Homeಕರ್ನಾಟಕಯುಪಿ: ಹಿಂದುತ್ವದ ಐಕಾನ್‌ ಆಗಿದ್ದ ಯೋಗಿ ತಮ್ಮ ಚರಿಷ್ಮಾ ಕಳೆದುಕೊಂಡಿದ್ದಾರಾ?

ಯುಪಿ: ಹಿಂದುತ್ವದ ಐಕಾನ್‌ ಆಗಿದ್ದ ಯೋಗಿ ತಮ್ಮ ಚರಿಷ್ಮಾ ಕಳೆದುಕೊಂಡಿದ್ದಾರಾ?

- Advertisement -
- Advertisement -

ಕೇಸರಿ ಧರಿಸಿದ ಯೋಗಿ ಆದಿತ್ಯನಾಥ್ ಅವರು ವ್ಯಾಪಾರ ಶೃಂಗಸಭೆಗಳು, ಅಂತರಾಷ್ಟ್ರೀಯ ಹೂಡಿಕೆಗಳು ಮತ್ತು ಎಂಒಯುಗಳ ಮೂಲಕ ಉತ್ತರ ಪ್ರದೇಶವನ್ನು “ಉತ್ತಮ ಪ್ರದೇಶ” ಎಂದು ಬಿಂಬಿಸಲು ಯತ್ನಿಸುತ್ತಿದ್ದ ಸಮಯವಿತ್ತು. ಅವರು ಉತ್ತರ ಪ್ರದೇಶವನ್ನು ಅತ್ಯಂತ ಫಲವತ್ತಾದ ಮತ್ತು ಆದ್ಯತೆಯ ತಾಣವೆಂದು ಅವರು ಹೇಳುತ್ತಿದ್ದರು.

ಕಾನೂನು ಮತ್ತು ಸುವ್ಯವಸ್ಥೆಗೆ ವಿಚಾರಕ್ಕೆ ಬಂದಾಗ ಆದಿತ್ಯನಾಥ್ ಅವರು ಕೇಂದ್ರ ಪ್ರಾಯೋಜಿತ ಯೋಜನೆಗಳಿಗೆ ಮಣೆ ಹಾಕುತ್ತಿದ್ದದ್ದು ಬಿಟ್ಟರೆ ಮತ್ತಾವುದೇ ಮಾರ್ಗವನ್ನು ಅನುಸರಿಸಿದ್ದು ಕಂಡುಬಂದಿಲ್ಲ. ಸದಾ “ಡಬಲ್ ಇಂಜಿನ್” ಸರ್ಕಾರದ ಬಗ್ಗೆ ಹೇಳಿಕೊಳ್ಳುತ್ತಾ ಅಧಿಕಾರಶಾಹಿಯನ್ನು ವಶದಲ್ಲಿಟ್ಟುಕೊಂಡು ರಾಜ್ಯಾಧಿಕಾರದ ಪಡಸಾಲೆಗೆ ಕಾಲಿಟ್ಟ ಗೋರಖನಾಥ ಮಠದ ಮುಖ್ಯಸ್ಥರು ನೀರಲ್ಲಿ ಬಾತುಕೋಳಿಯಂತೆ ಸಾಗಲು ಆರಂಭಿಸಿದರಷ್ಟೇ.

ಇಡೀ ರಾಜ್ಯದ ಪ್ರಚಾರ ಯಂತ್ರವನ್ನು ಒಂದು ಉದ್ದೇಶಕ್ಕೆ ಬಳಸಲಾಗುತ್ತಿದೆ: ಪ್ರಾಜೆಕ್ಟ್ ಬ್ರ್ಯಾಂಡ್ ಯೋಗಿ. ಪೋಸ್ಟರ್‌ಗಳು, ಜಾಹೀರಾತು ಫಲಕಗಳು ಮತ್ತು ಹೋರ್ಡಿಂಗ್‌ಗಳು ಕೇವಲ ಒಬ್ಬ ವ್ಯಕ್ತಿಯ ಚಿತ್ರದೊಂದಿಗೆ ಮಿನುಗುತ್ತಿವೆ. ಅವರ ಪ್ರಚಾರವು ಎಷ್ಟು ಅಸೂಯೆ ಹುಟ್ಟಿಸಿತ್ತು ಎಂದರೆ, ಇತರ ಬಿಜೆಪಿ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು ಅವರ ಶೈಲಿ, ನಡವಳಿಕೆ ಮತ್ತು ಪ್ರಚಾರದ ಸಾಹಸಗಳನ್ನು ಅನುಕರಿಸಲು ಬಯಸಿದ್ದರು.

