Homeಕರ್ನಾಟಕಯುಪಿ: ಹಿಂದುತ್ವದ ಐಕಾನ್‌ ಆಗಿದ್ದ ಯೋಗಿ ತಮ್ಮ ಚರಿಷ್ಮಾ ಕಳೆದುಕೊಂಡಿದ್ದಾರಾ?

ಯುಪಿ: ಹಿಂದುತ್ವದ ಐಕಾನ್‌ ಆಗಿದ್ದ ಯೋಗಿ ತಮ್ಮ ಚರಿಷ್ಮಾ ಕಳೆದುಕೊಂಡಿದ್ದಾರಾ?

- Advertisement -
- Advertisement -

ಕೇಸರಿ ಧರಿಸಿದ ಯೋಗಿ ಆದಿತ್ಯನಾಥ್ ಅವರು ವ್ಯಾಪಾರ ಶೃಂಗಸಭೆಗಳು, ಅಂತರಾಷ್ಟ್ರೀಯ ಹೂಡಿಕೆಗಳು ಮತ್ತು ಎಂಒಯುಗಳ ಮೂಲಕ ಉತ್ತರ ಪ್ರದೇಶವನ್ನು “ಉತ್ತಮ ಪ್ರದೇಶ” ಎಂದು ಬಿಂಬಿಸಲು ಯತ್ನಿಸುತ್ತಿದ್ದ ಸಮಯವಿತ್ತು. ಅವರು ಉತ್ತರ ಪ್ರದೇಶವನ್ನು ಅತ್ಯಂತ ಫಲವತ್ತಾದ ಮತ್ತು ಆದ್ಯತೆಯ ತಾಣವೆಂದು ಅವರು ಹೇಳುತ್ತಿದ್ದರು.

ಕಾನೂನು ಮತ್ತು ಸುವ್ಯವಸ್ಥೆಗೆ ವಿಚಾರಕ್ಕೆ ಬಂದಾಗ ಆದಿತ್ಯನಾಥ್ ಅವರು ಕೇಂದ್ರ ಪ್ರಾಯೋಜಿತ ಯೋಜನೆಗಳಿಗೆ ಮಣೆ ಹಾಕುತ್ತಿದ್ದದ್ದು ಬಿಟ್ಟರೆ ಮತ್ತಾವುದೇ ಮಾರ್ಗವನ್ನು ಅನುಸರಿಸಿದ್ದು ಕಂಡುಬಂದಿಲ್ಲ. ಸದಾ “ಡಬಲ್ ಇಂಜಿನ್” ಸರ್ಕಾರದ ಬಗ್ಗೆ ಹೇಳಿಕೊಳ್ಳುತ್ತಾ ಅಧಿಕಾರಶಾಹಿಯನ್ನು ವಶದಲ್ಲಿಟ್ಟುಕೊಂಡು ರಾಜ್ಯಾಧಿಕಾರದ ಪಡಸಾಲೆಗೆ ಕಾಲಿಟ್ಟ ಗೋರಖನಾಥ ಮಠದ ಮುಖ್ಯಸ್ಥರು ನೀರಲ್ಲಿ ಬಾತುಕೋಳಿಯಂತೆ ಸಾಗಲು ಆರಂಭಿಸಿದರಷ್ಟೇ.

