Homeಮುಖಪುಟಮೌನಕ್ಕೆ ಶರಣಾದ ಯುಪಿ ಮತದಾರರು, ಆತಂಕದಲ್ಲಿ ಅಭ್ಯರ್ಥಿಗಳು

ಮೌನಕ್ಕೆ ಶರಣಾದ ಯುಪಿ ಮತದಾರರು, ಆತಂಕದಲ್ಲಿ ಅಭ್ಯರ್ಥಿಗಳು

- Advertisement -
- Advertisement -

2019ರವರೆಗೆ ಹೋಟೆಲ್‌ ಅಥವಾ ಗಲ್ಲಿ ಬದಿಯ ಚಾ ಮಾರುವ ಅಂಗಡಿಯಲ್ಲಿ ಮೌನವಾಗಿ ಕುಳಿತು ಸುತ್ತಮುತ್ತಲ ಜನರ ಸಂಭಾಷಣೆ ಆಲಿಸಿದರೆ ಚುನಾವಣೆ ಫಲಿತಾಂಶವನ್ನು ಅಂದಾಜಿಸಬಹುದಾಗಿತ್ತು. ಆದರೆ ಪ್ರಸಕ್ತ ಉತ್ತರಪ್ರದೇಶ ಚುನಾವಣೆಯ ಪರಿಸ್ಥಿತಿಯನ್ನು ಊಹಿಸುವುದು ಅಷ್ಟು ಸರಳವಲ್ಲ.

ಸಾಮಾನ್ಯವಾಗಿ ಜನರ ಮನಸ್ಥಿತಿ, ಅಭ್ಯರ್ಥಿಗಳ ವ್ಯಕ್ತಿತ್ವ, ಆಯಾ ಕ್ಷೇತ್ರದ ಜನರ ನಿರೀಕ್ಷೆಗಳು ಮತ್ತು ಜಾತಿ ಅಂಶ ಈ ಎಲ್ಲ ಆಯಾಮಗಳಲ್ಲಿ ಮೌಲ್ಯಮಾಪನ ಮಾಡಿದಲ್ಲಿ ಚುನಾವಣಾ ಫಲಿತಾಂಶದ ಚಿತ್ರಣ ಗ್ರಹಿಸಬಹುದಾಗಿತ್ತು. ಮನೆಗಳು ಮತ್ತು ಅಂಗಡಿಗಳ ಮೇಲೆ ಹಾರಾಡುವ ಬಾವುಟಗಳ ಸಂಖ್ಯೆ ನೋಡಿಯೇ ಆ ಪ್ರದೇಶದಲ್ಲಿ ಜನಪ್ರಿಯರಾದವರು ಯಾರು, ಯಾವ ಪಕ್ಷ ಪ್ರಾಬಲ್ಯ ಹೊಂದಿದೆ ಎಂಬ ಸ್ಪಷ್ಟ ಚಿತ್ರಣ ಲಭ್ಯವಾಗುತ್ತಿತ್ತು. ಯಾರು ಹೆಚ್ಚು ಪ್ರಚುರದಲ್ಲಿ ಇಲ್ಲವೆಂಬ ಮಾಹಿತಿಯನ್ನು ಅಂದಾಜಿಸಬಹುದಾಗಿತ್ತು. ಆದರೆ ಇಂದು ಕೋವಿಡ್ ಸನ್ನಿವೇಶದ ಬದಲಾದ ಕಾಲಘಟ್ಟದಲ್ಲಿ ಜನರು ಸಹ ಬದಲಾಗಿದ್ದಾರೆ.

