆರೋಪಿಗಳಿಗೆ ವೈಯಕ್ತಿಕ ಆಸ್ತಿ ಲಗತ್ತು ನೋಟಿಸ್‌ಗಳನ್ನು ಈಗಾಗಲೇ ಸರ್ಕಾರ ಕಳುಹಿಸಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಸೂಚನೆಯ ಮೇರೆಗೆ ಹೋರ್ಡಿಂಗ್‌ಗಳನ್ನು ಹಾಕಲಾಗಿದೆ ಎಂದು ಮುಖ್ಯಮಂತ್ರಿ ಕಚೇರಿಯ ಮೂಲಗಳು ತಿಳಿಸಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...