ಆದಿತ್ಯನಾಥ್ ಅವರು ಸಂಘದ ಸಂತೋಷಕ್ಕಾಗಿ ಹೆಚ್ಚು ಸ್ಟಾರ್ ಇಮೇಜ್ ಬೆಳೆಸಿಕೊಂಡರು. ಯುಪಿಯ ಹೊರಗಿದ್ದರೂ ಅವರು ಬ್ರ್ಯಾಂಡ್ ಆದರು; ಜನಪ್ರಿಯತೆಯನ್ನು ಗಿಟ್ಟಿಸಿಕೊಳ್ಳುವ ನಿಟ್ಟಿನಲ್ಲಿ ಅವರು ಪ್ರಧಾನಿ ನರೇಂದ್ರ ಮೋದಿಯವರ ಪಕ್ಕದಲ್ಲಿ ಎರಡನೇ ಸ್ಥಾನದಲ್ಲಿ ಕಾಣಿಸಿಕೊಂಡರು. ಬಿಜೆಪಿ ನಾಯಕರು ಆದಿತ್ಯನಾಥ್ ಅವರನ್ನು 2024ರಲ್ಲಿ ಮೋದಿಯನ್ನು ಬದಲಿಸುವ ನಿರೀಕ್ಷಿತ ಪ್ರಧಾನಿ ಎಂದು ಶ್ಲಾಘಿಸಲು ಪ್ರಾರಂಭಿಸಿದರು.

ಆದಿತ್ಯನಾಥ್ ಅವರ ಆಡಂಬರವು ಅಲ್ಪಕಾಲಿಕವಾಗಿತ್ತು: ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮತ್ತು ಪೌರತ್ವ (ತಿದ್ದುಪಡಿ) ಕಾಯಿದೆ-2019 (ಸಿಎಎ) ವಿರುದ್ಧ ನಡೆದ ಪ್ರತಿಭಟನೆಗಳು ಅವರ ಸರ್ಕಾರದ ಅಮಾನವೀಯತೆಯನ್ನು ಬಹಿರಂಗಪಡಿಸಿದವು. ಯುಪಿ ಸರ್ಕಾರವು ಮುಸ್ಲಿಮರ ಮೇಲೆ ವಿವೇಚನಾರಹಿತ ಶಕ್ತಿಯನ್ನು ಪ್ರಯೋಗಿಸಿತು. ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿಂದುತ್ವದ ಕಾರ್ಯಸೂಚಿಯನ್ನು ಪೂರೈಸಲು ತಮ್ಮ ದ್ವೇಷದ ಯಂತ್ರವನ್ನು ಸಕ್ರಿಯಗೊಳಿಸಿದರು.

NRC ಮತ್ತು NRCಯ ಫ್ಯಾಂಟಮ್ ಅನ್ನು COVID-19 ಮತ್ತು ಲಾಕ್‌ಡೌನ್‌ಗಳಿಂದ ಮರೆಮಾಡಲಾಗಿದೆ. ಕೊರೊನಾ ಎರಡನೇ ಅಲೆಯ ಸಮಯದಲ್ಲಿ, ಹಾಸಿಗೆಗಳು ಮತ್ತು ಆಮ್ಲಜನಕದ ಕೊರತೆಯಿಂದ ರಾಜ್ಯದಲ್ಲಿ ಜನರು ಸಾಯುತ್ತಿರುವಾಗ, ಹಲವಾರು ಬಿಜೆಪಿ ಶಾಸಕರು ಆದಿತ್ಯನಾಥ್ ಅವರನ್ನು ಟೀಕಿಸಿದರು. ಅವರು ದಂತಗೋಪುರದಲ್ಲಿ ಕುಳಿತು ಸಾಮಾನ್ಯರ ನೋವನ್ನು ಆಲಿಸುತ್ತಿಲ್ಲ, ಸ್ಪಂದಿಸುತ್ತಿಲ್ಲ ಎಂದು ಬಿಜೆಪಿಗರೇ ಆಕ್ರೋಶ ವ್ಯಕ್ತಪಡಿಸಿದರು.

