Homeಮುಖಪುಟಮೌನಕ್ಕೆ ಶರಣಾದ ಯುಪಿ ಮತದಾರರು, ಆತಂಕದಲ್ಲಿ ಅಭ್ಯರ್ಥಿಗಳು

ಮೌನಕ್ಕೆ ಶರಣಾದ ಯುಪಿ ಮತದಾರರು, ಆತಂಕದಲ್ಲಿ ಅಭ್ಯರ್ಥಿಗಳು

- Advertisement -
- Advertisement -

2019ರವರೆಗೆ ಹೋಟೆಲ್‌ ಅಥವಾ ಗಲ್ಲಿ ಬದಿಯ ಚಾ ಮಾರುವ ಅಂಗಡಿಯಲ್ಲಿ ಮೌನವಾಗಿ ಕುಳಿತು ಸುತ್ತಮುತ್ತಲ ಜನರ ಸಂಭಾಷಣೆ ಆಲಿಸಿದರೆ ಚುನಾವಣೆ ಫಲಿತಾಂಶವನ್ನು ಅಂದಾಜಿಸಬಹುದಾಗಿತ್ತು. ಆದರೆ ಪ್ರಸಕ್ತ ಉತ್ತರಪ್ರದೇಶ ಚುನಾವಣೆಯ ಪರಿಸ್ಥಿತಿಯನ್ನು ಊಹಿಸುವುದು ಅಷ್ಟು ಸರಳವಲ್ಲ.

ಸಾಮಾನ್ಯವಾಗಿ ಜನರ ಮನಸ್ಥಿತಿ, ಅಭ್ಯರ್ಥಿಗಳ ವ್ಯಕ್ತಿತ್ವ, ಆಯಾ ಕ್ಷೇತ್ರದ ಜನರ ನಿರೀಕ್ಷೆಗಳು ಮತ್ತು ಜಾತಿ ಅಂಶ ಈ ಎಲ್ಲ ಆಯಾಮಗಳಲ್ಲಿ ಮೌಲ್ಯಮಾಪನ ಮಾಡಿದಲ್ಲಿ ಚುನಾವಣಾ ಫಲಿತಾಂಶದ ಚಿತ್ರಣ ಗ್ರಹಿಸಬಹುದಾಗಿತ್ತು. ಮನೆಗಳು ಮತ್ತು ಅಂಗಡಿಗಳ ಮೇಲೆ ಹಾರಾಡುವ ಬಾವುಟಗಳ ಸಂಖ್ಯೆ ನೋಡಿಯೇ ಆ ಪ್ರದೇಶದಲ್ಲಿ ಜನಪ್ರಿಯರಾದವರು ಯಾರು, ಯಾವ ಪಕ್ಷ ಪ್ರಾಬಲ್ಯ ಹೊಂದಿದೆ ಎಂಬ ಸ್ಪಷ್ಟ ಚಿತ್ರಣ ಲಭ್ಯವಾಗುತ್ತಿತ್ತು. ಯಾರು ಹೆಚ್ಚು ಪ್ರಚುರದಲ್ಲಿ ಇಲ್ಲವೆಂಬ ಮಾಹಿತಿಯನ್ನು ಅಂದಾಜಿಸಬಹುದಾಗಿತ್ತು. ಆದರೆ ಇಂದು ಕೋವಿಡ್ ಸನ್ನಿವೇಶದ ಬದಲಾದ ಕಾಲಘಟ್ಟದಲ್ಲಿ ಜನರು ಸಹ ಬದಲಾಗಿದ್ದಾರೆ.

