Homeಕರ್ನಾಟಕಯುಪಿ: ಹಿಂದುತ್ವದ ಐಕಾನ್‌ ಆಗಿದ್ದ ಯೋಗಿ ತಮ್ಮ ಚರಿಷ್ಮಾ ಕಳೆದುಕೊಂಡಿದ್ದಾರಾ?

ಯುಪಿ: ಹಿಂದುತ್ವದ ಐಕಾನ್‌ ಆಗಿದ್ದ ಯೋಗಿ ತಮ್ಮ ಚರಿಷ್ಮಾ ಕಳೆದುಕೊಂಡಿದ್ದಾರಾ?

- Advertisement -
- Advertisement -

ಕೇಸರಿ ಧರಿಸಿದ ಯೋಗಿ ಆದಿತ್ಯನಾಥ್ ಅವರು ವ್ಯಾಪಾರ ಶೃಂಗಸಭೆಗಳು, ಅಂತರಾಷ್ಟ್ರೀಯ ಹೂಡಿಕೆಗಳು ಮತ್ತು ಎಂಒಯುಗಳ ಮೂಲಕ ಉತ್ತರ ಪ್ರದೇಶವನ್ನು “ಉತ್ತಮ ಪ್ರದೇಶ” ಎಂದು ಬಿಂಬಿಸಲು ಯತ್ನಿಸುತ್ತಿದ್ದ ಸಮಯವಿತ್ತು. ಅವರು ಉತ್ತರ ಪ್ರದೇಶವನ್ನು ಅತ್ಯಂತ ಫಲವತ್ತಾದ ಮತ್ತು ಆದ್ಯತೆಯ ತಾಣವೆಂದು ಅವರು ಹೇಳುತ್ತಿದ್ದರು.

ಕಾನೂನು ಮತ್ತು ಸುವ್ಯವಸ್ಥೆಗೆ ವಿಚಾರಕ್ಕೆ ಬಂದಾಗ ಆದಿತ್ಯನಾಥ್ ಅವರು ಕೇಂದ್ರ ಪ್ರಾಯೋಜಿತ ಯೋಜನೆಗಳಿಗೆ ಮಣೆ ಹಾಕುತ್ತಿದ್ದದ್ದು ಬಿಟ್ಟರೆ ಮತ್ತಾವುದೇ ಮಾರ್ಗವನ್ನು ಅನುಸರಿಸಿದ್ದು ಕಂಡುಬಂದಿಲ್ಲ. ಸದಾ “ಡಬಲ್ ಇಂಜಿನ್” ಸರ್ಕಾರದ ಬಗ್ಗೆ ಹೇಳಿಕೊಳ್ಳುತ್ತಾ ಅಧಿಕಾರಶಾಹಿಯನ್ನು ವಶದಲ್ಲಿಟ್ಟುಕೊಂಡು ರಾಜ್ಯಾಧಿಕಾರದ ಪಡಸಾಲೆಗೆ ಕಾಲಿಟ್ಟ ಗೋರಖನಾಥ ಮಠದ ಮುಖ್ಯಸ್ಥರು ನೀರಲ್ಲಿ ಬಾತುಕೋಳಿಯಂತೆ ಸಾಗಲು ಆರಂಭಿಸಿದರಷ್ಟೇ.

