Homeಕರ್ನಾಟಕಯುಪಿ: ಹಿಂದುತ್ವದ ಐಕಾನ್‌ ಆಗಿದ್ದ ಯೋಗಿ ತಮ್ಮ ಚರಿಷ್ಮಾ ಕಳೆದುಕೊಂಡಿದ್ದಾರಾ?

ಯುಪಿ: ಹಿಂದುತ್ವದ ಐಕಾನ್‌ ಆಗಿದ್ದ ಯೋಗಿ ತಮ್ಮ ಚರಿಷ್ಮಾ ಕಳೆದುಕೊಂಡಿದ್ದಾರಾ?

- Advertisement -
- Advertisement -

ಕೇಸರಿ ಧರಿಸಿದ ಯೋಗಿ ಆದಿತ್ಯನಾಥ್ ಅವರು ವ್ಯಾಪಾರ ಶೃಂಗಸಭೆಗಳು, ಅಂತರಾಷ್ಟ್ರೀಯ ಹೂಡಿಕೆಗಳು ಮತ್ತು ಎಂಒಯುಗಳ ಮೂಲಕ ಉತ್ತರ ಪ್ರದೇಶವನ್ನು “ಉತ್ತಮ ಪ್ರದೇಶ” ಎಂದು ಬಿಂಬಿಸಲು ಯತ್ನಿಸುತ್ತಿದ್ದ ಸಮಯವಿತ್ತು. ಅವರು ಉತ್ತರ ಪ್ರದೇಶವನ್ನು ಅತ್ಯಂತ ಫಲವತ್ತಾದ ಮತ್ತು ಆದ್ಯತೆಯ ತಾಣವೆಂದು ಅವರು ಹೇಳುತ್ತಿದ್ದರು.

ಕಾನೂನು ಮತ್ತು ಸುವ್ಯವಸ್ಥೆಗೆ ವಿಚಾರಕ್ಕೆ ಬಂದಾಗ ಆದಿತ್ಯನಾಥ್ ಅವರು ಕೇಂದ್ರ ಪ್ರಾಯೋಜಿತ ಯೋಜನೆಗಳಿಗೆ ಮಣೆ ಹಾಕುತ್ತಿದ್ದದ್ದು ಬಿಟ್ಟರೆ ಮತ್ತಾವುದೇ ಮಾರ್ಗವನ್ನು ಅನುಸರಿಸಿದ್ದು ಕಂಡುಬಂದಿಲ್ಲ. ಸದಾ “ಡಬಲ್ ಇಂಜಿನ್” ಸರ್ಕಾರದ ಬಗ್ಗೆ ಹೇಳಿಕೊಳ್ಳುತ್ತಾ ಅಧಿಕಾರಶಾಹಿಯನ್ನು ವಶದಲ್ಲಿಟ್ಟುಕೊಂಡು ರಾಜ್ಯಾಧಿಕಾರದ ಪಡಸಾಲೆಗೆ ಕಾಲಿಟ್ಟ ಗೋರಖನಾಥ ಮಠದ ಮುಖ್ಯಸ್ಥರು ನೀರಲ್ಲಿ ಬಾತುಕೋಳಿಯಂತೆ ಸಾಗಲು ಆರಂಭಿಸಿದರಷ್ಟೇ.

