Homeಕರ್ನಾಟಕಯುಪಿ: ಹಿಂದುತ್ವದ ಐಕಾನ್‌ ಆಗಿದ್ದ ಯೋಗಿ ತಮ್ಮ ಚರಿಷ್ಮಾ ಕಳೆದುಕೊಂಡಿದ್ದಾರಾ?

ಯುಪಿ: ಹಿಂದುತ್ವದ ಐಕಾನ್‌ ಆಗಿದ್ದ ಯೋಗಿ ತಮ್ಮ ಚರಿಷ್ಮಾ ಕಳೆದುಕೊಂಡಿದ್ದಾರಾ?

- Advertisement -
- Advertisement -

ಕೇಸರಿ ಧರಿಸಿದ ಯೋಗಿ ಆದಿತ್ಯನಾಥ್ ಅವರು ವ್ಯಾಪಾರ ಶೃಂಗಸಭೆಗಳು, ಅಂತರಾಷ್ಟ್ರೀಯ ಹೂಡಿಕೆಗಳು ಮತ್ತು ಎಂಒಯುಗಳ ಮೂಲಕ ಉತ್ತರ ಪ್ರದೇಶವನ್ನು “ಉತ್ತಮ ಪ್ರದೇಶ” ಎಂದು ಬಿಂಬಿಸಲು ಯತ್ನಿಸುತ್ತಿದ್ದ ಸಮಯವಿತ್ತು. ಅವರು ಉತ್ತರ ಪ್ರದೇಶವನ್ನು ಅತ್ಯಂತ ಫಲವತ್ತಾದ ಮತ್ತು ಆದ್ಯತೆಯ ತಾಣವೆಂದು ಅವರು ಹೇಳುತ್ತಿದ್ದರು.

ಕಾನೂನು ಮತ್ತು ಸುವ್ಯವಸ್ಥೆಗೆ ವಿಚಾರಕ್ಕೆ ಬಂದಾಗ ಆದಿತ್ಯನಾಥ್ ಅವರು ಕೇಂದ್ರ ಪ್ರಾಯೋಜಿತ ಯೋಜನೆಗಳಿಗೆ ಮಣೆ ಹಾಕುತ್ತಿದ್ದದ್ದು ಬಿಟ್ಟರೆ ಮತ್ತಾವುದೇ ಮಾರ್ಗವನ್ನು ಅನುಸರಿಸಿದ್ದು ಕಂಡುಬಂದಿಲ್ಲ. ಸದಾ “ಡಬಲ್ ಇಂಜಿನ್” ಸರ್ಕಾರದ ಬಗ್ಗೆ ಹೇಳಿಕೊಳ್ಳುತ್ತಾ ಅಧಿಕಾರಶಾಹಿಯನ್ನು ವಶದಲ್ಲಿಟ್ಟುಕೊಂಡು ರಾಜ್ಯಾಧಿಕಾರದ ಪಡಸಾಲೆಗೆ ಕಾಲಿಟ್ಟ ಗೋರಖನಾಥ ಮಠದ ಮುಖ್ಯಸ್ಥರು ನೀರಲ್ಲಿ ಬಾತುಕೋಳಿಯಂತೆ ಸಾಗಲು ಆರಂಭಿಸಿದರಷ್ಟೇ.

ಇಡೀ ರಾಜ್ಯದ ಪ್ರಚಾರ ಯಂತ್ರವನ್ನು ಒಂದು ಉದ್ದೇಶಕ್ಕೆ ಬಳಸಲಾಗುತ್ತಿದೆ: ಪ್ರಾಜೆಕ್ಟ್ ಬ್ರ್ಯಾಂಡ್ ಯೋಗಿ. ಪೋಸ್ಟರ್‌ಗಳು, ಜಾಹೀರಾತು ಫಲಕಗಳು ಮತ್ತು ಹೋರ್ಡಿಂಗ್‌ಗಳು ಕೇವಲ ಒಬ್ಬ ವ್ಯಕ್ತಿಯ ಚಿತ್ರದೊಂದಿಗೆ ಮಿನುಗುತ್ತಿವೆ. ಅವರ ಪ್ರಚಾರವು ಎಷ್ಟು ಅಸೂಯೆ ಹುಟ್ಟಿಸಿತ್ತು ಎಂದರೆ, ಇತರ ಬಿಜೆಪಿ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು ಅವರ ಶೈಲಿ, ನಡವಳಿಕೆ ಮತ್ತು ಪ್ರಚಾರದ ಸಾಹಸಗಳನ್ನು ಅನುಕರಿಸಲು ಬಯಸಿದ್ದರು.

