Homeಮುಖಪುಟಮೌನಕ್ಕೆ ಶರಣಾದ ಯುಪಿ ಮತದಾರರು, ಆತಂಕದಲ್ಲಿ ಅಭ್ಯರ್ಥಿಗಳು

ಮೌನಕ್ಕೆ ಶರಣಾದ ಯುಪಿ ಮತದಾರರು, ಆತಂಕದಲ್ಲಿ ಅಭ್ಯರ್ಥಿಗಳು

- Advertisement -
- Advertisement -

2019ರವರೆಗೆ ಹೋಟೆಲ್‌ ಅಥವಾ ಗಲ್ಲಿ ಬದಿಯ ಚಾ ಮಾರುವ ಅಂಗಡಿಯಲ್ಲಿ ಮೌನವಾಗಿ ಕುಳಿತು ಸುತ್ತಮುತ್ತಲ ಜನರ ಸಂಭಾಷಣೆ ಆಲಿಸಿದರೆ ಚುನಾವಣೆ ಫಲಿತಾಂಶವನ್ನು ಅಂದಾಜಿಸಬಹುದಾಗಿತ್ತು. ಆದರೆ ಪ್ರಸಕ್ತ ಉತ್ತರಪ್ರದೇಶ ಚುನಾವಣೆಯ ಪರಿಸ್ಥಿತಿಯನ್ನು ಊಹಿಸುವುದು ಅಷ್ಟು ಸರಳವಲ್ಲ.

ಸಾಮಾನ್ಯವಾಗಿ ಜನರ ಮನಸ್ಥಿತಿ, ಅಭ್ಯರ್ಥಿಗಳ ವ್ಯಕ್ತಿತ್ವ, ಆಯಾ ಕ್ಷೇತ್ರದ ಜನರ ನಿರೀಕ್ಷೆಗಳು ಮತ್ತು ಜಾತಿ ಅಂಶ ಈ ಎಲ್ಲ ಆಯಾಮಗಳಲ್ಲಿ ಮೌಲ್ಯಮಾಪನ ಮಾಡಿದಲ್ಲಿ ಚುನಾವಣಾ ಫಲಿತಾಂಶದ ಚಿತ್ರಣ ಗ್ರಹಿಸಬಹುದಾಗಿತ್ತು. ಮನೆಗಳು ಮತ್ತು ಅಂಗಡಿಗಳ ಮೇಲೆ ಹಾರಾಡುವ ಬಾವುಟಗಳ ಸಂಖ್ಯೆ ನೋಡಿಯೇ ಆ ಪ್ರದೇಶದಲ್ಲಿ ಜನಪ್ರಿಯರಾದವರು ಯಾರು, ಯಾವ ಪಕ್ಷ ಪ್ರಾಬಲ್ಯ ಹೊಂದಿದೆ ಎಂಬ ಸ್ಪಷ್ಟ ಚಿತ್ರಣ ಲಭ್ಯವಾಗುತ್ತಿತ್ತು. ಯಾರು ಹೆಚ್ಚು ಪ್ರಚುರದಲ್ಲಿ ಇಲ್ಲವೆಂಬ ಮಾಹಿತಿಯನ್ನು ಅಂದಾಜಿಸಬಹುದಾಗಿತ್ತು. ಆದರೆ ಇಂದು ಕೋವಿಡ್ ಸನ್ನಿವೇಶದ ಬದಲಾದ ಕಾಲಘಟ್ಟದಲ್ಲಿ ಜನರು ಸಹ ಬದಲಾಗಿದ್ದಾರೆ.

