Homeದಲಿತ್ ಫೈಲ್ಸ್ಯುಪಿ: ಮತಾಂತರ ಆರೋಪ ಮಾಡಿದ ವಿಎಚ್‌ಪಿ; ಆರು ಮಂದಿ ದಲಿತ-ಕ್ರಿಶ್ಚಿಯನ್‌ ಮಹಿಳೆಯರ ಮೇಲೆ ಎಫ್‌ಐಆರ್‌

ಯುಪಿ: ಮತಾಂತರ ಆರೋಪ ಮಾಡಿದ ವಿಎಚ್‌ಪಿ; ಆರು ಮಂದಿ ದಲಿತ-ಕ್ರಿಶ್ಚಿಯನ್‌ ಮಹಿಳೆಯರ ಮೇಲೆ ಎಫ್‌ಐಆರ್‌

ಹುಟ್ಟುಹಬ್ಬದ ಆಚರಣೆಗೆ ಸೇರಿದ್ದ ಮಹಿಳೆಯ ಮೇಲೆ ಮತಾಂತರದ ಆರೋಪದ ಮಾಡಿರುವ ವಿಎಚ್‌ಪಿ, ದಲಿತ ಮಹಿಳೆಯರು ಜೈಲು ಸೇರಲು ಕಾರಣವಾಗಿದೆ ಎಂಬ ಆರೋಪಗಳು ಬಂದಿವೆ.

- Advertisement -
- Advertisement -

ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ನೀಡಿದ ದೂರಿನ ಮೇರೆಗೆ, ಬಲವಂತದ ಮತಾಂತರ ಆರೋಪದ ಮೇಲೆ ಜುಲೈ 30ರಂದು ಉತ್ತರ ಪ್ರದೇಶದ ಅಜಂಗಢ್‌ನ ಮಹಾರಾಜ್‌ಗಂಜ್ ಪ್ರದೇಶದಲ್ಲಿ ಆರು ದಲಿತ-ಕ್ರಿಶ್ಚಿಯನ್ ಮಹಿಳೆಯರ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಹುಟ್ಟುಹಬ್ಬದ ಸಂಭ್ರಮಾಚರಣೆಗೆ ಬಲವಂತದ ಮತಾಂತರವನ್ನು ಆರೋಪಿಸಿ ಹಿಂದುತ್ವವಾದಿಗಳು ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ ಎಂದು ಮಹಿಳೆಯರ ಕುಟುಂಬ ಸದಸ್ಯರು ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇಂದ್ರಕಲಾ, ಸುಭಾಗಿ ದೇವಿ, ಸಾಧನಾ, ಸವಿತಾ, ಅನಿತಾ ಮತ್ತು ಸುನೀತಾ ಎಂಬ ಮಹಿಳೆಯರನ್ನು ಕಲಾ ಅವರ ಮಗನ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದಾಗ ಬಂಧಿಸಲಾಗಿದೆ.

ವಿಎಚ್‌ಪಿಯ ಬ್ಲಾಕ್ ಅಧ್ಯಕ್ಷ ಅಶುತೋಷ್ ಸಿಂಗ್ ಅವರು ಮಹಿಳೆಯರ ವಿರುದ್ಧ ದೂರು ದಾಖಲಿಸಿದ್ದಾರೆ.

‘ದಿ ವೈರ್’ ಜೊತೆ ಮಾತನಾಡಿದ ಅಶುತೋಷ್‌ ಸಿಂಗ್, “ಹುಟ್ಟುಹಬ್ಬದ ಸಮಾರಂಭದ ನೆಪದಲ್ಲಿ ಬಲವಂತದ ಮತಾಂತರಗಳು ನಡೆಯುತ್ತಿವೆ ಎಂದು ನಮಗೆ ತಿಳಿದುಬಂತು. ನಾವು ವಿಷಯವನ್ನು ಪೊಲೀಸರಿಗೆ ತಿಳಿಸಿದೆವು. ಅವರು ಮಹಿಳೆಯರನ್ನು ಬಂಧಿಸಿದ್ದಾರೆ” ಎಂದಿದ್ದಾರೆ.

