Homeಕರ್ನಾಟಕಯುಪಿ: ಹಿಂದುತ್ವದ ಐಕಾನ್‌ ಆಗಿದ್ದ ಯೋಗಿ ತಮ್ಮ ಚರಿಷ್ಮಾ ಕಳೆದುಕೊಂಡಿದ್ದಾರಾ?

ಯುಪಿ: ಹಿಂದುತ್ವದ ಐಕಾನ್‌ ಆಗಿದ್ದ ಯೋಗಿ ತಮ್ಮ ಚರಿಷ್ಮಾ ಕಳೆದುಕೊಂಡಿದ್ದಾರಾ?

- Advertisement -
- Advertisement -

ಕೇಸರಿ ಧರಿಸಿದ ಯೋಗಿ ಆದಿತ್ಯನಾಥ್ ಅವರು ವ್ಯಾಪಾರ ಶೃಂಗಸಭೆಗಳು, ಅಂತರಾಷ್ಟ್ರೀಯ ಹೂಡಿಕೆಗಳು ಮತ್ತು ಎಂಒಯುಗಳ ಮೂಲಕ ಉತ್ತರ ಪ್ರದೇಶವನ್ನು “ಉತ್ತಮ ಪ್ರದೇಶ” ಎಂದು ಬಿಂಬಿಸಲು ಯತ್ನಿಸುತ್ತಿದ್ದ ಸಮಯವಿತ್ತು. ಅವರು ಉತ್ತರ ಪ್ರದೇಶವನ್ನು ಅತ್ಯಂತ ಫಲವತ್ತಾದ ಮತ್ತು ಆದ್ಯತೆಯ ತಾಣವೆಂದು ಅವರು ಹೇಳುತ್ತಿದ್ದರು.

ಕಾನೂನು ಮತ್ತು ಸುವ್ಯವಸ್ಥೆಗೆ ವಿಚಾರಕ್ಕೆ ಬಂದಾಗ ಆದಿತ್ಯನಾಥ್ ಅವರು ಕೇಂದ್ರ ಪ್ರಾಯೋಜಿತ ಯೋಜನೆಗಳಿಗೆ ಮಣೆ ಹಾಕುತ್ತಿದ್ದದ್ದು ಬಿಟ್ಟರೆ ಮತ್ತಾವುದೇ ಮಾರ್ಗವನ್ನು ಅನುಸರಿಸಿದ್ದು ಕಂಡುಬಂದಿಲ್ಲ. ಸದಾ “ಡಬಲ್ ಇಂಜಿನ್” ಸರ್ಕಾರದ ಬಗ್ಗೆ ಹೇಳಿಕೊಳ್ಳುತ್ತಾ ಅಧಿಕಾರಶಾಹಿಯನ್ನು ವಶದಲ್ಲಿಟ್ಟುಕೊಂಡು ರಾಜ್ಯಾಧಿಕಾರದ ಪಡಸಾಲೆಗೆ ಕಾಲಿಟ್ಟ ಗೋರಖನಾಥ ಮಠದ ಮುಖ್ಯಸ್ಥರು ನೀರಲ್ಲಿ ಬಾತುಕೋಳಿಯಂತೆ ಸಾಗಲು ಆರಂಭಿಸಿದರಷ್ಟೇ.

ಇಡೀ ರಾಜ್ಯದ ಪ್ರಚಾರ ಯಂತ್ರವನ್ನು ಒಂದು ಉದ್ದೇಶಕ್ಕೆ ಬಳಸಲಾಗುತ್ತಿದೆ: ಪ್ರಾಜೆಕ್ಟ್ ಬ್ರ್ಯಾಂಡ್ ಯೋಗಿ. ಪೋಸ್ಟರ್‌ಗಳು, ಜಾಹೀರಾತು ಫಲಕಗಳು ಮತ್ತು ಹೋರ್ಡಿಂಗ್‌ಗಳು ಕೇವಲ ಒಬ್ಬ ವ್ಯಕ್ತಿಯ ಚಿತ್ರದೊಂದಿಗೆ ಮಿನುಗುತ್ತಿವೆ. ಅವರ ಪ್ರಚಾರವು ಎಷ್ಟು ಅಸೂಯೆ ಹುಟ್ಟಿಸಿತ್ತು ಎಂದರೆ, ಇತರ ಬಿಜೆಪಿ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು ಅವರ ಶೈಲಿ, ನಡವಳಿಕೆ ಮತ್ತು ಪ್ರಚಾರದ ಸಾಹಸಗಳನ್ನು ಅನುಕರಿಸಲು ಬಯಸಿದ್ದರು.