ಇಡೀ ರಾಜ್ಯದ ಪ್ರಚಾರ ಯಂತ್ರವನ್ನು ಒಂದು ಉದ್ದೇಶಕ್ಕೆ ಬಳಸಲಾಗುತ್ತಿದೆ: ಪ್ರಾಜೆಕ್ಟ್ ಬ್ರ್ಯಾಂಡ್ ಯೋಗಿ. ಪೋಸ್ಟರ್‌ಗಳು, ಜಾಹೀರಾತು ಫಲಕಗಳು ಮತ್ತು ಹೋರ್ಡಿಂಗ್‌ಗಳು ಕೇವಲ ಒಬ್ಬ ವ್ಯಕ್ತಿಯ ಚಿತ್ರದೊಂದಿಗೆ ಮಿನುಗುತ್ತಿವೆ. ಅವರ ಪ್ರಚಾರವು ಎಷ್ಟು ಅಸೂಯೆ ಹುಟ್ಟಿಸಿತ್ತು ಎಂದರೆ, ಇತರ ಬಿಜೆಪಿ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು ಅವರ ಶೈಲಿ, ನಡವಳಿಕೆ ಮತ್ತು ಪ್ರಚಾರದ ಸಾಹಸಗಳನ್ನು ಅನುಕರಿಸಲು ಬಯಸಿದ್ದರು.

ಆದಿತ್ಯನಾಥ್ ಅವರು ಸಂಘದ ಸಂತೋಷಕ್ಕಾಗಿ ಹೆಚ್ಚು ಸ್ಟಾರ್ ಇಮೇಜ್ ಬೆಳೆಸಿಕೊಂಡರು. ಯುಪಿಯ ಹೊರಗಿದ್ದರೂ ಅವರು ಬ್ರ್ಯಾಂಡ್ ಆದರು; ಜನಪ್ರಿಯತೆಯನ್ನು ಗಿಟ್ಟಿಸಿಕೊಳ್ಳುವ ನಿಟ್ಟಿನಲ್ಲಿ ಅವರು ಪ್ರಧಾನಿ ನರೇಂದ್ರ ಮೋದಿಯವರ ಪಕ್ಕದಲ್ಲಿ ಎರಡನೇ ಸ್ಥಾನದಲ್ಲಿ ಕಾಣಿಸಿಕೊಂಡರು. ಬಿಜೆಪಿ ನಾಯಕರು ಆದಿತ್ಯನಾಥ್ ಅವರನ್ನು 2024ರಲ್ಲಿ ಮೋದಿಯನ್ನು ಬದಲಿಸುವ ನಿರೀಕ್ಷಿತ ಪ್ರಧಾನಿ ಎಂದು ಶ್ಲಾಘಿಸಲು ಪ್ರಾರಂಭಿಸಿದರು.

ಆದಿತ್ಯನಾಥ್ ಅವರ ಆಡಂಬರವು ಅಲ್ಪಕಾಲಿಕವಾಗಿತ್ತು: ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮತ್ತು ಪೌರತ್ವ (ತಿದ್ದುಪಡಿ) ಕಾಯಿದೆ-2019 (ಸಿಎಎ) ವಿರುದ್ಧ ನಡೆದ ಪ್ರತಿಭಟನೆಗಳು ಅವರ ಸರ್ಕಾರದ ಅಮಾನವೀಯತೆಯನ್ನು ಬಹಿರಂಗಪಡಿಸಿದವು. ಯುಪಿ ಸರ್ಕಾರವು ಮುಸ್ಲಿಮರ ಮೇಲೆ ವಿವೇಚನಾರಹಿತ ಶಕ್ತಿಯನ್ನು ಪ್ರಯೋಗಿಸಿತು. ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿಂದುತ್ವದ ಕಾರ್ಯಸೂಚಿಯನ್ನು ಪೂರೈಸಲು ತಮ್ಮ ದ್ವೇಷದ ಯಂತ್ರವನ್ನು ಸಕ್ರಿಯಗೊಳಿಸಿದರು.