ಇಡೀ ರಾಜ್ಯದ ಪ್ರಚಾರ ಯಂತ್ರವನ್ನು ಒಂದು ಉದ್ದೇಶಕ್ಕೆ ಬಳಸಲಾಗುತ್ತಿದೆ: ಪ್ರಾಜೆಕ್ಟ್ ಬ್ರ್ಯಾಂಡ್ ಯೋಗಿ. ಪೋಸ್ಟರ್‌ಗಳು, ಜಾಹೀರಾತು ಫಲಕಗಳು ಮತ್ತು ಹೋರ್ಡಿಂಗ್‌ಗಳು ಕೇವಲ ಒಬ್ಬ ವ್ಯಕ್ತಿಯ ಚಿತ್ರದೊಂದಿಗೆ ಮಿನುಗುತ್ತಿವೆ. ಅವರ ಪ್ರಚಾರವು ಎಷ್ಟು ಅಸೂಯೆ ಹುಟ್ಟಿಸಿತ್ತು ಎಂದರೆ, ಇತರ ಬಿಜೆಪಿ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು ಅವರ ಶೈಲಿ, ನಡವಳಿಕೆ ಮತ್ತು ಪ್ರಚಾರದ ಸಾಹಸಗಳನ್ನು ಅನುಕರಿಸಲು ಬಯಸಿದ್ದರು.

ಆದಿತ್ಯನಾಥ್ ಅವರು ಸಂಘದ ಸಂತೋಷಕ್ಕಾಗಿ ಹೆಚ್ಚು ಸ್ಟಾರ್ ಇಮೇಜ್ ಬೆಳೆಸಿಕೊಂಡರು. ಯುಪಿಯ ಹೊರಗಿದ್ದರೂ ಅವರು ಬ್ರ್ಯಾಂಡ್ ಆದರು; ಜನಪ್ರಿಯತೆಯನ್ನು ಗಿಟ್ಟಿಸಿಕೊಳ್ಳುವ ನಿಟ್ಟಿನಲ್ಲಿ ಅವರು ಪ್ರಧಾನಿ ನರೇಂದ್ರ ಮೋದಿಯವರ ಪಕ್ಕದಲ್ಲಿ ಎರಡನೇ ಸ್ಥಾನದಲ್ಲಿ ಕಾಣಿಸಿಕೊಂಡರು. ಬಿಜೆಪಿ ನಾಯಕರು ಆದಿತ್ಯನಾಥ್ ಅವರನ್ನು 2024ರಲ್ಲಿ ಮೋದಿಯನ್ನು ಬದಲಿಸುವ ನಿರೀಕ್ಷಿತ ಪ್ರಧಾನಿ ಎಂದು ಶ್ಲಾಘಿಸಲು ಪ್ರಾರಂಭಿಸಿದರು.

ಆದಿತ್ಯನಾಥ್ ಅವರ ಆಡಂಬರವು ಅಲ್ಪಕಾಲಿಕವಾಗಿತ್ತು: ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮತ್ತು ಪೌರತ್ವ (ತಿದ್ದುಪಡಿ) ಕಾಯಿದೆ-2019 (ಸಿಎಎ) ವಿರುದ್ಧ ನಡೆದ ಪ್ರತಿಭಟನೆಗಳು ಅವರ ಸರ್ಕಾರದ ಅಮಾನವೀಯತೆಯನ್ನು ಬಹಿರಂಗಪಡಿಸಿದವು. ಯುಪಿ ಸರ್ಕಾರವು ಮುಸ್ಲಿಮರ ಮೇಲೆ ವಿವೇಚನಾರಹಿತ ಶಕ್ತಿಯನ್ನು ಪ್ರಯೋಗಿಸಿತು. ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿಂದುತ್ವದ ಕಾರ್ಯಸೂಚಿಯನ್ನು ಪೂರೈಸಲು ತಮ್ಮ ದ್ವೇಷದ ಯಂತ್ರವನ್ನು ಸಕ್ರಿಯಗೊಳಿಸಿದರು.

