Homeಕರ್ನಾಟಕಯುಪಿ: ಹಿಂದುತ್ವದ ಐಕಾನ್‌ ಆಗಿದ್ದ ಯೋಗಿ ತಮ್ಮ ಚರಿಷ್ಮಾ ಕಳೆದುಕೊಂಡಿದ್ದಾರಾ?

ಯುಪಿ: ಹಿಂದುತ್ವದ ಐಕಾನ್‌ ಆಗಿದ್ದ ಯೋಗಿ ತಮ್ಮ ಚರಿಷ್ಮಾ ಕಳೆದುಕೊಂಡಿದ್ದಾರಾ?

- Advertisement -
- Advertisement -

ಕೇಸರಿ ಧರಿಸಿದ ಯೋಗಿ ಆದಿತ್ಯನಾಥ್ ಅವರು ವ್ಯಾಪಾರ ಶೃಂಗಸಭೆಗಳು, ಅಂತರಾಷ್ಟ್ರೀಯ ಹೂಡಿಕೆಗಳು ಮತ್ತು ಎಂಒಯುಗಳ ಮೂಲಕ ಉತ್ತರ ಪ್ರದೇಶವನ್ನು “ಉತ್ತಮ ಪ್ರದೇಶ” ಎಂದು ಬಿಂಬಿಸಲು ಯತ್ನಿಸುತ್ತಿದ್ದ ಸಮಯವಿತ್ತು. ಅವರು ಉತ್ತರ ಪ್ರದೇಶವನ್ನು ಅತ್ಯಂತ ಫಲವತ್ತಾದ ಮತ್ತು ಆದ್ಯತೆಯ ತಾಣವೆಂದು ಅವರು ಹೇಳುತ್ತಿದ್ದರು.

ಕಾನೂನು ಮತ್ತು ಸುವ್ಯವಸ್ಥೆಗೆ ವಿಚಾರಕ್ಕೆ ಬಂದಾಗ ಆದಿತ್ಯನಾಥ್ ಅವರು ಕೇಂದ್ರ ಪ್ರಾಯೋಜಿತ ಯೋಜನೆಗಳಿಗೆ ಮಣೆ ಹಾಕುತ್ತಿದ್ದದ್ದು ಬಿಟ್ಟರೆ ಮತ್ತಾವುದೇ ಮಾರ್ಗವನ್ನು ಅನುಸರಿಸಿದ್ದು ಕಂಡುಬಂದಿಲ್ಲ. ಸದಾ “ಡಬಲ್ ಇಂಜಿನ್” ಸರ್ಕಾರದ ಬಗ್ಗೆ ಹೇಳಿಕೊಳ್ಳುತ್ತಾ ಅಧಿಕಾರಶಾಹಿಯನ್ನು ವಶದಲ್ಲಿಟ್ಟುಕೊಂಡು ರಾಜ್ಯಾಧಿಕಾರದ ಪಡಸಾಲೆಗೆ ಕಾಲಿಟ್ಟ ಗೋರಖನಾಥ ಮಠದ ಮುಖ್ಯಸ್ಥರು ನೀರಲ್ಲಿ ಬಾತುಕೋಳಿಯಂತೆ ಸಾಗಲು ಆರಂಭಿಸಿದರಷ್ಟೇ.

ಇಡೀ ರಾಜ್ಯದ ಪ್ರಚಾರ ಯಂತ್ರವನ್ನು ಒಂದು ಉದ್ದೇಶಕ್ಕೆ ಬಳಸಲಾಗುತ್ತಿದೆ: ಪ್ರಾಜೆಕ್ಟ್ ಬ್ರ್ಯಾಂಡ್ ಯೋಗಿ. ಪೋಸ್ಟರ್‌ಗಳು, ಜಾಹೀರಾತು ಫಲಕಗಳು ಮತ್ತು ಹೋರ್ಡಿಂಗ್‌ಗಳು ಕೇವಲ ಒಬ್ಬ ವ್ಯಕ್ತಿಯ ಚಿತ್ರದೊಂದಿಗೆ ಮಿನುಗುತ್ತಿವೆ. ಅವರ ಪ್ರಚಾರವು ಎಷ್ಟು ಅಸೂಯೆ ಹುಟ್ಟಿಸಿತ್ತು ಎಂದರೆ, ಇತರ ಬಿಜೆಪಿ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು ಅವರ ಶೈಲಿ, ನಡವಳಿಕೆ ಮತ್ತು ಪ್ರಚಾರದ ಸಾಹಸಗಳನ್ನು ಅನುಕರಿಸಲು ಬಯಸಿದ್ದರು.

