Homeಮುಖಪುಟಮೌನಕ್ಕೆ ಶರಣಾದ ಯುಪಿ ಮತದಾರರು, ಆತಂಕದಲ್ಲಿ ಅಭ್ಯರ್ಥಿಗಳು

ಮೌನಕ್ಕೆ ಶರಣಾದ ಯುಪಿ ಮತದಾರರು, ಆತಂಕದಲ್ಲಿ ಅಭ್ಯರ್ಥಿಗಳು

- Advertisement -
- Advertisement -

2019ರವರೆಗೆ ಹೋಟೆಲ್‌ ಅಥವಾ ಗಲ್ಲಿ ಬದಿಯ ಚಾ ಮಾರುವ ಅಂಗಡಿಯಲ್ಲಿ ಮೌನವಾಗಿ ಕುಳಿತು ಸುತ್ತಮುತ್ತಲ ಜನರ ಸಂಭಾಷಣೆ ಆಲಿಸಿದರೆ ಚುನಾವಣೆ ಫಲಿತಾಂಶವನ್ನು ಅಂದಾಜಿಸಬಹುದಾಗಿತ್ತು. ಆದರೆ ಪ್ರಸಕ್ತ ಉತ್ತರಪ್ರದೇಶ ಚುನಾವಣೆಯ ಪರಿಸ್ಥಿತಿಯನ್ನು ಊಹಿಸುವುದು ಅಷ್ಟು ಸರಳವಲ್ಲ.

ಸಾಮಾನ್ಯವಾಗಿ ಜನರ ಮನಸ್ಥಿತಿ, ಅಭ್ಯರ್ಥಿಗಳ ವ್ಯಕ್ತಿತ್ವ, ಆಯಾ ಕ್ಷೇತ್ರದ ಜನರ ನಿರೀಕ್ಷೆಗಳು ಮತ್ತು ಜಾತಿ ಅಂಶ ಈ ಎಲ್ಲ ಆಯಾಮಗಳಲ್ಲಿ ಮೌಲ್ಯಮಾಪನ ಮಾಡಿದಲ್ಲಿ ಚುನಾವಣಾ ಫಲಿತಾಂಶದ ಚಿತ್ರಣ ಗ್ರಹಿಸಬಹುದಾಗಿತ್ತು. ಮನೆಗಳು ಮತ್ತು ಅಂಗಡಿಗಳ ಮೇಲೆ ಹಾರಾಡುವ ಬಾವುಟಗಳ ಸಂಖ್ಯೆ ನೋಡಿಯೇ ಆ ಪ್ರದೇಶದಲ್ಲಿ ಜನಪ್ರಿಯರಾದವರು ಯಾರು, ಯಾವ ಪಕ್ಷ ಪ್ರಾಬಲ್ಯ ಹೊಂದಿದೆ ಎಂಬ ಸ್ಪಷ್ಟ ಚಿತ್ರಣ ಲಭ್ಯವಾಗುತ್ತಿತ್ತು. ಯಾರು ಹೆಚ್ಚು ಪ್ರಚುರದಲ್ಲಿ ಇಲ್ಲವೆಂಬ ಮಾಹಿತಿಯನ್ನು ಅಂದಾಜಿಸಬಹುದಾಗಿತ್ತು. ಆದರೆ ಇಂದು ಕೋವಿಡ್ ಸನ್ನಿವೇಶದ ಬದಲಾದ ಕಾಲಘಟ್ಟದಲ್ಲಿ ಜನರು ಸಹ ಬದಲಾಗಿದ್ದಾರೆ.