ಆದಿತ್ಯನಾಥ್ ಅವರು ಸಂಘದ ಸಂತೋಷಕ್ಕಾಗಿ ಹೆಚ್ಚು ಸ್ಟಾರ್ ಇಮೇಜ್ ಬೆಳೆಸಿಕೊಂಡರು. ಯುಪಿಯ ಹೊರಗಿದ್ದರೂ ಅವರು ಬ್ರ್ಯಾಂಡ್ ಆದರು; ಜನಪ್ರಿಯತೆಯನ್ನು ಗಿಟ್ಟಿಸಿಕೊಳ್ಳುವ ನಿಟ್ಟಿನಲ್ಲಿ ಅವರು ಪ್ರಧಾನಿ ನರೇಂದ್ರ ಮೋದಿಯವರ ಪಕ್ಕದಲ್ಲಿ ಎರಡನೇ ಸ್ಥಾನದಲ್ಲಿ ಕಾಣಿಸಿಕೊಂಡರು. ಬಿಜೆಪಿ ನಾಯಕರು ಆದಿತ್ಯನಾಥ್ ಅವರನ್ನು 2024ರಲ್ಲಿ ಮೋದಿಯನ್ನು ಬದಲಿಸುವ ನಿರೀಕ್ಷಿತ ಪ್ರಧಾನಿ ಎಂದು ಶ್ಲಾಘಿಸಲು ಪ್ರಾರಂಭಿಸಿದರು.

ಆದಿತ್ಯನಾಥ್ ಅವರ ಆಡಂಬರವು ಅಲ್ಪಕಾಲಿಕವಾಗಿತ್ತು: ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮತ್ತು ಪೌರತ್ವ (ತಿದ್ದುಪಡಿ) ಕಾಯಿದೆ-2019 (ಸಿಎಎ) ವಿರುದ್ಧ ನಡೆದ ಪ್ರತಿಭಟನೆಗಳು ಅವರ ಸರ್ಕಾರದ ಅಮಾನವೀಯತೆಯನ್ನು ಬಹಿರಂಗಪಡಿಸಿದವು. ಯುಪಿ ಸರ್ಕಾರವು ಮುಸ್ಲಿಮರ ಮೇಲೆ ವಿವೇಚನಾರಹಿತ ಶಕ್ತಿಯನ್ನು ಪ್ರಯೋಗಿಸಿತು. ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿಂದುತ್ವದ ಕಾರ್ಯಸೂಚಿಯನ್ನು ಪೂರೈಸಲು ತಮ್ಮ ದ್ವೇಷದ ಯಂತ್ರವನ್ನು ಸಕ್ರಿಯಗೊಳಿಸಿದರು.

NRC ಮತ್ತು NRCಯ ಫ್ಯಾಂಟಮ್ ಅನ್ನು COVID-19 ಮತ್ತು ಲಾಕ್‌ಡೌನ್‌ಗಳಿಂದ ಮರೆಮಾಡಲಾಗಿದೆ. ಕೊರೊನಾ ಎರಡನೇ ಅಲೆಯ ಸಮಯದಲ್ಲಿ, ಹಾಸಿಗೆಗಳು ಮತ್ತು ಆಮ್ಲಜನಕದ ಕೊರತೆಯಿಂದ ರಾಜ್ಯದಲ್ಲಿ ಜನರು ಸಾಯುತ್ತಿರುವಾಗ, ಹಲವಾರು ಬಿಜೆಪಿ ಶಾಸಕರು ಆದಿತ್ಯನಾಥ್ ಅವರನ್ನು ಟೀಕಿಸಿದರು. ಅವರು ದಂತಗೋಪುರದಲ್ಲಿ ಕುಳಿತು ಸಾಮಾನ್ಯರ ನೋವನ್ನು ಆಲಿಸುತ್ತಿಲ್ಲ, ಸ್ಪಂದಿಸುತ್ತಿಲ್ಲ ಎಂದು ಬಿಜೆಪಿಗರೇ ಆಕ್ರೋಶ ವ್ಯಕ್ತಪಡಿಸಿದರು.

