Homeಮುಖಪುಟಮೌನಕ್ಕೆ ಶರಣಾದ ಯುಪಿ ಮತದಾರರು, ಆತಂಕದಲ್ಲಿ ಅಭ್ಯರ್ಥಿಗಳು

ಮೌನಕ್ಕೆ ಶರಣಾದ ಯುಪಿ ಮತದಾರರು, ಆತಂಕದಲ್ಲಿ ಅಭ್ಯರ್ಥಿಗಳು

- Advertisement -
- Advertisement -

2019ರವರೆಗೆ ಹೋಟೆಲ್‌ ಅಥವಾ ಗಲ್ಲಿ ಬದಿಯ ಚಾ ಮಾರುವ ಅಂಗಡಿಯಲ್ಲಿ ಮೌನವಾಗಿ ಕುಳಿತು ಸುತ್ತಮುತ್ತಲ ಜನರ ಸಂಭಾಷಣೆ ಆಲಿಸಿದರೆ ಚುನಾವಣೆ ಫಲಿತಾಂಶವನ್ನು ಅಂದಾಜಿಸಬಹುದಾಗಿತ್ತು. ಆದರೆ ಪ್ರಸಕ್ತ ಉತ್ತರಪ್ರದೇಶ ಚುನಾವಣೆಯ ಪರಿಸ್ಥಿತಿಯನ್ನು ಊಹಿಸುವುದು ಅಷ್ಟು ಸರಳವಲ್ಲ.

ಸಾಮಾನ್ಯವಾಗಿ ಜನರ ಮನಸ್ಥಿತಿ, ಅಭ್ಯರ್ಥಿಗಳ ವ್ಯಕ್ತಿತ್ವ, ಆಯಾ ಕ್ಷೇತ್ರದ ಜನರ ನಿರೀಕ್ಷೆಗಳು ಮತ್ತು ಜಾತಿ ಅಂಶ ಈ ಎಲ್ಲ ಆಯಾಮಗಳಲ್ಲಿ ಮೌಲ್ಯಮಾಪನ ಮಾಡಿದಲ್ಲಿ ಚುನಾವಣಾ ಫಲಿತಾಂಶದ ಚಿತ್ರಣ ಗ್ರಹಿಸಬಹುದಾಗಿತ್ತು. ಮನೆಗಳು ಮತ್ತು ಅಂಗಡಿಗಳ ಮೇಲೆ ಹಾರಾಡುವ ಬಾವುಟಗಳ ಸಂಖ್ಯೆ ನೋಡಿಯೇ ಆ ಪ್ರದೇಶದಲ್ಲಿ ಜನಪ್ರಿಯರಾದವರು ಯಾರು, ಯಾವ ಪಕ್ಷ ಪ್ರಾಬಲ್ಯ ಹೊಂದಿದೆ ಎಂಬ ಸ್ಪಷ್ಟ ಚಿತ್ರಣ ಲಭ್ಯವಾಗುತ್ತಿತ್ತು. ಯಾರು ಹೆಚ್ಚು ಪ್ರಚುರದಲ್ಲಿ ಇಲ್ಲವೆಂಬ ಮಾಹಿತಿಯನ್ನು ಅಂದಾಜಿಸಬಹುದಾಗಿತ್ತು. ಆದರೆ ಇಂದು ಕೋವಿಡ್ ಸನ್ನಿವೇಶದ ಬದಲಾದ ಕಾಲಘಟ್ಟದಲ್ಲಿ ಜನರು ಸಹ ಬದಲಾಗಿದ್ದಾರೆ.

