Homeಕರ್ನಾಟಕಯುಪಿ: ಹಿಂದುತ್ವದ ಐಕಾನ್‌ ಆಗಿದ್ದ ಯೋಗಿ ತಮ್ಮ ಚರಿಷ್ಮಾ ಕಳೆದುಕೊಂಡಿದ್ದಾರಾ?

ಯುಪಿ: ಹಿಂದುತ್ವದ ಐಕಾನ್‌ ಆಗಿದ್ದ ಯೋಗಿ ತಮ್ಮ ಚರಿಷ್ಮಾ ಕಳೆದುಕೊಂಡಿದ್ದಾರಾ?

- Advertisement -
- Advertisement -

ಕೇಸರಿ ಧರಿಸಿದ ಯೋಗಿ ಆದಿತ್ಯನಾಥ್ ಅವರು ವ್ಯಾಪಾರ ಶೃಂಗಸಭೆಗಳು, ಅಂತರಾಷ್ಟ್ರೀಯ ಹೂಡಿಕೆಗಳು ಮತ್ತು ಎಂಒಯುಗಳ ಮೂಲಕ ಉತ್ತರ ಪ್ರದೇಶವನ್ನು “ಉತ್ತಮ ಪ್ರದೇಶ” ಎಂದು ಬಿಂಬಿಸಲು ಯತ್ನಿಸುತ್ತಿದ್ದ ಸಮಯವಿತ್ತು. ಅವರು ಉತ್ತರ ಪ್ರದೇಶವನ್ನು ಅತ್ಯಂತ ಫಲವತ್ತಾದ ಮತ್ತು ಆದ್ಯತೆಯ ತಾಣವೆಂದು ಅವರು ಹೇಳುತ್ತಿದ್ದರು.

ಕಾನೂನು ಮತ್ತು ಸುವ್ಯವಸ್ಥೆಗೆ ವಿಚಾರಕ್ಕೆ ಬಂದಾಗ ಆದಿತ್ಯನಾಥ್ ಅವರು ಕೇಂದ್ರ ಪ್ರಾಯೋಜಿತ ಯೋಜನೆಗಳಿಗೆ ಮಣೆ ಹಾಕುತ್ತಿದ್ದದ್ದು ಬಿಟ್ಟರೆ ಮತ್ತಾವುದೇ ಮಾರ್ಗವನ್ನು ಅನುಸರಿಸಿದ್ದು ಕಂಡುಬಂದಿಲ್ಲ. ಸದಾ “ಡಬಲ್ ಇಂಜಿನ್” ಸರ್ಕಾರದ ಬಗ್ಗೆ ಹೇಳಿಕೊಳ್ಳುತ್ತಾ ಅಧಿಕಾರಶಾಹಿಯನ್ನು ವಶದಲ್ಲಿಟ್ಟುಕೊಂಡು ರಾಜ್ಯಾಧಿಕಾರದ ಪಡಸಾಲೆಗೆ ಕಾಲಿಟ್ಟ ಗೋರಖನಾಥ ಮಠದ ಮುಖ್ಯಸ್ಥರು ನೀರಲ್ಲಿ ಬಾತುಕೋಳಿಯಂತೆ ಸಾಗಲು ಆರಂಭಿಸಿದರಷ್ಟೇ.

ಇಡೀ ರಾಜ್ಯದ ಪ್ರಚಾರ ಯಂತ್ರವನ್ನು ಒಂದು ಉದ್ದೇಶಕ್ಕೆ ಬಳಸಲಾಗುತ್ತಿದೆ: ಪ್ರಾಜೆಕ್ಟ್ ಬ್ರ್ಯಾಂಡ್ ಯೋಗಿ. ಪೋಸ್ಟರ್‌ಗಳು, ಜಾಹೀರಾತು ಫಲಕಗಳು ಮತ್ತು ಹೋರ್ಡಿಂಗ್‌ಗಳು ಕೇವಲ ಒಬ್ಬ ವ್ಯಕ್ತಿಯ ಚಿತ್ರದೊಂದಿಗೆ ಮಿನುಗುತ್ತಿವೆ. ಅವರ ಪ್ರಚಾರವು ಎಷ್ಟು ಅಸೂಯೆ ಹುಟ್ಟಿಸಿತ್ತು ಎಂದರೆ, ಇತರ ಬಿಜೆಪಿ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು ಅವರ ಶೈಲಿ, ನಡವಳಿಕೆ ಮತ್ತು ಪ್ರಚಾರದ ಸಾಹಸಗಳನ್ನು ಅನುಕರಿಸಲು ಬಯಸಿದ್ದರು.