NRC ಮತ್ತು NRCಯ ಫ್ಯಾಂಟಮ್ ಅನ್ನು COVID-19 ಮತ್ತು ಲಾಕ್‌ಡೌನ್‌ಗಳಿಂದ ಮರೆಮಾಡಲಾಗಿದೆ. ಕೊರೊನಾ ಎರಡನೇ ಅಲೆಯ ಸಮಯದಲ್ಲಿ, ಹಾಸಿಗೆಗಳು ಮತ್ತು ಆಮ್ಲಜನಕದ ಕೊರತೆಯಿಂದ ರಾಜ್ಯದಲ್ಲಿ ಜನರು ಸಾಯುತ್ತಿರುವಾಗ, ಹಲವಾರು ಬಿಜೆಪಿ ಶಾಸಕರು ಆದಿತ್ಯನಾಥ್ ಅವರನ್ನು ಟೀಕಿಸಿದರು. ಅವರು ದಂತಗೋಪುರದಲ್ಲಿ ಕುಳಿತು ಸಾಮಾನ್ಯರ ನೋವನ್ನು ಆಲಿಸುತ್ತಿಲ್ಲ, ಸ್ಪಂದಿಸುತ್ತಿಲ್ಲ ಎಂದು ಬಿಜೆಪಿಗರೇ ಆಕ್ರೋಶ ವ್ಯಕ್ತಪಡಿಸಿದರು.

ಕೋವಿಡ್-19 ಸಂತ್ರಸ್ತರ ಶವಗಳನ್ನು ಗಂಗಾನದಿಯಲ್ಲಿ ತೇಲಿಬಿಡಲಾಯಿತು, ಮೃತ ದೇಹಗಳ ಗೌರವಯುವ ಶವಸಂಸ್ಕಾರವನ್ನು ನಿರಾಕರಿಸಲಾಯಿತು. ಪಂಚಾಯತ್ ಚುನಾವಣಾ ಕರ್ತವ್ಯದ ವೇಳೆ ಸೋಂಕಿಗೆ ಒಳಗಾಗಿ ಸಾವನ್ನಪ್ಪಿದ ಸರ್ಕಾರಿ ಶಾಲಾ ಶಿಕ್ಷಕರ ಕುಟುಂಬಗಳಿಗೆ ಸರಿಯಾದ ರೀತಿಯಲ್ಲಿ ಪರಿಹಾರವೂ ದೊರೆಯಲಿಲ್ಲ ಎಂಬುದು ಮತ್ತಷ್ಟು ಆಕ್ರೋಶಕ್ಕೆ ಕಾರಣವಾಗಿಯಿತು. ಇದು ಅವರ ಇಮೇಜ್‌ ಮತ್ತಷ್ಟು ಕುಗ್ಗಲು ಕಾರಣವಾಯಿತು.

ನಂತರ ಯುಪಿ ಗ್ಯಾಂಗ್‌ಸ್ಟರ್ ವಿಕಾಸ್ ದುಬೆಯ ಎನ್‌ಕೌಂಟರ್, ಹತ್ರಾಸ್ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಹಾಗೂ ಪತ್ರಕರ್ತರ ವಿರುದ್ಧದ ಯುಎಪಿಎ ಅಡಿಯಲ್ಲಿ ದಾಖಲಾದ ಪ್ರಕರಣಗಳು ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯಲ್ಲಿನ ಸಮಸ್ಯೆಯನ್ನು ಬಿಚ್ಚಿಟ್ಟವು.

ಹೆಚ್ಚುತ್ತಿರುವ ನಿರುದ್ಯೋಗ, ಅಪೌಷ್ಟಿಕತೆ, ಶಾಲೆ ತೊರೆಯುವಿಕೆ ಮತ್ತು ಅಪರಾಧ, ಗೋಧಿ ಮತ್ತು ಭತ್ತ ಸಂಗ್ರಹಣೆಯಲ್ಲಿ ಗುರಿಗಳನ್ನು ತಲುಪದ ಅಂಕಿಅಂಶಗಳು, ದೇವಸ್ಥಾನಗಳಿಗೆ ಸಾರ್ವಜನಿಕ ಹಣವನ್ನು ಖರ್ಚು ಮಾಡುವ ಆದ್ಯತೆ, ರಾಜಕೀಯ ಉದ್ದೇಶಗಳಿಗಾಗಿ ಮುಸ್ಲಿಮರನ್ನು ಗುರಿಯಾಗಿಸುವುದು, ಭ್ರಷ್ಟಾಚಾರ, ಅತಿರೇಕದ ಜಾತೀಯತೆ, ಅಕ್ರಮ ಗಣಿಗಾರಿಕೆ ಮತ್ತು ಈಡೇರದ ಭರವಸೆಗಳ ಪಟ್ಟಿಗಳು ರಾಜ್ಯದಲ್ಲಿ ಯೋಗಿ ಮತ್ತು ಬಿಜೆಪಿ ವಿರೋಧಿ ಅಲೆಯನ್ನು ಹೆಚ್ಚಿಸಿದೆ.