ಆದಿತ್ಯನಾಥ್ ಅವರು ಸಂಘದ ಸಂತೋಷಕ್ಕಾಗಿ ಹೆಚ್ಚು ಸ್ಟಾರ್ ಇಮೇಜ್ ಬೆಳೆಸಿಕೊಂಡರು. ಯುಪಿಯ ಹೊರಗಿದ್ದರೂ ಅವರು ಬ್ರ್ಯಾಂಡ್ ಆದರು; ಜನಪ್ರಿಯತೆಯನ್ನು ಗಿಟ್ಟಿಸಿಕೊಳ್ಳುವ ನಿಟ್ಟಿನಲ್ಲಿ ಅವರು ಪ್ರಧಾನಿ ನರೇಂದ್ರ ಮೋದಿಯವರ ಪಕ್ಕದಲ್ಲಿ ಎರಡನೇ ಸ್ಥಾನದಲ್ಲಿ ಕಾಣಿಸಿಕೊಂಡರು. ಬಿಜೆಪಿ ನಾಯಕರು ಆದಿತ್ಯನಾಥ್ ಅವರನ್ನು 2024ರಲ್ಲಿ ಮೋದಿಯನ್ನು ಬದಲಿಸುವ ನಿರೀಕ್ಷಿತ ಪ್ರಧಾನಿ ಎಂದು ಶ್ಲಾಘಿಸಲು ಪ್ರಾರಂಭಿಸಿದರು.

ಆದಿತ್ಯನಾಥ್ ಅವರ ಆಡಂಬರವು ಅಲ್ಪಕಾಲಿಕವಾಗಿತ್ತು: ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮತ್ತು ಪೌರತ್ವ (ತಿದ್ದುಪಡಿ) ಕಾಯಿದೆ-2019 (ಸಿಎಎ) ವಿರುದ್ಧ ನಡೆದ ಪ್ರತಿಭಟನೆಗಳು ಅವರ ಸರ್ಕಾರದ ಅಮಾನವೀಯತೆಯನ್ನು ಬಹಿರಂಗಪಡಿಸಿದವು. ಯುಪಿ ಸರ್ಕಾರವು ಮುಸ್ಲಿಮರ ಮೇಲೆ ವಿವೇಚನಾರಹಿತ ಶಕ್ತಿಯನ್ನು ಪ್ರಯೋಗಿಸಿತು. ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿಂದುತ್ವದ ಕಾರ್ಯಸೂಚಿಯನ್ನು ಪೂರೈಸಲು ತಮ್ಮ ದ್ವೇಷದ ಯಂತ್ರವನ್ನು ಸಕ್ರಿಯಗೊಳಿಸಿದರು.

NRC ಮತ್ತು NRCಯ ಫ್ಯಾಂಟಮ್ ಅನ್ನು COVID-19 ಮತ್ತು ಲಾಕ್‌ಡೌನ್‌ಗಳಿಂದ ಮರೆಮಾಡಲಾಗಿದೆ. ಕೊರೊನಾ ಎರಡನೇ ಅಲೆಯ ಸಮಯದಲ್ಲಿ, ಹಾಸಿಗೆಗಳು ಮತ್ತು ಆಮ್ಲಜನಕದ ಕೊರತೆಯಿಂದ ರಾಜ್ಯದಲ್ಲಿ ಜನರು ಸಾಯುತ್ತಿರುವಾಗ, ಹಲವಾರು ಬಿಜೆಪಿ ಶಾಸಕರು ಆದಿತ್ಯನಾಥ್ ಅವರನ್ನು ಟೀಕಿಸಿದರು. ಅವರು ದಂತಗೋಪುರದಲ್ಲಿ ಕುಳಿತು ಸಾಮಾನ್ಯರ ನೋವನ್ನು ಆಲಿಸುತ್ತಿಲ್ಲ, ಸ್ಪಂದಿಸುತ್ತಿಲ್ಲ ಎಂದು ಬಿಜೆಪಿಗರೇ ಆಕ್ರೋಶ ವ್ಯಕ್ತಪಡಿಸಿದರು.