ಚಹಾ ಮಳಿಗೆ ಮತ್ತು ತಿನಿಸು ಅಂಗಡಿಗಳ ಮುಂದೆ ಜನಸಂದಣಿ ಇದೆಯಾದರೂ, ಹವಾಮಾನ ಮತ್ತಿತರ ಸಂಭಾಷಣೆ ನಡೆಯುತ್ತಿದೆ. ಜನರು ರಾಜಕೀಯ ವಿಚಾರಗಳನ್ನು ತಮ್ಮ ಚರ್ಚೆಗಳಿಂದ ಹೊರಗಿಟ್ಟಿದ್ದಾರೆ. “ಪ್ರಸ್ತುತ ಜನರು ಬುದ್ಧಿವಂತರಾಗಿದ್ದಾರೆ. ತಮ್ಮ ರಾಜಕೀಯ ಆದ್ಯತೆಗಳನ್ನು ವ್ಯಕ್ತಪಡಿಸಿದರೆ ತಾವು ಒಂದು ಪಕ್ಷ/ಪಂಗಡದ ಉದ್ದೇಶಗಳಿಗೆ ಗುರಿಯಾಗುತ್ತೇವೆ ಎಂಬ ಅರಿವಾಗಿದೆ. ಹೀಗಾಗಿ ಅವರು ಅಪರಿಚಿತರೊಂದಿಗೆ ಮಾತನಾಡಲು ಬಯಸುವುದಿಲ್ಲ. ಟಿವಿ ಚಾನೆಲ್‌ಗಳ ಸಿಬ್ಬಂದಿಯನ್ನು ನೋಡಿದಾಗ ಜನರು, ಆಡಳಿತ ಪಕ್ಷದ ಪರವಾಗಿ ಜಾಣ್ಮೆಯಿಂದ ಮಾತನಾಡುತ್ತಾರೆ. ಏಕೆಂದರೆ ಅದು ಪ್ರಸಾರವಾಗುತ್ತದೆಂಬುದು ಅವರಿಗೆ ತಿಳಿದಿದೆ” ಎಂದು ರಾಜಕೀಯ ಕಾರ್ಯಕರ್ತರೊಬ್ಬರು ಹೊಸ ಪರಿಸ್ಥಿತಿಯನ್ನು ವಿಶ್ಲೇಷಿಸಿದ್ದಾರೆ.

ಇದನ್ನೂ ಓದಿರಿ: ವಿಶ್ಲೇಷಣೆ: ಆದಿತ್ಯನಾಥ್‌ ವಿರುದ್ಧ ರಾವಣ್ ಸ್ಪರ್ಧೆಯ ಲೆಕ್ಕಾಚಾರಗಳೇನು?

ಸ್ಮಾರ್ಟ್ ಮತದಾರರು

ಲಕ್ನೋದ ಹೊರವಲಯದ ಬಕ್ಷಿ ಕಾ ತಲಾಬ್‌ನ ‘ಸ್ಮಾರ್ಟ್’ ಮತದಾರರಲ್ಲಿ ಒಬ್ಬರಾದ ವೃತ್ತಿಯಲ್ಲಿ ಚಾಲಕರಾಗಿರುವ ಠಾಕೂರ್ ಸಿಂಗ್, ತಮ್ಮ ಠಾಕೂರ್ ಗುರುತನ್ನು ಬಹಳ ದೃಢವಾಗಿ ಪ್ರತಿಪಾದಿಸುತ್ತಾರೆ. ಇನ್ನೊಬ್ಬ ಚಾಲಕ, ಅಗತ್ಯ ವಸ್ತುಗಳ ಬೆಲೆ ಏರಿಕೆ ಬಗ್ಗೆ ಮಾತನಾಡುತ್ತಾ ವಿಷಾದ ವ್ಯಕ್ತಪಡಿಸುತ್ತಲೇ, “ಗೆಲ್ಲುವುದು ಯೋಗಿ ಆದಿತ್ಯನಾಥ್‌ರೇ. ಆದರೆ ಸರ್ಕಾರ ಬದಲಾದರೆ ಪರಿಸ್ಥಿತಿ ಬದಲಾಗುತ್ತದೆ ಎಂದು ನಾನು ಭಾವಿಸುತ್ತೇನೆ” ಎಂದು ಅಭಿಪ್ರಾಯಪಟ್ಟರು. ಆದರೆ ಟಿವಿ ವಾಹಿನಿಗಳ ಸಿಬ್ಬಂದಿ ಬಂದ ತಕ್ಷಣ ವಿಷಯ ಬದಲಿಸಿ, ಬೀಡಾಡಿ ದನಗಳ ಅಪಾಯದಿಂದ ಎರಡು ಬೆಳೆಗಳನ್ನು ಕಳೆದುಕೊಂಡ ವಿವರ ತಿಳಿಸಿದರು. ಇದಕ್ಕಿದ್ದಂತೆ ಅಭಿಪ್ರಾಯ ಬದಲಾವಣೆ ಮಾಡಿರುವುದೇಕೆ ಎಂದು ಪ್ರಶ್ನಿಸಿದರೆ, ಅವರು ಮುಗುಳ್ನಕ್ಕು “ಇದೇ ಅಲ್ಲವೇ ರಾಜಕೀಯ” ಎಂದು ಉತ್ತರಿಸಿದರು.