ಇಡೀ ರಾಜ್ಯದ ಪ್ರಚಾರ ಯಂತ್ರವನ್ನು ಒಂದು ಉದ್ದೇಶಕ್ಕೆ ಬಳಸಲಾಗುತ್ತಿದೆ: ಪ್ರಾಜೆಕ್ಟ್ ಬ್ರ್ಯಾಂಡ್ ಯೋಗಿ. ಪೋಸ್ಟರ್‌ಗಳು, ಜಾಹೀರಾತು ಫಲಕಗಳು ಮತ್ತು ಹೋರ್ಡಿಂಗ್‌ಗಳು ಕೇವಲ ಒಬ್ಬ ವ್ಯಕ್ತಿಯ ಚಿತ್ರದೊಂದಿಗೆ ಮಿನುಗುತ್ತಿವೆ. ಅವರ ಪ್ರಚಾರವು ಎಷ್ಟು ಅಸೂಯೆ ಹುಟ್ಟಿಸಿತ್ತು ಎಂದರೆ, ಇತರ ಬಿಜೆಪಿ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು ಅವರ ಶೈಲಿ, ನಡವಳಿಕೆ ಮತ್ತು ಪ್ರಚಾರದ ಸಾಹಸಗಳನ್ನು ಅನುಕರಿಸಲು ಬಯಸಿದ್ದರು.

ಆದಿತ್ಯನಾಥ್ ಅವರು ಸಂಘದ ಸಂತೋಷಕ್ಕಾಗಿ ಹೆಚ್ಚು ಸ್ಟಾರ್ ಇಮೇಜ್ ಬೆಳೆಸಿಕೊಂಡರು. ಯುಪಿಯ ಹೊರಗಿದ್ದರೂ ಅವರು ಬ್ರ್ಯಾಂಡ್ ಆದರು; ಜನಪ್ರಿಯತೆಯನ್ನು ಗಿಟ್ಟಿಸಿಕೊಳ್ಳುವ ನಿಟ್ಟಿನಲ್ಲಿ ಅವರು ಪ್ರಧಾನಿ ನರೇಂದ್ರ ಮೋದಿಯವರ ಪಕ್ಕದಲ್ಲಿ ಎರಡನೇ ಸ್ಥಾನದಲ್ಲಿ ಕಾಣಿಸಿಕೊಂಡರು. ಬಿಜೆಪಿ ನಾಯಕರು ಆದಿತ್ಯನಾಥ್ ಅವರನ್ನು 2024ರಲ್ಲಿ ಮೋದಿಯನ್ನು ಬದಲಿಸುವ ನಿರೀಕ್ಷಿತ ಪ್ರಧಾನಿ ಎಂದು ಶ್ಲಾಘಿಸಲು ಪ್ರಾರಂಭಿಸಿದರು.

ಆದಿತ್ಯನಾಥ್ ಅವರ ಆಡಂಬರವು ಅಲ್ಪಕಾಲಿಕವಾಗಿತ್ತು: ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮತ್ತು ಪೌರತ್ವ (ತಿದ್ದುಪಡಿ) ಕಾಯಿದೆ-2019 (ಸಿಎಎ) ವಿರುದ್ಧ ನಡೆದ ಪ್ರತಿಭಟನೆಗಳು ಅವರ ಸರ್ಕಾರದ ಅಮಾನವೀಯತೆಯನ್ನು ಬಹಿರಂಗಪಡಿಸಿದವು. ಯುಪಿ ಸರ್ಕಾರವು ಮುಸ್ಲಿಮರ ಮೇಲೆ ವಿವೇಚನಾರಹಿತ ಶಕ್ತಿಯನ್ನು ಪ್ರಯೋಗಿಸಿತು. ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿಂದುತ್ವದ ಕಾರ್ಯಸೂಚಿಯನ್ನು ಪೂರೈಸಲು ತಮ್ಮ ದ್ವೇಷದ ಯಂತ್ರವನ್ನು ಸಕ್ರಿಯಗೊಳಿಸಿದರು.

