Homeಕರ್ನಾಟಕಯುಪಿ: ಹಿಂದುತ್ವದ ಐಕಾನ್‌ ಆಗಿದ್ದ ಯೋಗಿ ತಮ್ಮ ಚರಿಷ್ಮಾ ಕಳೆದುಕೊಂಡಿದ್ದಾರಾ?

ಯುಪಿ: ಹಿಂದುತ್ವದ ಐಕಾನ್‌ ಆಗಿದ್ದ ಯೋಗಿ ತಮ್ಮ ಚರಿಷ್ಮಾ ಕಳೆದುಕೊಂಡಿದ್ದಾರಾ?

- Advertisement -
- Advertisement -

ಕೇಸರಿ ಧರಿಸಿದ ಯೋಗಿ ಆದಿತ್ಯನಾಥ್ ಅವರು ವ್ಯಾಪಾರ ಶೃಂಗಸಭೆಗಳು, ಅಂತರಾಷ್ಟ್ರೀಯ ಹೂಡಿಕೆಗಳು ಮತ್ತು ಎಂಒಯುಗಳ ಮೂಲಕ ಉತ್ತರ ಪ್ರದೇಶವನ್ನು “ಉತ್ತಮ ಪ್ರದೇಶ” ಎಂದು ಬಿಂಬಿಸಲು ಯತ್ನಿಸುತ್ತಿದ್ದ ಸಮಯವಿತ್ತು. ಅವರು ಉತ್ತರ ಪ್ರದೇಶವನ್ನು ಅತ್ಯಂತ ಫಲವತ್ತಾದ ಮತ್ತು ಆದ್ಯತೆಯ ತಾಣವೆಂದು ಅವರು ಹೇಳುತ್ತಿದ್ದರು.

ಕಾನೂನು ಮತ್ತು ಸುವ್ಯವಸ್ಥೆಗೆ ವಿಚಾರಕ್ಕೆ ಬಂದಾಗ ಆದಿತ್ಯನಾಥ್ ಅವರು ಕೇಂದ್ರ ಪ್ರಾಯೋಜಿತ ಯೋಜನೆಗಳಿಗೆ ಮಣೆ ಹಾಕುತ್ತಿದ್ದದ್ದು ಬಿಟ್ಟರೆ ಮತ್ತಾವುದೇ ಮಾರ್ಗವನ್ನು ಅನುಸರಿಸಿದ್ದು ಕಂಡುಬಂದಿಲ್ಲ. ಸದಾ “ಡಬಲ್ ಇಂಜಿನ್” ಸರ್ಕಾರದ ಬಗ್ಗೆ ಹೇಳಿಕೊಳ್ಳುತ್ತಾ ಅಧಿಕಾರಶಾಹಿಯನ್ನು ವಶದಲ್ಲಿಟ್ಟುಕೊಂಡು ರಾಜ್ಯಾಧಿಕಾರದ ಪಡಸಾಲೆಗೆ ಕಾಲಿಟ್ಟ ಗೋರಖನಾಥ ಮಠದ ಮುಖ್ಯಸ್ಥರು ನೀರಲ್ಲಿ ಬಾತುಕೋಳಿಯಂತೆ ಸಾಗಲು ಆರಂಭಿಸಿದರಷ್ಟೇ.

ಇಡೀ ರಾಜ್ಯದ ಪ್ರಚಾರ ಯಂತ್ರವನ್ನು ಒಂದು ಉದ್ದೇಶಕ್ಕೆ ಬಳಸಲಾಗುತ್ತಿದೆ: ಪ್ರಾಜೆಕ್ಟ್ ಬ್ರ್ಯಾಂಡ್ ಯೋಗಿ. ಪೋಸ್ಟರ್‌ಗಳು, ಜಾಹೀರಾತು ಫಲಕಗಳು ಮತ್ತು ಹೋರ್ಡಿಂಗ್‌ಗಳು ಕೇವಲ ಒಬ್ಬ ವ್ಯಕ್ತಿಯ ಚಿತ್ರದೊಂದಿಗೆ ಮಿನುಗುತ್ತಿವೆ. ಅವರ ಪ್ರಚಾರವು ಎಷ್ಟು ಅಸೂಯೆ ಹುಟ್ಟಿಸಿತ್ತು ಎಂದರೆ, ಇತರ ಬಿಜೆಪಿ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು ಅವರ ಶೈಲಿ, ನಡವಳಿಕೆ ಮತ್ತು ಪ್ರಚಾರದ ಸಾಹಸಗಳನ್ನು ಅನುಕರಿಸಲು ಬಯಸಿದ್ದರು.