ಬಾರಾಬಂಕಿಯಲ್ಲಿ, ಯೋಗಿ ಅವರ ಕಟ್ಟಾ ಅಭಿಮಾನಿಗಳೆನ್ನಿಸಿಕೊಂಡ ಹಲವರಿದ್ದು, ಅವರಾರೂ ವಾಸ್ತವದಲ್ಲಿ ಆನ್‌ಲೈನ್‌ನಲ್ಲಿ ನಡೆಯುತ್ತಿರುವ ಬಿಜೆಪಿ ಸಭೆಗಳನ್ನು ನೋಡಲು ಆಸಕ್ತಿ ತೋರಿಸುತ್ತಿಲ್ಲ. ಬದಲಾಗಿ ವೆಬ್‌ಸರಣಿಗಳನ್ನು ನೋಡುತ್ತಾರೆ. ಇತ್ತೀಚೆಗೆ ಸ್ಮಾರ್ಟ್‌ಫೋನ್ ಕೊಂಡಿರುವ ಅಂಗಡಿ ನಡೆಸುತ್ತಿರುವ ಅಕ್ಷಯ್ ರಾವತ್ ಎಂಬ ಯುವಕನಿಗಂತೂ ರಾಜಕೀಯ ರ್‍ಯಾಲಿಗಳ ಬಗ್ಗೆ ಗಮನವೇ ಇಲ್ಲ. ರಾಜಕೀಯ ಕುರಿತ ವಾಟ್ಸಪ್ ಗುಂಪಿನಲ್ಲಿ ಭಾಗಿಯಾಗುವುದಿಲ್ಲ ಹಾಗೂ ಚರ್ಚೆಯನ್ನೂ ನಡೆಸುವುದಿಲ್ಲ. ಮೊಬೈಲ್ ಫೋನ್‌ಗೆ ಹಾಕಿರುವ ದೈನಂದಿನ ಡೇಟಾ ರೀಚಾರ್ಜ್ನಲ್ಲಿ ವೆಬ್ ಸರಣಿ ನೋಡುತ್ತಿರುವುದಾಗಿ ಅವರು ಹೇಳುತ್ತಾರೆ.

ವಿವಿಧ ರಾಜಕಾರಣಿಗಳು ಎತ್ತಿರುವ ಸಮಸ್ಯೆಗಳು ಮತ್ತು ಅವುಗಳ ಪರಿಣಾಮದ ಹಿನ್ನೆಲೆಯಲ್ಲಿ ಆಯ್ಕೆ ಬಗ್ಗೆ ಕೇಳಿದರೆ, “ಯಾರಿಗೆ ಓಟು ಹಾಕುತ್ತೇವೋ ಎನ್ನುವುದು ನಮಗೆ ತಿಳಿದಿದೆ. ಭಾಷಣದಿಂದ ಏನಾಗಲಿದೆ?” ಎಂದು ಉತ್ತರಿಸುತ್ತಾರೆ.