ಚಹಾ ಮಳಿಗೆ ಮತ್ತು ತಿನಿಸು ಅಂಗಡಿಗಳ ಮುಂದೆ ಜನಸಂದಣಿ ಇದೆಯಾದರೂ, ಹವಾಮಾನ ಮತ್ತಿತರ ಸಂಭಾಷಣೆ ನಡೆಯುತ್ತಿದೆ. ಜನರು ರಾಜಕೀಯ ವಿಚಾರಗಳನ್ನು ತಮ್ಮ ಚರ್ಚೆಗಳಿಂದ ಹೊರಗಿಟ್ಟಿದ್ದಾರೆ. “ಪ್ರಸ್ತುತ ಜನರು ಬುದ್ಧಿವಂತರಾಗಿದ್ದಾರೆ. ತಮ್ಮ ರಾಜಕೀಯ ಆದ್ಯತೆಗಳನ್ನು ವ್ಯಕ್ತಪಡಿಸಿದರೆ ತಾವು ಒಂದು ಪಕ್ಷ/ಪಂಗಡದ ಉದ್ದೇಶಗಳಿಗೆ ಗುರಿಯಾಗುತ್ತೇವೆ ಎಂಬ ಅರಿವಾಗಿದೆ. ಹೀಗಾಗಿ ಅವರು ಅಪರಿಚಿತರೊಂದಿಗೆ ಮಾತನಾಡಲು ಬಯಸುವುದಿಲ್ಲ. ಟಿವಿ ಚಾನೆಲ್‌ಗಳ ಸಿಬ್ಬಂದಿಯನ್ನು ನೋಡಿದಾಗ ಜನರು, ಆಡಳಿತ ಪಕ್ಷದ ಪರವಾಗಿ ಜಾಣ್ಮೆಯಿಂದ ಮಾತನಾಡುತ್ತಾರೆ. ಏಕೆಂದರೆ ಅದು ಪ್ರಸಾರವಾಗುತ್ತದೆಂಬುದು ಅವರಿಗೆ ತಿಳಿದಿದೆ” ಎಂದು ರಾಜಕೀಯ ಕಾರ್ಯಕರ್ತರೊಬ್ಬರು ಹೊಸ ಪರಿಸ್ಥಿತಿಯನ್ನು ವಿಶ್ಲೇಷಿಸಿದ್ದಾರೆ.

ಇದನ್ನೂ ಓದಿರಿ: ವಿಶ್ಲೇಷಣೆ: ಆದಿತ್ಯನಾಥ್‌ ವಿರುದ್ಧ ರಾವಣ್ ಸ್ಪರ್ಧೆಯ ಲೆಕ್ಕಾಚಾರಗಳೇನು?

ಸ್ಮಾರ್ಟ್ ಮತದಾರರು

ಲಕ್ನೋದ ಹೊರವಲಯದ ಬಕ್ಷಿ ಕಾ ತಲಾಬ್‌ನ ‘ಸ್ಮಾರ್ಟ್’ ಮತದಾರರಲ್ಲಿ ಒಬ್ಬರಾದ ವೃತ್ತಿಯಲ್ಲಿ ಚಾಲಕರಾಗಿರುವ ಠಾಕೂರ್ ಸಿಂಗ್, ತಮ್ಮ ಠಾಕೂರ್ ಗುರುತನ್ನು ಬಹಳ ದೃಢವಾಗಿ ಪ್ರತಿಪಾದಿಸುತ್ತಾರೆ. ಇನ್ನೊಬ್ಬ ಚಾಲಕ, ಅಗತ್ಯ ವಸ್ತುಗಳ ಬೆಲೆ ಏರಿಕೆ ಬಗ್ಗೆ ಮಾತನಾಡುತ್ತಾ ವಿಷಾದ ವ್ಯಕ್ತಪಡಿಸುತ್ತಲೇ, “ಗೆಲ್ಲುವುದು ಯೋಗಿ ಆದಿತ್ಯನಾಥ್‌ರೇ. ಆದರೆ ಸರ್ಕಾರ ಬದಲಾದರೆ ಪರಿಸ್ಥಿತಿ ಬದಲಾಗುತ್ತದೆ ಎಂದು ನಾನು ಭಾವಿಸುತ್ತೇನೆ” ಎಂದು ಅಭಿಪ್ರಾಯಪಟ್ಟರು. ಆದರೆ ಟಿವಿ ವಾಹಿನಿಗಳ ಸಿಬ್ಬಂದಿ ಬಂದ ತಕ್ಷಣ ವಿಷಯ ಬದಲಿಸಿ, ಬೀಡಾಡಿ ದನಗಳ ಅಪಾಯದಿಂದ ಎರಡು ಬೆಳೆಗಳನ್ನು ಕಳೆದುಕೊಂಡ ವಿವರ ತಿಳಿಸಿದರು. ಇದಕ್ಕಿದ್ದಂತೆ ಅಭಿಪ್ರಾಯ ಬದಲಾವಣೆ ಮಾಡಿರುವುದೇಕೆ ಎಂದು ಪ್ರಶ್ನಿಸಿದರೆ, ಅವರು ಮುಗುಳ್ನಕ್ಕು “ಇದೇ ಅಲ್ಲವೇ ರಾಜಕೀಯ” ಎಂದು ಉತ್ತರಿಸಿದರು.