ಚಹಾ ಮಳಿಗೆ ಮತ್ತು ತಿನಿಸು ಅಂಗಡಿಗಳ ಮುಂದೆ ಜನಸಂದಣಿ ಇದೆಯಾದರೂ, ಹವಾಮಾನ ಮತ್ತಿತರ ಸಂಭಾಷಣೆ ನಡೆಯುತ್ತಿದೆ. ಜನರು ರಾಜಕೀಯ ವಿಚಾರಗಳನ್ನು ತಮ್ಮ ಚರ್ಚೆಗಳಿಂದ ಹೊರಗಿಟ್ಟಿದ್ದಾರೆ. “ಪ್ರಸ್ತುತ ಜನರು ಬುದ್ಧಿವಂತರಾಗಿದ್ದಾರೆ. ತಮ್ಮ ರಾಜಕೀಯ ಆದ್ಯತೆಗಳನ್ನು ವ್ಯಕ್ತಪಡಿಸಿದರೆ ತಾವು ಒಂದು ಪಕ್ಷ/ಪಂಗಡದ ಉದ್ದೇಶಗಳಿಗೆ ಗುರಿಯಾಗುತ್ತೇವೆ ಎಂಬ ಅರಿವಾಗಿದೆ. ಹೀಗಾಗಿ ಅವರು ಅಪರಿಚಿತರೊಂದಿಗೆ ಮಾತನಾಡಲು ಬಯಸುವುದಿಲ್ಲ. ಟಿವಿ ಚಾನೆಲ್‌ಗಳ ಸಿಬ್ಬಂದಿಯನ್ನು ನೋಡಿದಾಗ ಜನರು, ಆಡಳಿತ ಪಕ್ಷದ ಪರವಾಗಿ ಜಾಣ್ಮೆಯಿಂದ ಮಾತನಾಡುತ್ತಾರೆ. ಏಕೆಂದರೆ ಅದು ಪ್ರಸಾರವಾಗುತ್ತದೆಂಬುದು ಅವರಿಗೆ ತಿಳಿದಿದೆ” ಎಂದು ರಾಜಕೀಯ ಕಾರ್ಯಕರ್ತರೊಬ್ಬರು ಹೊಸ ಪರಿಸ್ಥಿತಿಯನ್ನು ವಿಶ್ಲೇಷಿಸಿದ್ದಾರೆ.

ಇದನ್ನೂ ಓದಿರಿ: ವಿಶ್ಲೇಷಣೆ: ಆದಿತ್ಯನಾಥ್‌ ವಿರುದ್ಧ ರಾವಣ್ ಸ್ಪರ್ಧೆಯ ಲೆಕ್ಕಾಚಾರಗಳೇನು?

ಸ್ಮಾರ್ಟ್ ಮತದಾರರು

ಲಕ್ನೋದ ಹೊರವಲಯದ ಬಕ್ಷಿ ಕಾ ತಲಾಬ್‌ನ ‘ಸ್ಮಾರ್ಟ್’ ಮತದಾರರಲ್ಲಿ ಒಬ್ಬರಾದ ವೃತ್ತಿಯಲ್ಲಿ ಚಾಲಕರಾಗಿರುವ ಠಾಕೂರ್ ಸಿಂಗ್, ತಮ್ಮ ಠಾಕೂರ್ ಗುರುತನ್ನು ಬಹಳ ದೃಢವಾಗಿ ಪ್ರತಿಪಾದಿಸುತ್ತಾರೆ. ಇನ್ನೊಬ್ಬ ಚಾಲಕ, ಅಗತ್ಯ ವಸ್ತುಗಳ ಬೆಲೆ ಏರಿಕೆ ಬಗ್ಗೆ ಮಾತನಾಡುತ್ತಾ ವಿಷಾದ ವ್ಯಕ್ತಪಡಿಸುತ್ತಲೇ, “ಗೆಲ್ಲುವುದು ಯೋಗಿ ಆದಿತ್ಯನಾಥ್‌ರೇ. ಆದರೆ ಸರ್ಕಾರ ಬದಲಾದರೆ ಪರಿಸ್ಥಿತಿ ಬದಲಾಗುತ್ತದೆ ಎಂದು ನಾನು ಭಾವಿಸುತ್ತೇನೆ” ಎಂದು ಅಭಿಪ್ರಾಯಪಟ್ಟರು. ಆದರೆ ಟಿವಿ ವಾಹಿನಿಗಳ ಸಿಬ್ಬಂದಿ ಬಂದ ತಕ್ಷಣ ವಿಷಯ ಬದಲಿಸಿ, ಬೀಡಾಡಿ ದನಗಳ ಅಪಾಯದಿಂದ ಎರಡು ಬೆಳೆಗಳನ್ನು ಕಳೆದುಕೊಂಡ ವಿವರ ತಿಳಿಸಿದರು. ಇದಕ್ಕಿದ್ದಂತೆ ಅಭಿಪ್ರಾಯ ಬದಲಾವಣೆ ಮಾಡಿರುವುದೇಕೆ ಎಂದು ಪ್ರಶ್ನಿಸಿದರೆ, ಅವರು ಮುಗುಳ್ನಕ್ಕು “ಇದೇ ಅಲ್ಲವೇ ರಾಜಕೀಯ” ಎಂದು ಉತ್ತರಿಸಿದರು.