ಕೆಲ ಕ್ಷೇತ್ರಗಳಲ್ಲಿ ಮತದಾರರ ಮೌನದಿಂದಾಗಿ ಅಭ್ಯರ್ಥಿಗಳಲ್ಲಿ ನಡುಕ ಕಂಡುಬಂದಿದೆ. ಅಯೋಧ್ಯೆಯ ಮತದಾರರು, ಮುಂದಿನ ಸರ್ಕಾರ ರಚನೆ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ. ರಾಮಮಂದಿರದ ಬಗ್ಗೆ ಮೆಚ್ಚುಗೆ ಅಥವಾ ವಿರೋಧವನ್ನೂ ಸೂಚಿಸುವುದಿಲ್ಲ. ಅಲ್ಲದೆ ನಗರದ ಸೌಂದರ್ಯೀಕರಣಕ್ಕಾಗಿ ನೂರಾರು ಮನೆ ಮತ್ತು ಅಂಗಡಿಗಳನ್ನು ನೆಲಸಮಗೊಳಿಸಿದ್ದರ ಬಗ್ಗೆಯೂ ಮಾತನಾಡುವುದಿಲ್ಲ.

ಅಂಗಡಿ ನೆಲಸಮಗೊಂಡವರ ಪಟ್ಟಿಯಲ್ಲಿರುವ ಜಗತ್ ನರೈನ್ ತಿವಾರಿ ಎಂಬುವವರು, ಚುನಾವಣೆ ಬಗ್ಗೆ ಮೌನವಹಿಸಿದ್ದಾರೆ. 25 ವರ್ಷಗಳಿಂದ ರಾಮ ಮಂದಿರಕ್ಕೆ ಪ್ರತಿ ದಿನ ಭೇಟಿ ನೀಡುವ ಅವರು, ಚುನಾವಣೆ ಬಗ್ಗೆ ಮಾತನಾಡಲು ನಿರಾಕರಿಸುತ್ತಾರೆ. ಏನಾಗುತ್ತೋ ನೋಡೋಣ” ಎಂದಷ್ಟೇ ಹೇಳಿದರು.

ಮತದಾರರ ಈ ಧೋರಣೆಯೇ ಅಭ್ಯರ್ಥಿಗಳ ಆತಂಕಕ್ಕೆ ಕಾರಣವಾಗಿದ್ದು, ಕಾನ್ಪುರದ ಬಿಜೆಪಿ ಅಭ್ಯರ್ಥಿಯೊಬ್ಬರು, “ಮತದಾರರ ಮನಸ್ಥಿತಿಯನ್ನು ಊಹಿಸುವುದು ನಮಗೆ ತುಂಬಾ ಕಷ್ಟವಾಗಿದೆ. ನಾನು ಮನೆ-ಮನೆ ಪ್ರಚಾರ ಮಾಡಲು ಹೋದಾಗ, ಮತದಾರರು ಸ್ವಾಗತಿಸಲೂ ಇಲ್ಲ ಅಥವಾ ಪ್ರತಿಕೂಲವಾಗಿಯೂ ಇರಲಿಲ್ಲ. ಹೀಗಾಗಿ ಅವರ ಮನಸ್ಥಿತಿಯನ್ನು ನಿರ್ಣಯಿಸಲು ಸಾಧ್ಯವಿಲ್ಲ. ಈ ಮೊದಲು, ಬಹಿರಂಗ ಪ್ರಚಾರ ಜನಸಂದಣಿಯ ಮನಸ್ಥಿತಿಯನ್ನು ಊಹಿಸಬಹುದಾಗಿತ್ತು. ಈಗ ಅದೂ ಸಾಧ್ಯವಿಲ್ಲ” ಎಂದರು.

ಕೃಪೆ: ಉಮೀದ್‌.ಕಾಮ್‌
ಅನುವಾದ: ಸೋಮಶೇಖರ್‌ ಚಲ್ಯ


ಇದನ್ನೂ ಓದಿರಿ: ವಿಶ್ಲೇಷಣೆ: 100 ವರ್ಷಗಳಷ್ಟು ಹಳೆಯದಾದ ‘ಚಿಂತಾಮಣಿ’ ನಾಟಕವನ್ನು ಆಂಧ್ರ ಸರ್ಕಾರ ನಿಷೇಧಿಸಿದ್ದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...