Homeಮುಖಪುಟಮೌನಕ್ಕೆ ಶರಣಾದ ಯುಪಿ ಮತದಾರರು, ಆತಂಕದಲ್ಲಿ ಅಭ್ಯರ್ಥಿಗಳು

ಮೌನಕ್ಕೆ ಶರಣಾದ ಯುಪಿ ಮತದಾರರು, ಆತಂಕದಲ್ಲಿ ಅಭ್ಯರ್ಥಿಗಳು

- Advertisement -
- Advertisement -

2019ರವರೆಗೆ ಹೋಟೆಲ್‌ ಅಥವಾ ಗಲ್ಲಿ ಬದಿಯ ಚಾ ಮಾರುವ ಅಂಗಡಿಯಲ್ಲಿ ಮೌನವಾಗಿ ಕುಳಿತು ಸುತ್ತಮುತ್ತಲ ಜನರ ಸಂಭಾಷಣೆ ಆಲಿಸಿದರೆ ಚುನಾವಣೆ ಫಲಿತಾಂಶವನ್ನು ಅಂದಾಜಿಸಬಹುದಾಗಿತ್ತು. ಆದರೆ ಪ್ರಸಕ್ತ ಉತ್ತರಪ್ರದೇಶ ಚುನಾವಣೆಯ ಪರಿಸ್ಥಿತಿಯನ್ನು ಊಹಿಸುವುದು ಅಷ್ಟು ಸರಳವಲ್ಲ.

ಸಾಮಾನ್ಯವಾಗಿ ಜನರ ಮನಸ್ಥಿತಿ, ಅಭ್ಯರ್ಥಿಗಳ ವ್ಯಕ್ತಿತ್ವ, ಆಯಾ ಕ್ಷೇತ್ರದ ಜನರ ನಿರೀಕ್ಷೆಗಳು ಮತ್ತು ಜಾತಿ ಅಂಶ ಈ ಎಲ್ಲ ಆಯಾಮಗಳಲ್ಲಿ ಮೌಲ್ಯಮಾಪನ ಮಾಡಿದಲ್ಲಿ ಚುನಾವಣಾ ಫಲಿತಾಂಶದ ಚಿತ್ರಣ ಗ್ರಹಿಸಬಹುದಾಗಿತ್ತು. ಮನೆಗಳು ಮತ್ತು ಅಂಗಡಿಗಳ ಮೇಲೆ ಹಾರಾಡುವ ಬಾವುಟಗಳ ಸಂಖ್ಯೆ ನೋಡಿಯೇ ಆ ಪ್ರದೇಶದಲ್ಲಿ ಜನಪ್ರಿಯರಾದವರು ಯಾರು, ಯಾವ ಪಕ್ಷ ಪ್ರಾಬಲ್ಯ ಹೊಂದಿದೆ ಎಂಬ ಸ್ಪಷ್ಟ ಚಿತ್ರಣ ಲಭ್ಯವಾಗುತ್ತಿತ್ತು. ಯಾರು ಹೆಚ್ಚು ಪ್ರಚುರದಲ್ಲಿ ಇಲ್ಲವೆಂಬ ಮಾಹಿತಿಯನ್ನು ಅಂದಾಜಿಸಬಹುದಾಗಿತ್ತು. ಆದರೆ ಇಂದು ಕೋವಿಡ್ ಸನ್ನಿವೇಶದ ಬದಲಾದ ಕಾಲಘಟ್ಟದಲ್ಲಿ ಜನರು ಸಹ ಬದಲಾಗಿದ್ದಾರೆ.