ಬಾರಾಬಂಕಿಯಲ್ಲಿ, ಯೋಗಿ ಅವರ ಕಟ್ಟಾ ಅಭಿಮಾನಿಗಳೆನ್ನಿಸಿಕೊಂಡ ಹಲವರಿದ್ದು, ಅವರಾರೂ ವಾಸ್ತವದಲ್ಲಿ ಆನ್‌ಲೈನ್‌ನಲ್ಲಿ ನಡೆಯುತ್ತಿರುವ ಬಿಜೆಪಿ ಸಭೆಗಳನ್ನು ನೋಡಲು ಆಸಕ್ತಿ ತೋರಿಸುತ್ತಿಲ್ಲ. ಬದಲಾಗಿ ವೆಬ್‌ಸರಣಿಗಳನ್ನು ನೋಡುತ್ತಾರೆ. ಇತ್ತೀಚೆಗೆ ಸ್ಮಾರ್ಟ್‌ಫೋನ್ ಕೊಂಡಿರುವ ಅಂಗಡಿ ನಡೆಸುತ್ತಿರುವ ಅಕ್ಷಯ್ ರಾವತ್ ಎಂಬ ಯುವಕನಿಗಂತೂ ರಾಜಕೀಯ ರ್‍ಯಾಲಿಗಳ ಬಗ್ಗೆ ಗಮನವೇ ಇಲ್ಲ. ರಾಜಕೀಯ ಕುರಿತ ವಾಟ್ಸಪ್ ಗುಂಪಿನಲ್ಲಿ ಭಾಗಿಯಾಗುವುದಿಲ್ಲ ಹಾಗೂ ಚರ್ಚೆಯನ್ನೂ ನಡೆಸುವುದಿಲ್ಲ. ಮೊಬೈಲ್ ಫೋನ್‌ಗೆ ಹಾಕಿರುವ ದೈನಂದಿನ ಡೇಟಾ ರೀಚಾರ್ಜ್ನಲ್ಲಿ ವೆಬ್ ಸರಣಿ ನೋಡುತ್ತಿರುವುದಾಗಿ ಅವರು ಹೇಳುತ್ತಾರೆ.

ವಿವಿಧ ರಾಜಕಾರಣಿಗಳು ಎತ್ತಿರುವ ಸಮಸ್ಯೆಗಳು ಮತ್ತು ಅವುಗಳ ಪರಿಣಾಮದ ಹಿನ್ನೆಲೆಯಲ್ಲಿ ಆಯ್ಕೆ ಬಗ್ಗೆ ಕೇಳಿದರೆ, “ಯಾರಿಗೆ ಓಟು ಹಾಕುತ್ತೇವೋ ಎನ್ನುವುದು ನಮಗೆ ತಿಳಿದಿದೆ. ಭಾಷಣದಿಂದ ಏನಾಗಲಿದೆ?” ಎಂದು ಉತ್ತರಿಸುತ್ತಾರೆ.

