Homeಕರ್ನಾಟಕಯುಪಿ: ಹಿಂದುತ್ವದ ಐಕಾನ್‌ ಆಗಿದ್ದ ಯೋಗಿ ತಮ್ಮ ಚರಿಷ್ಮಾ ಕಳೆದುಕೊಂಡಿದ್ದಾರಾ?

ಯುಪಿ: ಹಿಂದುತ್ವದ ಐಕಾನ್‌ ಆಗಿದ್ದ ಯೋಗಿ ತಮ್ಮ ಚರಿಷ್ಮಾ ಕಳೆದುಕೊಂಡಿದ್ದಾರಾ?

- Advertisement -
- Advertisement -

ಕೇಸರಿ ಧರಿಸಿದ ಯೋಗಿ ಆದಿತ್ಯನಾಥ್ ಅವರು ವ್ಯಾಪಾರ ಶೃಂಗಸಭೆಗಳು, ಅಂತರಾಷ್ಟ್ರೀಯ ಹೂಡಿಕೆಗಳು ಮತ್ತು ಎಂಒಯುಗಳ ಮೂಲಕ ಉತ್ತರ ಪ್ರದೇಶವನ್ನು “ಉತ್ತಮ ಪ್ರದೇಶ” ಎಂದು ಬಿಂಬಿಸಲು ಯತ್ನಿಸುತ್ತಿದ್ದ ಸಮಯವಿತ್ತು. ಅವರು ಉತ್ತರ ಪ್ರದೇಶವನ್ನು ಅತ್ಯಂತ ಫಲವತ್ತಾದ ಮತ್ತು ಆದ್ಯತೆಯ ತಾಣವೆಂದು ಅವರು ಹೇಳುತ್ತಿದ್ದರು.

ಕಾನೂನು ಮತ್ತು ಸುವ್ಯವಸ್ಥೆಗೆ ವಿಚಾರಕ್ಕೆ ಬಂದಾಗ ಆದಿತ್ಯನಾಥ್ ಅವರು ಕೇಂದ್ರ ಪ್ರಾಯೋಜಿತ ಯೋಜನೆಗಳಿಗೆ ಮಣೆ ಹಾಕುತ್ತಿದ್ದದ್ದು ಬಿಟ್ಟರೆ ಮತ್ತಾವುದೇ ಮಾರ್ಗವನ್ನು ಅನುಸರಿಸಿದ್ದು ಕಂಡುಬಂದಿಲ್ಲ. ಸದಾ “ಡಬಲ್ ಇಂಜಿನ್” ಸರ್ಕಾರದ ಬಗ್ಗೆ ಹೇಳಿಕೊಳ್ಳುತ್ತಾ ಅಧಿಕಾರಶಾಹಿಯನ್ನು ವಶದಲ್ಲಿಟ್ಟುಕೊಂಡು ರಾಜ್ಯಾಧಿಕಾರದ ಪಡಸಾಲೆಗೆ ಕಾಲಿಟ್ಟ ಗೋರಖನಾಥ ಮಠದ ಮುಖ್ಯಸ್ಥರು ನೀರಲ್ಲಿ ಬಾತುಕೋಳಿಯಂತೆ ಸಾಗಲು ಆರಂಭಿಸಿದರಷ್ಟೇ.

ಇಡೀ ರಾಜ್ಯದ ಪ್ರಚಾರ ಯಂತ್ರವನ್ನು ಒಂದು ಉದ್ದೇಶಕ್ಕೆ ಬಳಸಲಾಗುತ್ತಿದೆ: ಪ್ರಾಜೆಕ್ಟ್ ಬ್ರ್ಯಾಂಡ್ ಯೋಗಿ. ಪೋಸ್ಟರ್‌ಗಳು, ಜಾಹೀರಾತು ಫಲಕಗಳು ಮತ್ತು ಹೋರ್ಡಿಂಗ್‌ಗಳು ಕೇವಲ ಒಬ್ಬ ವ್ಯಕ್ತಿಯ ಚಿತ್ರದೊಂದಿಗೆ ಮಿನುಗುತ್ತಿವೆ. ಅವರ ಪ್ರಚಾರವು ಎಷ್ಟು ಅಸೂಯೆ ಹುಟ್ಟಿಸಿತ್ತು ಎಂದರೆ, ಇತರ ಬಿಜೆಪಿ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು ಅವರ ಶೈಲಿ, ನಡವಳಿಕೆ ಮತ್ತು ಪ್ರಚಾರದ ಸಾಹಸಗಳನ್ನು ಅನುಕರಿಸಲು ಬಯಸಿದ್ದರು.

