Homeದಲಿತ್ ಫೈಲ್ಸ್ಯುಪಿ: ಮತಾಂತರ ಆರೋಪ ಮಾಡಿದ ವಿಎಚ್‌ಪಿ; ಆರು ಮಂದಿ ದಲಿತ-ಕ್ರಿಶ್ಚಿಯನ್‌ ಮಹಿಳೆಯರ ಮೇಲೆ ಎಫ್‌ಐಆರ್‌

ಯುಪಿ: ಮತಾಂತರ ಆರೋಪ ಮಾಡಿದ ವಿಎಚ್‌ಪಿ; ಆರು ಮಂದಿ ದಲಿತ-ಕ್ರಿಶ್ಚಿಯನ್‌ ಮಹಿಳೆಯರ ಮೇಲೆ ಎಫ್‌ಐಆರ್‌

ಹುಟ್ಟುಹಬ್ಬದ ಆಚರಣೆಗೆ ಸೇರಿದ್ದ ಮಹಿಳೆಯ ಮೇಲೆ ಮತಾಂತರದ ಆರೋಪದ ಮಾಡಿರುವ ವಿಎಚ್‌ಪಿ, ದಲಿತ ಮಹಿಳೆಯರು ಜೈಲು ಸೇರಲು ಕಾರಣವಾಗಿದೆ ಎಂಬ ಆರೋಪಗಳು ಬಂದಿವೆ.

- Advertisement -
- Advertisement -

ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ನೀಡಿದ ದೂರಿನ ಮೇರೆಗೆ, ಬಲವಂತದ ಮತಾಂತರ ಆರೋಪದ ಮೇಲೆ ಜುಲೈ 30ರಂದು ಉತ್ತರ ಪ್ರದೇಶದ ಅಜಂಗಢ್‌ನ ಮಹಾರಾಜ್‌ಗಂಜ್ ಪ್ರದೇಶದಲ್ಲಿ ಆರು ದಲಿತ-ಕ್ರಿಶ್ಚಿಯನ್ ಮಹಿಳೆಯರ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಹುಟ್ಟುಹಬ್ಬದ ಸಂಭ್ರಮಾಚರಣೆಗೆ ಬಲವಂತದ ಮತಾಂತರವನ್ನು ಆರೋಪಿಸಿ ಹಿಂದುತ್ವವಾದಿಗಳು ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ ಎಂದು ಮಹಿಳೆಯರ ಕುಟುಂಬ ಸದಸ್ಯರು ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇಂದ್ರಕಲಾ, ಸುಭಾಗಿ ದೇವಿ, ಸಾಧನಾ, ಸವಿತಾ, ಅನಿತಾ ಮತ್ತು ಸುನೀತಾ ಎಂಬ ಮಹಿಳೆಯರನ್ನು ಕಲಾ ಅವರ ಮಗನ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದಾಗ ಬಂಧಿಸಲಾಗಿದೆ.

ವಿಎಚ್‌ಪಿಯ ಬ್ಲಾಕ್ ಅಧ್ಯಕ್ಷ ಅಶುತೋಷ್ ಸಿಂಗ್ ಅವರು ಮಹಿಳೆಯರ ವಿರುದ್ಧ ದೂರು ದಾಖಲಿಸಿದ್ದಾರೆ.

‘ದಿ ವೈರ್’ ಜೊತೆ ಮಾತನಾಡಿದ ಅಶುತೋಷ್‌ ಸಿಂಗ್, “ಹುಟ್ಟುಹಬ್ಬದ ಸಮಾರಂಭದ ನೆಪದಲ್ಲಿ ಬಲವಂತದ ಮತಾಂತರಗಳು ನಡೆಯುತ್ತಿವೆ ಎಂದು ನಮಗೆ ತಿಳಿದುಬಂತು. ನಾವು ವಿಷಯವನ್ನು ಪೊಲೀಸರಿಗೆ ತಿಳಿಸಿದೆವು. ಅವರು ಮಹಿಳೆಯರನ್ನು ಬಂಧಿಸಿದ್ದಾರೆ” ಎಂದಿದ್ದಾರೆ.