ಚಹಾ ಮಳಿಗೆ ಮತ್ತು ತಿನಿಸು ಅಂಗಡಿಗಳ ಮುಂದೆ ಜನಸಂದಣಿ ಇದೆಯಾದರೂ, ಹವಾಮಾನ ಮತ್ತಿತರ ಸಂಭಾಷಣೆ ನಡೆಯುತ್ತಿದೆ. ಜನರು ರಾಜಕೀಯ ವಿಚಾರಗಳನ್ನು ತಮ್ಮ ಚರ್ಚೆಗಳಿಂದ ಹೊರಗಿಟ್ಟಿದ್ದಾರೆ. “ಪ್ರಸ್ತುತ ಜನರು ಬುದ್ಧಿವಂತರಾಗಿದ್ದಾರೆ. ತಮ್ಮ ರಾಜಕೀಯ ಆದ್ಯತೆಗಳನ್ನು ವ್ಯಕ್ತಪಡಿಸಿದರೆ ತಾವು ಒಂದು ಪಕ್ಷ/ಪಂಗಡದ ಉದ್ದೇಶಗಳಿಗೆ ಗುರಿಯಾಗುತ್ತೇವೆ ಎಂಬ ಅರಿವಾಗಿದೆ. ಹೀಗಾಗಿ ಅವರು ಅಪರಿಚಿತರೊಂದಿಗೆ ಮಾತನಾಡಲು ಬಯಸುವುದಿಲ್ಲ. ಟಿವಿ ಚಾನೆಲ್‌ಗಳ ಸಿಬ್ಬಂದಿಯನ್ನು ನೋಡಿದಾಗ ಜನರು, ಆಡಳಿತ ಪಕ್ಷದ ಪರವಾಗಿ ಜಾಣ್ಮೆಯಿಂದ ಮಾತನಾಡುತ್ತಾರೆ. ಏಕೆಂದರೆ ಅದು ಪ್ರಸಾರವಾಗುತ್ತದೆಂಬುದು ಅವರಿಗೆ ತಿಳಿದಿದೆ” ಎಂದು ರಾಜಕೀಯ ಕಾರ್ಯಕರ್ತರೊಬ್ಬರು ಹೊಸ ಪರಿಸ್ಥಿತಿಯನ್ನು ವಿಶ್ಲೇಷಿಸಿದ್ದಾರೆ.

ಇದನ್ನೂ ಓದಿರಿ: ವಿಶ್ಲೇಷಣೆ: ಆದಿತ್ಯನಾಥ್‌ ವಿರುದ್ಧ ರಾವಣ್ ಸ್ಪರ್ಧೆಯ ಲೆಕ್ಕಾಚಾರಗಳೇನು?

ಸ್ಮಾರ್ಟ್ ಮತದಾರರು

ಲಕ್ನೋದ ಹೊರವಲಯದ ಬಕ್ಷಿ ಕಾ ತಲಾಬ್‌ನ ‘ಸ್ಮಾರ್ಟ್’ ಮತದಾರರಲ್ಲಿ ಒಬ್ಬರಾದ ವೃತ್ತಿಯಲ್ಲಿ ಚಾಲಕರಾಗಿರುವ ಠಾಕೂರ್ ಸಿಂಗ್, ತಮ್ಮ ಠಾಕೂರ್ ಗುರುತನ್ನು ಬಹಳ ದೃಢವಾಗಿ ಪ್ರತಿಪಾದಿಸುತ್ತಾರೆ. ಇನ್ನೊಬ್ಬ ಚಾಲಕ, ಅಗತ್ಯ ವಸ್ತುಗಳ ಬೆಲೆ ಏರಿಕೆ ಬಗ್ಗೆ ಮಾತನಾಡುತ್ತಾ ವಿಷಾದ ವ್ಯಕ್ತಪಡಿಸುತ್ತಲೇ, “ಗೆಲ್ಲುವುದು ಯೋಗಿ ಆದಿತ್ಯನಾಥ್‌ರೇ. ಆದರೆ ಸರ್ಕಾರ ಬದಲಾದರೆ ಪರಿಸ್ಥಿತಿ ಬದಲಾಗುತ್ತದೆ ಎಂದು ನಾನು ಭಾವಿಸುತ್ತೇನೆ” ಎಂದು ಅಭಿಪ್ರಾಯಪಟ್ಟರು. ಆದರೆ ಟಿವಿ ವಾಹಿನಿಗಳ ಸಿಬ್ಬಂದಿ ಬಂದ ತಕ್ಷಣ ವಿಷಯ ಬದಲಿಸಿ, ಬೀಡಾಡಿ ದನಗಳ ಅಪಾಯದಿಂದ ಎರಡು ಬೆಳೆಗಳನ್ನು ಕಳೆದುಕೊಂಡ ವಿವರ ತಿಳಿಸಿದರು. ಇದಕ್ಕಿದ್ದಂತೆ ಅಭಿಪ್ರಾಯ ಬದಲಾವಣೆ ಮಾಡಿರುವುದೇಕೆ ಎಂದು ಪ್ರಶ್ನಿಸಿದರೆ, ಅವರು ಮುಗುಳ್ನಕ್ಕು “ಇದೇ ಅಲ್ಲವೇ ರಾಜಕೀಯ” ಎಂದು ಉತ್ತರಿಸಿದರು.