ಚಹಾ ಮಳಿಗೆ ಮತ್ತು ತಿನಿಸು ಅಂಗಡಿಗಳ ಮುಂದೆ ಜನಸಂದಣಿ ಇದೆಯಾದರೂ, ಹವಾಮಾನ ಮತ್ತಿತರ ಸಂಭಾಷಣೆ ನಡೆಯುತ್ತಿದೆ. ಜನರು ರಾಜಕೀಯ ವಿಚಾರಗಳನ್ನು ತಮ್ಮ ಚರ್ಚೆಗಳಿಂದ ಹೊರಗಿಟ್ಟಿದ್ದಾರೆ. “ಪ್ರಸ್ತುತ ಜನರು ಬುದ್ಧಿವಂತರಾಗಿದ್ದಾರೆ. ತಮ್ಮ ರಾಜಕೀಯ ಆದ್ಯತೆಗಳನ್ನು ವ್ಯಕ್ತಪಡಿಸಿದರೆ ತಾವು ಒಂದು ಪಕ್ಷ/ಪಂಗಡದ ಉದ್ದೇಶಗಳಿಗೆ ಗುರಿಯಾಗುತ್ತೇವೆ ಎಂಬ ಅರಿವಾಗಿದೆ. ಹೀಗಾಗಿ ಅವರು ಅಪರಿಚಿತರೊಂದಿಗೆ ಮಾತನಾಡಲು ಬಯಸುವುದಿಲ್ಲ. ಟಿವಿ ಚಾನೆಲ್‌ಗಳ ಸಿಬ್ಬಂದಿಯನ್ನು ನೋಡಿದಾಗ ಜನರು, ಆಡಳಿತ ಪಕ್ಷದ ಪರವಾಗಿ ಜಾಣ್ಮೆಯಿಂದ ಮಾತನಾಡುತ್ತಾರೆ. ಏಕೆಂದರೆ ಅದು ಪ್ರಸಾರವಾಗುತ್ತದೆಂಬುದು ಅವರಿಗೆ ತಿಳಿದಿದೆ” ಎಂದು ರಾಜಕೀಯ ಕಾರ್ಯಕರ್ತರೊಬ್ಬರು ಹೊಸ ಪರಿಸ್ಥಿತಿಯನ್ನು ವಿಶ್ಲೇಷಿಸಿದ್ದಾರೆ.

ಇದನ್ನೂ ಓದಿರಿ: ವಿಶ್ಲೇಷಣೆ: ಆದಿತ್ಯನಾಥ್‌ ವಿರುದ್ಧ ರಾವಣ್ ಸ್ಪರ್ಧೆಯ ಲೆಕ್ಕಾಚಾರಗಳೇನು?

ಸ್ಮಾರ್ಟ್ ಮತದಾರರು

ಲಕ್ನೋದ ಹೊರವಲಯದ ಬಕ್ಷಿ ಕಾ ತಲಾಬ್‌ನ ‘ಸ್ಮಾರ್ಟ್’ ಮತದಾರರಲ್ಲಿ ಒಬ್ಬರಾದ ವೃತ್ತಿಯಲ್ಲಿ ಚಾಲಕರಾಗಿರುವ ಠಾಕೂರ್ ಸಿಂಗ್, ತಮ್ಮ ಠಾಕೂರ್ ಗುರುತನ್ನು ಬಹಳ ದೃಢವಾಗಿ ಪ್ರತಿಪಾದಿಸುತ್ತಾರೆ. ಇನ್ನೊಬ್ಬ ಚಾಲಕ, ಅಗತ್ಯ ವಸ್ತುಗಳ ಬೆಲೆ ಏರಿಕೆ ಬಗ್ಗೆ ಮಾತನಾಡುತ್ತಾ ವಿಷಾದ ವ್ಯಕ್ತಪಡಿಸುತ್ತಲೇ, “ಗೆಲ್ಲುವುದು ಯೋಗಿ ಆದಿತ್ಯನಾಥ್‌ರೇ. ಆದರೆ ಸರ್ಕಾರ ಬದಲಾದರೆ ಪರಿಸ್ಥಿತಿ ಬದಲಾಗುತ್ತದೆ ಎಂದು ನಾನು ಭಾವಿಸುತ್ತೇನೆ” ಎಂದು ಅಭಿಪ್ರಾಯಪಟ್ಟರು. ಆದರೆ ಟಿವಿ ವಾಹಿನಿಗಳ ಸಿಬ್ಬಂದಿ ಬಂದ ತಕ್ಷಣ ವಿಷಯ ಬದಲಿಸಿ, ಬೀಡಾಡಿ ದನಗಳ ಅಪಾಯದಿಂದ ಎರಡು ಬೆಳೆಗಳನ್ನು ಕಳೆದುಕೊಂಡ ವಿವರ ತಿಳಿಸಿದರು. ಇದಕ್ಕಿದ್ದಂತೆ ಅಭಿಪ್ರಾಯ ಬದಲಾವಣೆ ಮಾಡಿರುವುದೇಕೆ ಎಂದು ಪ್ರಶ್ನಿಸಿದರೆ, ಅವರು ಮುಗುಳ್ನಕ್ಕು “ಇದೇ ಅಲ್ಲವೇ ರಾಜಕೀಯ” ಎಂದು ಉತ್ತರಿಸಿದರು.

