Homeದಲಿತ್ ಫೈಲ್ಸ್ಯುಪಿ: ಮತಾಂತರ ಆರೋಪ ಮಾಡಿದ ವಿಎಚ್‌ಪಿ; ಆರು ಮಂದಿ ದಲಿತ-ಕ್ರಿಶ್ಚಿಯನ್‌ ಮಹಿಳೆಯರ ಮೇಲೆ ಎಫ್‌ಐಆರ್‌

ಯುಪಿ: ಮತಾಂತರ ಆರೋಪ ಮಾಡಿದ ವಿಎಚ್‌ಪಿ; ಆರು ಮಂದಿ ದಲಿತ-ಕ್ರಿಶ್ಚಿಯನ್‌ ಮಹಿಳೆಯರ ಮೇಲೆ ಎಫ್‌ಐಆರ್‌

ಹುಟ್ಟುಹಬ್ಬದ ಆಚರಣೆಗೆ ಸೇರಿದ್ದ ಮಹಿಳೆಯ ಮೇಲೆ ಮತಾಂತರದ ಆರೋಪದ ಮಾಡಿರುವ ವಿಎಚ್‌ಪಿ, ದಲಿತ ಮಹಿಳೆಯರು ಜೈಲು ಸೇರಲು ಕಾರಣವಾಗಿದೆ ಎಂಬ ಆರೋಪಗಳು ಬಂದಿವೆ.

- Advertisement -
- Advertisement -

ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ನೀಡಿದ ದೂರಿನ ಮೇರೆಗೆ, ಬಲವಂತದ ಮತಾಂತರ ಆರೋಪದ ಮೇಲೆ ಜುಲೈ 30ರಂದು ಉತ್ತರ ಪ್ರದೇಶದ ಅಜಂಗಢ್‌ನ ಮಹಾರಾಜ್‌ಗಂಜ್ ಪ್ರದೇಶದಲ್ಲಿ ಆರು ದಲಿತ-ಕ್ರಿಶ್ಚಿಯನ್ ಮಹಿಳೆಯರ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಹುಟ್ಟುಹಬ್ಬದ ಸಂಭ್ರಮಾಚರಣೆಗೆ ಬಲವಂತದ ಮತಾಂತರವನ್ನು ಆರೋಪಿಸಿ ಹಿಂದುತ್ವವಾದಿಗಳು ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ ಎಂದು ಮಹಿಳೆಯರ ಕುಟುಂಬ ಸದಸ್ಯರು ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇಂದ್ರಕಲಾ, ಸುಭಾಗಿ ದೇವಿ, ಸಾಧನಾ, ಸವಿತಾ, ಅನಿತಾ ಮತ್ತು ಸುನೀತಾ ಎಂಬ ಮಹಿಳೆಯರನ್ನು ಕಲಾ ಅವರ ಮಗನ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದಾಗ ಬಂಧಿಸಲಾಗಿದೆ.

ವಿಎಚ್‌ಪಿಯ ಬ್ಲಾಕ್ ಅಧ್ಯಕ್ಷ ಅಶುತೋಷ್ ಸಿಂಗ್ ಅವರು ಮಹಿಳೆಯರ ವಿರುದ್ಧ ದೂರು ದಾಖಲಿಸಿದ್ದಾರೆ.

‘ದಿ ವೈರ್’ ಜೊತೆ ಮಾತನಾಡಿದ ಅಶುತೋಷ್‌ ಸಿಂಗ್, “ಹುಟ್ಟುಹಬ್ಬದ ಸಮಾರಂಭದ ನೆಪದಲ್ಲಿ ಬಲವಂತದ ಮತಾಂತರಗಳು ನಡೆಯುತ್ತಿವೆ ಎಂದು ನಮಗೆ ತಿಳಿದುಬಂತು. ನಾವು ವಿಷಯವನ್ನು ಪೊಲೀಸರಿಗೆ ತಿಳಿಸಿದೆವು. ಅವರು ಮಹಿಳೆಯರನ್ನು ಬಂಧಿಸಿದ್ದಾರೆ” ಎಂದಿದ್ದಾರೆ.

