Homeದಲಿತ್ ಫೈಲ್ಸ್ಯುಪಿ: ಮತಾಂತರ ಆರೋಪ ಮಾಡಿದ ವಿಎಚ್‌ಪಿ; ಆರು ಮಂದಿ ದಲಿತ-ಕ್ರಿಶ್ಚಿಯನ್‌ ಮಹಿಳೆಯರ ಮೇಲೆ ಎಫ್‌ಐಆರ್‌

ಯುಪಿ: ಮತಾಂತರ ಆರೋಪ ಮಾಡಿದ ವಿಎಚ್‌ಪಿ; ಆರು ಮಂದಿ ದಲಿತ-ಕ್ರಿಶ್ಚಿಯನ್‌ ಮಹಿಳೆಯರ ಮೇಲೆ ಎಫ್‌ಐಆರ್‌

ಹುಟ್ಟುಹಬ್ಬದ ಆಚರಣೆಗೆ ಸೇರಿದ್ದ ಮಹಿಳೆಯ ಮೇಲೆ ಮತಾಂತರದ ಆರೋಪದ ಮಾಡಿರುವ ವಿಎಚ್‌ಪಿ, ದಲಿತ ಮಹಿಳೆಯರು ಜೈಲು ಸೇರಲು ಕಾರಣವಾಗಿದೆ ಎಂಬ ಆರೋಪಗಳು ಬಂದಿವೆ.

- Advertisement -
- Advertisement -

ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ನೀಡಿದ ದೂರಿನ ಮೇರೆಗೆ, ಬಲವಂತದ ಮತಾಂತರ ಆರೋಪದ ಮೇಲೆ ಜುಲೈ 30ರಂದು ಉತ್ತರ ಪ್ರದೇಶದ ಅಜಂಗಢ್‌ನ ಮಹಾರಾಜ್‌ಗಂಜ್ ಪ್ರದೇಶದಲ್ಲಿ ಆರು ದಲಿತ-ಕ್ರಿಶ್ಚಿಯನ್ ಮಹಿಳೆಯರ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಹುಟ್ಟುಹಬ್ಬದ ಸಂಭ್ರಮಾಚರಣೆಗೆ ಬಲವಂತದ ಮತಾಂತರವನ್ನು ಆರೋಪಿಸಿ ಹಿಂದುತ್ವವಾದಿಗಳು ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ ಎಂದು ಮಹಿಳೆಯರ ಕುಟುಂಬ ಸದಸ್ಯರು ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇಂದ್ರಕಲಾ, ಸುಭಾಗಿ ದೇವಿ, ಸಾಧನಾ, ಸವಿತಾ, ಅನಿತಾ ಮತ್ತು ಸುನೀತಾ ಎಂಬ ಮಹಿಳೆಯರನ್ನು ಕಲಾ ಅವರ ಮಗನ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದಾಗ ಬಂಧಿಸಲಾಗಿದೆ.

ವಿಎಚ್‌ಪಿಯ ಬ್ಲಾಕ್ ಅಧ್ಯಕ್ಷ ಅಶುತೋಷ್ ಸಿಂಗ್ ಅವರು ಮಹಿಳೆಯರ ವಿರುದ್ಧ ದೂರು ದಾಖಲಿಸಿದ್ದಾರೆ.

‘ದಿ ವೈರ್’ ಜೊತೆ ಮಾತನಾಡಿದ ಅಶುತೋಷ್‌ ಸಿಂಗ್, “ಹುಟ್ಟುಹಬ್ಬದ ಸಮಾರಂಭದ ನೆಪದಲ್ಲಿ ಬಲವಂತದ ಮತಾಂತರಗಳು ನಡೆಯುತ್ತಿವೆ ಎಂದು ನಮಗೆ ತಿಳಿದುಬಂತು. ನಾವು ವಿಷಯವನ್ನು ಪೊಲೀಸರಿಗೆ ತಿಳಿಸಿದೆವು. ಅವರು ಮಹಿಳೆಯರನ್ನು ಬಂಧಿಸಿದ್ದಾರೆ” ಎಂದಿದ್ದಾರೆ.