ಆದಿತ್ಯನಾಥ್ ಅವರು ಸಂಘದ ಸಂತೋಷಕ್ಕಾಗಿ ಹೆಚ್ಚು ಸ್ಟಾರ್ ಇಮೇಜ್ ಬೆಳೆಸಿಕೊಂಡರು. ಯುಪಿಯ ಹೊರಗಿದ್ದರೂ ಅವರು ಬ್ರ್ಯಾಂಡ್ ಆದರು; ಜನಪ್ರಿಯತೆಯನ್ನು ಗಿಟ್ಟಿಸಿಕೊಳ್ಳುವ ನಿಟ್ಟಿನಲ್ಲಿ ಅವರು ಪ್ರಧಾನಿ ನರೇಂದ್ರ ಮೋದಿಯವರ ಪಕ್ಕದಲ್ಲಿ ಎರಡನೇ ಸ್ಥಾನದಲ್ಲಿ ಕಾಣಿಸಿಕೊಂಡರು. ಬಿಜೆಪಿ ನಾಯಕರು ಆದಿತ್ಯನಾಥ್ ಅವರನ್ನು 2024ರಲ್ಲಿ ಮೋದಿಯನ್ನು ಬದಲಿಸುವ ನಿರೀಕ್ಷಿತ ಪ್ರಧಾನಿ ಎಂದು ಶ್ಲಾಘಿಸಲು ಪ್ರಾರಂಭಿಸಿದರು.

ಆದಿತ್ಯನಾಥ್ ಅವರ ಆಡಂಬರವು ಅಲ್ಪಕಾಲಿಕವಾಗಿತ್ತು: ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮತ್ತು ಪೌರತ್ವ (ತಿದ್ದುಪಡಿ) ಕಾಯಿದೆ-2019 (ಸಿಎಎ) ವಿರುದ್ಧ ನಡೆದ ಪ್ರತಿಭಟನೆಗಳು ಅವರ ಸರ್ಕಾರದ ಅಮಾನವೀಯತೆಯನ್ನು ಬಹಿರಂಗಪಡಿಸಿದವು. ಯುಪಿ ಸರ್ಕಾರವು ಮುಸ್ಲಿಮರ ಮೇಲೆ ವಿವೇಚನಾರಹಿತ ಶಕ್ತಿಯನ್ನು ಪ್ರಯೋಗಿಸಿತು. ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿಂದುತ್ವದ ಕಾರ್ಯಸೂಚಿಯನ್ನು ಪೂರೈಸಲು ತಮ್ಮ ದ್ವೇಷದ ಯಂತ್ರವನ್ನು ಸಕ್ರಿಯಗೊಳಿಸಿದರು.

NRC ಮತ್ತು NRCಯ ಫ್ಯಾಂಟಮ್ ಅನ್ನು COVID-19 ಮತ್ತು ಲಾಕ್‌ಡೌನ್‌ಗಳಿಂದ ಮರೆಮಾಡಲಾಗಿದೆ. ಕೊರೊನಾ ಎರಡನೇ ಅಲೆಯ ಸಮಯದಲ್ಲಿ, ಹಾಸಿಗೆಗಳು ಮತ್ತು ಆಮ್ಲಜನಕದ ಕೊರತೆಯಿಂದ ರಾಜ್ಯದಲ್ಲಿ ಜನರು ಸಾಯುತ್ತಿರುವಾಗ, ಹಲವಾರು ಬಿಜೆಪಿ ಶಾಸಕರು ಆದಿತ್ಯನಾಥ್ ಅವರನ್ನು ಟೀಕಿಸಿದರು. ಅವರು ದಂತಗೋಪುರದಲ್ಲಿ ಕುಳಿತು ಸಾಮಾನ್ಯರ ನೋವನ್ನು ಆಲಿಸುತ್ತಿಲ್ಲ, ಸ್ಪಂದಿಸುತ್ತಿಲ್ಲ ಎಂದು ಬಿಜೆಪಿಗರೇ ಆಕ್ರೋಶ ವ್ಯಕ್ತಪಡಿಸಿದರು.