ಆದಿತ್ಯನಾಥ್ ಅವರು ಸಂಘದ ಸಂತೋಷಕ್ಕಾಗಿ ಹೆಚ್ಚು ಸ್ಟಾರ್ ಇಮೇಜ್ ಬೆಳೆಸಿಕೊಂಡರು. ಯುಪಿಯ ಹೊರಗಿದ್ದರೂ ಅವರು ಬ್ರ್ಯಾಂಡ್ ಆದರು; ಜನಪ್ರಿಯತೆಯನ್ನು ಗಿಟ್ಟಿಸಿಕೊಳ್ಳುವ ನಿಟ್ಟಿನಲ್ಲಿ ಅವರು ಪ್ರಧಾನಿ ನರೇಂದ್ರ ಮೋದಿಯವರ ಪಕ್ಕದಲ್ಲಿ ಎರಡನೇ ಸ್ಥಾನದಲ್ಲಿ ಕಾಣಿಸಿಕೊಂಡರು. ಬಿಜೆಪಿ ನಾಯಕರು ಆದಿತ್ಯನಾಥ್ ಅವರನ್ನು 2024ರಲ್ಲಿ ಮೋದಿಯನ್ನು ಬದಲಿಸುವ ನಿರೀಕ್ಷಿತ ಪ್ರಧಾನಿ ಎಂದು ಶ್ಲಾಘಿಸಲು ಪ್ರಾರಂಭಿಸಿದರು.

ಆದಿತ್ಯನಾಥ್ ಅವರ ಆಡಂಬರವು ಅಲ್ಪಕಾಲಿಕವಾಗಿತ್ತು: ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮತ್ತು ಪೌರತ್ವ (ತಿದ್ದುಪಡಿ) ಕಾಯಿದೆ-2019 (ಸಿಎಎ) ವಿರುದ್ಧ ನಡೆದ ಪ್ರತಿಭಟನೆಗಳು ಅವರ ಸರ್ಕಾರದ ಅಮಾನವೀಯತೆಯನ್ನು ಬಹಿರಂಗಪಡಿಸಿದವು. ಯುಪಿ ಸರ್ಕಾರವು ಮುಸ್ಲಿಮರ ಮೇಲೆ ವಿವೇಚನಾರಹಿತ ಶಕ್ತಿಯನ್ನು ಪ್ರಯೋಗಿಸಿತು. ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿಂದುತ್ವದ ಕಾರ್ಯಸೂಚಿಯನ್ನು ಪೂರೈಸಲು ತಮ್ಮ ದ್ವೇಷದ ಯಂತ್ರವನ್ನು ಸಕ್ರಿಯಗೊಳಿಸಿದರು.

NRC ಮತ್ತು NRCಯ ಫ್ಯಾಂಟಮ್ ಅನ್ನು COVID-19 ಮತ್ತು ಲಾಕ್‌ಡೌನ್‌ಗಳಿಂದ ಮರೆಮಾಡಲಾಗಿದೆ. ಕೊರೊನಾ ಎರಡನೇ ಅಲೆಯ ಸಮಯದಲ್ಲಿ, ಹಾಸಿಗೆಗಳು ಮತ್ತು ಆಮ್ಲಜನಕದ ಕೊರತೆಯಿಂದ ರಾಜ್ಯದಲ್ಲಿ ಜನರು ಸಾಯುತ್ತಿರುವಾಗ, ಹಲವಾರು ಬಿಜೆಪಿ ಶಾಸಕರು ಆದಿತ್ಯನಾಥ್ ಅವರನ್ನು ಟೀಕಿಸಿದರು. ಅವರು ದಂತಗೋಪುರದಲ್ಲಿ ಕುಳಿತು ಸಾಮಾನ್ಯರ ನೋವನ್ನು ಆಲಿಸುತ್ತಿಲ್ಲ, ಸ್ಪಂದಿಸುತ್ತಿಲ್ಲ ಎಂದು ಬಿಜೆಪಿಗರೇ ಆಕ್ರೋಶ ವ್ಯಕ್ತಪಡಿಸಿದರು.

