Homeಕರ್ನಾಟಕಯುಪಿ: ಹಿಂದುತ್ವದ ಐಕಾನ್‌ ಆಗಿದ್ದ ಯೋಗಿ ತಮ್ಮ ಚರಿಷ್ಮಾ ಕಳೆದುಕೊಂಡಿದ್ದಾರಾ?

ಯುಪಿ: ಹಿಂದುತ್ವದ ಐಕಾನ್‌ ಆಗಿದ್ದ ಯೋಗಿ ತಮ್ಮ ಚರಿಷ್ಮಾ ಕಳೆದುಕೊಂಡಿದ್ದಾರಾ?

- Advertisement -
- Advertisement -

ಕೇಸರಿ ಧರಿಸಿದ ಯೋಗಿ ಆದಿತ್ಯನಾಥ್ ಅವರು ವ್ಯಾಪಾರ ಶೃಂಗಸಭೆಗಳು, ಅಂತರಾಷ್ಟ್ರೀಯ ಹೂಡಿಕೆಗಳು ಮತ್ತು ಎಂಒಯುಗಳ ಮೂಲಕ ಉತ್ತರ ಪ್ರದೇಶವನ್ನು “ಉತ್ತಮ ಪ್ರದೇಶ” ಎಂದು ಬಿಂಬಿಸಲು ಯತ್ನಿಸುತ್ತಿದ್ದ ಸಮಯವಿತ್ತು. ಅವರು ಉತ್ತರ ಪ್ರದೇಶವನ್ನು ಅತ್ಯಂತ ಫಲವತ್ತಾದ ಮತ್ತು ಆದ್ಯತೆಯ ತಾಣವೆಂದು ಅವರು ಹೇಳುತ್ತಿದ್ದರು.

ಕಾನೂನು ಮತ್ತು ಸುವ್ಯವಸ್ಥೆಗೆ ವಿಚಾರಕ್ಕೆ ಬಂದಾಗ ಆದಿತ್ಯನಾಥ್ ಅವರು ಕೇಂದ್ರ ಪ್ರಾಯೋಜಿತ ಯೋಜನೆಗಳಿಗೆ ಮಣೆ ಹಾಕುತ್ತಿದ್ದದ್ದು ಬಿಟ್ಟರೆ ಮತ್ತಾವುದೇ ಮಾರ್ಗವನ್ನು ಅನುಸರಿಸಿದ್ದು ಕಂಡುಬಂದಿಲ್ಲ. ಸದಾ “ಡಬಲ್ ಇಂಜಿನ್” ಸರ್ಕಾರದ ಬಗ್ಗೆ ಹೇಳಿಕೊಳ್ಳುತ್ತಾ ಅಧಿಕಾರಶಾಹಿಯನ್ನು ವಶದಲ್ಲಿಟ್ಟುಕೊಂಡು ರಾಜ್ಯಾಧಿಕಾರದ ಪಡಸಾಲೆಗೆ ಕಾಲಿಟ್ಟ ಗೋರಖನಾಥ ಮಠದ ಮುಖ್ಯಸ್ಥರು ನೀರಲ್ಲಿ ಬಾತುಕೋಳಿಯಂತೆ ಸಾಗಲು ಆರಂಭಿಸಿದರಷ್ಟೇ.

ಇಡೀ ರಾಜ್ಯದ ಪ್ರಚಾರ ಯಂತ್ರವನ್ನು ಒಂದು ಉದ್ದೇಶಕ್ಕೆ ಬಳಸಲಾಗುತ್ತಿದೆ: ಪ್ರಾಜೆಕ್ಟ್ ಬ್ರ್ಯಾಂಡ್ ಯೋಗಿ. ಪೋಸ್ಟರ್‌ಗಳು, ಜಾಹೀರಾತು ಫಲಕಗಳು ಮತ್ತು ಹೋರ್ಡಿಂಗ್‌ಗಳು ಕೇವಲ ಒಬ್ಬ ವ್ಯಕ್ತಿಯ ಚಿತ್ರದೊಂದಿಗೆ ಮಿನುಗುತ್ತಿವೆ. ಅವರ ಪ್ರಚಾರವು ಎಷ್ಟು ಅಸೂಯೆ ಹುಟ್ಟಿಸಿತ್ತು ಎಂದರೆ, ಇತರ ಬಿಜೆಪಿ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು ಅವರ ಶೈಲಿ, ನಡವಳಿಕೆ ಮತ್ತು ಪ್ರಚಾರದ ಸಾಹಸಗಳನ್ನು ಅನುಕರಿಸಲು ಬಯಸಿದ್ದರು.