ಕೋವಿಡ್-19 ಸಂತ್ರಸ್ತರ ಶವಗಳನ್ನು ಗಂಗಾನದಿಯಲ್ಲಿ ತೇಲಿಬಿಡಲಾಯಿತು, ಮೃತ ದೇಹಗಳ ಗೌರವಯುವ ಶವಸಂಸ್ಕಾರವನ್ನು ನಿರಾಕರಿಸಲಾಯಿತು. ಪಂಚಾಯತ್ ಚುನಾವಣಾ ಕರ್ತವ್ಯದ ವೇಳೆ ಸೋಂಕಿಗೆ ಒಳಗಾಗಿ ಸಾವನ್ನಪ್ಪಿದ ಸರ್ಕಾರಿ ಶಾಲಾ ಶಿಕ್ಷಕರ ಕುಟುಂಬಗಳಿಗೆ ಸರಿಯಾದ ರೀತಿಯಲ್ಲಿ ಪರಿಹಾರವೂ ದೊರೆಯಲಿಲ್ಲ ಎಂಬುದು ಮತ್ತಷ್ಟು ಆಕ್ರೋಶಕ್ಕೆ ಕಾರಣವಾಗಿಯಿತು. ಇದು ಅವರ ಇಮೇಜ್‌ ಮತ್ತಷ್ಟು ಕುಗ್ಗಲು ಕಾರಣವಾಯಿತು.

ನಂತರ ಯುಪಿ ಗ್ಯಾಂಗ್‌ಸ್ಟರ್ ವಿಕಾಸ್ ದುಬೆಯ ಎನ್‌ಕೌಂಟರ್, ಹತ್ರಾಸ್ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಹಾಗೂ ಪತ್ರಕರ್ತರ ವಿರುದ್ಧದ ಯುಎಪಿಎ ಅಡಿಯಲ್ಲಿ ದಾಖಲಾದ ಪ್ರಕರಣಗಳು ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯಲ್ಲಿನ ಸಮಸ್ಯೆಯನ್ನು ಬಿಚ್ಚಿಟ್ಟವು.

ಹೆಚ್ಚುತ್ತಿರುವ ನಿರುದ್ಯೋಗ, ಅಪೌಷ್ಟಿಕತೆ, ಶಾಲೆ ತೊರೆಯುವಿಕೆ ಮತ್ತು ಅಪರಾಧ, ಗೋಧಿ ಮತ್ತು ಭತ್ತ ಸಂಗ್ರಹಣೆಯಲ್ಲಿ ಗುರಿಗಳನ್ನು ತಲುಪದ ಅಂಕಿಅಂಶಗಳು, ದೇವಸ್ಥಾನಗಳಿಗೆ ಸಾರ್ವಜನಿಕ ಹಣವನ್ನು ಖರ್ಚು ಮಾಡುವ ಆದ್ಯತೆ, ರಾಜಕೀಯ ಉದ್ದೇಶಗಳಿಗಾಗಿ ಮುಸ್ಲಿಮರನ್ನು ಗುರಿಯಾಗಿಸುವುದು, ಭ್ರಷ್ಟಾಚಾರ, ಅತಿರೇಕದ ಜಾತೀಯತೆ, ಅಕ್ರಮ ಗಣಿಗಾರಿಕೆ ಮತ್ತು ಈಡೇರದ ಭರವಸೆಗಳ ಪಟ್ಟಿಗಳು ರಾಜ್ಯದಲ್ಲಿ ಯೋಗಿ ಮತ್ತು ಬಿಜೆಪಿ ವಿರೋಧಿ ಅಲೆಯನ್ನು ಹೆಚ್ಚಿಸಿದೆ.