“ಅಲ್ಲಿ ಮಹಿಳೆಯರು ಮಾತ್ರ ಇದ್ದರು. ಅವರು ಇತರರಿಗೆ ಹಣದ ಆಮಿಷವೊಡ್ಡುತ್ತಿದ್ದರು. ಅಕ್ರಮ ಚಟುವಟಿಕೆಗಳನ್ನು ನಡೆಸುತ್ತಿದ್ದರು. ಅವರು ಯೇಸುವಿನಂತೆ ಕೈಯನ್ನು ಮೇಲೆ ಎತ್ತಿ ಪ್ರಾರ್ಥನೆ ಸಲ್ಲಿಸುತ್ತಿದ್ದರು. ಹರಿಜನ ಮಹಿಳೆಯರನ್ನು ಮತಾಂತರ ಮಾಡಲು ಪ್ರಯತ್ನಿಸುತ್ತಿದ್ದರು” ಎಂದು ದೂರಿದ್ದಾರೆ.

ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದವರನ್ನು ಬಲವಂತವಾಗಿ ಮತಾಂತರಿಸಲು ಮಹಿಳೆಯರು ಪ್ರಯತ್ನಿಸುತ್ತಿದ್ದಾರೆ. ಸಮಾರಂಭವನ್ನು ತಡೆಯಲು ಮುಂದಾದಾಗ ಬೆದರಿಕೆ ಹಾಕಿ, ನಿಂದಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 504 ಮತ್ತು 506 ಮತ್ತು ಮತಾಂತರ ನಿಷೇಧ ಕಾಯ್ದೆಯಡಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ‘ದಿ ವೈರ್‌’ ವರದಿ ಮಾಡಿದೆ.

ಬಂಧನದ ನಂತರ, ಮಹಿಳೆಯರನ್ನು ವಿಶೇಷ ಕೆಳ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಆರೋಪಗಳ ಗಂಭೀರತೆಯನ್ನು ಪರಿಗಣಿಸಿ ಜಾಮೀನು ನಿರಾಕರಿಸಲಾಯಿತು. ಪ್ರಕರಣದ ಮುಂದಿನ ವಿಚಾರಣೆಯನ್ನು ಆಗಸ್ಟ್ 16ಕ್ಕೆ ನಿಗದಿಪಡಿಸಲಾಗಿದೆ.

ವಿಚಾರಣೆ ವೇಳೆ ಮಹಿಳೆಯರ ಜೊತೆಗಿದ್ದ ಕಾರ್ಯಕರ್ತ ದೀನಾನಾಥ್ ಜೈಸ್ವರ್, “ಆರು ದಲಿತ-ಕ್ರಿಶ್ಚಿಯನ್ ಮಹಿಳೆಯರು ಜೈಲಿನಲ್ಲಿ ಕೊಳೆಯುತ್ತಲೇ ಇದ್ದಾರೆ. ಇದು ಹುಟ್ಟುಹಬ್ಬದ ಪಾರ್ಟಿಯಾಗಿತ್ತು. ಪರಿಚಿತರೆಲ್ಲ ಒಟ್ಟಿಗೆ ಸೇರಿದ್ದರು. ಅವರು ಯೇಸುವನ್ನು ನಂಬುತ್ತಾರೆ. ಹೀಗಾಗಿ ಕೇಕ್ ಕತ್ತರಿಸುವ ಮೊದಲು ಪ್ರಾರ್ಥನೆ ಮಾಡಲು ನಿರ್ಧರಿಸಿದರು. ಆದರೆ ಬಲವಂತದ ಮತಾಂತರ ಎಂದು ಆರೋಪಿಸಲಾಗಿದೆ. ಅಂದು ಭಾನುವಾರವಾದ್ದರಿಂದ ಮಹಿಳೆಯರನ್ನು ಸಿಜೆಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಆದಾಗ್ಯೂ, ಮಹಿಳೆಯರಿಗೆ ಜಾಮೀನು ನಿರಾಕರಿಸಲಾಯಿತು. ಈಗ ಮಹಿಳೆಯನ್ನು ಜೈಲಿಗೆ ಕಳುಹಿಸಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

ಮಹಿಳೆಯರನ್ನು ಪ್ರತಿನಿಧಿಸುವ ವಕೀಲರು, ಆರೋಪಗಳನ್ನು ಆಧಾರರಹಿತವೆಂದು ಪ್ರತಿಪಾದಿಸಿದ್ದಾರೆ.