ಬಾರಾಬಂಕಿಯಲ್ಲಿ, ಯೋಗಿ ಅವರ ಕಟ್ಟಾ ಅಭಿಮಾನಿಗಳೆನ್ನಿಸಿಕೊಂಡ ಹಲವರಿದ್ದು, ಅವರಾರೂ ವಾಸ್ತವದಲ್ಲಿ ಆನ್‌ಲೈನ್‌ನಲ್ಲಿ ನಡೆಯುತ್ತಿರುವ ಬಿಜೆಪಿ ಸಭೆಗಳನ್ನು ನೋಡಲು ಆಸಕ್ತಿ ತೋರಿಸುತ್ತಿಲ್ಲ. ಬದಲಾಗಿ ವೆಬ್‌ಸರಣಿಗಳನ್ನು ನೋಡುತ್ತಾರೆ. ಇತ್ತೀಚೆಗೆ ಸ್ಮಾರ್ಟ್‌ಫೋನ್ ಕೊಂಡಿರುವ ಅಂಗಡಿ ನಡೆಸುತ್ತಿರುವ ಅಕ್ಷಯ್ ರಾವತ್ ಎಂಬ ಯುವಕನಿಗಂತೂ ರಾಜಕೀಯ ರ್‍ಯಾಲಿಗಳ ಬಗ್ಗೆ ಗಮನವೇ ಇಲ್ಲ. ರಾಜಕೀಯ ಕುರಿತ ವಾಟ್ಸಪ್ ಗುಂಪಿನಲ್ಲಿ ಭಾಗಿಯಾಗುವುದಿಲ್ಲ ಹಾಗೂ ಚರ್ಚೆಯನ್ನೂ ನಡೆಸುವುದಿಲ್ಲ. ಮೊಬೈಲ್ ಫೋನ್‌ಗೆ ಹಾಕಿರುವ ದೈನಂದಿನ ಡೇಟಾ ರೀಚಾರ್ಜ್ನಲ್ಲಿ ವೆಬ್ ಸರಣಿ ನೋಡುತ್ತಿರುವುದಾಗಿ ಅವರು ಹೇಳುತ್ತಾರೆ.

ವಿವಿಧ ರಾಜಕಾರಣಿಗಳು ಎತ್ತಿರುವ ಸಮಸ್ಯೆಗಳು ಮತ್ತು ಅವುಗಳ ಪರಿಣಾಮದ ಹಿನ್ನೆಲೆಯಲ್ಲಿ ಆಯ್ಕೆ ಬಗ್ಗೆ ಕೇಳಿದರೆ, “ಯಾರಿಗೆ ಓಟು ಹಾಕುತ್ತೇವೋ ಎನ್ನುವುದು ನಮಗೆ ತಿಳಿದಿದೆ. ಭಾಷಣದಿಂದ ಏನಾಗಲಿದೆ?” ಎಂದು ಉತ್ತರಿಸುತ್ತಾರೆ.

