Homeಮುಖಪುಟಮೌನಕ್ಕೆ ಶರಣಾದ ಯುಪಿ ಮತದಾರರು, ಆತಂಕದಲ್ಲಿ ಅಭ್ಯರ್ಥಿಗಳು

ಮೌನಕ್ಕೆ ಶರಣಾದ ಯುಪಿ ಮತದಾರರು, ಆತಂಕದಲ್ಲಿ ಅಭ್ಯರ್ಥಿಗಳು

- Advertisement -
- Advertisement -

2019ರವರೆಗೆ ಹೋಟೆಲ್‌ ಅಥವಾ ಗಲ್ಲಿ ಬದಿಯ ಚಾ ಮಾರುವ ಅಂಗಡಿಯಲ್ಲಿ ಮೌನವಾಗಿ ಕುಳಿತು ಸುತ್ತಮುತ್ತಲ ಜನರ ಸಂಭಾಷಣೆ ಆಲಿಸಿದರೆ ಚುನಾವಣೆ ಫಲಿತಾಂಶವನ್ನು ಅಂದಾಜಿಸಬಹುದಾಗಿತ್ತು. ಆದರೆ ಪ್ರಸಕ್ತ ಉತ್ತರಪ್ರದೇಶ ಚುನಾವಣೆಯ ಪರಿಸ್ಥಿತಿಯನ್ನು ಊಹಿಸುವುದು ಅಷ್ಟು ಸರಳವಲ್ಲ.

ಸಾಮಾನ್ಯವಾಗಿ ಜನರ ಮನಸ್ಥಿತಿ, ಅಭ್ಯರ್ಥಿಗಳ ವ್ಯಕ್ತಿತ್ವ, ಆಯಾ ಕ್ಷೇತ್ರದ ಜನರ ನಿರೀಕ್ಷೆಗಳು ಮತ್ತು ಜಾತಿ ಅಂಶ ಈ ಎಲ್ಲ ಆಯಾಮಗಳಲ್ಲಿ ಮೌಲ್ಯಮಾಪನ ಮಾಡಿದಲ್ಲಿ ಚುನಾವಣಾ ಫಲಿತಾಂಶದ ಚಿತ್ರಣ ಗ್ರಹಿಸಬಹುದಾಗಿತ್ತು. ಮನೆಗಳು ಮತ್ತು ಅಂಗಡಿಗಳ ಮೇಲೆ ಹಾರಾಡುವ ಬಾವುಟಗಳ ಸಂಖ್ಯೆ ನೋಡಿಯೇ ಆ ಪ್ರದೇಶದಲ್ಲಿ ಜನಪ್ರಿಯರಾದವರು ಯಾರು, ಯಾವ ಪಕ್ಷ ಪ್ರಾಬಲ್ಯ ಹೊಂದಿದೆ ಎಂಬ ಸ್ಪಷ್ಟ ಚಿತ್ರಣ ಲಭ್ಯವಾಗುತ್ತಿತ್ತು. ಯಾರು ಹೆಚ್ಚು ಪ್ರಚುರದಲ್ಲಿ ಇಲ್ಲವೆಂಬ ಮಾಹಿತಿಯನ್ನು ಅಂದಾಜಿಸಬಹುದಾಗಿತ್ತು. ಆದರೆ ಇಂದು ಕೋವಿಡ್ ಸನ್ನಿವೇಶದ ಬದಲಾದ ಕಾಲಘಟ್ಟದಲ್ಲಿ ಜನರು ಸಹ ಬದಲಾಗಿದ್ದಾರೆ.