‘ದಿ ವೈರ್‌’ ಜೊತೆ ಮಾತನಾಡಿದ ವಕೀಲ ಮುನೀಶ್ ಚಂದ್ರ, “ವಾಸ್ತವ ಬೇರೆಯೇ ಇದೆ. ಬಲವಂತದ ಮತಾಂತರ ಆರೋಪದ ಅಡಿಯಲ್ಲಿ ಜನಪ್ರಿಯತೆಯನ್ನು ಗಳಿಸಲು, ರಾಜಕೀಯವಾಗಿ ಲಾಭ ಮಾಡಿಕೊಳ್ಳಲು ಈ ಕೃತ್ಯ ಎಸಗಲಾಗಿದೆ. ಸರ್ಕಾರದ ಬೆಂಬಲವಿರುವ ಬಲಪಂಥೀಯ ಮತಾಂಧ ಸಂಘಟನೆಗಳು ಜನರನ್ನು ಟಾರ್ಗೆಟ್ ಮಾಡುತ್ತಿವೆ” ಎಂದು ದೂರಿದ್ದಾರೆ.

“ಮಹಿಳೆಯರು ತಮ್ಮ ಮನೆಯಲ್ಲಿ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದರು. ಅವರು ಪ್ರಾರ್ಥನೆ ಮಾಡುವಾಗ, ವಿಎಚ್‌ಪಿ ಸದಸ್ಯರು ಮಹಿಳೆಯರ ವಿರುದ್ಧ ದೂರು ದಾಖಲಿಸಿದರು. ಅವರನ್ನು ಮಧ್ಯಾಹ್ನ 2 ಗಂಟೆಗೆ ಠಾಣೆಗೆ ಕರೆದೊಯ್ಯಲಾಯಿತು. ಆದರೆ ಪೊಲೀಸ್ ಡೈರಿಯಲ್ಲಿ, ಮಹಿಳೆಯರನ್ನು ಸಂಜೆ 6 ಗಂಟೆಗೆ ಕರೆದೊಯ್ಯಲಾಯಿತು ಎಂದು ಬರೆಯಲಾಗಿದೆ. ನಾವು ಅವರ ಜಾಮೀನಿಗಾಗಿ ಪ್ರಯತ್ನಿಸಿದ್ದೇವೆ. ಆದರೆ ಕೆಳ ನ್ಯಾಯಾಲಯವು ಮಹಿಳೆಯರಿಗೆ ಜಾಮೀನು ನೀಡುವ ಅಧಿಕಾರವನ್ನು ಹೊಂದಿಲ್ಲ. ರಾಜಕೀಯ ಒತ್ತಡದಿಂದ ಮಹಿಳೆಯರಿಗೆ ಜಾಮೀನು ನೀಡಲಾಗಿಲ್ಲ ಎಂದು ನಾವು ಭಾವಿಸುತ್ತೇವೆ” ಎಂದಿದ್ದಾರೆ.

ಇದನ್ನೂ ಓದಿರಿ: ಮಧ್ಯಪ್ರದೇಶ: ಹಿಂದೂವೋ ಮುಸ್ಲಿಮನೋ ಎಂದು ತಿಳಿಯಲು ದಲಿತ ಯುವಕನನ್ನು ಬೆತ್ತಲೆಗೊಳಿಸಿ ಹಲ್ಲೆ!

ಇಂತಹ ಹಲವಾರು ಬಂಧನಗಳನ್ನು ‘ಮತಾಂತರ ವಿರೋಧಿ’ ಕಾನೂನಿನ ಅಡಿಯಲ್ಲಿ ಮಾಡಲಾಗಿದೆ.

2021 ರಲ್ಲಿ ಕ್ರಿಶ್ಚಿಯನ್ನರ ವಿರುದ್ಧ 300ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಲಾಗಿದೆ.ಇಂತಹ ಹೆಚ್ಚಿನ ದಾಳಿಗಳು ದಲಿತ ಮತ್ತು ಬುಡಕಟ್ಟು ಸಮುದಾಯಗಳಿಗೆ ಸೇರಿದ ಕ್ರಿಶ್ಚಿಯನ್ನರ ಮೇಲೆ ನಡೆದಿವೆ ಎಂದು ಸತ್ಯಶೋಧನಾ ವರದಿಯು ಎತ್ತಿ ತೋರಿಸಿದೆ.

ಮಹಾರಾಜ್‌ಗಂಜ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ ಅಧಿಕಾರಿ ಹಿರಿಯ ಸಬ್ ಇನ್ಸ್‌ಪೆಕ್ಟರ್ ಕಮಲ್ಕಾಂತ್ ವರ್ಮಾ ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ‘ದಿ ವೈರ್‌’ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...