“ಅಲ್ಲಿ ಮಹಿಳೆಯರು ಮಾತ್ರ ಇದ್ದರು. ಅವರು ಇತರರಿಗೆ ಹಣದ ಆಮಿಷವೊಡ್ಡುತ್ತಿದ್ದರು. ಅಕ್ರಮ ಚಟುವಟಿಕೆಗಳನ್ನು ನಡೆಸುತ್ತಿದ್ದರು. ಅವರು ಯೇಸುವಿನಂತೆ ಕೈಯನ್ನು ಮೇಲೆ ಎತ್ತಿ ಪ್ರಾರ್ಥನೆ ಸಲ್ಲಿಸುತ್ತಿದ್ದರು. ಹರಿಜನ ಮಹಿಳೆಯರನ್ನು ಮತಾಂತರ ಮಾಡಲು ಪ್ರಯತ್ನಿಸುತ್ತಿದ್ದರು” ಎಂದು ದೂರಿದ್ದಾರೆ.

ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದವರನ್ನು ಬಲವಂತವಾಗಿ ಮತಾಂತರಿಸಲು ಮಹಿಳೆಯರು ಪ್ರಯತ್ನಿಸುತ್ತಿದ್ದಾರೆ. ಸಮಾರಂಭವನ್ನು ತಡೆಯಲು ಮುಂದಾದಾಗ ಬೆದರಿಕೆ ಹಾಕಿ, ನಿಂದಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 504 ಮತ್ತು 506 ಮತ್ತು ಮತಾಂತರ ನಿಷೇಧ ಕಾಯ್ದೆಯಡಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ‘ದಿ ವೈರ್‌’ ವರದಿ ಮಾಡಿದೆ.

ಬಂಧನದ ನಂತರ, ಮಹಿಳೆಯರನ್ನು ವಿಶೇಷ ಕೆಳ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಆರೋಪಗಳ ಗಂಭೀರತೆಯನ್ನು ಪರಿಗಣಿಸಿ ಜಾಮೀನು ನಿರಾಕರಿಸಲಾಯಿತು. ಪ್ರಕರಣದ ಮುಂದಿನ ವಿಚಾರಣೆಯನ್ನು ಆಗಸ್ಟ್ 16ಕ್ಕೆ ನಿಗದಿಪಡಿಸಲಾಗಿದೆ.

ವಿಚಾರಣೆ ವೇಳೆ ಮಹಿಳೆಯರ ಜೊತೆಗಿದ್ದ ಕಾರ್ಯಕರ್ತ ದೀನಾನಾಥ್ ಜೈಸ್ವರ್, “ಆರು ದಲಿತ-ಕ್ರಿಶ್ಚಿಯನ್ ಮಹಿಳೆಯರು ಜೈಲಿನಲ್ಲಿ ಕೊಳೆಯುತ್ತಲೇ ಇದ್ದಾರೆ. ಇದು ಹುಟ್ಟುಹಬ್ಬದ ಪಾರ್ಟಿಯಾಗಿತ್ತು. ಪರಿಚಿತರೆಲ್ಲ ಒಟ್ಟಿಗೆ ಸೇರಿದ್ದರು. ಅವರು ಯೇಸುವನ್ನು ನಂಬುತ್ತಾರೆ. ಹೀಗಾಗಿ ಕೇಕ್ ಕತ್ತರಿಸುವ ಮೊದಲು ಪ್ರಾರ್ಥನೆ ಮಾಡಲು ನಿರ್ಧರಿಸಿದರು. ಆದರೆ ಬಲವಂತದ ಮತಾಂತರ ಎಂದು ಆರೋಪಿಸಲಾಗಿದೆ. ಅಂದು ಭಾನುವಾರವಾದ್ದರಿಂದ ಮಹಿಳೆಯರನ್ನು ಸಿಜೆಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಆದಾಗ್ಯೂ, ಮಹಿಳೆಯರಿಗೆ ಜಾಮೀನು ನಿರಾಕರಿಸಲಾಯಿತು. ಈಗ ಮಹಿಳೆಯನ್ನು ಜೈಲಿಗೆ ಕಳುಹಿಸಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

ಮಹಿಳೆಯರನ್ನು ಪ್ರತಿನಿಧಿಸುವ ವಕೀಲರು, ಆರೋಪಗಳನ್ನು ಆಧಾರರಹಿತವೆಂದು ಪ್ರತಿಪಾದಿಸಿದ್ದಾರೆ.