ಬಾರಾಬಂಕಿಯಲ್ಲಿ, ಯೋಗಿ ಅವರ ಕಟ್ಟಾ ಅಭಿಮಾನಿಗಳೆನ್ನಿಸಿಕೊಂಡ ಹಲವರಿದ್ದು, ಅವರಾರೂ ವಾಸ್ತವದಲ್ಲಿ ಆನ್‌ಲೈನ್‌ನಲ್ಲಿ ನಡೆಯುತ್ತಿರುವ ಬಿಜೆಪಿ ಸಭೆಗಳನ್ನು ನೋಡಲು ಆಸಕ್ತಿ ತೋರಿಸುತ್ತಿಲ್ಲ. ಬದಲಾಗಿ ವೆಬ್‌ಸರಣಿಗಳನ್ನು ನೋಡುತ್ತಾರೆ. ಇತ್ತೀಚೆಗೆ ಸ್ಮಾರ್ಟ್‌ಫೋನ್ ಕೊಂಡಿರುವ ಅಂಗಡಿ ನಡೆಸುತ್ತಿರುವ ಅಕ್ಷಯ್ ರಾವತ್ ಎಂಬ ಯುವಕನಿಗಂತೂ ರಾಜಕೀಯ ರ್‍ಯಾಲಿಗಳ ಬಗ್ಗೆ ಗಮನವೇ ಇಲ್ಲ. ರಾಜಕೀಯ ಕುರಿತ ವಾಟ್ಸಪ್ ಗುಂಪಿನಲ್ಲಿ ಭಾಗಿಯಾಗುವುದಿಲ್ಲ ಹಾಗೂ ಚರ್ಚೆಯನ್ನೂ ನಡೆಸುವುದಿಲ್ಲ. ಮೊಬೈಲ್ ಫೋನ್‌ಗೆ ಹಾಕಿರುವ ದೈನಂದಿನ ಡೇಟಾ ರೀಚಾರ್ಜ್ನಲ್ಲಿ ವೆಬ್ ಸರಣಿ ನೋಡುತ್ತಿರುವುದಾಗಿ ಅವರು ಹೇಳುತ್ತಾರೆ.

ವಿವಿಧ ರಾಜಕಾರಣಿಗಳು ಎತ್ತಿರುವ ಸಮಸ್ಯೆಗಳು ಮತ್ತು ಅವುಗಳ ಪರಿಣಾಮದ ಹಿನ್ನೆಲೆಯಲ್ಲಿ ಆಯ್ಕೆ ಬಗ್ಗೆ ಕೇಳಿದರೆ, “ಯಾರಿಗೆ ಓಟು ಹಾಕುತ್ತೇವೋ ಎನ್ನುವುದು ನಮಗೆ ತಿಳಿದಿದೆ. ಭಾಷಣದಿಂದ ಏನಾಗಲಿದೆ?” ಎಂದು ಉತ್ತರಿಸುತ್ತಾರೆ.