ಚಹಾ ಮಳಿಗೆ ಮತ್ತು ತಿನಿಸು ಅಂಗಡಿಗಳ ಮುಂದೆ ಜನಸಂದಣಿ ಇದೆಯಾದರೂ, ಹವಾಮಾನ ಮತ್ತಿತರ ಸಂಭಾಷಣೆ ನಡೆಯುತ್ತಿದೆ. ಜನರು ರಾಜಕೀಯ ವಿಚಾರಗಳನ್ನು ತಮ್ಮ ಚರ್ಚೆಗಳಿಂದ ಹೊರಗಿಟ್ಟಿದ್ದಾರೆ. “ಪ್ರಸ್ತುತ ಜನರು ಬುದ್ಧಿವಂತರಾಗಿದ್ದಾರೆ. ತಮ್ಮ ರಾಜಕೀಯ ಆದ್ಯತೆಗಳನ್ನು ವ್ಯಕ್ತಪಡಿಸಿದರೆ ತಾವು ಒಂದು ಪಕ್ಷ/ಪಂಗಡದ ಉದ್ದೇಶಗಳಿಗೆ ಗುರಿಯಾಗುತ್ತೇವೆ ಎಂಬ ಅರಿವಾಗಿದೆ. ಹೀಗಾಗಿ ಅವರು ಅಪರಿಚಿತರೊಂದಿಗೆ ಮಾತನಾಡಲು ಬಯಸುವುದಿಲ್ಲ. ಟಿವಿ ಚಾನೆಲ್‌ಗಳ ಸಿಬ್ಬಂದಿಯನ್ನು ನೋಡಿದಾಗ ಜನರು, ಆಡಳಿತ ಪಕ್ಷದ ಪರವಾಗಿ ಜಾಣ್ಮೆಯಿಂದ ಮಾತನಾಡುತ್ತಾರೆ. ಏಕೆಂದರೆ ಅದು ಪ್ರಸಾರವಾಗುತ್ತದೆಂಬುದು ಅವರಿಗೆ ತಿಳಿದಿದೆ” ಎಂದು ರಾಜಕೀಯ ಕಾರ್ಯಕರ್ತರೊಬ್ಬರು ಹೊಸ ಪರಿಸ್ಥಿತಿಯನ್ನು ವಿಶ್ಲೇಷಿಸಿದ್ದಾರೆ.

ಇದನ್ನೂ ಓದಿರಿ: ವಿಶ್ಲೇಷಣೆ: ಆದಿತ್ಯನಾಥ್‌ ವಿರುದ್ಧ ರಾವಣ್ ಸ್ಪರ್ಧೆಯ ಲೆಕ್ಕಾಚಾರಗಳೇನು?

ಸ್ಮಾರ್ಟ್ ಮತದಾರರು

ಲಕ್ನೋದ ಹೊರವಲಯದ ಬಕ್ಷಿ ಕಾ ತಲಾಬ್‌ನ ‘ಸ್ಮಾರ್ಟ್’ ಮತದಾರರಲ್ಲಿ ಒಬ್ಬರಾದ ವೃತ್ತಿಯಲ್ಲಿ ಚಾಲಕರಾಗಿರುವ ಠಾಕೂರ್ ಸಿಂಗ್, ತಮ್ಮ ಠಾಕೂರ್ ಗುರುತನ್ನು ಬಹಳ ದೃಢವಾಗಿ ಪ್ರತಿಪಾದಿಸುತ್ತಾರೆ. ಇನ್ನೊಬ್ಬ ಚಾಲಕ, ಅಗತ್ಯ ವಸ್ತುಗಳ ಬೆಲೆ ಏರಿಕೆ ಬಗ್ಗೆ ಮಾತನಾಡುತ್ತಾ ವಿಷಾದ ವ್ಯಕ್ತಪಡಿಸುತ್ತಲೇ, “ಗೆಲ್ಲುವುದು ಯೋಗಿ ಆದಿತ್ಯನಾಥ್‌ರೇ. ಆದರೆ ಸರ್ಕಾರ ಬದಲಾದರೆ ಪರಿಸ್ಥಿತಿ ಬದಲಾಗುತ್ತದೆ ಎಂದು ನಾನು ಭಾವಿಸುತ್ತೇನೆ” ಎಂದು ಅಭಿಪ್ರಾಯಪಟ್ಟರು. ಆದರೆ ಟಿವಿ ವಾಹಿನಿಗಳ ಸಿಬ್ಬಂದಿ ಬಂದ ತಕ್ಷಣ ವಿಷಯ ಬದಲಿಸಿ, ಬೀಡಾಡಿ ದನಗಳ ಅಪಾಯದಿಂದ ಎರಡು ಬೆಳೆಗಳನ್ನು ಕಳೆದುಕೊಂಡ ವಿವರ ತಿಳಿಸಿದರು. ಇದಕ್ಕಿದ್ದಂತೆ ಅಭಿಪ್ರಾಯ ಬದಲಾವಣೆ ಮಾಡಿರುವುದೇಕೆ ಎಂದು ಪ್ರಶ್ನಿಸಿದರೆ, ಅವರು ಮುಗುಳ್ನಕ್ಕು “ಇದೇ ಅಲ್ಲವೇ ರಾಜಕೀಯ” ಎಂದು ಉತ್ತರಿಸಿದರು.