ಆದಿತ್ಯನಾಥ್ ಅವರು ಸಂಘದ ಸಂತೋಷಕ್ಕಾಗಿ ಹೆಚ್ಚು ಸ್ಟಾರ್ ಇಮೇಜ್ ಬೆಳೆಸಿಕೊಂಡರು. ಯುಪಿಯ ಹೊರಗಿದ್ದರೂ ಅವರು ಬ್ರ್ಯಾಂಡ್ ಆದರು; ಜನಪ್ರಿಯತೆಯನ್ನು ಗಿಟ್ಟಿಸಿಕೊಳ್ಳುವ ನಿಟ್ಟಿನಲ್ಲಿ ಅವರು ಪ್ರಧಾನಿ ನರೇಂದ್ರ ಮೋದಿಯವರ ಪಕ್ಕದಲ್ಲಿ ಎರಡನೇ ಸ್ಥಾನದಲ್ಲಿ ಕಾಣಿಸಿಕೊಂಡರು. ಬಿಜೆಪಿ ನಾಯಕರು ಆದಿತ್ಯನಾಥ್ ಅವರನ್ನು 2024ರಲ್ಲಿ ಮೋದಿಯನ್ನು ಬದಲಿಸುವ ನಿರೀಕ್ಷಿತ ಪ್ರಧಾನಿ ಎಂದು ಶ್ಲಾಘಿಸಲು ಪ್ರಾರಂಭಿಸಿದರು.

ಆದಿತ್ಯನಾಥ್ ಅವರ ಆಡಂಬರವು ಅಲ್ಪಕಾಲಿಕವಾಗಿತ್ತು: ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮತ್ತು ಪೌರತ್ವ (ತಿದ್ದುಪಡಿ) ಕಾಯಿದೆ-2019 (ಸಿಎಎ) ವಿರುದ್ಧ ನಡೆದ ಪ್ರತಿಭಟನೆಗಳು ಅವರ ಸರ್ಕಾರದ ಅಮಾನವೀಯತೆಯನ್ನು ಬಹಿರಂಗಪಡಿಸಿದವು. ಯುಪಿ ಸರ್ಕಾರವು ಮುಸ್ಲಿಮರ ಮೇಲೆ ವಿವೇಚನಾರಹಿತ ಶಕ್ತಿಯನ್ನು ಪ್ರಯೋಗಿಸಿತು. ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿಂದುತ್ವದ ಕಾರ್ಯಸೂಚಿಯನ್ನು ಪೂರೈಸಲು ತಮ್ಮ ದ್ವೇಷದ ಯಂತ್ರವನ್ನು ಸಕ್ರಿಯಗೊಳಿಸಿದರು.

NRC ಮತ್ತು NRCಯ ಫ್ಯಾಂಟಮ್ ಅನ್ನು COVID-19 ಮತ್ತು ಲಾಕ್‌ಡೌನ್‌ಗಳಿಂದ ಮರೆಮಾಡಲಾಗಿದೆ. ಕೊರೊನಾ ಎರಡನೇ ಅಲೆಯ ಸಮಯದಲ್ಲಿ, ಹಾಸಿಗೆಗಳು ಮತ್ತು ಆಮ್ಲಜನಕದ ಕೊರತೆಯಿಂದ ರಾಜ್ಯದಲ್ಲಿ ಜನರು ಸಾಯುತ್ತಿರುವಾಗ, ಹಲವಾರು ಬಿಜೆಪಿ ಶಾಸಕರು ಆದಿತ್ಯನಾಥ್ ಅವರನ್ನು ಟೀಕಿಸಿದರು. ಅವರು ದಂತಗೋಪುರದಲ್ಲಿ ಕುಳಿತು ಸಾಮಾನ್ಯರ ನೋವನ್ನು ಆಲಿಸುತ್ತಿಲ್ಲ, ಸ್ಪಂದಿಸುತ್ತಿಲ್ಲ ಎಂದು ಬಿಜೆಪಿಗರೇ ಆಕ್ರೋಶ ವ್ಯಕ್ತಪಡಿಸಿದರು.