ಚಹಾ ಮಳಿಗೆ ಮತ್ತು ತಿನಿಸು ಅಂಗಡಿಗಳ ಮುಂದೆ ಜನಸಂದಣಿ ಇದೆಯಾದರೂ, ಹವಾಮಾನ ಮತ್ತಿತರ ಸಂಭಾಷಣೆ ನಡೆಯುತ್ತಿದೆ. ಜನರು ರಾಜಕೀಯ ವಿಚಾರಗಳನ್ನು ತಮ್ಮ ಚರ್ಚೆಗಳಿಂದ ಹೊರಗಿಟ್ಟಿದ್ದಾರೆ. “ಪ್ರಸ್ತುತ ಜನರು ಬುದ್ಧಿವಂತರಾಗಿದ್ದಾರೆ. ತಮ್ಮ ರಾಜಕೀಯ ಆದ್ಯತೆಗಳನ್ನು ವ್ಯಕ್ತಪಡಿಸಿದರೆ ತಾವು ಒಂದು ಪಕ್ಷ/ಪಂಗಡದ ಉದ್ದೇಶಗಳಿಗೆ ಗುರಿಯಾಗುತ್ತೇವೆ ಎಂಬ ಅರಿವಾಗಿದೆ. ಹೀಗಾಗಿ ಅವರು ಅಪರಿಚಿತರೊಂದಿಗೆ ಮಾತನಾಡಲು ಬಯಸುವುದಿಲ್ಲ. ಟಿವಿ ಚಾನೆಲ್‌ಗಳ ಸಿಬ್ಬಂದಿಯನ್ನು ನೋಡಿದಾಗ ಜನರು, ಆಡಳಿತ ಪಕ್ಷದ ಪರವಾಗಿ ಜಾಣ್ಮೆಯಿಂದ ಮಾತನಾಡುತ್ತಾರೆ. ಏಕೆಂದರೆ ಅದು ಪ್ರಸಾರವಾಗುತ್ತದೆಂಬುದು ಅವರಿಗೆ ತಿಳಿದಿದೆ” ಎಂದು ರಾಜಕೀಯ ಕಾರ್ಯಕರ್ತರೊಬ್ಬರು ಹೊಸ ಪರಿಸ್ಥಿತಿಯನ್ನು ವಿಶ್ಲೇಷಿಸಿದ್ದಾರೆ.

ಇದನ್ನೂ ಓದಿರಿ: ವಿಶ್ಲೇಷಣೆ: ಆದಿತ್ಯನಾಥ್‌ ವಿರುದ್ಧ ರಾವಣ್ ಸ್ಪರ್ಧೆಯ ಲೆಕ್ಕಾಚಾರಗಳೇನು?

ಸ್ಮಾರ್ಟ್ ಮತದಾರರು

ಲಕ್ನೋದ ಹೊರವಲಯದ ಬಕ್ಷಿ ಕಾ ತಲಾಬ್‌ನ ‘ಸ್ಮಾರ್ಟ್’ ಮತದಾರರಲ್ಲಿ ಒಬ್ಬರಾದ ವೃತ್ತಿಯಲ್ಲಿ ಚಾಲಕರಾಗಿರುವ ಠಾಕೂರ್ ಸಿಂಗ್, ತಮ್ಮ ಠಾಕೂರ್ ಗುರುತನ್ನು ಬಹಳ ದೃಢವಾಗಿ ಪ್ರತಿಪಾದಿಸುತ್ತಾರೆ. ಇನ್ನೊಬ್ಬ ಚಾಲಕ, ಅಗತ್ಯ ವಸ್ತುಗಳ ಬೆಲೆ ಏರಿಕೆ ಬಗ್ಗೆ ಮಾತನಾಡುತ್ತಾ ವಿಷಾದ ವ್ಯಕ್ತಪಡಿಸುತ್ತಲೇ, “ಗೆಲ್ಲುವುದು ಯೋಗಿ ಆದಿತ್ಯನಾಥ್‌ರೇ. ಆದರೆ ಸರ್ಕಾರ ಬದಲಾದರೆ ಪರಿಸ್ಥಿತಿ ಬದಲಾಗುತ್ತದೆ ಎಂದು ನಾನು ಭಾವಿಸುತ್ತೇನೆ” ಎಂದು ಅಭಿಪ್ರಾಯಪಟ್ಟರು. ಆದರೆ ಟಿವಿ ವಾಹಿನಿಗಳ ಸಿಬ್ಬಂದಿ ಬಂದ ತಕ್ಷಣ ವಿಷಯ ಬದಲಿಸಿ, ಬೀಡಾಡಿ ದನಗಳ ಅಪಾಯದಿಂದ ಎರಡು ಬೆಳೆಗಳನ್ನು ಕಳೆದುಕೊಂಡ ವಿವರ ತಿಳಿಸಿದರು. ಇದಕ್ಕಿದ್ದಂತೆ ಅಭಿಪ್ರಾಯ ಬದಲಾವಣೆ ಮಾಡಿರುವುದೇಕೆ ಎಂದು ಪ್ರಶ್ನಿಸಿದರೆ, ಅವರು ಮುಗುಳ್ನಕ್ಕು “ಇದೇ ಅಲ್ಲವೇ ರಾಜಕೀಯ” ಎಂದು ಉತ್ತರಿಸಿದರು.