“ಅಲ್ಲಿ ಮಹಿಳೆಯರು ಮಾತ್ರ ಇದ್ದರು. ಅವರು ಇತರರಿಗೆ ಹಣದ ಆಮಿಷವೊಡ್ಡುತ್ತಿದ್ದರು. ಅಕ್ರಮ ಚಟುವಟಿಕೆಗಳನ್ನು ನಡೆಸುತ್ತಿದ್ದರು. ಅವರು ಯೇಸುವಿನಂತೆ ಕೈಯನ್ನು ಮೇಲೆ ಎತ್ತಿ ಪ್ರಾರ್ಥನೆ ಸಲ್ಲಿಸುತ್ತಿದ್ದರು. ಹರಿಜನ ಮಹಿಳೆಯರನ್ನು ಮತಾಂತರ ಮಾಡಲು ಪ್ರಯತ್ನಿಸುತ್ತಿದ್ದರು” ಎಂದು ದೂರಿದ್ದಾರೆ.

ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದವರನ್ನು ಬಲವಂತವಾಗಿ ಮತಾಂತರಿಸಲು ಮಹಿಳೆಯರು ಪ್ರಯತ್ನಿಸುತ್ತಿದ್ದಾರೆ. ಸಮಾರಂಭವನ್ನು ತಡೆಯಲು ಮುಂದಾದಾಗ ಬೆದರಿಕೆ ಹಾಕಿ, ನಿಂದಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 504 ಮತ್ತು 506 ಮತ್ತು ಮತಾಂತರ ನಿಷೇಧ ಕಾಯ್ದೆಯಡಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ‘ದಿ ವೈರ್‌’ ವರದಿ ಮಾಡಿದೆ.

ಬಂಧನದ ನಂತರ, ಮಹಿಳೆಯರನ್ನು ವಿಶೇಷ ಕೆಳ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಆರೋಪಗಳ ಗಂಭೀರತೆಯನ್ನು ಪರಿಗಣಿಸಿ ಜಾಮೀನು ನಿರಾಕರಿಸಲಾಯಿತು. ಪ್ರಕರಣದ ಮುಂದಿನ ವಿಚಾರಣೆಯನ್ನು ಆಗಸ್ಟ್ 16ಕ್ಕೆ ನಿಗದಿಪಡಿಸಲಾಗಿದೆ.

ವಿಚಾರಣೆ ವೇಳೆ ಮಹಿಳೆಯರ ಜೊತೆಗಿದ್ದ ಕಾರ್ಯಕರ್ತ ದೀನಾನಾಥ್ ಜೈಸ್ವರ್, “ಆರು ದಲಿತ-ಕ್ರಿಶ್ಚಿಯನ್ ಮಹಿಳೆಯರು ಜೈಲಿನಲ್ಲಿ ಕೊಳೆಯುತ್ತಲೇ ಇದ್ದಾರೆ. ಇದು ಹುಟ್ಟುಹಬ್ಬದ ಪಾರ್ಟಿಯಾಗಿತ್ತು. ಪರಿಚಿತರೆಲ್ಲ ಒಟ್ಟಿಗೆ ಸೇರಿದ್ದರು. ಅವರು ಯೇಸುವನ್ನು ನಂಬುತ್ತಾರೆ. ಹೀಗಾಗಿ ಕೇಕ್ ಕತ್ತರಿಸುವ ಮೊದಲು ಪ್ರಾರ್ಥನೆ ಮಾಡಲು ನಿರ್ಧರಿಸಿದರು. ಆದರೆ ಬಲವಂತದ ಮತಾಂತರ ಎಂದು ಆರೋಪಿಸಲಾಗಿದೆ. ಅಂದು ಭಾನುವಾರವಾದ್ದರಿಂದ ಮಹಿಳೆಯರನ್ನು ಸಿಜೆಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಆದಾಗ್ಯೂ, ಮಹಿಳೆಯರಿಗೆ ಜಾಮೀನು ನಿರಾಕರಿಸಲಾಯಿತು. ಈಗ ಮಹಿಳೆಯನ್ನು ಜೈಲಿಗೆ ಕಳುಹಿಸಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

ಮಹಿಳೆಯರನ್ನು ಪ್ರತಿನಿಧಿಸುವ ವಕೀಲರು, ಆರೋಪಗಳನ್ನು ಆಧಾರರಹಿತವೆಂದು ಪ್ರತಿಪಾದಿಸಿದ್ದಾರೆ.