ಆದಿತ್ಯನಾಥ್ ಅವರು ಸಂಘದ ಸಂತೋಷಕ್ಕಾಗಿ ಹೆಚ್ಚು ಸ್ಟಾರ್ ಇಮೇಜ್ ಬೆಳೆಸಿಕೊಂಡರು. ಯುಪಿಯ ಹೊರಗಿದ್ದರೂ ಅವರು ಬ್ರ್ಯಾಂಡ್ ಆದರು; ಜನಪ್ರಿಯತೆಯನ್ನು ಗಿಟ್ಟಿಸಿಕೊಳ್ಳುವ ನಿಟ್ಟಿನಲ್ಲಿ ಅವರು ಪ್ರಧಾನಿ ನರೇಂದ್ರ ಮೋದಿಯವರ ಪಕ್ಕದಲ್ಲಿ ಎರಡನೇ ಸ್ಥಾನದಲ್ಲಿ ಕಾಣಿಸಿಕೊಂಡರು. ಬಿಜೆಪಿ ನಾಯಕರು ಆದಿತ್ಯನಾಥ್ ಅವರನ್ನು 2024ರಲ್ಲಿ ಮೋದಿಯನ್ನು ಬದಲಿಸುವ ನಿರೀಕ್ಷಿತ ಪ್ರಧಾನಿ ಎಂದು ಶ್ಲಾಘಿಸಲು ಪ್ರಾರಂಭಿಸಿದರು.

ಆದಿತ್ಯನಾಥ್ ಅವರ ಆಡಂಬರವು ಅಲ್ಪಕಾಲಿಕವಾಗಿತ್ತು: ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮತ್ತು ಪೌರತ್ವ (ತಿದ್ದುಪಡಿ) ಕಾಯಿದೆ-2019 (ಸಿಎಎ) ವಿರುದ್ಧ ನಡೆದ ಪ್ರತಿಭಟನೆಗಳು ಅವರ ಸರ್ಕಾರದ ಅಮಾನವೀಯತೆಯನ್ನು ಬಹಿರಂಗಪಡಿಸಿದವು. ಯುಪಿ ಸರ್ಕಾರವು ಮುಸ್ಲಿಮರ ಮೇಲೆ ವಿವೇಚನಾರಹಿತ ಶಕ್ತಿಯನ್ನು ಪ್ರಯೋಗಿಸಿತು. ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿಂದುತ್ವದ ಕಾರ್ಯಸೂಚಿಯನ್ನು ಪೂರೈಸಲು ತಮ್ಮ ದ್ವೇಷದ ಯಂತ್ರವನ್ನು ಸಕ್ರಿಯಗೊಳಿಸಿದರು.

NRC ಮತ್ತು NRCಯ ಫ್ಯಾಂಟಮ್ ಅನ್ನು COVID-19 ಮತ್ತು ಲಾಕ್‌ಡೌನ್‌ಗಳಿಂದ ಮರೆಮಾಡಲಾಗಿದೆ. ಕೊರೊನಾ ಎರಡನೇ ಅಲೆಯ ಸಮಯದಲ್ಲಿ, ಹಾಸಿಗೆಗಳು ಮತ್ತು ಆಮ್ಲಜನಕದ ಕೊರತೆಯಿಂದ ರಾಜ್ಯದಲ್ಲಿ ಜನರು ಸಾಯುತ್ತಿರುವಾಗ, ಹಲವಾರು ಬಿಜೆಪಿ ಶಾಸಕರು ಆದಿತ್ಯನಾಥ್ ಅವರನ್ನು ಟೀಕಿಸಿದರು. ಅವರು ದಂತಗೋಪುರದಲ್ಲಿ ಕುಳಿತು ಸಾಮಾನ್ಯರ ನೋವನ್ನು ಆಲಿಸುತ್ತಿಲ್ಲ, ಸ್ಪಂದಿಸುತ್ತಿಲ್ಲ ಎಂದು ಬಿಜೆಪಿಗರೇ ಆಕ್ರೋಶ ವ್ಯಕ್ತಪಡಿಸಿದರು.