“ಅಲ್ಲಿ ಮಹಿಳೆಯರು ಮಾತ್ರ ಇದ್ದರು. ಅವರು ಇತರರಿಗೆ ಹಣದ ಆಮಿಷವೊಡ್ಡುತ್ತಿದ್ದರು. ಅಕ್ರಮ ಚಟುವಟಿಕೆಗಳನ್ನು ನಡೆಸುತ್ತಿದ್ದರು. ಅವರು ಯೇಸುವಿನಂತೆ ಕೈಯನ್ನು ಮೇಲೆ ಎತ್ತಿ ಪ್ರಾರ್ಥನೆ ಸಲ್ಲಿಸುತ್ತಿದ್ದರು. ಹರಿಜನ ಮಹಿಳೆಯರನ್ನು ಮತಾಂತರ ಮಾಡಲು ಪ್ರಯತ್ನಿಸುತ್ತಿದ್ದರು” ಎಂದು ದೂರಿದ್ದಾರೆ.

ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದವರನ್ನು ಬಲವಂತವಾಗಿ ಮತಾಂತರಿಸಲು ಮಹಿಳೆಯರು ಪ್ರಯತ್ನಿಸುತ್ತಿದ್ದಾರೆ. ಸಮಾರಂಭವನ್ನು ತಡೆಯಲು ಮುಂದಾದಾಗ ಬೆದರಿಕೆ ಹಾಕಿ, ನಿಂದಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 504 ಮತ್ತು 506 ಮತ್ತು ಮತಾಂತರ ನಿಷೇಧ ಕಾಯ್ದೆಯಡಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ‘ದಿ ವೈರ್‌’ ವರದಿ ಮಾಡಿದೆ.

ಬಂಧನದ ನಂತರ, ಮಹಿಳೆಯರನ್ನು ವಿಶೇಷ ಕೆಳ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಆರೋಪಗಳ ಗಂಭೀರತೆಯನ್ನು ಪರಿಗಣಿಸಿ ಜಾಮೀನು ನಿರಾಕರಿಸಲಾಯಿತು. ಪ್ರಕರಣದ ಮುಂದಿನ ವಿಚಾರಣೆಯನ್ನು ಆಗಸ್ಟ್ 16ಕ್ಕೆ ನಿಗದಿಪಡಿಸಲಾಗಿದೆ.

ವಿಚಾರಣೆ ವೇಳೆ ಮಹಿಳೆಯರ ಜೊತೆಗಿದ್ದ ಕಾರ್ಯಕರ್ತ ದೀನಾನಾಥ್ ಜೈಸ್ವರ್, “ಆರು ದಲಿತ-ಕ್ರಿಶ್ಚಿಯನ್ ಮಹಿಳೆಯರು ಜೈಲಿನಲ್ಲಿ ಕೊಳೆಯುತ್ತಲೇ ಇದ್ದಾರೆ. ಇದು ಹುಟ್ಟುಹಬ್ಬದ ಪಾರ್ಟಿಯಾಗಿತ್ತು. ಪರಿಚಿತರೆಲ್ಲ ಒಟ್ಟಿಗೆ ಸೇರಿದ್ದರು. ಅವರು ಯೇಸುವನ್ನು ನಂಬುತ್ತಾರೆ. ಹೀಗಾಗಿ ಕೇಕ್ ಕತ್ತರಿಸುವ ಮೊದಲು ಪ್ರಾರ್ಥನೆ ಮಾಡಲು ನಿರ್ಧರಿಸಿದರು. ಆದರೆ ಬಲವಂತದ ಮತಾಂತರ ಎಂದು ಆರೋಪಿಸಲಾಗಿದೆ. ಅಂದು ಭಾನುವಾರವಾದ್ದರಿಂದ ಮಹಿಳೆಯರನ್ನು ಸಿಜೆಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಆದಾಗ್ಯೂ, ಮಹಿಳೆಯರಿಗೆ ಜಾಮೀನು ನಿರಾಕರಿಸಲಾಯಿತು. ಈಗ ಮಹಿಳೆಯನ್ನು ಜೈಲಿಗೆ ಕಳುಹಿಸಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

ಮಹಿಳೆಯರನ್ನು ಪ್ರತಿನಿಧಿಸುವ ವಕೀಲರು, ಆರೋಪಗಳನ್ನು ಆಧಾರರಹಿತವೆಂದು ಪ್ರತಿಪಾದಿಸಿದ್ದಾರೆ.