‘ದಿ ವೈರ್‌’ ಜೊತೆ ಮಾತನಾಡಿದ ವಕೀಲ ಮುನೀಶ್ ಚಂದ್ರ, “ವಾಸ್ತವ ಬೇರೆಯೇ ಇದೆ. ಬಲವಂತದ ಮತಾಂತರ ಆರೋಪದ ಅಡಿಯಲ್ಲಿ ಜನಪ್ರಿಯತೆಯನ್ನು ಗಳಿಸಲು, ರಾಜಕೀಯವಾಗಿ ಲಾಭ ಮಾಡಿಕೊಳ್ಳಲು ಈ ಕೃತ್ಯ ಎಸಗಲಾಗಿದೆ. ಸರ್ಕಾರದ ಬೆಂಬಲವಿರುವ ಬಲಪಂಥೀಯ ಮತಾಂಧ ಸಂಘಟನೆಗಳು ಜನರನ್ನು ಟಾರ್ಗೆಟ್ ಮಾಡುತ್ತಿವೆ” ಎಂದು ದೂರಿದ್ದಾರೆ.

“ಮಹಿಳೆಯರು ತಮ್ಮ ಮನೆಯಲ್ಲಿ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದರು. ಅವರು ಪ್ರಾರ್ಥನೆ ಮಾಡುವಾಗ, ವಿಎಚ್‌ಪಿ ಸದಸ್ಯರು ಮಹಿಳೆಯರ ವಿರುದ್ಧ ದೂರು ದಾಖಲಿಸಿದರು. ಅವರನ್ನು ಮಧ್ಯಾಹ್ನ 2 ಗಂಟೆಗೆ ಠಾಣೆಗೆ ಕರೆದೊಯ್ಯಲಾಯಿತು. ಆದರೆ ಪೊಲೀಸ್ ಡೈರಿಯಲ್ಲಿ, ಮಹಿಳೆಯರನ್ನು ಸಂಜೆ 6 ಗಂಟೆಗೆ ಕರೆದೊಯ್ಯಲಾಯಿತು ಎಂದು ಬರೆಯಲಾಗಿದೆ. ನಾವು ಅವರ ಜಾಮೀನಿಗಾಗಿ ಪ್ರಯತ್ನಿಸಿದ್ದೇವೆ. ಆದರೆ ಕೆಳ ನ್ಯಾಯಾಲಯವು ಮಹಿಳೆಯರಿಗೆ ಜಾಮೀನು ನೀಡುವ ಅಧಿಕಾರವನ್ನು ಹೊಂದಿಲ್ಲ. ರಾಜಕೀಯ ಒತ್ತಡದಿಂದ ಮಹಿಳೆಯರಿಗೆ ಜಾಮೀನು ನೀಡಲಾಗಿಲ್ಲ ಎಂದು ನಾವು ಭಾವಿಸುತ್ತೇವೆ” ಎಂದಿದ್ದಾರೆ.

ಇದನ್ನೂ ಓದಿರಿ: ಮಧ್ಯಪ್ರದೇಶ: ಹಿಂದೂವೋ ಮುಸ್ಲಿಮನೋ ಎಂದು ತಿಳಿಯಲು ದಲಿತ ಯುವಕನನ್ನು ಬೆತ್ತಲೆಗೊಳಿಸಿ ಹಲ್ಲೆ!

ಇಂತಹ ಹಲವಾರು ಬಂಧನಗಳನ್ನು ‘ಮತಾಂತರ ವಿರೋಧಿ’ ಕಾನೂನಿನ ಅಡಿಯಲ್ಲಿ ಮಾಡಲಾಗಿದೆ.

2021 ರಲ್ಲಿ ಕ್ರಿಶ್ಚಿಯನ್ನರ ವಿರುದ್ಧ 300ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಲಾಗಿದೆ.ಇಂತಹ ಹೆಚ್ಚಿನ ದಾಳಿಗಳು ದಲಿತ ಮತ್ತು ಬುಡಕಟ್ಟು ಸಮುದಾಯಗಳಿಗೆ ಸೇರಿದ ಕ್ರಿಶ್ಚಿಯನ್ನರ ಮೇಲೆ ನಡೆದಿವೆ ಎಂದು ಸತ್ಯಶೋಧನಾ ವರದಿಯು ಎತ್ತಿ ತೋರಿಸಿದೆ.

ಮಹಾರಾಜ್‌ಗಂಜ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ ಅಧಿಕಾರಿ ಹಿರಿಯ ಸಬ್ ಇನ್ಸ್‌ಪೆಕ್ಟರ್ ಕಮಲ್ಕಾಂತ್ ವರ್ಮಾ ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ‘ದಿ ವೈರ್‌’ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...