ಆದಿತ್ಯನಾಥ್ ಅವರು ಸಂಘದ ಸಂತೋಷಕ್ಕಾಗಿ ಹೆಚ್ಚು ಸ್ಟಾರ್ ಇಮೇಜ್ ಬೆಳೆಸಿಕೊಂಡರು. ಯುಪಿಯ ಹೊರಗಿದ್ದರೂ ಅವರು ಬ್ರ್ಯಾಂಡ್ ಆದರು; ಜನಪ್ರಿಯತೆಯನ್ನು ಗಿಟ್ಟಿಸಿಕೊಳ್ಳುವ ನಿಟ್ಟಿನಲ್ಲಿ ಅವರು ಪ್ರಧಾನಿ ನರೇಂದ್ರ ಮೋದಿಯವರ ಪಕ್ಕದಲ್ಲಿ ಎರಡನೇ ಸ್ಥಾನದಲ್ಲಿ ಕಾಣಿಸಿಕೊಂಡರು. ಬಿಜೆಪಿ ನಾಯಕರು ಆದಿತ್ಯನಾಥ್ ಅವರನ್ನು 2024ರಲ್ಲಿ ಮೋದಿಯನ್ನು ಬದಲಿಸುವ ನಿರೀಕ್ಷಿತ ಪ್ರಧಾನಿ ಎಂದು ಶ್ಲಾಘಿಸಲು ಪ್ರಾರಂಭಿಸಿದರು.

ಆದಿತ್ಯನಾಥ್ ಅವರ ಆಡಂಬರವು ಅಲ್ಪಕಾಲಿಕವಾಗಿತ್ತು: ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮತ್ತು ಪೌರತ್ವ (ತಿದ್ದುಪಡಿ) ಕಾಯಿದೆ-2019 (ಸಿಎಎ) ವಿರುದ್ಧ ನಡೆದ ಪ್ರತಿಭಟನೆಗಳು ಅವರ ಸರ್ಕಾರದ ಅಮಾನವೀಯತೆಯನ್ನು ಬಹಿರಂಗಪಡಿಸಿದವು. ಯುಪಿ ಸರ್ಕಾರವು ಮುಸ್ಲಿಮರ ಮೇಲೆ ವಿವೇಚನಾರಹಿತ ಶಕ್ತಿಯನ್ನು ಪ್ರಯೋಗಿಸಿತು. ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿಂದುತ್ವದ ಕಾರ್ಯಸೂಚಿಯನ್ನು ಪೂರೈಸಲು ತಮ್ಮ ದ್ವೇಷದ ಯಂತ್ರವನ್ನು ಸಕ್ರಿಯಗೊಳಿಸಿದರು.

NRC ಮತ್ತು NRCಯ ಫ್ಯಾಂಟಮ್ ಅನ್ನು COVID-19 ಮತ್ತು ಲಾಕ್‌ಡೌನ್‌ಗಳಿಂದ ಮರೆಮಾಡಲಾಗಿದೆ. ಕೊರೊನಾ ಎರಡನೇ ಅಲೆಯ ಸಮಯದಲ್ಲಿ, ಹಾಸಿಗೆಗಳು ಮತ್ತು ಆಮ್ಲಜನಕದ ಕೊರತೆಯಿಂದ ರಾಜ್ಯದಲ್ಲಿ ಜನರು ಸಾಯುತ್ತಿರುವಾಗ, ಹಲವಾರು ಬಿಜೆಪಿ ಶಾಸಕರು ಆದಿತ್ಯನಾಥ್ ಅವರನ್ನು ಟೀಕಿಸಿದರು. ಅವರು ದಂತಗೋಪುರದಲ್ಲಿ ಕುಳಿತು ಸಾಮಾನ್ಯರ ನೋವನ್ನು ಆಲಿಸುತ್ತಿಲ್ಲ, ಸ್ಪಂದಿಸುತ್ತಿಲ್ಲ ಎಂದು ಬಿಜೆಪಿಗರೇ ಆಕ್ರೋಶ ವ್ಯಕ್ತಪಡಿಸಿದರು.