NRC ಮತ್ತು NRCಯ ಫ್ಯಾಂಟಮ್ ಅನ್ನು COVID-19 ಮತ್ತು ಲಾಕ್‌ಡೌನ್‌ಗಳಿಂದ ಮರೆಮಾಡಲಾಗಿದೆ. ಕೊರೊನಾ ಎರಡನೇ ಅಲೆಯ ಸಮಯದಲ್ಲಿ, ಹಾಸಿಗೆಗಳು ಮತ್ತು ಆಮ್ಲಜನಕದ ಕೊರತೆಯಿಂದ ರಾಜ್ಯದಲ್ಲಿ ಜನರು ಸಾಯುತ್ತಿರುವಾಗ, ಹಲವಾರು ಬಿಜೆಪಿ ಶಾಸಕರು ಆದಿತ್ಯನಾಥ್ ಅವರನ್ನು ಟೀಕಿಸಿದರು. ಅವರು ದಂತಗೋಪುರದಲ್ಲಿ ಕುಳಿತು ಸಾಮಾನ್ಯರ ನೋವನ್ನು ಆಲಿಸುತ್ತಿಲ್ಲ, ಸ್ಪಂದಿಸುತ್ತಿಲ್ಲ ಎಂದು ಬಿಜೆಪಿಗರೇ ಆಕ್ರೋಶ ವ್ಯಕ್ತಪಡಿಸಿದರು.

ಕೋವಿಡ್-19 ಸಂತ್ರಸ್ತರ ಶವಗಳನ್ನು ಗಂಗಾನದಿಯಲ್ಲಿ ತೇಲಿಬಿಡಲಾಯಿತು, ಮೃತ ದೇಹಗಳ ಗೌರವಯುವ ಶವಸಂಸ್ಕಾರವನ್ನು ನಿರಾಕರಿಸಲಾಯಿತು. ಪಂಚಾಯತ್ ಚುನಾವಣಾ ಕರ್ತವ್ಯದ ವೇಳೆ ಸೋಂಕಿಗೆ ಒಳಗಾಗಿ ಸಾವನ್ನಪ್ಪಿದ ಸರ್ಕಾರಿ ಶಾಲಾ ಶಿಕ್ಷಕರ ಕುಟುಂಬಗಳಿಗೆ ಸರಿಯಾದ ರೀತಿಯಲ್ಲಿ ಪರಿಹಾರವೂ ದೊರೆಯಲಿಲ್ಲ ಎಂಬುದು ಮತ್ತಷ್ಟು ಆಕ್ರೋಶಕ್ಕೆ ಕಾರಣವಾಗಿಯಿತು. ಇದು ಅವರ ಇಮೇಜ್‌ ಮತ್ತಷ್ಟು ಕುಗ್ಗಲು ಕಾರಣವಾಯಿತು.

ನಂತರ ಯುಪಿ ಗ್ಯಾಂಗ್‌ಸ್ಟರ್ ವಿಕಾಸ್ ದುಬೆಯ ಎನ್‌ಕೌಂಟರ್, ಹತ್ರಾಸ್ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಹಾಗೂ ಪತ್ರಕರ್ತರ ವಿರುದ್ಧದ ಯುಎಪಿಎ ಅಡಿಯಲ್ಲಿ ದಾಖಲಾದ ಪ್ರಕರಣಗಳು ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯಲ್ಲಿನ ಸಮಸ್ಯೆಯನ್ನು ಬಿಚ್ಚಿಟ್ಟವು.

ಹೆಚ್ಚುತ್ತಿರುವ ನಿರುದ್ಯೋಗ, ಅಪೌಷ್ಟಿಕತೆ, ಶಾಲೆ ತೊರೆಯುವಿಕೆ ಮತ್ತು ಅಪರಾಧ, ಗೋಧಿ ಮತ್ತು ಭತ್ತ ಸಂಗ್ರಹಣೆಯಲ್ಲಿ ಗುರಿಗಳನ್ನು ತಲುಪದ ಅಂಕಿಅಂಶಗಳು, ದೇವಸ್ಥಾನಗಳಿಗೆ ಸಾರ್ವಜನಿಕ ಹಣವನ್ನು ಖರ್ಚು ಮಾಡುವ ಆದ್ಯತೆ, ರಾಜಕೀಯ ಉದ್ದೇಶಗಳಿಗಾಗಿ ಮುಸ್ಲಿಮರನ್ನು ಗುರಿಯಾಗಿಸುವುದು, ಭ್ರಷ್ಟಾಚಾರ, ಅತಿರೇಕದ ಜಾತೀಯತೆ, ಅಕ್ರಮ ಗಣಿಗಾರಿಕೆ ಮತ್ತು ಈಡೇರದ ಭರವಸೆಗಳ ಪಟ್ಟಿಗಳು ರಾಜ್ಯದಲ್ಲಿ ಯೋಗಿ ಮತ್ತು ಬಿಜೆಪಿ ವಿರೋಧಿ ಅಲೆಯನ್ನು ಹೆಚ್ಚಿಸಿದೆ.