ದಲಿತರು ಮತ್ತು ಇತರ ಹಿಂದುಳಿದ ವರ್ಗ (ಒಬಿಸಿ)ಗಳ ನಿರ್ಲಕ್ಷ್ಯದಿಂದಾಗಿ ಸ್ವಾಮಿ ಪ್ರಸಾದ್ ಮೌರ್ಯ, ದಾರಾ ಸಿಂಗ್ ಚೌಹಾಣ್ ಮತ್ತು ಧರಮ್ ಸಿಂಗ್ ಸೈನಿ ಅವರಂತಹ ಮಂತ್ರಿಗಳು ಮತ್ತು ನಾಯಕರು ಬಿಜೆಪಿಯನ್ನು ತೊರೆದು ಉತ್ತರ ಪ್ರದೇಶದಲ್ಲಿ ಬಿಜೆಪಿಯ ಪ್ರತಿಸ್ಪರ್ಧಿ ಸಮಾಜವಾದಿ ಪಕ್ಷಕ್ಕೆ (SP) ಸೇರಿದರು.

ಇದೆಲ್ಲದರ ಮಧ್ಯೆ, ಮುಂಬರುವ ವಿಧಾನಸಭಾ ಚುನಾವಣೆಯು “80% ವರ್ಸಸ್ 20% (ಮುಸ್ಲಿಮರ)” ನಡುವಿನ ಹೋರಾಟವಾಗಿದೆ ಎಂದು ಆದಿತ್ಯನಾಥ್ ಹೇಳಿಕೆ ನೀಡುವ ಮೂಲಕ ಕೋಮು ಭಾವನೆಗಳನ್ನು ಪ್ರಚೋದಿಸುತ್ತಿದ್ದಾರೆ

ಯುಪಿಯಲ್ಲಿ, ವಿಶೇಷವಾಗಿ ಎಸ್‌ಪಿ ಮತ್ತೆ ತನ್ನ ವರ್ಚಸ್ಸನ್ನು ವೃದ್ದಿಸಿಕೊಂಡು ಮುನ್ನೆಲೆಗೆ ಬರುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿಯು ಯಾವುದೇ ಚಾನ್ಸ್‌ ತೆಗೆದುಕೊಳ್ಳಲು ಬಯಸುವುದಿಲ್ಲ ಎಂಬುದು ಸ್ಪಷ್ಟವಾಗಿದೆ. ಪಕ್ಷವು ಯೋಗಿ ಅವರನ್ನು ಅವರ ತವರು ಗೋರಖ್‌ಪುರದಿಂದ ಕಣಕ್ಕಿಳಿಸಲು ನಿರ್ಧರಿಸಿದ್ದು, ಅವರು ಮಥುರಾ ಅಥವಾ ಅಯೋಧ್ಯೆಯಿಂದ ಸ್ಪರ್ಧಿಸುತ್ತಾರೆ ಎಂಬಊಹಾಪೋಹಕ್ಕೆ ತೆರೆ ಎಳೆದಿದೆ. ಆದಿತ್ಯನಾಥ್ ಅವರು ಯುಪಿಯಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವ ವಿಶ್ವಾಸವನ್ನು ಹೊಂದಿದ್ದರೂ, ಒಬ್ಬ ಮುಖ್ಯಮಂತ್ರಿಯ ಹುದ್ದೆಯನ್ನು ಉಳಿಸಿಕೊಳ್ಳುವ ಅವರ ಸಾಮರ್ಥ್ಯವು ಪ್ರಶ್ನಾರ್ಥವಾಗಿದೆ.