ಕೋವಿಡ್-19 ಸಂತ್ರಸ್ತರ ಶವಗಳನ್ನು ಗಂಗಾನದಿಯಲ್ಲಿ ತೇಲಿಬಿಡಲಾಯಿತು, ಮೃತ ದೇಹಗಳ ಗೌರವಯುವ ಶವಸಂಸ್ಕಾರವನ್ನು ನಿರಾಕರಿಸಲಾಯಿತು. ಪಂಚಾಯತ್ ಚುನಾವಣಾ ಕರ್ತವ್ಯದ ವೇಳೆ ಸೋಂಕಿಗೆ ಒಳಗಾಗಿ ಸಾವನ್ನಪ್ಪಿದ ಸರ್ಕಾರಿ ಶಾಲಾ ಶಿಕ್ಷಕರ ಕುಟುಂಬಗಳಿಗೆ ಸರಿಯಾದ ರೀತಿಯಲ್ಲಿ ಪರಿಹಾರವೂ ದೊರೆಯಲಿಲ್ಲ ಎಂಬುದು ಮತ್ತಷ್ಟು ಆಕ್ರೋಶಕ್ಕೆ ಕಾರಣವಾಗಿಯಿತು. ಇದು ಅವರ ಇಮೇಜ್‌ ಮತ್ತಷ್ಟು ಕುಗ್ಗಲು ಕಾರಣವಾಯಿತು.

ನಂತರ ಯುಪಿ ಗ್ಯಾಂಗ್‌ಸ್ಟರ್ ವಿಕಾಸ್ ದುಬೆಯ ಎನ್‌ಕೌಂಟರ್, ಹತ್ರಾಸ್ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಹಾಗೂ ಪತ್ರಕರ್ತರ ವಿರುದ್ಧದ ಯುಎಪಿಎ ಅಡಿಯಲ್ಲಿ ದಾಖಲಾದ ಪ್ರಕರಣಗಳು ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯಲ್ಲಿನ ಸಮಸ್ಯೆಯನ್ನು ಬಿಚ್ಚಿಟ್ಟವು.

ಹೆಚ್ಚುತ್ತಿರುವ ನಿರುದ್ಯೋಗ, ಅಪೌಷ್ಟಿಕತೆ, ಶಾಲೆ ತೊರೆಯುವಿಕೆ ಮತ್ತು ಅಪರಾಧ, ಗೋಧಿ ಮತ್ತು ಭತ್ತ ಸಂಗ್ರಹಣೆಯಲ್ಲಿ ಗುರಿಗಳನ್ನು ತಲುಪದ ಅಂಕಿಅಂಶಗಳು, ದೇವಸ್ಥಾನಗಳಿಗೆ ಸಾರ್ವಜನಿಕ ಹಣವನ್ನು ಖರ್ಚು ಮಾಡುವ ಆದ್ಯತೆ, ರಾಜಕೀಯ ಉದ್ದೇಶಗಳಿಗಾಗಿ ಮುಸ್ಲಿಮರನ್ನು ಗುರಿಯಾಗಿಸುವುದು, ಭ್ರಷ್ಟಾಚಾರ, ಅತಿರೇಕದ ಜಾತೀಯತೆ, ಅಕ್ರಮ ಗಣಿಗಾರಿಕೆ ಮತ್ತು ಈಡೇರದ ಭರವಸೆಗಳ ಪಟ್ಟಿಗಳು ರಾಜ್ಯದಲ್ಲಿ ಯೋಗಿ ಮತ್ತು ಬಿಜೆಪಿ ವಿರೋಧಿ ಅಲೆಯನ್ನು ಹೆಚ್ಚಿಸಿದೆ.