ಕೋವಿಡ್-19 ಸಂತ್ರಸ್ತರ ಶವಗಳನ್ನು ಗಂಗಾನದಿಯಲ್ಲಿ ತೇಲಿಬಿಡಲಾಯಿತು, ಮೃತ ದೇಹಗಳ ಗೌರವಯುವ ಶವಸಂಸ್ಕಾರವನ್ನು ನಿರಾಕರಿಸಲಾಯಿತು. ಪಂಚಾಯತ್ ಚುನಾವಣಾ ಕರ್ತವ್ಯದ ವೇಳೆ ಸೋಂಕಿಗೆ ಒಳಗಾಗಿ ಸಾವನ್ನಪ್ಪಿದ ಸರ್ಕಾರಿ ಶಾಲಾ ಶಿಕ್ಷಕರ ಕುಟುಂಬಗಳಿಗೆ ಸರಿಯಾದ ರೀತಿಯಲ್ಲಿ ಪರಿಹಾರವೂ ದೊರೆಯಲಿಲ್ಲ ಎಂಬುದು ಮತ್ತಷ್ಟು ಆಕ್ರೋಶಕ್ಕೆ ಕಾರಣವಾಗಿಯಿತು. ಇದು ಅವರ ಇಮೇಜ್‌ ಮತ್ತಷ್ಟು ಕುಗ್ಗಲು ಕಾರಣವಾಯಿತು.

ನಂತರ ಯುಪಿ ಗ್ಯಾಂಗ್‌ಸ್ಟರ್ ವಿಕಾಸ್ ದುಬೆಯ ಎನ್‌ಕೌಂಟರ್, ಹತ್ರಾಸ್ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಹಾಗೂ ಪತ್ರಕರ್ತರ ವಿರುದ್ಧದ ಯುಎಪಿಎ ಅಡಿಯಲ್ಲಿ ದಾಖಲಾದ ಪ್ರಕರಣಗಳು ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯಲ್ಲಿನ ಸಮಸ್ಯೆಯನ್ನು ಬಿಚ್ಚಿಟ್ಟವು.

ಹೆಚ್ಚುತ್ತಿರುವ ನಿರುದ್ಯೋಗ, ಅಪೌಷ್ಟಿಕತೆ, ಶಾಲೆ ತೊರೆಯುವಿಕೆ ಮತ್ತು ಅಪರಾಧ, ಗೋಧಿ ಮತ್ತು ಭತ್ತ ಸಂಗ್ರಹಣೆಯಲ್ಲಿ ಗುರಿಗಳನ್ನು ತಲುಪದ ಅಂಕಿಅಂಶಗಳು, ದೇವಸ್ಥಾನಗಳಿಗೆ ಸಾರ್ವಜನಿಕ ಹಣವನ್ನು ಖರ್ಚು ಮಾಡುವ ಆದ್ಯತೆ, ರಾಜಕೀಯ ಉದ್ದೇಶಗಳಿಗಾಗಿ ಮುಸ್ಲಿಮರನ್ನು ಗುರಿಯಾಗಿಸುವುದು, ಭ್ರಷ್ಟಾಚಾರ, ಅತಿರೇಕದ ಜಾತೀಯತೆ, ಅಕ್ರಮ ಗಣಿಗಾರಿಕೆ ಮತ್ತು ಈಡೇರದ ಭರವಸೆಗಳ ಪಟ್ಟಿಗಳು ರಾಜ್ಯದಲ್ಲಿ ಯೋಗಿ ಮತ್ತು ಬಿಜೆಪಿ ವಿರೋಧಿ ಅಲೆಯನ್ನು ಹೆಚ್ಚಿಸಿದೆ.