ಬಾರಾಬಂಕಿಯಲ್ಲಿ, ಯೋಗಿ ಅವರ ಕಟ್ಟಾ ಅಭಿಮಾನಿಗಳೆನ್ನಿಸಿಕೊಂಡ ಹಲವರಿದ್ದು, ಅವರಾರೂ ವಾಸ್ತವದಲ್ಲಿ ಆನ್‌ಲೈನ್‌ನಲ್ಲಿ ನಡೆಯುತ್ತಿರುವ ಬಿಜೆಪಿ ಸಭೆಗಳನ್ನು ನೋಡಲು ಆಸಕ್ತಿ ತೋರಿಸುತ್ತಿಲ್ಲ. ಬದಲಾಗಿ ವೆಬ್‌ಸರಣಿಗಳನ್ನು ನೋಡುತ್ತಾರೆ. ಇತ್ತೀಚೆಗೆ ಸ್ಮಾರ್ಟ್‌ಫೋನ್ ಕೊಂಡಿರುವ ಅಂಗಡಿ ನಡೆಸುತ್ತಿರುವ ಅಕ್ಷಯ್ ರಾವತ್ ಎಂಬ ಯುವಕನಿಗಂತೂ ರಾಜಕೀಯ ರ್‍ಯಾಲಿಗಳ ಬಗ್ಗೆ ಗಮನವೇ ಇಲ್ಲ. ರಾಜಕೀಯ ಕುರಿತ ವಾಟ್ಸಪ್ ಗುಂಪಿನಲ್ಲಿ ಭಾಗಿಯಾಗುವುದಿಲ್ಲ ಹಾಗೂ ಚರ್ಚೆಯನ್ನೂ ನಡೆಸುವುದಿಲ್ಲ. ಮೊಬೈಲ್ ಫೋನ್‌ಗೆ ಹಾಕಿರುವ ದೈನಂದಿನ ಡೇಟಾ ರೀಚಾರ್ಜ್ನಲ್ಲಿ ವೆಬ್ ಸರಣಿ ನೋಡುತ್ತಿರುವುದಾಗಿ ಅವರು ಹೇಳುತ್ತಾರೆ.

ವಿವಿಧ ರಾಜಕಾರಣಿಗಳು ಎತ್ತಿರುವ ಸಮಸ್ಯೆಗಳು ಮತ್ತು ಅವುಗಳ ಪರಿಣಾಮದ ಹಿನ್ನೆಲೆಯಲ್ಲಿ ಆಯ್ಕೆ ಬಗ್ಗೆ ಕೇಳಿದರೆ, “ಯಾರಿಗೆ ಓಟು ಹಾಕುತ್ತೇವೋ ಎನ್ನುವುದು ನಮಗೆ ತಿಳಿದಿದೆ. ಭಾಷಣದಿಂದ ಏನಾಗಲಿದೆ?” ಎಂದು ಉತ್ತರಿಸುತ್ತಾರೆ.