NRC ಮತ್ತು NRCಯ ಫ್ಯಾಂಟಮ್ ಅನ್ನು COVID-19 ಮತ್ತು ಲಾಕ್‌ಡೌನ್‌ಗಳಿಂದ ಮರೆಮಾಡಲಾಗಿದೆ. ಕೊರೊನಾ ಎರಡನೇ ಅಲೆಯ ಸಮಯದಲ್ಲಿ, ಹಾಸಿಗೆಗಳು ಮತ್ತು ಆಮ್ಲಜನಕದ ಕೊರತೆಯಿಂದ ರಾಜ್ಯದಲ್ಲಿ ಜನರು ಸಾಯುತ್ತಿರುವಾಗ, ಹಲವಾರು ಬಿಜೆಪಿ ಶಾಸಕರು ಆದಿತ್ಯನಾಥ್ ಅವರನ್ನು ಟೀಕಿಸಿದರು. ಅವರು ದಂತಗೋಪುರದಲ್ಲಿ ಕುಳಿತು ಸಾಮಾನ್ಯರ ನೋವನ್ನು ಆಲಿಸುತ್ತಿಲ್ಲ, ಸ್ಪಂದಿಸುತ್ತಿಲ್ಲ ಎಂದು ಬಿಜೆಪಿಗರೇ ಆಕ್ರೋಶ ವ್ಯಕ್ತಪಡಿಸಿದರು.

ಕೋವಿಡ್-19 ಸಂತ್ರಸ್ತರ ಶವಗಳನ್ನು ಗಂಗಾನದಿಯಲ್ಲಿ ತೇಲಿಬಿಡಲಾಯಿತು, ಮೃತ ದೇಹಗಳ ಗೌರವಯುವ ಶವಸಂಸ್ಕಾರವನ್ನು ನಿರಾಕರಿಸಲಾಯಿತು. ಪಂಚಾಯತ್ ಚುನಾವಣಾ ಕರ್ತವ್ಯದ ವೇಳೆ ಸೋಂಕಿಗೆ ಒಳಗಾಗಿ ಸಾವನ್ನಪ್ಪಿದ ಸರ್ಕಾರಿ ಶಾಲಾ ಶಿಕ್ಷಕರ ಕುಟುಂಬಗಳಿಗೆ ಸರಿಯಾದ ರೀತಿಯಲ್ಲಿ ಪರಿಹಾರವೂ ದೊರೆಯಲಿಲ್ಲ ಎಂಬುದು ಮತ್ತಷ್ಟು ಆಕ್ರೋಶಕ್ಕೆ ಕಾರಣವಾಗಿಯಿತು. ಇದು ಅವರ ಇಮೇಜ್‌ ಮತ್ತಷ್ಟು ಕುಗ್ಗಲು ಕಾರಣವಾಯಿತು.

ನಂತರ ಯುಪಿ ಗ್ಯಾಂಗ್‌ಸ್ಟರ್ ವಿಕಾಸ್ ದುಬೆಯ ಎನ್‌ಕೌಂಟರ್, ಹತ್ರಾಸ್ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಹಾಗೂ ಪತ್ರಕರ್ತರ ವಿರುದ್ಧದ ಯುಎಪಿಎ ಅಡಿಯಲ್ಲಿ ದಾಖಲಾದ ಪ್ರಕರಣಗಳು ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯಲ್ಲಿನ ಸಮಸ್ಯೆಯನ್ನು ಬಿಚ್ಚಿಟ್ಟವು.

ಹೆಚ್ಚುತ್ತಿರುವ ನಿರುದ್ಯೋಗ, ಅಪೌಷ್ಟಿಕತೆ, ಶಾಲೆ ತೊರೆಯುವಿಕೆ ಮತ್ತು ಅಪರಾಧ, ಗೋಧಿ ಮತ್ತು ಭತ್ತ ಸಂಗ್ರಹಣೆಯಲ್ಲಿ ಗುರಿಗಳನ್ನು ತಲುಪದ ಅಂಕಿಅಂಶಗಳು, ದೇವಸ್ಥಾನಗಳಿಗೆ ಸಾರ್ವಜನಿಕ ಹಣವನ್ನು ಖರ್ಚು ಮಾಡುವ ಆದ್ಯತೆ, ರಾಜಕೀಯ ಉದ್ದೇಶಗಳಿಗಾಗಿ ಮುಸ್ಲಿಮರನ್ನು ಗುರಿಯಾಗಿಸುವುದು, ಭ್ರಷ್ಟಾಚಾರ, ಅತಿರೇಕದ ಜಾತೀಯತೆ, ಅಕ್ರಮ ಗಣಿಗಾರಿಕೆ ಮತ್ತು ಈಡೇರದ ಭರವಸೆಗಳ ಪಟ್ಟಿಗಳು ರಾಜ್ಯದಲ್ಲಿ ಯೋಗಿ ಮತ್ತು ಬಿಜೆಪಿ ವಿರೋಧಿ ಅಲೆಯನ್ನು ಹೆಚ್ಚಿಸಿದೆ.