ಇದನ್ನೂ ಓದಿರಿ: ವಿಶ್ಲೇಷಣೆ: ಯುಪಿಯಲ್ಲಿ ಒಬಿಸಿ ನಾಯಕರು ಬಿಜೆಪಿ ತೊರೆಯುತ್ತಿರುವುದು ಏತಕ್ಕೆ? ಎಸ್‌ಪಿಗೆ ಗೆಲುವು ಸುಲಭವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...

ಮುಂಬೈ: 2 ದಿನಗಳಿಂದ ಹೊತ್ತಿ ಉರಿಯುತ್ತಿರುವ ಪೊವೈ ಬೆಟ್ಟಗಳು: ನಿವಾಸಿಗಳಿಂದ ಅಧಿಕಾರಿಗಳ ನಿಷ್ಕ್ರಿಯತೆಯ ಆರೋಪ 

ಮುಂಬೈನ ಪೊವೈ ಬೆಟ್ಟಗಳ ಪ್ರದೇಶದಲ್ಲಿ ಸಂಭವಿಸಿದ ಬೆಂಕಿ ಕಳೆದ ಎರಡು ದಿನಗಳಿಂದ ಉರಿಯುತ್ತಿದೆ ಎಂದು ವರದಿಯಾಗಿದೆ. ನಿವಾಸಿಗಳು ಬೆಂಕಿಯ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ ಮತ್ತು ನಾಗರಿಕ ಅಧಿಕಾರಿಗಳಿಂದ ಯಾವುದೇ ಪ್ರತಿಕ್ರಿಯೆಯು ಸಿಕ್ಕಿಲ್ಲ...

‘ದಲಿತ ಕ್ರೈಸ್ತ’ರನ್ನು ಪರಿಶಿಷ್ಟ ಜಾತಿ ಎಂದು ಗುರುತಿಸಬೇಕು: ಮಾನವ ಹಕ್ಕುಗಳ ಕಾರ್ಯಕರ್ತ ವಿನ್ಸೆಂಟ್ ಕಥಿರ್

"ದಲಿತ ಕ್ರೈಸ್ತರನ್ನು ಪರಿಶಿಷ್ಟ ಜಾತಿ ಎಂದು ಗುರುತಿಸಬೇಕು, ಇದರಿಂದಾಗಿ ಜಾತಿ ಹಿಂಸಾಚಾರದ ಬಲಿಪಶುಗಳು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ನಿಬಂಧನೆಗಳ ಪ್ರಕಾರ ಸರ್ಕಾರದಿಂದ ಪರಿಹಾರವನ್ನು ಪಡೆಯಬಹುದು" ಎಂದು ಮಾನವ ಹಕ್ಕುಗಳ ಕಾರ್ಯಕರ್ತ ಹಾಗೂ...

ಪಶ್ಚಿಮ ಏಷ್ಯಾ ಬಿಕ್ಕಟ್ಟು : ಇರಾನ್ ವಿದೇಶಾಂಗ ಸಚಿವರ ಜೊತೆ ಜೈಶಂಕರ್ ಚರ್ಚೆ

ಭಾರತದ ವಿದೇಶಾಂಗ ಸಚಿವ ಎಸ್‌. ಜೈಶಂಕರ್ ಅವರು ಇರಾನ್ ವಿದೇಶಾಂಗ ಸಚಿವ ಸಯ್ಯದ್ ಅಬ್ಬಾಸ್ ಅರಘ್ಚಿ ಅವರೊಂದಿಗೆ ಮಂಗಳವಾರ (ಮಾ.10) ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ಈ ವೇಳೆ ಪಶ್ಚಿಮ ಏಷ್ಯಾದ ಬೆಳವಣಿಗೆಗಳು...