ಕೋವಿಡ್-19 ಸಂತ್ರಸ್ತರ ಶವಗಳನ್ನು ಗಂಗಾನದಿಯಲ್ಲಿ ತೇಲಿಬಿಡಲಾಯಿತು, ಮೃತ ದೇಹಗಳ ಗೌರವಯುವ ಶವಸಂಸ್ಕಾರವನ್ನು ನಿರಾಕರಿಸಲಾಯಿತು. ಪಂಚಾಯತ್ ಚುನಾವಣಾ ಕರ್ತವ್ಯದ ವೇಳೆ ಸೋಂಕಿಗೆ ಒಳಗಾಗಿ ಸಾವನ್ನಪ್ಪಿದ ಸರ್ಕಾರಿ ಶಾಲಾ ಶಿಕ್ಷಕರ ಕುಟುಂಬಗಳಿಗೆ ಸರಿಯಾದ ರೀತಿಯಲ್ಲಿ ಪರಿಹಾರವೂ ದೊರೆಯಲಿಲ್ಲ ಎಂಬುದು ಮತ್ತಷ್ಟು ಆಕ್ರೋಶಕ್ಕೆ ಕಾರಣವಾಗಿಯಿತು. ಇದು ಅವರ ಇಮೇಜ್‌ ಮತ್ತಷ್ಟು ಕುಗ್ಗಲು ಕಾರಣವಾಯಿತು.

ನಂತರ ಯುಪಿ ಗ್ಯಾಂಗ್‌ಸ್ಟರ್ ವಿಕಾಸ್ ದುಬೆಯ ಎನ್‌ಕೌಂಟರ್, ಹತ್ರಾಸ್ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಹಾಗೂ ಪತ್ರಕರ್ತರ ವಿರುದ್ಧದ ಯುಎಪಿಎ ಅಡಿಯಲ್ಲಿ ದಾಖಲಾದ ಪ್ರಕರಣಗಳು ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯಲ್ಲಿನ ಸಮಸ್ಯೆಯನ್ನು ಬಿಚ್ಚಿಟ್ಟವು.

ಹೆಚ್ಚುತ್ತಿರುವ ನಿರುದ್ಯೋಗ, ಅಪೌಷ್ಟಿಕತೆ, ಶಾಲೆ ತೊರೆಯುವಿಕೆ ಮತ್ತು ಅಪರಾಧ, ಗೋಧಿ ಮತ್ತು ಭತ್ತ ಸಂಗ್ರಹಣೆಯಲ್ಲಿ ಗುರಿಗಳನ್ನು ತಲುಪದ ಅಂಕಿಅಂಶಗಳು, ದೇವಸ್ಥಾನಗಳಿಗೆ ಸಾರ್ವಜನಿಕ ಹಣವನ್ನು ಖರ್ಚು ಮಾಡುವ ಆದ್ಯತೆ, ರಾಜಕೀಯ ಉದ್ದೇಶಗಳಿಗಾಗಿ ಮುಸ್ಲಿಮರನ್ನು ಗುರಿಯಾಗಿಸುವುದು, ಭ್ರಷ್ಟಾಚಾರ, ಅತಿರೇಕದ ಜಾತೀಯತೆ, ಅಕ್ರಮ ಗಣಿಗಾರಿಕೆ ಮತ್ತು ಈಡೇರದ ಭರವಸೆಗಳ ಪಟ್ಟಿಗಳು ರಾಜ್ಯದಲ್ಲಿ ಯೋಗಿ ಮತ್ತು ಬಿಜೆಪಿ ವಿರೋಧಿ ಅಲೆಯನ್ನು ಹೆಚ್ಚಿಸಿದೆ.