ಕೋವಿಡ್-19 ಸಂತ್ರಸ್ತರ ಶವಗಳನ್ನು ಗಂಗಾನದಿಯಲ್ಲಿ ತೇಲಿಬಿಡಲಾಯಿತು, ಮೃತ ದೇಹಗಳ ಗೌರವಯುವ ಶವಸಂಸ್ಕಾರವನ್ನು ನಿರಾಕರಿಸಲಾಯಿತು. ಪಂಚಾಯತ್ ಚುನಾವಣಾ ಕರ್ತವ್ಯದ ವೇಳೆ ಸೋಂಕಿಗೆ ಒಳಗಾಗಿ ಸಾವನ್ನಪ್ಪಿದ ಸರ್ಕಾರಿ ಶಾಲಾ ಶಿಕ್ಷಕರ ಕುಟುಂಬಗಳಿಗೆ ಸರಿಯಾದ ರೀತಿಯಲ್ಲಿ ಪರಿಹಾರವೂ ದೊರೆಯಲಿಲ್ಲ ಎಂಬುದು ಮತ್ತಷ್ಟು ಆಕ್ರೋಶಕ್ಕೆ ಕಾರಣವಾಗಿಯಿತು. ಇದು ಅವರ ಇಮೇಜ್‌ ಮತ್ತಷ್ಟು ಕುಗ್ಗಲು ಕಾರಣವಾಯಿತು.

ನಂತರ ಯುಪಿ ಗ್ಯಾಂಗ್‌ಸ್ಟರ್ ವಿಕಾಸ್ ದುಬೆಯ ಎನ್‌ಕೌಂಟರ್, ಹತ್ರಾಸ್ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಹಾಗೂ ಪತ್ರಕರ್ತರ ವಿರುದ್ಧದ ಯುಎಪಿಎ ಅಡಿಯಲ್ಲಿ ದಾಖಲಾದ ಪ್ರಕರಣಗಳು ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯಲ್ಲಿನ ಸಮಸ್ಯೆಯನ್ನು ಬಿಚ್ಚಿಟ್ಟವು.

ಹೆಚ್ಚುತ್ತಿರುವ ನಿರುದ್ಯೋಗ, ಅಪೌಷ್ಟಿಕತೆ, ಶಾಲೆ ತೊರೆಯುವಿಕೆ ಮತ್ತು ಅಪರಾಧ, ಗೋಧಿ ಮತ್ತು ಭತ್ತ ಸಂಗ್ರಹಣೆಯಲ್ಲಿ ಗುರಿಗಳನ್ನು ತಲುಪದ ಅಂಕಿಅಂಶಗಳು, ದೇವಸ್ಥಾನಗಳಿಗೆ ಸಾರ್ವಜನಿಕ ಹಣವನ್ನು ಖರ್ಚು ಮಾಡುವ ಆದ್ಯತೆ, ರಾಜಕೀಯ ಉದ್ದೇಶಗಳಿಗಾಗಿ ಮುಸ್ಲಿಮರನ್ನು ಗುರಿಯಾಗಿಸುವುದು, ಭ್ರಷ್ಟಾಚಾರ, ಅತಿರೇಕದ ಜಾತೀಯತೆ, ಅಕ್ರಮ ಗಣಿಗಾರಿಕೆ ಮತ್ತು ಈಡೇರದ ಭರವಸೆಗಳ ಪಟ್ಟಿಗಳು ರಾಜ್ಯದಲ್ಲಿ ಯೋಗಿ ಮತ್ತು ಬಿಜೆಪಿ ವಿರೋಧಿ ಅಲೆಯನ್ನು ಹೆಚ್ಚಿಸಿದೆ.