ದಲಿತರು ಮತ್ತು ಇತರ ಹಿಂದುಳಿದ ವರ್ಗ (ಒಬಿಸಿ)ಗಳ ನಿರ್ಲಕ್ಷ್ಯದಿಂದಾಗಿ ಸ್ವಾಮಿ ಪ್ರಸಾದ್ ಮೌರ್ಯ, ದಾರಾ ಸಿಂಗ್ ಚೌಹಾಣ್ ಮತ್ತು ಧರಮ್ ಸಿಂಗ್ ಸೈನಿ ಅವರಂತಹ ಮಂತ್ರಿಗಳು ಮತ್ತು ನಾಯಕರು ಬಿಜೆಪಿಯನ್ನು ತೊರೆದು ಉತ್ತರ ಪ್ರದೇಶದಲ್ಲಿ ಬಿಜೆಪಿಯ ಪ್ರತಿಸ್ಪರ್ಧಿ ಸಮಾಜವಾದಿ ಪಕ್ಷಕ್ಕೆ (SP) ಸೇರಿದರು.

ಇದೆಲ್ಲದರ ಮಧ್ಯೆ, ಮುಂಬರುವ ವಿಧಾನಸಭಾ ಚುನಾವಣೆಯು “80% ವರ್ಸಸ್ 20% (ಮುಸ್ಲಿಮರ)” ನಡುವಿನ ಹೋರಾಟವಾಗಿದೆ ಎಂದು ಆದಿತ್ಯನಾಥ್ ಹೇಳಿಕೆ ನೀಡುವ ಮೂಲಕ ಕೋಮು ಭಾವನೆಗಳನ್ನು ಪ್ರಚೋದಿಸುತ್ತಿದ್ದಾರೆ

ಯುಪಿಯಲ್ಲಿ, ವಿಶೇಷವಾಗಿ ಎಸ್‌ಪಿ ಮತ್ತೆ ತನ್ನ ವರ್ಚಸ್ಸನ್ನು ವೃದ್ದಿಸಿಕೊಂಡು ಮುನ್ನೆಲೆಗೆ ಬರುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿಯು ಯಾವುದೇ ಚಾನ್ಸ್‌ ತೆಗೆದುಕೊಳ್ಳಲು ಬಯಸುವುದಿಲ್ಲ ಎಂಬುದು ಸ್ಪಷ್ಟವಾಗಿದೆ. ಪಕ್ಷವು ಯೋಗಿ ಅವರನ್ನು ಅವರ ತವರು ಗೋರಖ್‌ಪುರದಿಂದ ಕಣಕ್ಕಿಳಿಸಲು ನಿರ್ಧರಿಸಿದ್ದು, ಅವರು ಮಥುರಾ ಅಥವಾ ಅಯೋಧ್ಯೆಯಿಂದ ಸ್ಪರ್ಧಿಸುತ್ತಾರೆ ಎಂಬಊಹಾಪೋಹಕ್ಕೆ ತೆರೆ ಎಳೆದಿದೆ. ಆದಿತ್ಯನಾಥ್ ಅವರು ಯುಪಿಯಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವ ವಿಶ್ವಾಸವನ್ನು ಹೊಂದಿದ್ದರೂ, ಒಬ್ಬ ಮುಖ್ಯಮಂತ್ರಿಯ ಹುದ್ದೆಯನ್ನು ಉಳಿಸಿಕೊಳ್ಳುವ ಅವರ ಸಾಮರ್ಥ್ಯವು ಪ್ರಶ್ನಾರ್ಥವಾಗಿದೆ.


