Homeದಲಿತ್ ಫೈಲ್ಸ್ಯುಪಿ: ಮತಾಂತರ ಆರೋಪ ಮಾಡಿದ ವಿಎಚ್‌ಪಿ; ಆರು ಮಂದಿ ದಲಿತ-ಕ್ರಿಶ್ಚಿಯನ್‌ ಮಹಿಳೆಯರ ಮೇಲೆ ಎಫ್‌ಐಆರ್‌

ಯುಪಿ: ಮತಾಂತರ ಆರೋಪ ಮಾಡಿದ ವಿಎಚ್‌ಪಿ; ಆರು ಮಂದಿ ದಲಿತ-ಕ್ರಿಶ್ಚಿಯನ್‌ ಮಹಿಳೆಯರ ಮೇಲೆ ಎಫ್‌ಐಆರ್‌

ಹುಟ್ಟುಹಬ್ಬದ ಆಚರಣೆಗೆ ಸೇರಿದ್ದ ಮಹಿಳೆಯ ಮೇಲೆ ಮತಾಂತರದ ಆರೋಪದ ಮಾಡಿರುವ ವಿಎಚ್‌ಪಿ, ದಲಿತ ಮಹಿಳೆಯರು ಜೈಲು ಸೇರಲು ಕಾರಣವಾಗಿದೆ ಎಂಬ ಆರೋಪಗಳು ಬಂದಿವೆ.

- Advertisement -
- Advertisement -

ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ನೀಡಿದ ದೂರಿನ ಮೇರೆಗೆ, ಬಲವಂತದ ಮತಾಂತರ ಆರೋಪದ ಮೇಲೆ ಜುಲೈ 30ರಂದು ಉತ್ತರ ಪ್ರದೇಶದ ಅಜಂಗಢ್‌ನ ಮಹಾರಾಜ್‌ಗಂಜ್ ಪ್ರದೇಶದಲ್ಲಿ ಆರು ದಲಿತ-ಕ್ರಿಶ್ಚಿಯನ್ ಮಹಿಳೆಯರ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಹುಟ್ಟುಹಬ್ಬದ ಸಂಭ್ರಮಾಚರಣೆಗೆ ಬಲವಂತದ ಮತಾಂತರವನ್ನು ಆರೋಪಿಸಿ ಹಿಂದುತ್ವವಾದಿಗಳು ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ ಎಂದು ಮಹಿಳೆಯರ ಕುಟುಂಬ ಸದಸ್ಯರು ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇಂದ್ರಕಲಾ, ಸುಭಾಗಿ ದೇವಿ, ಸಾಧನಾ, ಸವಿತಾ, ಅನಿತಾ ಮತ್ತು ಸುನೀತಾ ಎಂಬ ಮಹಿಳೆಯರನ್ನು ಕಲಾ ಅವರ ಮಗನ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದಾಗ ಬಂಧಿಸಲಾಗಿದೆ.

ವಿಎಚ್‌ಪಿಯ ಬ್ಲಾಕ್ ಅಧ್ಯಕ್ಷ ಅಶುತೋಷ್ ಸಿಂಗ್ ಅವರು ಮಹಿಳೆಯರ ವಿರುದ್ಧ ದೂರು ದಾಖಲಿಸಿದ್ದಾರೆ.

‘ದಿ ವೈರ್’ ಜೊತೆ ಮಾತನಾಡಿದ ಅಶುತೋಷ್‌ ಸಿಂಗ್, “ಹುಟ್ಟುಹಬ್ಬದ ಸಮಾರಂಭದ ನೆಪದಲ್ಲಿ ಬಲವಂತದ ಮತಾಂತರಗಳು ನಡೆಯುತ್ತಿವೆ ಎಂದು ನಮಗೆ ತಿಳಿದುಬಂತು. ನಾವು ವಿಷಯವನ್ನು ಪೊಲೀಸರಿಗೆ ತಿಳಿಸಿದೆವು. ಅವರು ಮಹಿಳೆಯರನ್ನು ಬಂಧಿಸಿದ್ದಾರೆ” ಎಂದಿದ್ದಾರೆ.