ಬಾರಾಬಂಕಿಯಲ್ಲಿ, ಯೋಗಿ ಅವರ ಕಟ್ಟಾ ಅಭಿಮಾನಿಗಳೆನ್ನಿಸಿಕೊಂಡ ಹಲವರಿದ್ದು, ಅವರಾರೂ ವಾಸ್ತವದಲ್ಲಿ ಆನ್‌ಲೈನ್‌ನಲ್ಲಿ ನಡೆಯುತ್ತಿರುವ ಬಿಜೆಪಿ ಸಭೆಗಳನ್ನು ನೋಡಲು ಆಸಕ್ತಿ ತೋರಿಸುತ್ತಿಲ್ಲ. ಬದಲಾಗಿ ವೆಬ್‌ಸರಣಿಗಳನ್ನು ನೋಡುತ್ತಾರೆ. ಇತ್ತೀಚೆಗೆ ಸ್ಮಾರ್ಟ್‌ಫೋನ್ ಕೊಂಡಿರುವ ಅಂಗಡಿ ನಡೆಸುತ್ತಿರುವ ಅಕ್ಷಯ್ ರಾವತ್ ಎಂಬ ಯುವಕನಿಗಂತೂ ರಾಜಕೀಯ ರ್‍ಯಾಲಿಗಳ ಬಗ್ಗೆ ಗಮನವೇ ಇಲ್ಲ. ರಾಜಕೀಯ ಕುರಿತ ವಾಟ್ಸಪ್ ಗುಂಪಿನಲ್ಲಿ ಭಾಗಿಯಾಗುವುದಿಲ್ಲ ಹಾಗೂ ಚರ್ಚೆಯನ್ನೂ ನಡೆಸುವುದಿಲ್ಲ. ಮೊಬೈಲ್ ಫೋನ್‌ಗೆ ಹಾಕಿರುವ ದೈನಂದಿನ ಡೇಟಾ ರೀಚಾರ್ಜ್ನಲ್ಲಿ ವೆಬ್ ಸರಣಿ ನೋಡುತ್ತಿರುವುದಾಗಿ ಅವರು ಹೇಳುತ್ತಾರೆ.

ವಿವಿಧ ರಾಜಕಾರಣಿಗಳು ಎತ್ತಿರುವ ಸಮಸ್ಯೆಗಳು ಮತ್ತು ಅವುಗಳ ಪರಿಣಾಮದ ಹಿನ್ನೆಲೆಯಲ್ಲಿ ಆಯ್ಕೆ ಬಗ್ಗೆ ಕೇಳಿದರೆ, “ಯಾರಿಗೆ ಓಟು ಹಾಕುತ್ತೇವೋ ಎನ್ನುವುದು ನಮಗೆ ತಿಳಿದಿದೆ. ಭಾಷಣದಿಂದ ಏನಾಗಲಿದೆ?” ಎಂದು ಉತ್ತರಿಸುತ್ತಾರೆ.