ದಲಿತರು ಮತ್ತು ಇತರ ಹಿಂದುಳಿದ ವರ್ಗ (ಒಬಿಸಿ)ಗಳ ನಿರ್ಲಕ್ಷ್ಯದಿಂದಾಗಿ ಸ್ವಾಮಿ ಪ್ರಸಾದ್ ಮೌರ್ಯ, ದಾರಾ ಸಿಂಗ್ ಚೌಹಾಣ್ ಮತ್ತು ಧರಮ್ ಸಿಂಗ್ ಸೈನಿ ಅವರಂತಹ ಮಂತ್ರಿಗಳು ಮತ್ತು ನಾಯಕರು ಬಿಜೆಪಿಯನ್ನು ತೊರೆದು ಉತ್ತರ ಪ್ರದೇಶದಲ್ಲಿ ಬಿಜೆಪಿಯ ಪ್ರತಿಸ್ಪರ್ಧಿ ಸಮಾಜವಾದಿ ಪಕ್ಷಕ್ಕೆ (SP) ಸೇರಿದರು.

ಇದೆಲ್ಲದರ ಮಧ್ಯೆ, ಮುಂಬರುವ ವಿಧಾನಸಭಾ ಚುನಾವಣೆಯು “80% ವರ್ಸಸ್ 20% (ಮುಸ್ಲಿಮರ)” ನಡುವಿನ ಹೋರಾಟವಾಗಿದೆ ಎಂದು ಆದಿತ್ಯನಾಥ್ ಹೇಳಿಕೆ ನೀಡುವ ಮೂಲಕ ಕೋಮು ಭಾವನೆಗಳನ್ನು ಪ್ರಚೋದಿಸುತ್ತಿದ್ದಾರೆ

ಯುಪಿಯಲ್ಲಿ, ವಿಶೇಷವಾಗಿ ಎಸ್‌ಪಿ ಮತ್ತೆ ತನ್ನ ವರ್ಚಸ್ಸನ್ನು ವೃದ್ದಿಸಿಕೊಂಡು ಮುನ್ನೆಲೆಗೆ ಬರುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿಯು ಯಾವುದೇ ಚಾನ್ಸ್‌ ತೆಗೆದುಕೊಳ್ಳಲು ಬಯಸುವುದಿಲ್ಲ ಎಂಬುದು ಸ್ಪಷ್ಟವಾಗಿದೆ. ಪಕ್ಷವು ಯೋಗಿ ಅವರನ್ನು ಅವರ ತವರು ಗೋರಖ್‌ಪುರದಿಂದ ಕಣಕ್ಕಿಳಿಸಲು ನಿರ್ಧರಿಸಿದ್ದು, ಅವರು ಮಥುರಾ ಅಥವಾ ಅಯೋಧ್ಯೆಯಿಂದ ಸ್ಪರ್ಧಿಸುತ್ತಾರೆ ಎಂಬಊಹಾಪೋಹಕ್ಕೆ ತೆರೆ ಎಳೆದಿದೆ. ಆದಿತ್ಯನಾಥ್ ಅವರು ಯುಪಿಯಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವ ವಿಶ್ವಾಸವನ್ನು ಹೊಂದಿದ್ದರೂ, ಒಬ್ಬ ಮುಖ್ಯಮಂತ್ರಿಯ ಹುದ್ದೆಯನ್ನು ಉಳಿಸಿಕೊಳ್ಳುವ ಅವರ ಸಾಮರ್ಥ್ಯವು ಪ್ರಶ್ನಾರ್ಥವಾಗಿದೆ.