ದಲಿತರು ಮತ್ತು ಇತರ ಹಿಂದುಳಿದ ವರ್ಗ (ಒಬಿಸಿ)ಗಳ ನಿರ್ಲಕ್ಷ್ಯದಿಂದಾಗಿ ಸ್ವಾಮಿ ಪ್ರಸಾದ್ ಮೌರ್ಯ, ದಾರಾ ಸಿಂಗ್ ಚೌಹಾಣ್ ಮತ್ತು ಧರಮ್ ಸಿಂಗ್ ಸೈನಿ ಅವರಂತಹ ಮಂತ್ರಿಗಳು ಮತ್ತು ನಾಯಕರು ಬಿಜೆಪಿಯನ್ನು ತೊರೆದು ಉತ್ತರ ಪ್ರದೇಶದಲ್ಲಿ ಬಿಜೆಪಿಯ ಪ್ರತಿಸ್ಪರ್ಧಿ ಸಮಾಜವಾದಿ ಪಕ್ಷಕ್ಕೆ (SP) ಸೇರಿದರು.

ಇದೆಲ್ಲದರ ಮಧ್ಯೆ, ಮುಂಬರುವ ವಿಧಾನಸಭಾ ಚುನಾವಣೆಯು “80% ವರ್ಸಸ್ 20% (ಮುಸ್ಲಿಮರ)” ನಡುವಿನ ಹೋರಾಟವಾಗಿದೆ ಎಂದು ಆದಿತ್ಯನಾಥ್ ಹೇಳಿಕೆ ನೀಡುವ ಮೂಲಕ ಕೋಮು ಭಾವನೆಗಳನ್ನು ಪ್ರಚೋದಿಸುತ್ತಿದ್ದಾರೆ

ಯುಪಿಯಲ್ಲಿ, ವಿಶೇಷವಾಗಿ ಎಸ್‌ಪಿ ಮತ್ತೆ ತನ್ನ ವರ್ಚಸ್ಸನ್ನು ವೃದ್ದಿಸಿಕೊಂಡು ಮುನ್ನೆಲೆಗೆ ಬರುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿಯು ಯಾವುದೇ ಚಾನ್ಸ್‌ ತೆಗೆದುಕೊಳ್ಳಲು ಬಯಸುವುದಿಲ್ಲ ಎಂಬುದು ಸ್ಪಷ್ಟವಾಗಿದೆ. ಪಕ್ಷವು ಯೋಗಿ ಅವರನ್ನು ಅವರ ತವರು ಗೋರಖ್‌ಪುರದಿಂದ ಕಣಕ್ಕಿಳಿಸಲು ನಿರ್ಧರಿಸಿದ್ದು, ಅವರು ಮಥುರಾ ಅಥವಾ ಅಯೋಧ್ಯೆಯಿಂದ ಸ್ಪರ್ಧಿಸುತ್ತಾರೆ ಎಂಬಊಹಾಪೋಹಕ್ಕೆ ತೆರೆ ಎಳೆದಿದೆ. ಆದಿತ್ಯನಾಥ್ ಅವರು ಯುಪಿಯಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವ ವಿಶ್ವಾಸವನ್ನು ಹೊಂದಿದ್ದರೂ, ಒಬ್ಬ ಮುಖ್ಯಮಂತ್ರಿಯ ಹುದ್ದೆಯನ್ನು ಉಳಿಸಿಕೊಳ್ಳುವ ಅವರ ಸಾಮರ್ಥ್ಯವು ಪ್ರಶ್ನಾರ್ಥವಾಗಿದೆ.