ದಲಿತರು ಮತ್ತು ಇತರ ಹಿಂದುಳಿದ ವರ್ಗ (ಒಬಿಸಿ)ಗಳ ನಿರ್ಲಕ್ಷ್ಯದಿಂದಾಗಿ ಸ್ವಾಮಿ ಪ್ರಸಾದ್ ಮೌರ್ಯ, ದಾರಾ ಸಿಂಗ್ ಚೌಹಾಣ್ ಮತ್ತು ಧರಮ್ ಸಿಂಗ್ ಸೈನಿ ಅವರಂತಹ ಮಂತ್ರಿಗಳು ಮತ್ತು ನಾಯಕರು ಬಿಜೆಪಿಯನ್ನು ತೊರೆದು ಉತ್ತರ ಪ್ರದೇಶದಲ್ಲಿ ಬಿಜೆಪಿಯ ಪ್ರತಿಸ್ಪರ್ಧಿ ಸಮಾಜವಾದಿ ಪಕ್ಷಕ್ಕೆ (SP) ಸೇರಿದರು.

ಇದೆಲ್ಲದರ ಮಧ್ಯೆ, ಮುಂಬರುವ ವಿಧಾನಸಭಾ ಚುನಾವಣೆಯು “80% ವರ್ಸಸ್ 20% (ಮುಸ್ಲಿಮರ)” ನಡುವಿನ ಹೋರಾಟವಾಗಿದೆ ಎಂದು ಆದಿತ್ಯನಾಥ್ ಹೇಳಿಕೆ ನೀಡುವ ಮೂಲಕ ಕೋಮು ಭಾವನೆಗಳನ್ನು ಪ್ರಚೋದಿಸುತ್ತಿದ್ದಾರೆ

ಯುಪಿಯಲ್ಲಿ, ವಿಶೇಷವಾಗಿ ಎಸ್‌ಪಿ ಮತ್ತೆ ತನ್ನ ವರ್ಚಸ್ಸನ್ನು ವೃದ್ದಿಸಿಕೊಂಡು ಮುನ್ನೆಲೆಗೆ ಬರುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿಯು ಯಾವುದೇ ಚಾನ್ಸ್‌ ತೆಗೆದುಕೊಳ್ಳಲು ಬಯಸುವುದಿಲ್ಲ ಎಂಬುದು ಸ್ಪಷ್ಟವಾಗಿದೆ. ಪಕ್ಷವು ಯೋಗಿ ಅವರನ್ನು ಅವರ ತವರು ಗೋರಖ್‌ಪುರದಿಂದ ಕಣಕ್ಕಿಳಿಸಲು ನಿರ್ಧರಿಸಿದ್ದು, ಅವರು ಮಥುರಾ ಅಥವಾ ಅಯೋಧ್ಯೆಯಿಂದ ಸ್ಪರ್ಧಿಸುತ್ತಾರೆ ಎಂಬಊಹಾಪೋಹಕ್ಕೆ ತೆರೆ ಎಳೆದಿದೆ. ಆದಿತ್ಯನಾಥ್ ಅವರು ಯುಪಿಯಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವ ವಿಶ್ವಾಸವನ್ನು ಹೊಂದಿದ್ದರೂ, ಒಬ್ಬ ಮುಖ್ಯಮಂತ್ರಿಯ ಹುದ್ದೆಯನ್ನು ಉಳಿಸಿಕೊಳ್ಳುವ ಅವರ ಸಾಮರ್ಥ್ಯವು ಪ್ರಶ್ನಾರ್ಥವಾಗಿದೆ.


ಇದನ್ನೂ ಓದಿರಿ: ವಿಶ್ಲೇಷಣೆ: ಯುಪಿಯಲ್ಲಿ ಒಬಿಸಿ ನಾಯಕರು ಬಿಜೆಪಿ ತೊರೆಯುತ್ತಿರುವುದು ಏತಕ್ಕೆ? ಎಸ್‌ಪಿಗೆ ಗೆಲುವು ಸುಲಭವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...