ಕೆಲ ಕ್ಷೇತ್ರಗಳಲ್ಲಿ ಮತದಾರರ ಮೌನದಿಂದಾಗಿ ಅಭ್ಯರ್ಥಿಗಳಲ್ಲಿ ನಡುಕ ಕಂಡುಬಂದಿದೆ. ಅಯೋಧ್ಯೆಯ ಮತದಾರರು, ಮುಂದಿನ ಸರ್ಕಾರ ರಚನೆ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ. ರಾಮಮಂದಿರದ ಬಗ್ಗೆ ಮೆಚ್ಚುಗೆ ಅಥವಾ ವಿರೋಧವನ್ನೂ ಸೂಚಿಸುವುದಿಲ್ಲ. ಅಲ್ಲದೆ ನಗರದ ಸೌಂದರ್ಯೀಕರಣಕ್ಕಾಗಿ ನೂರಾರು ಮನೆ ಮತ್ತು ಅಂಗಡಿಗಳನ್ನು ನೆಲಸಮಗೊಳಿಸಿದ್ದರ ಬಗ್ಗೆಯೂ ಮಾತನಾಡುವುದಿಲ್ಲ.

ಅಂಗಡಿ ನೆಲಸಮಗೊಂಡವರ ಪಟ್ಟಿಯಲ್ಲಿರುವ ಜಗತ್ ನರೈನ್ ತಿವಾರಿ ಎಂಬುವವರು, ಚುನಾವಣೆ ಬಗ್ಗೆ ಮೌನವಹಿಸಿದ್ದಾರೆ. 25 ವರ್ಷಗಳಿಂದ ರಾಮ ಮಂದಿರಕ್ಕೆ ಪ್ರತಿ ದಿನ ಭೇಟಿ ನೀಡುವ ಅವರು, ಚುನಾವಣೆ ಬಗ್ಗೆ ಮಾತನಾಡಲು ನಿರಾಕರಿಸುತ್ತಾರೆ. ಏನಾಗುತ್ತೋ ನೋಡೋಣ” ಎಂದಷ್ಟೇ ಹೇಳಿದರು.

ಮತದಾರರ ಈ ಧೋರಣೆಯೇ ಅಭ್ಯರ್ಥಿಗಳ ಆತಂಕಕ್ಕೆ ಕಾರಣವಾಗಿದ್ದು, ಕಾನ್ಪುರದ ಬಿಜೆಪಿ ಅಭ್ಯರ್ಥಿಯೊಬ್ಬರು, “ಮತದಾರರ ಮನಸ್ಥಿತಿಯನ್ನು ಊಹಿಸುವುದು ನಮಗೆ ತುಂಬಾ ಕಷ್ಟವಾಗಿದೆ. ನಾನು ಮನೆ-ಮನೆ ಪ್ರಚಾರ ಮಾಡಲು ಹೋದಾಗ, ಮತದಾರರು ಸ್ವಾಗತಿಸಲೂ ಇಲ್ಲ ಅಥವಾ ಪ್ರತಿಕೂಲವಾಗಿಯೂ ಇರಲಿಲ್ಲ. ಹೀಗಾಗಿ ಅವರ ಮನಸ್ಥಿತಿಯನ್ನು ನಿರ್ಣಯಿಸಲು ಸಾಧ್ಯವಿಲ್ಲ. ಈ ಮೊದಲು, ಬಹಿರಂಗ ಪ್ರಚಾರ ಜನಸಂದಣಿಯ ಮನಸ್ಥಿತಿಯನ್ನು ಊಹಿಸಬಹುದಾಗಿತ್ತು. ಈಗ ಅದೂ ಸಾಧ್ಯವಿಲ್ಲ” ಎಂದರು.

ಕೃಪೆ: ಉಮೀದ್‌.ಕಾಮ್‌
ಅನುವಾದ: ಸೋಮಶೇಖರ್‌ ಚಲ್ಯ


ಇದನ್ನೂ ಓದಿರಿ: ವಿಶ್ಲೇಷಣೆ: 100 ವರ್ಷಗಳಷ್ಟು ಹಳೆಯದಾದ ‘ಚಿಂತಾಮಣಿ’ ನಾಟಕವನ್ನು ಆಂಧ್ರ ಸರ್ಕಾರ ನಿಷೇಧಿಸಿದ್ದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...