ಕೆಲ ಕ್ಷೇತ್ರಗಳಲ್ಲಿ ಮತದಾರರ ಮೌನದಿಂದಾಗಿ ಅಭ್ಯರ್ಥಿಗಳಲ್ಲಿ ನಡುಕ ಕಂಡುಬಂದಿದೆ. ಅಯೋಧ್ಯೆಯ ಮತದಾರರು, ಮುಂದಿನ ಸರ್ಕಾರ ರಚನೆ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ. ರಾಮಮಂದಿರದ ಬಗ್ಗೆ ಮೆಚ್ಚುಗೆ ಅಥವಾ ವಿರೋಧವನ್ನೂ ಸೂಚಿಸುವುದಿಲ್ಲ. ಅಲ್ಲದೆ ನಗರದ ಸೌಂದರ್ಯೀಕರಣಕ್ಕಾಗಿ ನೂರಾರು ಮನೆ ಮತ್ತು ಅಂಗಡಿಗಳನ್ನು ನೆಲಸಮಗೊಳಿಸಿದ್ದರ ಬಗ್ಗೆಯೂ ಮಾತನಾಡುವುದಿಲ್ಲ.

ಅಂಗಡಿ ನೆಲಸಮಗೊಂಡವರ ಪಟ್ಟಿಯಲ್ಲಿರುವ ಜಗತ್ ನರೈನ್ ತಿವಾರಿ ಎಂಬುವವರು, ಚುನಾವಣೆ ಬಗ್ಗೆ ಮೌನವಹಿಸಿದ್ದಾರೆ. 25 ವರ್ಷಗಳಿಂದ ರಾಮ ಮಂದಿರಕ್ಕೆ ಪ್ರತಿ ದಿನ ಭೇಟಿ ನೀಡುವ ಅವರು, ಚುನಾವಣೆ ಬಗ್ಗೆ ಮಾತನಾಡಲು ನಿರಾಕರಿಸುತ್ತಾರೆ. ಏನಾಗುತ್ತೋ ನೋಡೋಣ” ಎಂದಷ್ಟೇ ಹೇಳಿದರು.

ಮತದಾರರ ಈ ಧೋರಣೆಯೇ ಅಭ್ಯರ್ಥಿಗಳ ಆತಂಕಕ್ಕೆ ಕಾರಣವಾಗಿದ್ದು, ಕಾನ್ಪುರದ ಬಿಜೆಪಿ ಅಭ್ಯರ್ಥಿಯೊಬ್ಬರು, “ಮತದಾರರ ಮನಸ್ಥಿತಿಯನ್ನು ಊಹಿಸುವುದು ನಮಗೆ ತುಂಬಾ ಕಷ್ಟವಾಗಿದೆ. ನಾನು ಮನೆ-ಮನೆ ಪ್ರಚಾರ ಮಾಡಲು ಹೋದಾಗ, ಮತದಾರರು ಸ್ವಾಗತಿಸಲೂ ಇಲ್ಲ ಅಥವಾ ಪ್ರತಿಕೂಲವಾಗಿಯೂ ಇರಲಿಲ್ಲ. ಹೀಗಾಗಿ ಅವರ ಮನಸ್ಥಿತಿಯನ್ನು ನಿರ್ಣಯಿಸಲು ಸಾಧ್ಯವಿಲ್ಲ. ಈ ಮೊದಲು, ಬಹಿರಂಗ ಪ್ರಚಾರ ಜನಸಂದಣಿಯ ಮನಸ್ಥಿತಿಯನ್ನು ಊಹಿಸಬಹುದಾಗಿತ್ತು. ಈಗ ಅದೂ ಸಾಧ್ಯವಿಲ್ಲ” ಎಂದರು.

ಕೃಪೆ: ಉಮೀದ್‌.ಕಾಮ್‌
ಅನುವಾದ: ಸೋಮಶೇಖರ್‌ ಚಲ್ಯ


ಇದನ್ನೂ ಓದಿರಿ: ವಿಶ್ಲೇಷಣೆ: 100 ವರ್ಷಗಳಷ್ಟು ಹಳೆಯದಾದ ‘ಚಿಂತಾಮಣಿ’ ನಾಟಕವನ್ನು ಆಂಧ್ರ ಸರ್ಕಾರ ನಿಷೇಧಿಸಿದ್ದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....