ಕೆಲ ಕ್ಷೇತ್ರಗಳಲ್ಲಿ ಮತದಾರರ ಮೌನದಿಂದಾಗಿ ಅಭ್ಯರ್ಥಿಗಳಲ್ಲಿ ನಡುಕ ಕಂಡುಬಂದಿದೆ. ಅಯೋಧ್ಯೆಯ ಮತದಾರರು, ಮುಂದಿನ ಸರ್ಕಾರ ರಚನೆ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ. ರಾಮಮಂದಿರದ ಬಗ್ಗೆ ಮೆಚ್ಚುಗೆ ಅಥವಾ ವಿರೋಧವನ್ನೂ ಸೂಚಿಸುವುದಿಲ್ಲ. ಅಲ್ಲದೆ ನಗರದ ಸೌಂದರ್ಯೀಕರಣಕ್ಕಾಗಿ ನೂರಾರು ಮನೆ ಮತ್ತು ಅಂಗಡಿಗಳನ್ನು ನೆಲಸಮಗೊಳಿಸಿದ್ದರ ಬಗ್ಗೆಯೂ ಮಾತನಾಡುವುದಿಲ್ಲ.

ಅಂಗಡಿ ನೆಲಸಮಗೊಂಡವರ ಪಟ್ಟಿಯಲ್ಲಿರುವ ಜಗತ್ ನರೈನ್ ತಿವಾರಿ ಎಂಬುವವರು, ಚುನಾವಣೆ ಬಗ್ಗೆ ಮೌನವಹಿಸಿದ್ದಾರೆ. 25 ವರ್ಷಗಳಿಂದ ರಾಮ ಮಂದಿರಕ್ಕೆ ಪ್ರತಿ ದಿನ ಭೇಟಿ ನೀಡುವ ಅವರು, ಚುನಾವಣೆ ಬಗ್ಗೆ ಮಾತನಾಡಲು ನಿರಾಕರಿಸುತ್ತಾರೆ. ಏನಾಗುತ್ತೋ ನೋಡೋಣ” ಎಂದಷ್ಟೇ ಹೇಳಿದರು.

ಮತದಾರರ ಈ ಧೋರಣೆಯೇ ಅಭ್ಯರ್ಥಿಗಳ ಆತಂಕಕ್ಕೆ ಕಾರಣವಾಗಿದ್ದು, ಕಾನ್ಪುರದ ಬಿಜೆಪಿ ಅಭ್ಯರ್ಥಿಯೊಬ್ಬರು, “ಮತದಾರರ ಮನಸ್ಥಿತಿಯನ್ನು ಊಹಿಸುವುದು ನಮಗೆ ತುಂಬಾ ಕಷ್ಟವಾಗಿದೆ. ನಾನು ಮನೆ-ಮನೆ ಪ್ರಚಾರ ಮಾಡಲು ಹೋದಾಗ, ಮತದಾರರು ಸ್ವಾಗತಿಸಲೂ ಇಲ್ಲ ಅಥವಾ ಪ್ರತಿಕೂಲವಾಗಿಯೂ ಇರಲಿಲ್ಲ. ಹೀಗಾಗಿ ಅವರ ಮನಸ್ಥಿತಿಯನ್ನು ನಿರ್ಣಯಿಸಲು ಸಾಧ್ಯವಿಲ್ಲ. ಈ ಮೊದಲು, ಬಹಿರಂಗ ಪ್ರಚಾರ ಜನಸಂದಣಿಯ ಮನಸ್ಥಿತಿಯನ್ನು ಊಹಿಸಬಹುದಾಗಿತ್ತು. ಈಗ ಅದೂ ಸಾಧ್ಯವಿಲ್ಲ” ಎಂದರು.

ಕೃಪೆ: ಉಮೀದ್‌.ಕಾಮ್‌
ಅನುವಾದ: ಸೋಮಶೇಖರ್‌ ಚಲ್ಯ


ಇದನ್ನೂ ಓದಿರಿ: ವಿಶ್ಲೇಷಣೆ: 100 ವರ್ಷಗಳಷ್ಟು ಹಳೆಯದಾದ ‘ಚಿಂತಾಮಣಿ’ ನಾಟಕವನ್ನು ಆಂಧ್ರ ಸರ್ಕಾರ ನಿಷೇಧಿಸಿದ್ದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...