ಕೋವಿಡ್-19 ಸಂತ್ರಸ್ತರ ಶವಗಳನ್ನು ಗಂಗಾನದಿಯಲ್ಲಿ ತೇಲಿಬಿಡಲಾಯಿತು, ಮೃತ ದೇಹಗಳ ಗೌರವಯುವ ಶವಸಂಸ್ಕಾರವನ್ನು ನಿರಾಕರಿಸಲಾಯಿತು. ಪಂಚಾಯತ್ ಚುನಾವಣಾ ಕರ್ತವ್ಯದ ವೇಳೆ ಸೋಂಕಿಗೆ ಒಳಗಾಗಿ ಸಾವನ್ನಪ್ಪಿದ ಸರ್ಕಾರಿ ಶಾಲಾ ಶಿಕ್ಷಕರ ಕುಟುಂಬಗಳಿಗೆ ಸರಿಯಾದ ರೀತಿಯಲ್ಲಿ ಪರಿಹಾರವೂ ದೊರೆಯಲಿಲ್ಲ ಎಂಬುದು ಮತ್ತಷ್ಟು ಆಕ್ರೋಶಕ್ಕೆ ಕಾರಣವಾಗಿಯಿತು. ಇದು ಅವರ ಇಮೇಜ್‌ ಮತ್ತಷ್ಟು ಕುಗ್ಗಲು ಕಾರಣವಾಯಿತು.

ನಂತರ ಯುಪಿ ಗ್ಯಾಂಗ್‌ಸ್ಟರ್ ವಿಕಾಸ್ ದುಬೆಯ ಎನ್‌ಕೌಂಟರ್, ಹತ್ರಾಸ್ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಹಾಗೂ ಪತ್ರಕರ್ತರ ವಿರುದ್ಧದ ಯುಎಪಿಎ ಅಡಿಯಲ್ಲಿ ದಾಖಲಾದ ಪ್ರಕರಣಗಳು ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯಲ್ಲಿನ ಸಮಸ್ಯೆಯನ್ನು ಬಿಚ್ಚಿಟ್ಟವು.

ಹೆಚ್ಚುತ್ತಿರುವ ನಿರುದ್ಯೋಗ, ಅಪೌಷ್ಟಿಕತೆ, ಶಾಲೆ ತೊರೆಯುವಿಕೆ ಮತ್ತು ಅಪರಾಧ, ಗೋಧಿ ಮತ್ತು ಭತ್ತ ಸಂಗ್ರಹಣೆಯಲ್ಲಿ ಗುರಿಗಳನ್ನು ತಲುಪದ ಅಂಕಿಅಂಶಗಳು, ದೇವಸ್ಥಾನಗಳಿಗೆ ಸಾರ್ವಜನಿಕ ಹಣವನ್ನು ಖರ್ಚು ಮಾಡುವ ಆದ್ಯತೆ, ರಾಜಕೀಯ ಉದ್ದೇಶಗಳಿಗಾಗಿ ಮುಸ್ಲಿಮರನ್ನು ಗುರಿಯಾಗಿಸುವುದು, ಭ್ರಷ್ಟಾಚಾರ, ಅತಿರೇಕದ ಜಾತೀಯತೆ, ಅಕ್ರಮ ಗಣಿಗಾರಿಕೆ ಮತ್ತು ಈಡೇರದ ಭರವಸೆಗಳ ಪಟ್ಟಿಗಳು ರಾಜ್ಯದಲ್ಲಿ ಯೋಗಿ ಮತ್ತು ಬಿಜೆಪಿ ವಿರೋಧಿ ಅಲೆಯನ್ನು ಹೆಚ್ಚಿಸಿದೆ.

ದಲಿತರು ಮತ್ತು ಇತರ ಹಿಂದುಳಿದ ವರ್ಗ (ಒಬಿಸಿ)ಗಳ ನಿರ್ಲಕ್ಷ್ಯದಿಂದಾಗಿ ಸ್ವಾಮಿ ಪ್ರಸಾದ್ ಮೌರ್ಯ, ದಾರಾ ಸಿಂಗ್ ಚೌಹಾಣ್ ಮತ್ತು ಧರಮ್ ಸಿಂಗ್ ಸೈನಿ ಅವರಂತಹ ಮಂತ್ರಿಗಳು ಮತ್ತು ನಾಯಕರು ಬಿಜೆಪಿಯನ್ನು ತೊರೆದು ಉತ್ತರ ಪ್ರದೇಶದಲ್ಲಿ ಬಿಜೆಪಿಯ ಪ್ರತಿಸ್ಪರ್ಧಿ ಸಮಾಜವಾದಿ ಪಕ್ಷಕ್ಕೆ (SP) ಸೇರಿದರು.