ಇದನ್ನೂ ಓದಿರಿ: ವಿಶ್ಲೇಷಣೆ: ಯುಪಿಯಲ್ಲಿ ಒಬಿಸಿ ನಾಯಕರು ಬಿಜೆಪಿ ತೊರೆಯುತ್ತಿರುವುದು ಏತಕ್ಕೆ? ಎಸ್‌ಪಿಗೆ ಗೆಲುವು ಸುಲಭವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾಜಿ ರಾಷ್ಟ್ರಪತಿ ಜಗದೀಪ್ ಧನ್ಕರ್ ರಾಜೀನಾಮೆ ಹಿಂದೆ ಇಡಿ ಒತ್ತಡ : ತನ್ನ ಹೊಸ ಪುಸ್ತಕದಲ್ಲಿ ಸಂಜಯ್ ರಾವುತ್ ಆರೋಪ

ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ಮೋದಿ ಸರ್ಕಾರದ ವಿರುದ್ಧ ಕೈಗೊಂಡ ಸ್ವತಂತ್ರ ರಾಜಕೀಯ ನಡೆಗಳಿಗೆ ಪ್ರತಿಯಾಗಿ, ಜಾರಿ ನಿರ್ದೇಶನಾಲಯದ (ಇಡಿ) ಒತ್ತಡಕ್ಕೆ ಮಣಿದು 2025ರಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು ಎಂದು...

ಯುಎನ್‌ಐ ಮಾಧ್ಯಮ ಕಚೇರಿಗೆ ಬೀಗ : ಪೊಲೀಸರ ವರ್ತನೆಗೆ ಪತ್ರಿಕಾ ಸಂಘಗಳು, ವಿಪಕ್ಷ ನಾಯಕರಿಂದ ತೀವ್ರ ಖಂಡನೆ

ಶುಕ್ರವಾರ (ಮಾ.20) ರಾತ್ರಿ ದೆಹಲಿ ಪೊಲೀಸರು ಯುನೈಟೆಡ್ ನ್ಯೂಸ್ ಆಫ್ ಇಂಡಿಯಾ (ಯುಎನ್‌ಐ) ಸುದ್ದಿ ಸಂಸ್ಥೆಯ ಕಚೇರಿಗೆ ಬೀಗ ಜಡಿದ ರೀತಿಗೆ ಪತ್ರಕರ್ತರ ಸಂಘಗಳು ಮತ್ತು ವಿರೋಧ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ದೆಹಲಿಯ...

ಉಪಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್: ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬಕ್ಕೆ ಟಿಕೆಟ್

ಏಪ್ರಿಲ್ 9ರಂದು ನಡೆಯಲಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ದಾವಣಗೆರೆ ದಕ್ಷಿಣದಲ್ಲಿ ಮುಸ್ಲಿಮರ ತೀವ್ರ ವಿರೋಧದ ನಡುವೆಯೂ ಕೃಷಿ ಸಚಿವ ಎಸ್‌.ಎಸ್‌ ಮಲ್ಲಿಕಾರ್ಜುನ್ ಅವರ...

ಕೇರಳ ವಿಧಾನಸಭೆ ಚುನಾವಣೆ : ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಕೇಸ್!