ಇದನ್ನೂ ಓದಿರಿ: ವಿಶ್ಲೇಷಣೆ: ಯುಪಿಯಲ್ಲಿ ಒಬಿಸಿ ನಾಯಕರು ಬಿಜೆಪಿ ತೊರೆಯುತ್ತಿರುವುದು ಏತಕ್ಕೆ? ಎಸ್‌ಪಿಗೆ ಗೆಲುವು ಸುಲಭವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಶಪಡಿಸಿಕೊಂಡ 200 ಕೆ.ಜಿ ಗಾಂಜಾ ಇಲಿಗಳು ತಿಂದಿವೆ ಎಂದ ಪೊಲೀಸರು : ಆರೋಪಿಯನ್ನು ಖುಲಾಸೆಗೊಳಿಸಿದ ಕೋರ್ಟ್

ಮೂರು ವರ್ಷಗಳ ಹಿಂದೆ ಜಾರ್ಖಂಡ್ ಪೊಲೀಸರು ವಾಹನವೊಂದನ್ನು ತಡೆದು, ಅದರಿಂದ ಭಾರೀ ಪ್ರಮಾಣದ ಮಾದಕ ವಸ್ತು ಗಾಂಜಾ ವಶಪಡಿಸಿಕೊಂಡಿದ್ದರು. 2024ರಲ್ಲಿ ಈ ಪ್ರಕರಣದ ವಿಚಾರಣೆ ನಡೆಯುವಾಗ, ವಶಪಡಿಸಿಕೊಂಡ ಗಾಂಜಾವನ್ನು ಹಾಜರುಪಡಿಸುವಂತೆ ನ್ಯಾಯಾಲಯ ಸೂಚಿಸಿತ್ತು....

ಗಿಗ್ ಕಾರ್ಮಿಕರಿಂದ ಮತ್ತೆ ಮುಷ್ಕರ : ಹೊಸ ವರ್ಷದ ಸಂಜೆ ಆಹಾರ, ದಿನಸಿ ವಿತರಣೆಯಲ್ಲಿ ವ್ಯತ್ಯಯ ಸಾಧ್ಯತೆ

ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಡಿಸೆಂಬರ್ 25ರ ಕ್ರಿಸ್‌ಮಸ್ ದಿನದಂದು ದೇಶದ ವಿವಿಧ ನಗರಗಳಲ್ಲಿ ಮುಷ್ಕರ ನಡೆಸಿರುವ ಗಿಗ್‌ ಕಾರ್ಮಿಕರು, ಹೊಸ ವರ್ಷದ ಸಂಜೆಯಾದ ಇಂದು (ಡಿ.31) ಮತ್ತೊಮ್ಮೆ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ. ನ್ಯಾಯಯುತ ಮತ್ತು...

ಉತ್ತರಾಖಂಡ: ಜಲವಿದ್ಯುತ್ ಯೋಜನೆಯ ಸುರಂಗದೊಳಗೆ ಎರಡು ಲೋಕೋ ರೈಲುಗಳು ಡಿಕ್ಕಿ, 60 ಜನರಿಗೆ ಗಾಯ

ಗೋಪೇಶ್ವರ: ಉತ್ತರಾಖಂಡದ ಚಮೋಲಿ ಜಿಲ್ಲೆಯ ವಿಷ್ಣುಗಢ-ಪಿಪಲ್ಕೋಟಿ ಜಲ ವಿದ್ಯುತ್ ಯೋಜನೆಯ ಸುರಂಗದ ಪಿಪಲ್ಕೋಟಿ ಸುರಂಗದೊಳಗೆ ಮಂಗಳವಾರ ಸಂಜೆ ಕಾರ್ಮಿಕರು ಮತ್ತು ಅಧಿಕಾರಿಗಳನ್ನು ಕರೆದೊಯ್ಯುತ್ತಿದ್ದ ಲೋಕೋ ರೈಲು, ಸರಕು ರೈಲಿಗೆ ಡಿಕ್ಕಿ ಹೊಡೆದು ಸುಮಾರು...