ಕೆಲ ಕ್ಷೇತ್ರಗಳಲ್ಲಿ ಮತದಾರರ ಮೌನದಿಂದಾಗಿ ಅಭ್ಯರ್ಥಿಗಳಲ್ಲಿ ನಡುಕ ಕಂಡುಬಂದಿದೆ. ಅಯೋಧ್ಯೆಯ ಮತದಾರರು, ಮುಂದಿನ ಸರ್ಕಾರ ರಚನೆ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ. ರಾಮಮಂದಿರದ ಬಗ್ಗೆ ಮೆಚ್ಚುಗೆ ಅಥವಾ ವಿರೋಧವನ್ನೂ ಸೂಚಿಸುವುದಿಲ್ಲ. ಅಲ್ಲದೆ ನಗರದ ಸೌಂದರ್ಯೀಕರಣಕ್ಕಾಗಿ ನೂರಾರು ಮನೆ ಮತ್ತು ಅಂಗಡಿಗಳನ್ನು ನೆಲಸಮಗೊಳಿಸಿದ್ದರ ಬಗ್ಗೆಯೂ ಮಾತನಾಡುವುದಿಲ್ಲ.

ಅಂಗಡಿ ನೆಲಸಮಗೊಂಡವರ ಪಟ್ಟಿಯಲ್ಲಿರುವ ಜಗತ್ ನರೈನ್ ತಿವಾರಿ ಎಂಬುವವರು, ಚುನಾವಣೆ ಬಗ್ಗೆ ಮೌನವಹಿಸಿದ್ದಾರೆ. 25 ವರ್ಷಗಳಿಂದ ರಾಮ ಮಂದಿರಕ್ಕೆ ಪ್ರತಿ ದಿನ ಭೇಟಿ ನೀಡುವ ಅವರು, ಚುನಾವಣೆ ಬಗ್ಗೆ ಮಾತನಾಡಲು ನಿರಾಕರಿಸುತ್ತಾರೆ. ಏನಾಗುತ್ತೋ ನೋಡೋಣ” ಎಂದಷ್ಟೇ ಹೇಳಿದರು.

ಮತದಾರರ ಈ ಧೋರಣೆಯೇ ಅಭ್ಯರ್ಥಿಗಳ ಆತಂಕಕ್ಕೆ ಕಾರಣವಾಗಿದ್ದು, ಕಾನ್ಪುರದ ಬಿಜೆಪಿ ಅಭ್ಯರ್ಥಿಯೊಬ್ಬರು, “ಮತದಾರರ ಮನಸ್ಥಿತಿಯನ್ನು ಊಹಿಸುವುದು ನಮಗೆ ತುಂಬಾ ಕಷ್ಟವಾಗಿದೆ. ನಾನು ಮನೆ-ಮನೆ ಪ್ರಚಾರ ಮಾಡಲು ಹೋದಾಗ, ಮತದಾರರು ಸ್ವಾಗತಿಸಲೂ ಇಲ್ಲ ಅಥವಾ ಪ್ರತಿಕೂಲವಾಗಿಯೂ ಇರಲಿಲ್ಲ. ಹೀಗಾಗಿ ಅವರ ಮನಸ್ಥಿತಿಯನ್ನು ನಿರ್ಣಯಿಸಲು ಸಾಧ್ಯವಿಲ್ಲ. ಈ ಮೊದಲು, ಬಹಿರಂಗ ಪ್ರಚಾರ ಜನಸಂದಣಿಯ ಮನಸ್ಥಿತಿಯನ್ನು ಊಹಿಸಬಹುದಾಗಿತ್ತು. ಈಗ ಅದೂ ಸಾಧ್ಯವಿಲ್ಲ” ಎಂದರು.

ಕೃಪೆ: ಉಮೀದ್‌.ಕಾಮ್‌
ಅನುವಾದ: ಸೋಮಶೇಖರ್‌ ಚಲ್ಯ


ಇದನ್ನೂ ಓದಿರಿ: ವಿಶ್ಲೇಷಣೆ: 100 ವರ್ಷಗಳಷ್ಟು ಹಳೆಯದಾದ ‘ಚಿಂತಾಮಣಿ’ ನಾಟಕವನ್ನು ಆಂಧ್ರ ಸರ್ಕಾರ ನಿಷೇಧಿಸಿದ್ದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...