ಬಾರಾಬಂಕಿಯಲ್ಲಿ, ಯೋಗಿ ಅವರ ಕಟ್ಟಾ ಅಭಿಮಾನಿಗಳೆನ್ನಿಸಿಕೊಂಡ ಹಲವರಿದ್ದು, ಅವರಾರೂ ವಾಸ್ತವದಲ್ಲಿ ಆನ್‌ಲೈನ್‌ನಲ್ಲಿ ನಡೆಯುತ್ತಿರುವ ಬಿಜೆಪಿ ಸಭೆಗಳನ್ನು ನೋಡಲು ಆಸಕ್ತಿ ತೋರಿಸುತ್ತಿಲ್ಲ. ಬದಲಾಗಿ ವೆಬ್‌ಸರಣಿಗಳನ್ನು ನೋಡುತ್ತಾರೆ. ಇತ್ತೀಚೆಗೆ ಸ್ಮಾರ್ಟ್‌ಫೋನ್ ಕೊಂಡಿರುವ ಅಂಗಡಿ ನಡೆಸುತ್ತಿರುವ ಅಕ್ಷಯ್ ರಾವತ್ ಎಂಬ ಯುವಕನಿಗಂತೂ ರಾಜಕೀಯ ರ್‍ಯಾಲಿಗಳ ಬಗ್ಗೆ ಗಮನವೇ ಇಲ್ಲ. ರಾಜಕೀಯ ಕುರಿತ ವಾಟ್ಸಪ್ ಗುಂಪಿನಲ್ಲಿ ಭಾಗಿಯಾಗುವುದಿಲ್ಲ ಹಾಗೂ ಚರ್ಚೆಯನ್ನೂ ನಡೆಸುವುದಿಲ್ಲ. ಮೊಬೈಲ್ ಫೋನ್‌ಗೆ ಹಾಕಿರುವ ದೈನಂದಿನ ಡೇಟಾ ರೀಚಾರ್ಜ್ನಲ್ಲಿ ವೆಬ್ ಸರಣಿ ನೋಡುತ್ತಿರುವುದಾಗಿ ಅವರು ಹೇಳುತ್ತಾರೆ.

ವಿವಿಧ ರಾಜಕಾರಣಿಗಳು ಎತ್ತಿರುವ ಸಮಸ್ಯೆಗಳು ಮತ್ತು ಅವುಗಳ ಪರಿಣಾಮದ ಹಿನ್ನೆಲೆಯಲ್ಲಿ ಆಯ್ಕೆ ಬಗ್ಗೆ ಕೇಳಿದರೆ, “ಯಾರಿಗೆ ಓಟು ಹಾಕುತ್ತೇವೋ ಎನ್ನುವುದು ನಮಗೆ ತಿಳಿದಿದೆ. ಭಾಷಣದಿಂದ ಏನಾಗಲಿದೆ?” ಎಂದು ಉತ್ತರಿಸುತ್ತಾರೆ.