ಕೋವಿಡ್-19 ಸಂತ್ರಸ್ತರ ಶವಗಳನ್ನು ಗಂಗಾನದಿಯಲ್ಲಿ ತೇಲಿಬಿಡಲಾಯಿತು, ಮೃತ ದೇಹಗಳ ಗೌರವಯುವ ಶವಸಂಸ್ಕಾರವನ್ನು ನಿರಾಕರಿಸಲಾಯಿತು. ಪಂಚಾಯತ್ ಚುನಾವಣಾ ಕರ್ತವ್ಯದ ವೇಳೆ ಸೋಂಕಿಗೆ ಒಳಗಾಗಿ ಸಾವನ್ನಪ್ಪಿದ ಸರ್ಕಾರಿ ಶಾಲಾ ಶಿಕ್ಷಕರ ಕುಟುಂಬಗಳಿಗೆ ಸರಿಯಾದ ರೀತಿಯಲ್ಲಿ ಪರಿಹಾರವೂ ದೊರೆಯಲಿಲ್ಲ ಎಂಬುದು ಮತ್ತಷ್ಟು ಆಕ್ರೋಶಕ್ಕೆ ಕಾರಣವಾಗಿಯಿತು. ಇದು ಅವರ ಇಮೇಜ್‌ ಮತ್ತಷ್ಟು ಕುಗ್ಗಲು ಕಾರಣವಾಯಿತು.

ನಂತರ ಯುಪಿ ಗ್ಯಾಂಗ್‌ಸ್ಟರ್ ವಿಕಾಸ್ ದುಬೆಯ ಎನ್‌ಕೌಂಟರ್, ಹತ್ರಾಸ್ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಹಾಗೂ ಪತ್ರಕರ್ತರ ವಿರುದ್ಧದ ಯುಎಪಿಎ ಅಡಿಯಲ್ಲಿ ದಾಖಲಾದ ಪ್ರಕರಣಗಳು ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯಲ್ಲಿನ ಸಮಸ್ಯೆಯನ್ನು ಬಿಚ್ಚಿಟ್ಟವು.

ಹೆಚ್ಚುತ್ತಿರುವ ನಿರುದ್ಯೋಗ, ಅಪೌಷ್ಟಿಕತೆ, ಶಾಲೆ ತೊರೆಯುವಿಕೆ ಮತ್ತು ಅಪರಾಧ, ಗೋಧಿ ಮತ್ತು ಭತ್ತ ಸಂಗ್ರಹಣೆಯಲ್ಲಿ ಗುರಿಗಳನ್ನು ತಲುಪದ ಅಂಕಿಅಂಶಗಳು, ದೇವಸ್ಥಾನಗಳಿಗೆ ಸಾರ್ವಜನಿಕ ಹಣವನ್ನು ಖರ್ಚು ಮಾಡುವ ಆದ್ಯತೆ, ರಾಜಕೀಯ ಉದ್ದೇಶಗಳಿಗಾಗಿ ಮುಸ್ಲಿಮರನ್ನು ಗುರಿಯಾಗಿಸುವುದು, ಭ್ರಷ್ಟಾಚಾರ, ಅತಿರೇಕದ ಜಾತೀಯತೆ, ಅಕ್ರಮ ಗಣಿಗಾರಿಕೆ ಮತ್ತು ಈಡೇರದ ಭರವಸೆಗಳ ಪಟ್ಟಿಗಳು ರಾಜ್ಯದಲ್ಲಿ ಯೋಗಿ ಮತ್ತು ಬಿಜೆಪಿ ವಿರೋಧಿ ಅಲೆಯನ್ನು ಹೆಚ್ಚಿಸಿದೆ.