‘ದಿ ವೈರ್‌’ ಜೊತೆ ಮಾತನಾಡಿದ ವಕೀಲ ಮುನೀಶ್ ಚಂದ್ರ, “ವಾಸ್ತವ ಬೇರೆಯೇ ಇದೆ. ಬಲವಂತದ ಮತಾಂತರ ಆರೋಪದ ಅಡಿಯಲ್ಲಿ ಜನಪ್ರಿಯತೆಯನ್ನು ಗಳಿಸಲು, ರಾಜಕೀಯವಾಗಿ ಲಾಭ ಮಾಡಿಕೊಳ್ಳಲು ಈ ಕೃತ್ಯ ಎಸಗಲಾಗಿದೆ. ಸರ್ಕಾರದ ಬೆಂಬಲವಿರುವ ಬಲಪಂಥೀಯ ಮತಾಂಧ ಸಂಘಟನೆಗಳು ಜನರನ್ನು ಟಾರ್ಗೆಟ್ ಮಾಡುತ್ತಿವೆ” ಎಂದು ದೂರಿದ್ದಾರೆ.

“ಮಹಿಳೆಯರು ತಮ್ಮ ಮನೆಯಲ್ಲಿ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದರು. ಅವರು ಪ್ರಾರ್ಥನೆ ಮಾಡುವಾಗ, ವಿಎಚ್‌ಪಿ ಸದಸ್ಯರು ಮಹಿಳೆಯರ ವಿರುದ್ಧ ದೂರು ದಾಖಲಿಸಿದರು. ಅವರನ್ನು ಮಧ್ಯಾಹ್ನ 2 ಗಂಟೆಗೆ ಠಾಣೆಗೆ ಕರೆದೊಯ್ಯಲಾಯಿತು. ಆದರೆ ಪೊಲೀಸ್ ಡೈರಿಯಲ್ಲಿ, ಮಹಿಳೆಯರನ್ನು ಸಂಜೆ 6 ಗಂಟೆಗೆ ಕರೆದೊಯ್ಯಲಾಯಿತು ಎಂದು ಬರೆಯಲಾಗಿದೆ. ನಾವು ಅವರ ಜಾಮೀನಿಗಾಗಿ ಪ್ರಯತ್ನಿಸಿದ್ದೇವೆ. ಆದರೆ ಕೆಳ ನ್ಯಾಯಾಲಯವು ಮಹಿಳೆಯರಿಗೆ ಜಾಮೀನು ನೀಡುವ ಅಧಿಕಾರವನ್ನು ಹೊಂದಿಲ್ಲ. ರಾಜಕೀಯ ಒತ್ತಡದಿಂದ ಮಹಿಳೆಯರಿಗೆ ಜಾಮೀನು ನೀಡಲಾಗಿಲ್ಲ ಎಂದು ನಾವು ಭಾವಿಸುತ್ತೇವೆ” ಎಂದಿದ್ದಾರೆ.

ಇದನ್ನೂ ಓದಿರಿ: ಮಧ್ಯಪ್ರದೇಶ: ಹಿಂದೂವೋ ಮುಸ್ಲಿಮನೋ ಎಂದು ತಿಳಿಯಲು ದಲಿತ ಯುವಕನನ್ನು ಬೆತ್ತಲೆಗೊಳಿಸಿ ಹಲ್ಲೆ!

ಇಂತಹ ಹಲವಾರು ಬಂಧನಗಳನ್ನು ‘ಮತಾಂತರ ವಿರೋಧಿ’ ಕಾನೂನಿನ ಅಡಿಯಲ್ಲಿ ಮಾಡಲಾಗಿದೆ.

2021 ರಲ್ಲಿ ಕ್ರಿಶ್ಚಿಯನ್ನರ ವಿರುದ್ಧ 300ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಲಾಗಿದೆ.ಇಂತಹ ಹೆಚ್ಚಿನ ದಾಳಿಗಳು ದಲಿತ ಮತ್ತು ಬುಡಕಟ್ಟು ಸಮುದಾಯಗಳಿಗೆ ಸೇರಿದ ಕ್ರಿಶ್ಚಿಯನ್ನರ ಮೇಲೆ ನಡೆದಿವೆ ಎಂದು ಸತ್ಯಶೋಧನಾ ವರದಿಯು ಎತ್ತಿ ತೋರಿಸಿದೆ.

ಮಹಾರಾಜ್‌ಗಂಜ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ ಅಧಿಕಾರಿ ಹಿರಿಯ ಸಬ್ ಇನ್ಸ್‌ಪೆಕ್ಟರ್ ಕಮಲ್ಕಾಂತ್ ವರ್ಮಾ ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ‘ದಿ ವೈರ್‌’ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....