ದಲಿತರು ಮತ್ತು ಇತರ ಹಿಂದುಳಿದ ವರ್ಗ (ಒಬಿಸಿ)ಗಳ ನಿರ್ಲಕ್ಷ್ಯದಿಂದಾಗಿ ಸ್ವಾಮಿ ಪ್ರಸಾದ್ ಮೌರ್ಯ, ದಾರಾ ಸಿಂಗ್ ಚೌಹಾಣ್ ಮತ್ತು ಧರಮ್ ಸಿಂಗ್ ಸೈನಿ ಅವರಂತಹ ಮಂತ್ರಿಗಳು ಮತ್ತು ನಾಯಕರು ಬಿಜೆಪಿಯನ್ನು ತೊರೆದು ಉತ್ತರ ಪ್ರದೇಶದಲ್ಲಿ ಬಿಜೆಪಿಯ ಪ್ರತಿಸ್ಪರ್ಧಿ ಸಮಾಜವಾದಿ ಪಕ್ಷಕ್ಕೆ (SP) ಸೇರಿದರು.

ಇದೆಲ್ಲದರ ಮಧ್ಯೆ, ಮುಂಬರುವ ವಿಧಾನಸಭಾ ಚುನಾವಣೆಯು “80% ವರ್ಸಸ್ 20% (ಮುಸ್ಲಿಮರ)” ನಡುವಿನ ಹೋರಾಟವಾಗಿದೆ ಎಂದು ಆದಿತ್ಯನಾಥ್ ಹೇಳಿಕೆ ನೀಡುವ ಮೂಲಕ ಕೋಮು ಭಾವನೆಗಳನ್ನು ಪ್ರಚೋದಿಸುತ್ತಿದ್ದಾರೆ

ಯುಪಿಯಲ್ಲಿ, ವಿಶೇಷವಾಗಿ ಎಸ್‌ಪಿ ಮತ್ತೆ ತನ್ನ ವರ್ಚಸ್ಸನ್ನು ವೃದ್ದಿಸಿಕೊಂಡು ಮುನ್ನೆಲೆಗೆ ಬರುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿಯು ಯಾವುದೇ ಚಾನ್ಸ್‌ ತೆಗೆದುಕೊಳ್ಳಲು ಬಯಸುವುದಿಲ್ಲ ಎಂಬುದು ಸ್ಪಷ್ಟವಾಗಿದೆ. ಪಕ್ಷವು ಯೋಗಿ ಅವರನ್ನು ಅವರ ತವರು ಗೋರಖ್‌ಪುರದಿಂದ ಕಣಕ್ಕಿಳಿಸಲು ನಿರ್ಧರಿಸಿದ್ದು, ಅವರು ಮಥುರಾ ಅಥವಾ ಅಯೋಧ್ಯೆಯಿಂದ ಸ್ಪರ್ಧಿಸುತ್ತಾರೆ ಎಂಬಊಹಾಪೋಹಕ್ಕೆ ತೆರೆ ಎಳೆದಿದೆ. ಆದಿತ್ಯನಾಥ್ ಅವರು ಯುಪಿಯಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವ ವಿಶ್ವಾಸವನ್ನು ಹೊಂದಿದ್ದರೂ, ಒಬ್ಬ ಮುಖ್ಯಮಂತ್ರಿಯ ಹುದ್ದೆಯನ್ನು ಉಳಿಸಿಕೊಳ್ಳುವ ಅವರ ಸಾಮರ್ಥ್ಯವು ಪ್ರಶ್ನಾರ್ಥವಾಗಿದೆ.


ಇದನ್ನೂ ಓದಿರಿ: ವಿಶ್ಲೇಷಣೆ: ಯುಪಿಯಲ್ಲಿ ಒಬಿಸಿ ನಾಯಕರು ಬಿಜೆಪಿ ತೊರೆಯುತ್ತಿರುವುದು ಏತಕ್ಕೆ? ಎಸ್‌ಪಿಗೆ ಗೆಲುವು ಸುಲಭವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...