ಏಪ್ರಿಲ್ 9ರಂದು ನಡೆಯಲಿರುವ ಕೇರಳ ವಿಧಾನಸಭೆ ಚುನಾವಣೆಗೆ ಕಾಸರಗೋಡಿನ ಮಂಜೇಶ್ವರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಕೆ. ಸುರೇಂದ್ರನ್ ಮೇಲೆ ಬರೋಬ್ಬರಿ 242 ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ. ಈ ಮಾಹಿತಿ ಶನಿವಾರ...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಆರು ಮಂದಿ ಶಾಸಕರನ್ನು ಅಮಾನತುಗೊಳಿಸಿದ ಬಿಜೆಡಿ

ಮಾರ್ಚ್ 16ರಂದು ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಆರು ಮಂದಿ ಶಾಸಕರನ್ನು ಒಡಿಶಾದ ಬಿಜು ಜನತಾದಳ (ಬಿಜೆಡಿ) ಅಮಾನತುಗೊಳಿಸಿದೆ ಎಂದು ವರದಿಯಾಗಿದೆ. ಒಟ್ಟು 8 ಶಾಸಕರು ಪಕ್ಷದ ವಿಪ್ ಉಲ್ಲಂಘಿಸಿದ್ದಾರೆ....

ಆಸ್ಕರ್ ನಾಮನಿರ್ದೇಶಿತ ‘ದಿ ವಾಯ್ಸ್ ಆಫ್ ಹಿಂದ್ ರಜಬ್’ ಚಿತ್ರ ಪ್ರದರ್ಶನಕ್ಕೆ ಭಾರತದಲ್ಲಿ ನಿರ್ಬಂಧ!

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ಳನ್ನು ಇಸ್ರೇಲಿ ಸೈನಿಕರು ಸುಮಾರು 300 ಸುತ್ತು ಗುಂಡಿಕ್ಕಿ ಭೀಕರವಾಗಿ ಹತ್ಯೆ ಮಾಡಿರುವ ಕಥೆಯನ್ನು ಹೇಳುವ, 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರದ ಪ್ರದರ್ಶನಕ್ಕೆ...

ವೈದ್ಯೆ ವಂದನಾ ದಾಸ್ ಹತ್ಯೆ ಪ್ರಕರಣ; ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೇರಳ ನ್ಯಾಯಾಲಯ

ಕೊಲ್ಲಂ: ಆಸ್ಪತ್ರೆಯಲ್ಲಿ ನಡೆದ ಡಾ. ವಂದನಾ ದಾಸ್ ಅವರ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ ಜಿ. ಸಂದೀಪ್ ಗೆ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಆರೋಪಿಗೆ ಮರಣದಂಡನೆ ವಿಧಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸುವುದಾಗಿ...

ಕಾಂಗ್ರೆಸ್, ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್: ಕೇರಳ ಸಿಎಂ ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಬಿಜೆಪಿಯ ಬಿ-ಟೀಮ್ ಎಂದು ಆರೋಪಿಸಿದ್ದಾರೆ.   ಕೇಂದ್ರೀಯ ಸಂಸ್ಥೆಗಳು ಕೇರಳ...

‘ಬಿಜೆಪಿ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ, ಕೊನೆಯವರೆಗೂ ಹೋರಾಡುತ್ತೇವೆ’; ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮತದಾರರ ಪಟ್ಟಿಯ ಪರಿಷ್ಕರಣೆಯ ಮೂಲಕ ಜನರ "ಮತದಾನದ ಹಕ್ಕನ್ನು ಕಸಿದುಕೊಳ್ಳಲು" ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.  "ಮೋದಿ ಜಿ...

ಏಳು ವರ್ಷಗಳ ನಂತರ ಯುಎಪಿಎ ಪ್ರಕರಣದಲ್ಲಿ ಇಬ್ಬರು ಕಾಶ್ಮೀರಿ ಯುವಕರನ್ನು ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲದ ನಂತರ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲ್ಪಟ್ಟ ಇಬ್ಬರು ಕಾಶ್ಮೀರಿ ಯುವಕರನ್ನು ಗುರುವಾರ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ ಮತ್ತು ದೆಹಲಿ ಪೊಲೀಸರು...