ಕೆಲ ಕ್ಷೇತ್ರಗಳಲ್ಲಿ ಮತದಾರರ ಮೌನದಿಂದಾಗಿ ಅಭ್ಯರ್ಥಿಗಳಲ್ಲಿ ನಡುಕ ಕಂಡುಬಂದಿದೆ. ಅಯೋಧ್ಯೆಯ ಮತದಾರರು, ಮುಂದಿನ ಸರ್ಕಾರ ರಚನೆ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ. ರಾಮಮಂದಿರದ ಬಗ್ಗೆ ಮೆಚ್ಚುಗೆ ಅಥವಾ ವಿರೋಧವನ್ನೂ ಸೂಚಿಸುವುದಿಲ್ಲ. ಅಲ್ಲದೆ ನಗರದ ಸೌಂದರ್ಯೀಕರಣಕ್ಕಾಗಿ ನೂರಾರು ಮನೆ ಮತ್ತು ಅಂಗಡಿಗಳನ್ನು ನೆಲಸಮಗೊಳಿಸಿದ್ದರ ಬಗ್ಗೆಯೂ ಮಾತನಾಡುವುದಿಲ್ಲ.

ಅಂಗಡಿ ನೆಲಸಮಗೊಂಡವರ ಪಟ್ಟಿಯಲ್ಲಿರುವ ಜಗತ್ ನರೈನ್ ತಿವಾರಿ ಎಂಬುವವರು, ಚುನಾವಣೆ ಬಗ್ಗೆ ಮೌನವಹಿಸಿದ್ದಾರೆ. 25 ವರ್ಷಗಳಿಂದ ರಾಮ ಮಂದಿರಕ್ಕೆ ಪ್ರತಿ ದಿನ ಭೇಟಿ ನೀಡುವ ಅವರು, ಚುನಾವಣೆ ಬಗ್ಗೆ ಮಾತನಾಡಲು ನಿರಾಕರಿಸುತ್ತಾರೆ. ಏನಾಗುತ್ತೋ ನೋಡೋಣ” ಎಂದಷ್ಟೇ ಹೇಳಿದರು.

ಮತದಾರರ ಈ ಧೋರಣೆಯೇ ಅಭ್ಯರ್ಥಿಗಳ ಆತಂಕಕ್ಕೆ ಕಾರಣವಾಗಿದ್ದು, ಕಾನ್ಪುರದ ಬಿಜೆಪಿ ಅಭ್ಯರ್ಥಿಯೊಬ್ಬರು, “ಮತದಾರರ ಮನಸ್ಥಿತಿಯನ್ನು ಊಹಿಸುವುದು ನಮಗೆ ತುಂಬಾ ಕಷ್ಟವಾಗಿದೆ. ನಾನು ಮನೆ-ಮನೆ ಪ್ರಚಾರ ಮಾಡಲು ಹೋದಾಗ, ಮತದಾರರು ಸ್ವಾಗತಿಸಲೂ ಇಲ್ಲ ಅಥವಾ ಪ್ರತಿಕೂಲವಾಗಿಯೂ ಇರಲಿಲ್ಲ. ಹೀಗಾಗಿ ಅವರ ಮನಸ್ಥಿತಿಯನ್ನು ನಿರ್ಣಯಿಸಲು ಸಾಧ್ಯವಿಲ್ಲ. ಈ ಮೊದಲು, ಬಹಿರಂಗ ಪ್ರಚಾರ ಜನಸಂದಣಿಯ ಮನಸ್ಥಿತಿಯನ್ನು ಊಹಿಸಬಹುದಾಗಿತ್ತು. ಈಗ ಅದೂ ಸಾಧ್ಯವಿಲ್ಲ” ಎಂದರು.

ಕೃಪೆ: ಉಮೀದ್‌.ಕಾಮ್‌
ಅನುವಾದ: ಸೋಮಶೇಖರ್‌ ಚಲ್ಯ


ಇದನ್ನೂ ಓದಿರಿ: ವಿಶ್ಲೇಷಣೆ: 100 ವರ್ಷಗಳಷ್ಟು ಹಳೆಯದಾದ ‘ಚಿಂತಾಮಣಿ’ ನಾಟಕವನ್ನು ಆಂಧ್ರ ಸರ್ಕಾರ ನಿಷೇಧಿಸಿದ್ದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...