ದಲಿತರು ಮತ್ತು ಇತರ ಹಿಂದುಳಿದ ವರ್ಗ (ಒಬಿಸಿ)ಗಳ ನಿರ್ಲಕ್ಷ್ಯದಿಂದಾಗಿ ಸ್ವಾಮಿ ಪ್ರಸಾದ್ ಮೌರ್ಯ, ದಾರಾ ಸಿಂಗ್ ಚೌಹಾಣ್ ಮತ್ತು ಧರಮ್ ಸಿಂಗ್ ಸೈನಿ ಅವರಂತಹ ಮಂತ್ರಿಗಳು ಮತ್ತು ನಾಯಕರು ಬಿಜೆಪಿಯನ್ನು ತೊರೆದು ಉತ್ತರ ಪ್ರದೇಶದಲ್ಲಿ ಬಿಜೆಪಿಯ ಪ್ರತಿಸ್ಪರ್ಧಿ ಸಮಾಜವಾದಿ ಪಕ್ಷಕ್ಕೆ (SP) ಸೇರಿದರು.

ಇದೆಲ್ಲದರ ಮಧ್ಯೆ, ಮುಂಬರುವ ವಿಧಾನಸಭಾ ಚುನಾವಣೆಯು “80% ವರ್ಸಸ್ 20% (ಮುಸ್ಲಿಮರ)” ನಡುವಿನ ಹೋರಾಟವಾಗಿದೆ ಎಂದು ಆದಿತ್ಯನಾಥ್ ಹೇಳಿಕೆ ನೀಡುವ ಮೂಲಕ ಕೋಮು ಭಾವನೆಗಳನ್ನು ಪ್ರಚೋದಿಸುತ್ತಿದ್ದಾರೆ

ಯುಪಿಯಲ್ಲಿ, ವಿಶೇಷವಾಗಿ ಎಸ್‌ಪಿ ಮತ್ತೆ ತನ್ನ ವರ್ಚಸ್ಸನ್ನು ವೃದ್ದಿಸಿಕೊಂಡು ಮುನ್ನೆಲೆಗೆ ಬರುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿಯು ಯಾವುದೇ ಚಾನ್ಸ್‌ ತೆಗೆದುಕೊಳ್ಳಲು ಬಯಸುವುದಿಲ್ಲ ಎಂಬುದು ಸ್ಪಷ್ಟವಾಗಿದೆ. ಪಕ್ಷವು ಯೋಗಿ ಅವರನ್ನು ಅವರ ತವರು ಗೋರಖ್‌ಪುರದಿಂದ ಕಣಕ್ಕಿಳಿಸಲು ನಿರ್ಧರಿಸಿದ್ದು, ಅವರು ಮಥುರಾ ಅಥವಾ ಅಯೋಧ್ಯೆಯಿಂದ ಸ್ಪರ್ಧಿಸುತ್ತಾರೆ ಎಂಬಊಹಾಪೋಹಕ್ಕೆ ತೆರೆ ಎಳೆದಿದೆ. ಆದಿತ್ಯನಾಥ್ ಅವರು ಯುಪಿಯಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವ ವಿಶ್ವಾಸವನ್ನು ಹೊಂದಿದ್ದರೂ, ಒಬ್ಬ ಮುಖ್ಯಮಂತ್ರಿಯ ಹುದ್ದೆಯನ್ನು ಉಳಿಸಿಕೊಳ್ಳುವ ಅವರ ಸಾಮರ್ಥ್ಯವು ಪ್ರಶ್ನಾರ್ಥವಾಗಿದೆ.


ಇದನ್ನೂ ಓದಿರಿ: ವಿಶ್ಲೇಷಣೆ: ಯುಪಿಯಲ್ಲಿ ಒಬಿಸಿ ನಾಯಕರು ಬಿಜೆಪಿ ತೊರೆಯುತ್ತಿರುವುದು ಏತಕ್ಕೆ? ಎಸ್‌ಪಿಗೆ ಗೆಲುವು ಸುಲಭವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...