ಇದೆಲ್ಲದರ ಮಧ್ಯೆ, ಮುಂಬರುವ ವಿಧಾನಸಭಾ ಚುನಾವಣೆಯು “80% ವರ್ಸಸ್ 20% (ಮುಸ್ಲಿಮರ)” ನಡುವಿನ ಹೋರಾಟವಾಗಿದೆ ಎಂದು ಆದಿತ್ಯನಾಥ್ ಹೇಳಿಕೆ ನೀಡುವ ಮೂಲಕ ಕೋಮು ಭಾವನೆಗಳನ್ನು ಪ್ರಚೋದಿಸುತ್ತಿದ್ದಾರೆ

ಯುಪಿಯಲ್ಲಿ, ವಿಶೇಷವಾಗಿ ಎಸ್‌ಪಿ ಮತ್ತೆ ತನ್ನ ವರ್ಚಸ್ಸನ್ನು ವೃದ್ದಿಸಿಕೊಂಡು ಮುನ್ನೆಲೆಗೆ ಬರುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿಯು ಯಾವುದೇ ಚಾನ್ಸ್‌ ತೆಗೆದುಕೊಳ್ಳಲು ಬಯಸುವುದಿಲ್ಲ ಎಂಬುದು ಸ್ಪಷ್ಟವಾಗಿದೆ. ಪಕ್ಷವು ಯೋಗಿ ಅವರನ್ನು ಅವರ ತವರು ಗೋರಖ್‌ಪುರದಿಂದ ಕಣಕ್ಕಿಳಿಸಲು ನಿರ್ಧರಿಸಿದ್ದು, ಅವರು ಮಥುರಾ ಅಥವಾ ಅಯೋಧ್ಯೆಯಿಂದ ಸ್ಪರ್ಧಿಸುತ್ತಾರೆ ಎಂಬಊಹಾಪೋಹಕ್ಕೆ ತೆರೆ ಎಳೆದಿದೆ. ಆದಿತ್ಯನಾಥ್ ಅವರು ಯುಪಿಯಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವ ವಿಶ್ವಾಸವನ್ನು ಹೊಂದಿದ್ದರೂ, ಒಬ್ಬ ಮುಖ್ಯಮಂತ್ರಿಯ ಹುದ್ದೆಯನ್ನು ಉಳಿಸಿಕೊಳ್ಳುವ ಅವರ ಸಾಮರ್ಥ್ಯವು ಪ್ರಶ್ನಾರ್ಥವಾಗಿದೆ.


ಇದನ್ನೂ ಓದಿರಿ: ವಿಶ್ಲೇಷಣೆ: ಯುಪಿಯಲ್ಲಿ ಒಬಿಸಿ ನಾಯಕರು ಬಿಜೆಪಿ ತೊರೆಯುತ್ತಿರುವುದು ಏತಕ್ಕೆ? ಎಸ್‌ಪಿಗೆ ಗೆಲುವು ಸುಲಭವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...

‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್

ಕಾಸರಗೋಡು (ಕೇರಳ): ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ 'ಹರ್ ಘರ್ ತಿರಂಗಾ' ಅಭಿಯಾನದ ಸಮಯದಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ'ನ ಸಂಪೂರ್ಣ ವಾಗ್ವಾದ/ಆವೃತ್ತಿಯನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸಂವಹನದ ಸುತ್ತ ಭಾರಿ ವಿವಾದ...

ಮೊಜ್ತಬಾ ಖಾಮಿನೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದ ಇಸ್ರೇಲ್ ಮಾಧ್ಯಮಗಳು : ವಿಡಿಯೋ ಬಿಡುಗಡೆ ಮಾಡಿ ಕೌಂಟರ್ ಕೊಟ್ಟ ಇರಾನ್

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರ ಆರೋಗ್ಯ ಸ್ಥಿತಿ 'ಅತ್ಯಂತ ಗಂಭೀರವಾಗಿದೆ' ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ, ಅವರು ಉತ್ತಮ ಆರೋಗ್ಯದಿಂದ ಇರುವಂತೆ ಕಾಣಿಸುವ ದಿನಾಂಕವಿಲ್ಲದ ವಿಡಿಯೋ ಒಂದನ್ನು...

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....