ವಿಬಿ-ಜಿ ರಾಮ್‌ ಜಿ ಕಾಯ್ದೆ ವಿರುದ್ಧ ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಪತ್ರ : ರಾಜ್ಯಗಳೊಂದಿಗೆ ಸಮಾಲೋಚನೆ ನಡೆಸಲು ಆಗ್ರಹ

ನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್‌ ಜಿ ಕಾಯ್ದೆಯ ಕುರಿತು ಕಳವಳ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಅದರ ಅನುಷ್ಠಾನ ತಡೆ ಹಿಡಿಯುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಮಂಗಳವಾರ (ಡಿ.30)...

ಚಕ್ರವರ್ತಿ ಸೂಲಿಬೆಲೆಗೆ ಆಹ್ವಾನ ವಿರೋಧಿಸಿ ಪ್ರತಿಭಟನೆ; ಧಾರವಾಡ ಕೃಷಿ ವಿವಿ ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮ ರದ್ದು

ಧಾರವಾಡದ ಕೃಷಿ ವಿಶ್ವ ವಿದ್ಯಾನಿಲಯದಲ್ಲಿ ಆಯೋಜಿಸಲಾಗಿದ್ದ ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮಕ್ಕೆ ಹಿಂದುತ್ವ ಭಾಷಣಕಾರ ಚಕ್ರವರ್ತಿ ಸೂಲಿಬೆಲೆಗೆ ಆಹ್ವಾನ ನೀಡಿರುವುದನ್ನು ವಿರೋಧಿಸಿ ದಲಿತ ಸಂಘಟನೆ ಹಾಗೂ ಕೃಷಿ ವಿವಿ ಬೋರ್ಡ್ ಸದಸ್ಯರು ವಿವಿ...

ಯುಪಿ: ತಂದೆ ಮತ್ತು ಮಾನಸಿಕ ಅಸ್ವಸ್ಥ ಮಗಳನ್ನು ಐದು ವರ್ಷ ಕೋಣೆಯಲ್ಲಿ ಕೂಡಿ ಹಾಕಿದ ಸೇವಕ ದಂಪತಿ: ತಂದೆ ಸಾವು, ಅಸ್ಥಿಪಂಜರದಂತೆ ಪತ್ತೆಯಾದ ಮಗಳು

ಉತ್ತರ ಪ್ರದೇಶದ ಮಹೋಬಾ ಜಿಲ್ಲೆಯಲ್ಲಿ ನಿವೃತ್ತ ರೈಲ್ವೆ ಉದ್ಯೋಗಿ ಮತ್ತು ಅವರ ಮಾನಸಿಕ ಅಸ್ವಸ್ಥ ಮಗಳನ್ನು ಅವರ ಆರೈಕೆದಾರರು ಐದು ವರ್ಷಗಳ ಕಾಲ ಬಂಧಿಯಾಗಿಟ್ಟು ಚಿತ್ರಹಿಂಸೆ ನೀಡಿ, ಆ ವ್ಯಕ್ತಿಯ ಸಾವಿಗೆ ಕಾರಣವಾದ...