“ಅಲ್ಲಿ ಮಹಿಳೆಯರು ಮಾತ್ರ ಇದ್ದರು. ಅವರು ಇತರರಿಗೆ ಹಣದ ಆಮಿಷವೊಡ್ಡುತ್ತಿದ್ದರು. ಅಕ್ರಮ ಚಟುವಟಿಕೆಗಳನ್ನು ನಡೆಸುತ್ತಿದ್ದರು. ಅವರು ಯೇಸುವಿನಂತೆ ಕೈಯನ್ನು ಮೇಲೆ ಎತ್ತಿ ಪ್ರಾರ್ಥನೆ ಸಲ್ಲಿಸುತ್ತಿದ್ದರು. ಹರಿಜನ ಮಹಿಳೆಯರನ್ನು ಮತಾಂತರ ಮಾಡಲು ಪ್ರಯತ್ನಿಸುತ್ತಿದ್ದರು” ಎಂದು ದೂರಿದ್ದಾರೆ.

ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದವರನ್ನು ಬಲವಂತವಾಗಿ ಮತಾಂತರಿಸಲು ಮಹಿಳೆಯರು ಪ್ರಯತ್ನಿಸುತ್ತಿದ್ದಾರೆ. ಸಮಾರಂಭವನ್ನು ತಡೆಯಲು ಮುಂದಾದಾಗ ಬೆದರಿಕೆ ಹಾಕಿ, ನಿಂದಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 504 ಮತ್ತು 506 ಮತ್ತು ಮತಾಂತರ ನಿಷೇಧ ಕಾಯ್ದೆಯಡಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ‘ದಿ ವೈರ್‌’ ವರದಿ ಮಾಡಿದೆ.

ಬಂಧನದ ನಂತರ, ಮಹಿಳೆಯರನ್ನು ವಿಶೇಷ ಕೆಳ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಆರೋಪಗಳ ಗಂಭೀರತೆಯನ್ನು ಪರಿಗಣಿಸಿ ಜಾಮೀನು ನಿರಾಕರಿಸಲಾಯಿತು. ಪ್ರಕರಣದ ಮುಂದಿನ ವಿಚಾರಣೆಯನ್ನು ಆಗಸ್ಟ್ 16ಕ್ಕೆ ನಿಗದಿಪಡಿಸಲಾಗಿದೆ.

ವಿಚಾರಣೆ ವೇಳೆ ಮಹಿಳೆಯರ ಜೊತೆಗಿದ್ದ ಕಾರ್ಯಕರ್ತ ದೀನಾನಾಥ್ ಜೈಸ್ವರ್, “ಆರು ದಲಿತ-ಕ್ರಿಶ್ಚಿಯನ್ ಮಹಿಳೆಯರು ಜೈಲಿನಲ್ಲಿ ಕೊಳೆಯುತ್ತಲೇ ಇದ್ದಾರೆ. ಇದು ಹುಟ್ಟುಹಬ್ಬದ ಪಾರ್ಟಿಯಾಗಿತ್ತು. ಪರಿಚಿತರೆಲ್ಲ ಒಟ್ಟಿಗೆ ಸೇರಿದ್ದರು. ಅವರು ಯೇಸುವನ್ನು ನಂಬುತ್ತಾರೆ. ಹೀಗಾಗಿ ಕೇಕ್ ಕತ್ತರಿಸುವ ಮೊದಲು ಪ್ರಾರ್ಥನೆ ಮಾಡಲು ನಿರ್ಧರಿಸಿದರು. ಆದರೆ ಬಲವಂತದ ಮತಾಂತರ ಎಂದು ಆರೋಪಿಸಲಾಗಿದೆ. ಅಂದು ಭಾನುವಾರವಾದ್ದರಿಂದ ಮಹಿಳೆಯರನ್ನು ಸಿಜೆಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಆದಾಗ್ಯೂ, ಮಹಿಳೆಯರಿಗೆ ಜಾಮೀನು ನಿರಾಕರಿಸಲಾಯಿತು. ಈಗ ಮಹಿಳೆಯನ್ನು ಜೈಲಿಗೆ ಕಳುಹಿಸಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

ಮಹಿಳೆಯರನ್ನು ಪ್ರತಿನಿಧಿಸುವ ವಕೀಲರು, ಆರೋಪಗಳನ್ನು ಆಧಾರರಹಿತವೆಂದು ಪ್ರತಿಪಾದಿಸಿದ್ದಾರೆ.