ಏಳು ವರ್ಷಗಳಲ್ಲಿ ಮೊದಲ ಬಾರಿಗೆ ಇರಾನ್‌ನಿಂದ ತೈಲ ಖರೀದಿಸಿದ ಭಾರತ

ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಹಾರ್ಮುಜ್ ಜಲಸಂಧಿಯ ಮೂಲಕ ಸರಬರಾಜಿನಲ್ಲಿ ಅಡ್ಡಿ ಉಂಟಾಗಿರುವ ಮಧ್ಯೆ, ಭಾರತೀಯ ಸಂಸ್ಕರಣಾಗಾರರು ಇರಾನ್ ತೈಲವನ್ನು ಖರೀದಿಸಿದ್ದಾರೆ ಎಂದು ತೈಲ ಸಚಿವಾಲಯ ಶನಿವಾರ (ಏ.4) ತಿಳಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ. ವಿಶ್ವದ...

ಉತ್ತರ ಪ್ರದೇಶ: ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರ ಬಂಧನ

ಹತ್ತು ವರ್ಷದ ವಿದ್ಯಾರ್ಥಿಯೊಬ್ಬನನ್ನು ಥಳಿಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರನ್ನು ಬಂಧಿಸಿರುವುದಾಗಿ ಉತ್ತರ ಪ್ರದೇಶ ಪೊಲೀಸರು ಶನಿವಾರ ತಿಳಿಸಿದ್ದಾರೆ.  ಈ ಸಂಬಂಧ ವೀಡಿಯೊ ಅಂತರ್ಜಾಲದಲ್ಲಿ ವೈರಲ್ ಆಗಿದ್ದು, ದಿನಾಂಕವಿಲ್ಲದ ವೀಡಿಯೊದಲ್ಲಿ ಒಬ್ಬ ಮದರಸಾ...

ಕೊಡಗು | ಚಾರಣಕ್ಕೆ ತೆರಳಿದ್ದ ಯುವತಿ ನಾಪತ್ತೆ ಪ್ರಕರಣ : 3 ದಿನ ಕಳೆದರೂ ಸಿಗದ ಸುಳಿವು, ಎಎನ್‌ಎಫ್‌ನಿಂದ ತೀವ್ರ ಶೋಧ

ಕೊಡಗು ಜಿಲ್ಲೆಯ ಕಕ್ಕಬ್ಬೆ ಸಮೀಪದ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಯುವತಿಯೊಬ್ಬರು ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ. ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದ್ದು, ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ನಾಪತ್ತೆಯಾಗಿರುವ ಯುವತಿಯನ್ನು ಕೇರಳದ...

ಭವಿಷ್ಯದ ಸಂಘರ್ಷದಲ್ಲಿ ಪಾಕಿಸ್ತಾನ ಕೋಲ್ಕತ್ತಾ ಮೇಲೆ ದಾಳಿ ಮಾಡುತ್ತದೆ: ಪಾಕ್ ರಕ್ಷಣಾ ಸಚಿವ ಖವಾಜಾ ಆಸಿಫ್

 ಲಾಹೋರ್: ಭವಿಷ್ಯದಲ್ಲಿ ಯಾವುದೇ ದುಸ್ಸಾಹಸಗಳು ನಡೆದರೆ ಕೋಲ್ಕತ್ತಾದಲ್ಲಿ ದಾಳಿ ನಡೆಸುವ ಮೂಲಕ ಭಾರತಕ್ಕೆ ಪ್ರತ್ಯುತ್ತರ ನೀಡುವುದಾಗಿ ಪಾಕಿಸ್ತಾನ ರಕ್ಷಣಾ ಸಚಿವ ಖವಾಜಾ ಆಸಿಫ್ ಶನಿವಾರ ಎಚ್ಚರಿಕೆ ನೀಡಿದ್ದಾರೆ. "ಈ ಬಾರಿ ಭಾರತ ಯಾವುದೇ ಸುಳ್ಳು...

ಮಾಗಡಿ ಕಾಂಗ್ರೆಸ್ ಶಾಸಕ ಬಾಲಕೃಷ್ಣ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

2018ರ ವಿಧಾನಸಭಾ ಚುನಾವಣೆಯ ವೇಳೆ ದಾಖಲಾಗಿದ್ದ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಮಾಗಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಹೆಚ್.ಸಿ ಬಾಲಕೃಷ್ಣ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (42ನೇ ಎಸಿಎಂಎಂ ಕೋರ್ಟ್) ಜಾಮೀನು...

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...