ಇದನ್ನೂ ಓದಿರಿ: ವಿಶ್ಲೇಷಣೆ: ಯುಪಿಯಲ್ಲಿ ಒಬಿಸಿ ನಾಯಕರು ಬಿಜೆಪಿ ತೊರೆಯುತ್ತಿರುವುದು ಏತಕ್ಕೆ? ಎಸ್‌ಪಿಗೆ ಗೆಲುವು ಸುಲಭವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೇರಿಕಾದಲ್ಲಿ ಅದಾನಿ ಮತ್ತು ಆಪ್ತರ ಮೇಲಿನ ಕ್ರಿಮಿನಲ್ ಕೇಸ್ ರದ್ದು: ‘ರಾಜಿ ಮಾಡಿಕೊಂಡ ಪ್ರಧಾನಿ ಭಾರತದ ಹಿತಾಸಕ್ತಿ ಮಾರಾಟ ಮಾಡಿದ್ದಾರೆ’ ಎಂದ ರಾಹುಲ್ ಗಾಂಧಿ 

ನವದೆಹಲಿ: ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಹಾಗೂ ಅವರ ಸೋದರಳಿಯ ಸಾಗರ್ ಅದಾನಿ ವಿರುದ್ಧದ ಪ್ರಮುಖ ಕ್ರಿಮಿನಲ್ ಆರೋಪಗಳನ್ನು ಅಮೆರಿಕದ ಫೆಡರಲ್ ನ್ಯಾಯಾಧೀಶರು ಶಾಶ್ವತವಾಗಿ ವಜಾಗೊಳಿಸಿದ ಬೆನ್ನಲ್ಲೇ, ವಿಪಕ್ಷ ನಾಯಕ ರಾಹುಲ್...

ಕರ್ನಾಟಕ SIR | ‘ಲಾಜಿಕಲ್ ಡಿಸ್ಕ್ರಿಪೆನ್ಸಿ’ ಬಗ್ಗೆ ತುಟಿ ಬಿಚ್ಚದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಆಗಸ್ಟ್ 7ರಂದು ಚುನಾವಣಾ ಆಯೋಗ ಹೊರಡಿಸಿದ ಪ್ರಕಟಣೆಯ ಪ್ರಕಾರ, ಗಣತಿ ನಮೂನೆ ಅಥವಾ ಎನ್ಯುಮರೇಶನ್ ಫಾರಂ ಸಲ್ಲಿಕೆ ದಿನಾಂಕ ಆಗಸ್ಟ್...

‘ಆಹಾರ ಸುರಕ್ಷತೆ – ಔಷಧ ಆಡಳಿತ ಇಲಾಖೆ’ಯಿಂದ ಹೋಟೆಲ್‌ಗಳಿಗೆ ಕಟ್ಟುನಿಟ್ಟಿನ ನಿಯಮ ಜಾರಿ; ಹೊಸ ಮಾರ್ಗಸೂಚಿ ಪ್ರಕಟ

ರಾಜ್ಯದ ಹೋಟೆಲ್‌ಗಳು, ಡಾಬಾಗಳು ಹಾಗೂ ಆಹಾರ ಸೇವಾ ಸಂಸ್ಥೆಗಳು ಪಾಲಿಸಬೇಕಾದ 'ಆಹಾರ ಸುರಕ್ಷತಾ ಮತ್ತು ನೈರ್ಮಲ್ಯ ನಿಯಮಗಳ'ನ್ನು 'ಆಹಾರ ಸುರಕ್ಷತೆ ಇಲಾಖೆ ಮತ್ತು ಔಷಧ ಆಡಳಿತ ಇಲಾಖೆ' ಆಯುಕ್ತರು ಪ್ರಕಟಿಸಿದ್ದಾರೆ. ಕಳೆದ ಮೂರ್ನಾಲ್ಕು...

ಕರ್ನಾಟಕದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪಾದನೆ ಮತ್ತು ಮಾರಾಟ 1 ವರ್ಷ ನಿಷೇಧ: ರಾಜ್ಯ ಸರ್ಕಾರದ ಮಹತ್ವದ ಆದೇಶ

ಬೆಂಗಳೂರು: ಸಾರ್ವಜನಿಕ ಆರೋಗ್ಯ ಮತ್ತು ಸಮಾಜದ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಸರ್ಕಾರವು ರಾಜ್ಯಾದ್ಯಂತ ತಂಬಾಕು ಹಾಗೂ ನಿಕೋಟಿನ್ ಅಂಶ ಹೊಂದಿರುವ ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ಇತರ ಅಪಾಯಕಾರಿ ಉತ್ಪನ್ನಗಳ ಮೇಲೆ ಸಂಪೂರ್ಣ...

