Homeಮುಖಪುಟಕಾರಿನ ಮೇಲೆ ನಿಂತು 'ಮದ್ಯ'ದಿಂದ ಸ್ನಾನ ಮಾಡಿದ ಯುವಕರು: ಜನಸಂದಣಿ ರಸ್ತೆಯಲ್ಲಿ ನಡೆದ ವಿಲಕ್ಷಣ...

ಕಾರಿನ ಮೇಲೆ ನಿಂತು ‘ಮದ್ಯ’ದಿಂದ ಸ್ನಾನ ಮಾಡಿದ ಯುವಕರು: ಜನಸಂದಣಿ ರಸ್ತೆಯಲ್ಲಿ ನಡೆದ ವಿಲಕ್ಷಣ ಘಟನೆಯ ವಿಡಿಯೋ ವೈರಲ್‌

- Advertisement -
- Advertisement -

ಮೂವರು ಯುವಕರು ರಸ್ತೆಯಲ್ಲಿ ಮದ್ಯ ಸೇವಿಸಿ ಪರಸ್ಪರ ಸ್ನಾನ ಮಾಡುತ್ತಿರುವ ವಿಲಕ್ಷಣ ವಿಡಿಯೋ  ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಶರ್ಟ್ ಹಾಕದ ಯುವಕರು ಕಾರಿನ ಮೇಲೆ ಒಬ್ಬರಿಗೊಬ್ಬರು ಮದ್ಯವನ್ನು ಸುರಿಯುವುದು ವಿಡಿಯೋದಲ್ಲಿ ಕಾಣಬಹುದು.

ವರದಿಯ ಪ್ರಕಾರ ಈ ಘಟನೆ ಬಿಜೆಪಿ ಆಡಳಿತದ ಉತ್ತರಪ್ರದೇಶ ಪ್ರಯಾಗರಾಜ್‌ನಲ್ಲಿ ನಡೆದಿದೆ. ಪ್ರಯಾಗರಾಜ್ ಪೊಲೀಸರು ಇಬ್ಬರು ಆರೋಪಿಗಳಿಗೆ 24,000 ರೂ. ದಂಡ ಹಾಕಿದ್ದಾರೆ ಎಂದು ತಿಳಿದು ಬಂದಿದೆ.

ಇಬ್ಬರು ಯುವಕರು ಐ20 ಕಾರಿನ ಮೇಲೆ ನಿಂತು ಪರಸ್ಪರ ಮದ್ಯವನ್ನು ಸುರಿಯುವುದರೊಂದಿಗೆ ವೀಡಿಯೊ ಪ್ರಾರಂಭವಾಗುತ್ತದೆ. ಮೂರನೇ ಯುವಕ ರಸ್ತೆಯಲ್ಲಿ ನಿಂತು ಅವರ ಜೊತೆ ಸಂಭ್ರಮಿಸುತ್ತಿರುವುದನ್ನು ಕಾಣಬಹುದು. ಬಳಿಕ ಬಿಯರ್ ಬಾಟಲ್ ತೆಗೆದುಕೊಂಡು ಒಬ್ಬರಿಗೊಬ್ಬರು ಸುರಿದುಕೊಂಡಿದ್ದಾರೆ.

ವಾಹನದ ಮೇಲಿದ್ದ ಇಬ್ಬರು ಯುವಕರು ತಮ್ಮ ಶರ್ಟ್‌ಗಳನ್ನು ತೆಗೆದು ಕೂಗಾಡಲು ಪ್ರಾರಂಭಿಸಿದರು. ಇಡೀ ಘಟನೆಯು ಪ್ರಯಾಗ್‌ರಾಜ್‌ನ ಜನನಿಬಿಡ ರಸ್ತೆಯಲ್ಲಿ ಸಂಭವಿಸಿದೆ, ಯಾರೂ ಸಾರ್ವಜನಿಕರ ಬಗ್ಗೆ ಕಾಳಜಿ ವಹಿಸಲಿಲ್ಲ. ದಾರಿಹೋಕರು ಇಡೀ ವಿಲಕ್ಷಣ ಕೃತ್ಯಗಳನ್ನು ನೋಡುತ್ತಿದ್ದರೂ ಸಹ, ಯಾರೂ ಆಕ್ಷೇಪ ವ್ಯಕ್ತಪಡಿಸಿಲ್ಲ. ಇದಾದ ಬಳಿಕ ಮೂವರು ಕಾರಿನಲ್ಲಿ ಕುಳಿತು ವೇಗವಾಗಿ ತೆರಳಿದ್ದಾರೆ. ಪ್ರತ್ಯಕ್ಷದರ್ಶಿಯೊಬ್ಬರು ಇಡೀ ಕೃತ್ಯವನ್ನು ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು ಇದೀಗ ವೈರಲ್ ಆಗಿದೆ.

ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದ್ದಂತೆ ವ್ಯಾಪಕವಾದ ಟೀಕೆ ವ್ಯಕ್ತವಾಗಿದೆ. ವಾಹನವನ್ನು ಜಪ್ತಿ ಮಾಡಿ ಮತ್ತು 10 ವರ್ಷಗಳ ಪರವಾನಗಿಯನ್ನು ರದ್ದುಗೊಳಿಸಿ. ಸಾರ್ವಜನಿಕವಾಗಿ ಅನುಚಿತ ವರ್ತನೆಗಾಗಿ ಕಾನೂನು ಕ್ರಮ ಜರುಗಿಸಿ ಎಂದು ಸಾಮಾಜಿಕ ಜಾಲತಾಣದ ಬಳಕೆದಾರರೊಬ್ಬರು ಆಗ್ರಹಿಸಿದ್ದಾರೆ.

ಸಿದ್ದಾರ್ಥ್‌ ದಾಸ್‌ ಎಂಬವರು ಈ ಕುರಿತು ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ್ದು, ‘ಅಲಹಾಬಾದ್‌ನಂತಹ ಸಣ್ಣ ಪಟ್ಟಣದಲ್ಲಿ ಇವರು ಇದನ್ನು ಹೇಗೆ ಮಾಡುತ್ತಾರೆ ಮತ್ತು ಕಾನೂನು ಕ್ರಮದಿಂದ ತಪ್ಪಿಸಿಕೊಳ್ಳಬಹುದು ಎಂದು ಹೇಗೆ ಭಾವಿಸಿದರು?’ ಎಂದು ಪ್ರಶ್ನಿಸಿದ್ದಾರೆ.

ಲುಪ್ಪಿ ಎಂಬವರು ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, ರಾಮರಾಜ್ಯದಲ್ಲಿ ಯುವಕರು ಕುಡಿದಿದ್ದಾರೆ ಎಂದು ಬರೆದಿದ್ದಾರೆ. ಪುನೀತ್‌ ಗೋಯಲ್‌ ಎಂಬವರು ಈ ಕುರಿತು ಪ್ರತಿಕ್ರಿಯಿಸಿ ಇದು ಬಾಬಾನ ಸರ್ಕಾರ, ನಶೆಯಿಂದ ಹೊರಬರಬೇಕಿತ್ತು ಎಂದು ಹೇಳಿದ್ದಾರೆ.

ಕಾರ್ತಿಕೇಯನ್‌ ಎಂಬವರು ಪ್ರತಿಕ್ರಿಯಿಸಿ, ಸಮಾಜದಲ್ಲಿ ಶಾಂತಿ ನೆಲೆಸಲು ರಾಮಮಂದಿರ ಅಗತ್ಯ ಎಂದು ಯಾರೋ ಹೇಳಿದ್ದರು ಎಂದು ಬರೆದುಕೊಂಡಿದ್ದಾರೆ.

ಇದನ್ನು ಓದಿ: ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಇಬ್ಬರ ಹತ್ಯೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ಚುನಾವಣೆ ಪ್ರಚಾರದಲ್ಲಿ ಪದೇ ಪದೇ ಸುಳ್ಳು ಹೇಳುತ್ತಿರುವುದರಿಂದ…..’,: ಮೋದಿಗೆ ಕಾಂಗ್ರೆಸ್‌ ಪ್ರಣಾಳಿಕೆಯನ್ನು ವಿವರಿಸಿ ಪತ್ರ...

0
ಕಾಂಗ್ರೆಸ್‌ ಪ್ರಣಾಳಿಕೆಯ ಬಗ್ಗೆ ಮೋದಿ, ಅಮಿತ್‌ ಶಾ ಚುನಾವಣಾ ಭಾಷಣದಲ್ಲಿ ಸುಳ್ಳು ಆಪಾದನೆ ಮಾಡುತ್ತಿರುವ ಮಧ್ಯೆ ಕಾಂಗ್ರೆಸ್‌ ಪ್ರಣಾಳಿಕೆ ಬಗ್ಗೆ ಚರ್ಚೆಗೆ ನರೇಂದ್ರ ಮೋದಿ ಅಥವಾ ಅವರಿಂದ ನಿಯೋಜಿಸಲ್ಪಟ್ಟ ಯಾರಾದರು ಬನ್ನಿ ಎಂದು...