ಕೆಲ ಕ್ಷೇತ್ರಗಳಲ್ಲಿ ಮತದಾರರ ಮೌನದಿಂದಾಗಿ ಅಭ್ಯರ್ಥಿಗಳಲ್ಲಿ ನಡುಕ ಕಂಡುಬಂದಿದೆ. ಅಯೋಧ್ಯೆಯ ಮತದಾರರು, ಮುಂದಿನ ಸರ್ಕಾರ ರಚನೆ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ. ರಾಮಮಂದಿರದ ಬಗ್ಗೆ ಮೆಚ್ಚುಗೆ ಅಥವಾ ವಿರೋಧವನ್ನೂ ಸೂಚಿಸುವುದಿಲ್ಲ. ಅಲ್ಲದೆ ನಗರದ ಸೌಂದರ್ಯೀಕರಣಕ್ಕಾಗಿ ನೂರಾರು ಮನೆ ಮತ್ತು ಅಂಗಡಿಗಳನ್ನು ನೆಲಸಮಗೊಳಿಸಿದ್ದರ ಬಗ್ಗೆಯೂ ಮಾತನಾಡುವುದಿಲ್ಲ.

ಅಂಗಡಿ ನೆಲಸಮಗೊಂಡವರ ಪಟ್ಟಿಯಲ್ಲಿರುವ ಜಗತ್ ನರೈನ್ ತಿವಾರಿ ಎಂಬುವವರು, ಚುನಾವಣೆ ಬಗ್ಗೆ ಮೌನವಹಿಸಿದ್ದಾರೆ. 25 ವರ್ಷಗಳಿಂದ ರಾಮ ಮಂದಿರಕ್ಕೆ ಪ್ರತಿ ದಿನ ಭೇಟಿ ನೀಡುವ ಅವರು, ಚುನಾವಣೆ ಬಗ್ಗೆ ಮಾತನಾಡಲು ನಿರಾಕರಿಸುತ್ತಾರೆ. ಏನಾಗುತ್ತೋ ನೋಡೋಣ” ಎಂದಷ್ಟೇ ಹೇಳಿದರು.

ಮತದಾರರ ಈ ಧೋರಣೆಯೇ ಅಭ್ಯರ್ಥಿಗಳ ಆತಂಕಕ್ಕೆ ಕಾರಣವಾಗಿದ್ದು, ಕಾನ್ಪುರದ ಬಿಜೆಪಿ ಅಭ್ಯರ್ಥಿಯೊಬ್ಬರು, “ಮತದಾರರ ಮನಸ್ಥಿತಿಯನ್ನು ಊಹಿಸುವುದು ನಮಗೆ ತುಂಬಾ ಕಷ್ಟವಾಗಿದೆ. ನಾನು ಮನೆ-ಮನೆ ಪ್ರಚಾರ ಮಾಡಲು ಹೋದಾಗ, ಮತದಾರರು ಸ್ವಾಗತಿಸಲೂ ಇಲ್ಲ ಅಥವಾ ಪ್ರತಿಕೂಲವಾಗಿಯೂ ಇರಲಿಲ್ಲ. ಹೀಗಾಗಿ ಅವರ ಮನಸ್ಥಿತಿಯನ್ನು ನಿರ್ಣಯಿಸಲು ಸಾಧ್ಯವಿಲ್ಲ. ಈ ಮೊದಲು, ಬಹಿರಂಗ ಪ್ರಚಾರ ಜನಸಂದಣಿಯ ಮನಸ್ಥಿತಿಯನ್ನು ಊಹಿಸಬಹುದಾಗಿತ್ತು. ಈಗ ಅದೂ ಸಾಧ್ಯವಿಲ್ಲ” ಎಂದರು.

ಕೃಪೆ: ಉಮೀದ್‌.ಕಾಮ್‌
ಅನುವಾದ: ಸೋಮಶೇಖರ್‌ ಚಲ್ಯ


ಇದನ್ನೂ ಓದಿರಿ: ವಿಶ್ಲೇಷಣೆ: 100 ವರ್ಷಗಳಷ್ಟು ಹಳೆಯದಾದ ‘ಚಿಂತಾಮಣಿ’ ನಾಟಕವನ್ನು ಆಂಧ್ರ ಸರ್ಕಾರ ನಿಷೇಧಿಸಿದ್ದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...