ದಲಿತರು ಮತ್ತು ಇತರ ಹಿಂದುಳಿದ ವರ್ಗ (ಒಬಿಸಿ)ಗಳ ನಿರ್ಲಕ್ಷ್ಯದಿಂದಾಗಿ ಸ್ವಾಮಿ ಪ್ರಸಾದ್ ಮೌರ್ಯ, ದಾರಾ ಸಿಂಗ್ ಚೌಹಾಣ್ ಮತ್ತು ಧರಮ್ ಸಿಂಗ್ ಸೈನಿ ಅವರಂತಹ ಮಂತ್ರಿಗಳು ಮತ್ತು ನಾಯಕರು ಬಿಜೆಪಿಯನ್ನು ತೊರೆದು ಉತ್ತರ ಪ್ರದೇಶದಲ್ಲಿ ಬಿಜೆಪಿಯ ಪ್ರತಿಸ್ಪರ್ಧಿ ಸಮಾಜವಾದಿ ಪಕ್ಷಕ್ಕೆ (SP) ಸೇರಿದರು.

ಇದೆಲ್ಲದರ ಮಧ್ಯೆ, ಮುಂಬರುವ ವಿಧಾನಸಭಾ ಚುನಾವಣೆಯು “80% ವರ್ಸಸ್ 20% (ಮುಸ್ಲಿಮರ)” ನಡುವಿನ ಹೋರಾಟವಾಗಿದೆ ಎಂದು ಆದಿತ್ಯನಾಥ್ ಹೇಳಿಕೆ ನೀಡುವ ಮೂಲಕ ಕೋಮು ಭಾವನೆಗಳನ್ನು ಪ್ರಚೋದಿಸುತ್ತಿದ್ದಾರೆ

ಯುಪಿಯಲ್ಲಿ, ವಿಶೇಷವಾಗಿ ಎಸ್‌ಪಿ ಮತ್ತೆ ತನ್ನ ವರ್ಚಸ್ಸನ್ನು ವೃದ್ದಿಸಿಕೊಂಡು ಮುನ್ನೆಲೆಗೆ ಬರುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿಯು ಯಾವುದೇ ಚಾನ್ಸ್‌ ತೆಗೆದುಕೊಳ್ಳಲು ಬಯಸುವುದಿಲ್ಲ ಎಂಬುದು ಸ್ಪಷ್ಟವಾಗಿದೆ. ಪಕ್ಷವು ಯೋಗಿ ಅವರನ್ನು ಅವರ ತವರು ಗೋರಖ್‌ಪುರದಿಂದ ಕಣಕ್ಕಿಳಿಸಲು ನಿರ್ಧರಿಸಿದ್ದು, ಅವರು ಮಥುರಾ ಅಥವಾ ಅಯೋಧ್ಯೆಯಿಂದ ಸ್ಪರ್ಧಿಸುತ್ತಾರೆ ಎಂಬಊಹಾಪೋಹಕ್ಕೆ ತೆರೆ ಎಳೆದಿದೆ. ಆದಿತ್ಯನಾಥ್ ಅವರು ಯುಪಿಯಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವ ವಿಶ್ವಾಸವನ್ನು ಹೊಂದಿದ್ದರೂ, ಒಬ್ಬ ಮುಖ್ಯಮಂತ್ರಿಯ ಹುದ್ದೆಯನ್ನು ಉಳಿಸಿಕೊಳ್ಳುವ ಅವರ ಸಾಮರ್ಥ್ಯವು ಪ್ರಶ್ನಾರ್ಥವಾಗಿದೆ.


ಇದನ್ನೂ ಓದಿರಿ: ವಿಶ್ಲೇಷಣೆ: ಯುಪಿಯಲ್ಲಿ ಒಬಿಸಿ ನಾಯಕರು ಬಿಜೆಪಿ ತೊರೆಯುತ್ತಿರುವುದು ಏತಕ್ಕೆ? ಎಸ್‌ಪಿಗೆ ಗೆಲುವು ಸುಲಭವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...