ದಲಿತರು ಮತ್ತು ಇತರ ಹಿಂದುಳಿದ ವರ್ಗ (ಒಬಿಸಿ)ಗಳ ನಿರ್ಲಕ್ಷ್ಯದಿಂದಾಗಿ ಸ್ವಾಮಿ ಪ್ರಸಾದ್ ಮೌರ್ಯ, ದಾರಾ ಸಿಂಗ್ ಚೌಹಾಣ್ ಮತ್ತು ಧರಮ್ ಸಿಂಗ್ ಸೈನಿ ಅವರಂತಹ ಮಂತ್ರಿಗಳು ಮತ್ತು ನಾಯಕರು ಬಿಜೆಪಿಯನ್ನು ತೊರೆದು ಉತ್ತರ ಪ್ರದೇಶದಲ್ಲಿ ಬಿಜೆಪಿಯ ಪ್ರತಿಸ್ಪರ್ಧಿ ಸಮಾಜವಾದಿ ಪಕ್ಷಕ್ಕೆ (SP) ಸೇರಿದರು.

ಇದೆಲ್ಲದರ ಮಧ್ಯೆ, ಮುಂಬರುವ ವಿಧಾನಸಭಾ ಚುನಾವಣೆಯು “80% ವರ್ಸಸ್ 20% (ಮುಸ್ಲಿಮರ)” ನಡುವಿನ ಹೋರಾಟವಾಗಿದೆ ಎಂದು ಆದಿತ್ಯನಾಥ್ ಹೇಳಿಕೆ ನೀಡುವ ಮೂಲಕ ಕೋಮು ಭಾವನೆಗಳನ್ನು ಪ್ರಚೋದಿಸುತ್ತಿದ್ದಾರೆ

ಯುಪಿಯಲ್ಲಿ, ವಿಶೇಷವಾಗಿ ಎಸ್‌ಪಿ ಮತ್ತೆ ತನ್ನ ವರ್ಚಸ್ಸನ್ನು ವೃದ್ದಿಸಿಕೊಂಡು ಮುನ್ನೆಲೆಗೆ ಬರುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿಯು ಯಾವುದೇ ಚಾನ್ಸ್‌ ತೆಗೆದುಕೊಳ್ಳಲು ಬಯಸುವುದಿಲ್ಲ ಎಂಬುದು ಸ್ಪಷ್ಟವಾಗಿದೆ. ಪಕ್ಷವು ಯೋಗಿ ಅವರನ್ನು ಅವರ ತವರು ಗೋರಖ್‌ಪುರದಿಂದ ಕಣಕ್ಕಿಳಿಸಲು ನಿರ್ಧರಿಸಿದ್ದು, ಅವರು ಮಥುರಾ ಅಥವಾ ಅಯೋಧ್ಯೆಯಿಂದ ಸ್ಪರ್ಧಿಸುತ್ತಾರೆ ಎಂಬಊಹಾಪೋಹಕ್ಕೆ ತೆರೆ ಎಳೆದಿದೆ. ಆದಿತ್ಯನಾಥ್ ಅವರು ಯುಪಿಯಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವ ವಿಶ್ವಾಸವನ್ನು ಹೊಂದಿದ್ದರೂ, ಒಬ್ಬ ಮುಖ್ಯಮಂತ್ರಿಯ ಹುದ್ದೆಯನ್ನು ಉಳಿಸಿಕೊಳ್ಳುವ ಅವರ ಸಾಮರ್ಥ್ಯವು ಪ್ರಶ್ನಾರ್ಥವಾಗಿದೆ.


ಇದನ್ನೂ ಓದಿರಿ: ವಿಶ್ಲೇಷಣೆ: ಯುಪಿಯಲ್ಲಿ ಒಬಿಸಿ ನಾಯಕರು ಬಿಜೆಪಿ ತೊರೆಯುತ್ತಿರುವುದು ಏತಕ್ಕೆ? ಎಸ್‌ಪಿಗೆ ಗೆಲುವು ಸುಲಭವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...