ಲೋಕಸಭೆ ಬಲ 543 ರಲ್ಲೇ ಶಾಶ್ವತವಾಗಿ ಮುಂದುವರಿಸಲು ಕೇಂದ್ರಕ್ಕೆ ಆಗ್ರಹ: ತಮಿಳುನಾಡು ವಿಧಾನಸಭೆಯಲ್ಲಿ ಸಿಎಂ ಸಿ. ಜೋಸೆಫ್ ವಿಜಯ್ ನಿರ್ಣಯ ಮಂಡನೆ

ಚೆನ್ನೈ: ಕೇಂದ್ರ ಸರ್ಕಾರವು ಲೋಕಸಭೆಯ ಒಟ್ಟು ಸ್ಥಾನಗಳ ಬಲವನ್ನು ಪ್ರಸ್ತುತ ಇರುವ 543 ರಲ್ಲೇ ಶಾಶ್ವತವಾಗಿ ಕಾಯ್ದುಕೊಳ್ಳಬೇಕು ಮತ್ತು ರಾಜ್ಯಗಳ ನಡುವಿನ ಪ್ರಾತಿನಿಧ್ಯದ ಅನುಪಾತವನ್ನು ಬದಲಾಯಿಸಬಾರದು ಎಂದು ಒತ್ತಾಯಿಸಿ ತಮಿಳುನಾಡು ಮುಖ್ಯಮಂತ್ರಿ ಸಿ....

ಯುಪಿಯಲ್ಲಿ ಅಮಾನವೀಯ ಘಟನೆ: ಮೊಬೈಲ್ ಕದ್ದ ಆರೋಪ ಹೊರಿಸಿ ಒಬಿಸಿ ಯುವಕನ ತಲೆ ಬೋಳಿಸಿ ಮೆರವಣಿಗೆ; ಮೇಲ್ಜಾತಿಯ ತಂದೆ-ಮಗನ ಬಂಧನ

ಉನ್ನಾವೋ: ಉತ್ತರ ಪ್ರದೇಶದಲ್ಲಿ ಇದುವರೆಗೆ ದಲಿತ ಸಮುದಾಯಗಳ ಮೇಲೆ ವ್ಯಾಪಕವಾಗಿ ನಡೆಯುತ್ತಿದ್ದ ಜಾತಿ ಆಧಾರಿತ ದೌರ್ಜನ್ಯ ಮತ್ತು ಸಾರ್ವಜನಿಕ ಅವಮಾನದಂತಹ ಅಮಾನವೀಯ ಕೃತ್ಯಗಳು, ಈಗ ಇತರ ಹಿಂದುಳಿದ ವರ್ಗಗಳ (ಒಬಿಸಿ) ಜನರ ಮೇಲೆಯೂ...

SIR 3ನೇ ಹಂತ: 12 ರಾಜ್ಯಗಳು-ಕೇಂದ್ರಾಡಳಿತ ಪ್ರದೇಶಗಳ 1.58 ಕೋಟಿ ಮತದಾರರ ಹೆಸರು ಕರಡು ಪಟ್ಟಿಯಿಂದ ಡಿಲೀಟ್

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಮೂರನೇ ಹಂತದಲ್ಲಿ ಅಸ್ತಿತ್ವದಲ್ಲಿರುವ ಮತದಾರರ ಪಟ್ಟಿಯಿಂದ ಸುಮಾರು 1.58 ಕೋಟಿ ಹೆಸರುಗಳನ್ನು ಅಳಿಸಲಾಗಿದೆ. ಪ್ರಸ್ತುತ ನಡೆಯುತ್ತಿರುವ 3ನೇ ಹಂತದ ವ್ಯಾಪ್ತಿಗೆ ಒಳಪಡುವ 16 ರಾಜ್ಯಗಳಲ್ಲಿ...

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...