ಕೋವಿಡ್-19 ಸಂತ್ರಸ್ತರ ಶವಗಳನ್ನು ಗಂಗಾನದಿಯಲ್ಲಿ ತೇಲಿಬಿಡಲಾಯಿತು, ಮೃತ ದೇಹಗಳ ಗೌರವಯುವ ಶವಸಂಸ್ಕಾರವನ್ನು ನಿರಾಕರಿಸಲಾಯಿತು. ಪಂಚಾಯತ್ ಚುನಾವಣಾ ಕರ್ತವ್ಯದ ವೇಳೆ ಸೋಂಕಿಗೆ ಒಳಗಾಗಿ ಸಾವನ್ನಪ್ಪಿದ ಸರ್ಕಾರಿ ಶಾಲಾ ಶಿಕ್ಷಕರ ಕುಟುಂಬಗಳಿಗೆ ಸರಿಯಾದ ರೀತಿಯಲ್ಲಿ ಪರಿಹಾರವೂ ದೊರೆಯಲಿಲ್ಲ ಎಂಬುದು ಮತ್ತಷ್ಟು ಆಕ್ರೋಶಕ್ಕೆ ಕಾರಣವಾಗಿಯಿತು. ಇದು ಅವರ ಇಮೇಜ್‌ ಮತ್ತಷ್ಟು ಕುಗ್ಗಲು ಕಾರಣವಾಯಿತು.

ನಂತರ ಯುಪಿ ಗ್ಯಾಂಗ್‌ಸ್ಟರ್ ವಿಕಾಸ್ ದುಬೆಯ ಎನ್‌ಕೌಂಟರ್, ಹತ್ರಾಸ್ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಹಾಗೂ ಪತ್ರಕರ್ತರ ವಿರುದ್ಧದ ಯುಎಪಿಎ ಅಡಿಯಲ್ಲಿ ದಾಖಲಾದ ಪ್ರಕರಣಗಳು ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯಲ್ಲಿನ ಸಮಸ್ಯೆಯನ್ನು ಬಿಚ್ಚಿಟ್ಟವು.

ಹೆಚ್ಚುತ್ತಿರುವ ನಿರುದ್ಯೋಗ, ಅಪೌಷ್ಟಿಕತೆ, ಶಾಲೆ ತೊರೆಯುವಿಕೆ ಮತ್ತು ಅಪರಾಧ, ಗೋಧಿ ಮತ್ತು ಭತ್ತ ಸಂಗ್ರಹಣೆಯಲ್ಲಿ ಗುರಿಗಳನ್ನು ತಲುಪದ ಅಂಕಿಅಂಶಗಳು, ದೇವಸ್ಥಾನಗಳಿಗೆ ಸಾರ್ವಜನಿಕ ಹಣವನ್ನು ಖರ್ಚು ಮಾಡುವ ಆದ್ಯತೆ, ರಾಜಕೀಯ ಉದ್ದೇಶಗಳಿಗಾಗಿ ಮುಸ್ಲಿಮರನ್ನು ಗುರಿಯಾಗಿಸುವುದು, ಭ್ರಷ್ಟಾಚಾರ, ಅತಿರೇಕದ ಜಾತೀಯತೆ, ಅಕ್ರಮ ಗಣಿಗಾರಿಕೆ ಮತ್ತು ಈಡೇರದ ಭರವಸೆಗಳ ಪಟ್ಟಿಗಳು ರಾಜ್ಯದಲ್ಲಿ ಯೋಗಿ ಮತ್ತು ಬಿಜೆಪಿ ವಿರೋಧಿ ಅಲೆಯನ್ನು ಹೆಚ್ಚಿಸಿದೆ.

ದಲಿತರು ಮತ್ತು ಇತರ ಹಿಂದುಳಿದ ವರ್ಗ (ಒಬಿಸಿ)ಗಳ ನಿರ್ಲಕ್ಷ್ಯದಿಂದಾಗಿ ಸ್ವಾಮಿ ಪ್ರಸಾದ್ ಮೌರ್ಯ, ದಾರಾ ಸಿಂಗ್ ಚೌಹಾಣ್ ಮತ್ತು ಧರಮ್ ಸಿಂಗ್ ಸೈನಿ ಅವರಂತಹ ಮಂತ್ರಿಗಳು ಮತ್ತು ನಾಯಕರು ಬಿಜೆಪಿಯನ್ನು ತೊರೆದು ಉತ್ತರ ಪ್ರದೇಶದಲ್ಲಿ ಬಿಜೆಪಿಯ ಪ್ರತಿಸ್ಪರ್ಧಿ ಸಮಾಜವಾದಿ ಪಕ್ಷಕ್ಕೆ (SP) ಸೇರಿದರು.