ಈಶಾನ್ಯ ಭಾರತ ನಾಗರಿಕರ ವಿರುದ್ಧದ ಜನಾಂಗೀಯ ಹಿಂಸಾಚಾರ: ಸುಪ್ರೀಂ ಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ

ಈಶಾನ್ಯ ರಾಜ್ಯಗಳು ಮತ್ತು ಇತರ ಗಡಿ ಪ್ರದೇಶಗಳ ನಾಗರಿಕರ ಮೇಲಿನ ಜನಾಂಗೀಯ ತಾರತಮ್ಯ ಮತ್ತು ಹಿಂಸಾಚಾರವನ್ನು ತಡೆಗಟ್ಟುವಲ್ಲಿ, ಪ್ರತಿಕ್ರಿಯಿಸುವಲ್ಲಿ ನಿರಂತರ ಸಾಂವಿಧಾನಿಕ ವೈಫಲ್ಯವನ್ನು ಪರಿಹರಿಸಲು ನ್ಯಾಯಾಂಗ ಹಸ್ತಕ್ಷೇಪವನ್ನು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ...

ಎಸ್‌ಐಆರ್‌ ದೊಡ್ಡ ಹಗರಣ : ನೈಜ ಮತದಾರರನ್ನು ಕೈಬಿಟ್ಟರೆ ಚು.ಆಯೋಗದ ಕಚೇರಿಗೆ ಘೇರಾವ್ : ಮಮತಾ ಬ್ಯಾನರ್ಜಿ ಎಚ್ಚರಿಕೆ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ಪೂರ್ಣಗೊಂಡ ನಂತರ ಅಂತಿಮ ಮತದಾರರ ಪಟ್ಟಿಯಿಂದ ಒಬ್ಬನೇ ಒಬ್ಬ ಕಾನೂನುಬದ್ಧ ಮತದಾರರ ಹೆಸರನ್ನು ಅಳಿಸಿದರೆ, ದೆಹಲಿಯಲ್ಲಿರುವ ಚುನಾವಣಾ ಆಯೋಗದ ಕಚೇರಿಗೆ ಘೇರಾವ್ ಹಾಕುವುದಾಗಿ...

ಬೀದಿ ನಾಯಿ ಎಣಿಕೆ ಕಾರ್ಯಕ್ಕೆ ಶಾಲಾ ಶಿಕ್ಷಕರನ್ನು ನಿಯೋಜಿಸಿಲ್ಲ: ದೆಹಲಿ ಸರ್ಕಾರದ ಸ್ಪಷ್ಟನೆ

ನಗರದಲ್ಲಿ ಬೀದಿ ನಾಯಿಗಳ ಎಣಿಕೆಗೆ ಯಾವುದೇ ಶಾಲಾ ಶಿಕ್ಷಕರನ್ನು ನಿಯೋಜಿಸಲಾಗಿಲ್ಲ ಎಂದು ದೆಹಲಿ ಸರ್ಕಾರ ಸ್ಪಷ್ಟಪಡಿಸಿದೆ. ಶಿಕ್ಷಕರಿಗೆ ಜನಗಣತಿ ಸಂಬಂಧಿತ ಕರ್ತವ್ಯಗಳಿಗೆ ಮಾತ್ರ ನಿಯೋಜಿಸಲಾಗಿದೆ. ಬೀದಿ ನಾಯಿ ಸಂಬಂಧಿತ ವಿಷಯಗಳಿಗೆ ಸಂಬಂಧಿಸಿದಂತೆ ಶಿಕ್ಷಣ ಸಂಸ್ಥೆಗಳಿಗೆ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಚ್‌.ಡಿ ರೇವಣ್ಣ ಖುಲಾಸೆ

ಮನೆ ಕೆಲಸದ ಮಹಿಳೆಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೆಡಿಎಸ್‌ ಶಾಸಕ ಎಚ್‌.ಡಿ ರೇವಣ್ಣ ಅವರನ್ನು ಬೆಂಗಳೂರಿನ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಸೋಮವಾರ (ಡಿ.29) ಆರೋಪ ಮುಕ್ತಗೊಳಿಸಿ ಮಹತ್ವದ ಆದೇಶ ನೀಡಿದೆ. ಕಳೆದ ತಿಂಗಳು...