‘ದಿ ವೈರ್‌’ ಜೊತೆ ಮಾತನಾಡಿದ ವಕೀಲ ಮುನೀಶ್ ಚಂದ್ರ, “ವಾಸ್ತವ ಬೇರೆಯೇ ಇದೆ. ಬಲವಂತದ ಮತಾಂತರ ಆರೋಪದ ಅಡಿಯಲ್ಲಿ ಜನಪ್ರಿಯತೆಯನ್ನು ಗಳಿಸಲು, ರಾಜಕೀಯವಾಗಿ ಲಾಭ ಮಾಡಿಕೊಳ್ಳಲು ಈ ಕೃತ್ಯ ಎಸಗಲಾಗಿದೆ. ಸರ್ಕಾರದ ಬೆಂಬಲವಿರುವ ಬಲಪಂಥೀಯ ಮತಾಂಧ ಸಂಘಟನೆಗಳು ಜನರನ್ನು ಟಾರ್ಗೆಟ್ ಮಾಡುತ್ತಿವೆ” ಎಂದು ದೂರಿದ್ದಾರೆ.

“ಮಹಿಳೆಯರು ತಮ್ಮ ಮನೆಯಲ್ಲಿ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದರು. ಅವರು ಪ್ರಾರ್ಥನೆ ಮಾಡುವಾಗ, ವಿಎಚ್‌ಪಿ ಸದಸ್ಯರು ಮಹಿಳೆಯರ ವಿರುದ್ಧ ದೂರು ದಾಖಲಿಸಿದರು. ಅವರನ್ನು ಮಧ್ಯಾಹ್ನ 2 ಗಂಟೆಗೆ ಠಾಣೆಗೆ ಕರೆದೊಯ್ಯಲಾಯಿತು. ಆದರೆ ಪೊಲೀಸ್ ಡೈರಿಯಲ್ಲಿ, ಮಹಿಳೆಯರನ್ನು ಸಂಜೆ 6 ಗಂಟೆಗೆ ಕರೆದೊಯ್ಯಲಾಯಿತು ಎಂದು ಬರೆಯಲಾಗಿದೆ. ನಾವು ಅವರ ಜಾಮೀನಿಗಾಗಿ ಪ್ರಯತ್ನಿಸಿದ್ದೇವೆ. ಆದರೆ ಕೆಳ ನ್ಯಾಯಾಲಯವು ಮಹಿಳೆಯರಿಗೆ ಜಾಮೀನು ನೀಡುವ ಅಧಿಕಾರವನ್ನು ಹೊಂದಿಲ್ಲ. ರಾಜಕೀಯ ಒತ್ತಡದಿಂದ ಮಹಿಳೆಯರಿಗೆ ಜಾಮೀನು ನೀಡಲಾಗಿಲ್ಲ ಎಂದು ನಾವು ಭಾವಿಸುತ್ತೇವೆ” ಎಂದಿದ್ದಾರೆ.

ಇದನ್ನೂ ಓದಿರಿ: ಮಧ್ಯಪ್ರದೇಶ: ಹಿಂದೂವೋ ಮುಸ್ಲಿಮನೋ ಎಂದು ತಿಳಿಯಲು ದಲಿತ ಯುವಕನನ್ನು ಬೆತ್ತಲೆಗೊಳಿಸಿ ಹಲ್ಲೆ!

ಇಂತಹ ಹಲವಾರು ಬಂಧನಗಳನ್ನು ‘ಮತಾಂತರ ವಿರೋಧಿ’ ಕಾನೂನಿನ ಅಡಿಯಲ್ಲಿ ಮಾಡಲಾಗಿದೆ.

2021 ರಲ್ಲಿ ಕ್ರಿಶ್ಚಿಯನ್ನರ ವಿರುದ್ಧ 300ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಲಾಗಿದೆ.ಇಂತಹ ಹೆಚ್ಚಿನ ದಾಳಿಗಳು ದಲಿತ ಮತ್ತು ಬುಡಕಟ್ಟು ಸಮುದಾಯಗಳಿಗೆ ಸೇರಿದ ಕ್ರಿಶ್ಚಿಯನ್ನರ ಮೇಲೆ ನಡೆದಿವೆ ಎಂದು ಸತ್ಯಶೋಧನಾ ವರದಿಯು ಎತ್ತಿ ತೋರಿಸಿದೆ.

ಮಹಾರಾಜ್‌ಗಂಜ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ ಅಧಿಕಾರಿ ಹಿರಿಯ ಸಬ್ ಇನ್ಸ್‌ಪೆಕ್ಟರ್ ಕಮಲ್ಕಾಂತ್ ವರ್ಮಾ ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ‘ದಿ ವೈರ್‌’ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...