ಇದೆಲ್ಲದರ ಮಧ್ಯೆ, ಮುಂಬರುವ ವಿಧಾನಸಭಾ ಚುನಾವಣೆಯು “80% ವರ್ಸಸ್ 20% (ಮುಸ್ಲಿಮರ)” ನಡುವಿನ ಹೋರಾಟವಾಗಿದೆ ಎಂದು ಆದಿತ್ಯನಾಥ್ ಹೇಳಿಕೆ ನೀಡುವ ಮೂಲಕ ಕೋಮು ಭಾವನೆಗಳನ್ನು ಪ್ರಚೋದಿಸುತ್ತಿದ್ದಾರೆ

ಯುಪಿಯಲ್ಲಿ, ವಿಶೇಷವಾಗಿ ಎಸ್‌ಪಿ ಮತ್ತೆ ತನ್ನ ವರ್ಚಸ್ಸನ್ನು ವೃದ್ದಿಸಿಕೊಂಡು ಮುನ್ನೆಲೆಗೆ ಬರುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿಯು ಯಾವುದೇ ಚಾನ್ಸ್‌ ತೆಗೆದುಕೊಳ್ಳಲು ಬಯಸುವುದಿಲ್ಲ ಎಂಬುದು ಸ್ಪಷ್ಟವಾಗಿದೆ. ಪಕ್ಷವು ಯೋಗಿ ಅವರನ್ನು ಅವರ ತವರು ಗೋರಖ್‌ಪುರದಿಂದ ಕಣಕ್ಕಿಳಿಸಲು ನಿರ್ಧರಿಸಿದ್ದು, ಅವರು ಮಥುರಾ ಅಥವಾ ಅಯೋಧ್ಯೆಯಿಂದ ಸ್ಪರ್ಧಿಸುತ್ತಾರೆ ಎಂಬಊಹಾಪೋಹಕ್ಕೆ ತೆರೆ ಎಳೆದಿದೆ. ಆದಿತ್ಯನಾಥ್ ಅವರು ಯುಪಿಯಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವ ವಿಶ್ವಾಸವನ್ನು ಹೊಂದಿದ್ದರೂ, ಒಬ್ಬ ಮುಖ್ಯಮಂತ್ರಿಯ ಹುದ್ದೆಯನ್ನು ಉಳಿಸಿಕೊಳ್ಳುವ ಅವರ ಸಾಮರ್ಥ್ಯವು ಪ್ರಶ್ನಾರ್ಥವಾಗಿದೆ.


ಇದನ್ನೂ ಓದಿರಿ: ವಿಶ್ಲೇಷಣೆ: ಯುಪಿಯಲ್ಲಿ ಒಬಿಸಿ ನಾಯಕರು ಬಿಜೆಪಿ ತೊರೆಯುತ್ತಿರುವುದು ಏತಕ್ಕೆ? ಎಸ್‌ಪಿಗೆ ಗೆಲುವು ಸುಲಭವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ SIR: 38 ಲಕ್ಷ ಮೇಲ್ಮನವಿಗಳಲ್ಲಿ ವಿಲೇವಾರಿಯಾಗಿದ್ದು ಕೇವಲ 1 ಲಕ್ಷ

ಪಶ್ಚಿಮ ಬಂಗಾಳದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (SIR) ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಬೃಹತ್ ಪ್ರಮಾಣದ ಮೇಲ್ಮನವಿಗಳ ಪೈಕಿ ವಿಲೇವಾರಿಯಾದ ಅರ್ಜಿಗಳ ಸಂಖ್ಯೆ ತೀರಾ ಕನಿಷ್ಠ ಮಟ್ಟದಲ್ಲಿದೆ ಎಂಬ ಆಘಾತಕಾರಿ ಮಾಹಿತಿ...

ಕರ್ನಾಟಕ ಎಸ್‌ಐಆರ್: ತಡವಾಗಿ ತಲುಪಿದ ನೋಟಿಸ್‌ಗಳಿಂದ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ; ಮತದಾರರಲ್ಲಿ ಗೊಂದಲ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗಳನ್ನು ಮತದಾರರಿಗೆ ತಲುಪಿಸುವಲ್ಲಿ ಉಂಟಾಗುತ್ತಿರುವ ವಿಳಂಬವು ಹಲವು ಕಡೆ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ ಮತ್ತು ಗೊಂದಲಕ್ಕೆ ಕಾರಣವಾಗುತ್ತಿದೆ. ‘ನೋ-ಮ್ಯಾಪಿಂಗ್’...

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...