‘ದಿ ವೈರ್‌’ ಜೊತೆ ಮಾತನಾಡಿದ ವಕೀಲ ಮುನೀಶ್ ಚಂದ್ರ, “ವಾಸ್ತವ ಬೇರೆಯೇ ಇದೆ. ಬಲವಂತದ ಮತಾಂತರ ಆರೋಪದ ಅಡಿಯಲ್ಲಿ ಜನಪ್ರಿಯತೆಯನ್ನು ಗಳಿಸಲು, ರಾಜಕೀಯವಾಗಿ ಲಾಭ ಮಾಡಿಕೊಳ್ಳಲು ಈ ಕೃತ್ಯ ಎಸಗಲಾಗಿದೆ. ಸರ್ಕಾರದ ಬೆಂಬಲವಿರುವ ಬಲಪಂಥೀಯ ಮತಾಂಧ ಸಂಘಟನೆಗಳು ಜನರನ್ನು ಟಾರ್ಗೆಟ್ ಮಾಡುತ್ತಿವೆ” ಎಂದು ದೂರಿದ್ದಾರೆ.

“ಮಹಿಳೆಯರು ತಮ್ಮ ಮನೆಯಲ್ಲಿ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದರು. ಅವರು ಪ್ರಾರ್ಥನೆ ಮಾಡುವಾಗ, ವಿಎಚ್‌ಪಿ ಸದಸ್ಯರು ಮಹಿಳೆಯರ ವಿರುದ್ಧ ದೂರು ದಾಖಲಿಸಿದರು. ಅವರನ್ನು ಮಧ್ಯಾಹ್ನ 2 ಗಂಟೆಗೆ ಠಾಣೆಗೆ ಕರೆದೊಯ್ಯಲಾಯಿತು. ಆದರೆ ಪೊಲೀಸ್ ಡೈರಿಯಲ್ಲಿ, ಮಹಿಳೆಯರನ್ನು ಸಂಜೆ 6 ಗಂಟೆಗೆ ಕರೆದೊಯ್ಯಲಾಯಿತು ಎಂದು ಬರೆಯಲಾಗಿದೆ. ನಾವು ಅವರ ಜಾಮೀನಿಗಾಗಿ ಪ್ರಯತ್ನಿಸಿದ್ದೇವೆ. ಆದರೆ ಕೆಳ ನ್ಯಾಯಾಲಯವು ಮಹಿಳೆಯರಿಗೆ ಜಾಮೀನು ನೀಡುವ ಅಧಿಕಾರವನ್ನು ಹೊಂದಿಲ್ಲ. ರಾಜಕೀಯ ಒತ್ತಡದಿಂದ ಮಹಿಳೆಯರಿಗೆ ಜಾಮೀನು ನೀಡಲಾಗಿಲ್ಲ ಎಂದು ನಾವು ಭಾವಿಸುತ್ತೇವೆ” ಎಂದಿದ್ದಾರೆ.

ಇದನ್ನೂ ಓದಿರಿ: ಮಧ್ಯಪ್ರದೇಶ: ಹಿಂದೂವೋ ಮುಸ್ಲಿಮನೋ ಎಂದು ತಿಳಿಯಲು ದಲಿತ ಯುವಕನನ್ನು ಬೆತ್ತಲೆಗೊಳಿಸಿ ಹಲ್ಲೆ!

ಇಂತಹ ಹಲವಾರು ಬಂಧನಗಳನ್ನು ‘ಮತಾಂತರ ವಿರೋಧಿ’ ಕಾನೂನಿನ ಅಡಿಯಲ್ಲಿ ಮಾಡಲಾಗಿದೆ.

2021 ರಲ್ಲಿ ಕ್ರಿಶ್ಚಿಯನ್ನರ ವಿರುದ್ಧ 300ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಲಾಗಿದೆ.ಇಂತಹ ಹೆಚ್ಚಿನ ದಾಳಿಗಳು ದಲಿತ ಮತ್ತು ಬುಡಕಟ್ಟು ಸಮುದಾಯಗಳಿಗೆ ಸೇರಿದ ಕ್ರಿಶ್ಚಿಯನ್ನರ ಮೇಲೆ ನಡೆದಿವೆ ಎಂದು ಸತ್ಯಶೋಧನಾ ವರದಿಯು ಎತ್ತಿ ತೋರಿಸಿದೆ.

ಮಹಾರಾಜ್‌ಗಂಜ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ ಅಧಿಕಾರಿ ಹಿರಿಯ ಸಬ್ ಇನ್ಸ್‌ಪೆಕ್ಟರ್ ಕಮಲ್ಕಾಂತ್ ವರ್ಮಾ ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ‘ದಿ ವೈರ್‌’ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...