Homeಮುಖಪುಟಕಾರಿನ ಮೇಲೆ ನಿಂತು 'ಮದ್ಯ'ದಿಂದ ಸ್ನಾನ ಮಾಡಿದ ಯುವಕರು: ಜನಸಂದಣಿ ರಸ್ತೆಯಲ್ಲಿ ನಡೆದ ವಿಲಕ್ಷಣ...

ಕಾರಿನ ಮೇಲೆ ನಿಂತು ‘ಮದ್ಯ’ದಿಂದ ಸ್ನಾನ ಮಾಡಿದ ಯುವಕರು: ಜನಸಂದಣಿ ರಸ್ತೆಯಲ್ಲಿ ನಡೆದ ವಿಲಕ್ಷಣ ಘಟನೆಯ ವಿಡಿಯೋ ವೈರಲ್‌

- Advertisement -
- Advertisement -

ಮೂವರು ಯುವಕರು ರಸ್ತೆಯಲ್ಲಿ ಮದ್ಯ ಸೇವಿಸಿ ಪರಸ್ಪರ ಸ್ನಾನ ಮಾಡುತ್ತಿರುವ ವಿಲಕ್ಷಣ ವಿಡಿಯೋ  ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಶರ್ಟ್ ಹಾಕದ ಯುವಕರು ಕಾರಿನ ಮೇಲೆ ಒಬ್ಬರಿಗೊಬ್ಬರು ಮದ್ಯವನ್ನು ಸುರಿಯುವುದು ವಿಡಿಯೋದಲ್ಲಿ ಕಾಣಬಹುದು.

ವರದಿಯ ಪ್ರಕಾರ ಈ ಘಟನೆ ಬಿಜೆಪಿ ಆಡಳಿತದ ಉತ್ತರಪ್ರದೇಶ ಪ್ರಯಾಗರಾಜ್‌ನಲ್ಲಿ ನಡೆದಿದೆ. ಪ್ರಯಾಗರಾಜ್ ಪೊಲೀಸರು ಇಬ್ಬರು ಆರೋಪಿಗಳಿಗೆ 24,000 ರೂ. ದಂಡ ಹಾಕಿದ್ದಾರೆ ಎಂದು ತಿಳಿದು ಬಂದಿದೆ.

ಇಬ್ಬರು ಯುವಕರು ಐ20 ಕಾರಿನ ಮೇಲೆ ನಿಂತು ಪರಸ್ಪರ ಮದ್ಯವನ್ನು ಸುರಿಯುವುದರೊಂದಿಗೆ ವೀಡಿಯೊ ಪ್ರಾರಂಭವಾಗುತ್ತದೆ. ಮೂರನೇ ಯುವಕ ರಸ್ತೆಯಲ್ಲಿ ನಿಂತು ಅವರ ಜೊತೆ ಸಂಭ್ರಮಿಸುತ್ತಿರುವುದನ್ನು ಕಾಣಬಹುದು. ಬಳಿಕ ಬಿಯರ್ ಬಾಟಲ್ ತೆಗೆದುಕೊಂಡು ಒಬ್ಬರಿಗೊಬ್ಬರು ಸುರಿದುಕೊಂಡಿದ್ದಾರೆ.

ವಾಹನದ ಮೇಲಿದ್ದ ಇಬ್ಬರು ಯುವಕರು ತಮ್ಮ ಶರ್ಟ್‌ಗಳನ್ನು ತೆಗೆದು ಕೂಗಾಡಲು ಪ್ರಾರಂಭಿಸಿದರು. ಇಡೀ ಘಟನೆಯು ಪ್ರಯಾಗ್‌ರಾಜ್‌ನ ಜನನಿಬಿಡ ರಸ್ತೆಯಲ್ಲಿ ಸಂಭವಿಸಿದೆ, ಯಾರೂ ಸಾರ್ವಜನಿಕರ ಬಗ್ಗೆ ಕಾಳಜಿ ವಹಿಸಲಿಲ್ಲ. ದಾರಿಹೋಕರು ಇಡೀ ವಿಲಕ್ಷಣ ಕೃತ್ಯಗಳನ್ನು ನೋಡುತ್ತಿದ್ದರೂ ಸಹ, ಯಾರೂ ಆಕ್ಷೇಪ ವ್ಯಕ್ತಪಡಿಸಿಲ್ಲ. ಇದಾದ ಬಳಿಕ ಮೂವರು ಕಾರಿನಲ್ಲಿ ಕುಳಿತು ವೇಗವಾಗಿ ತೆರಳಿದ್ದಾರೆ. ಪ್ರತ್ಯಕ್ಷದರ್ಶಿಯೊಬ್ಬರು ಇಡೀ ಕೃತ್ಯವನ್ನು ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು ಇದೀಗ ವೈರಲ್ ಆಗಿದೆ.

ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದ್ದಂತೆ ವ್ಯಾಪಕವಾದ ಟೀಕೆ ವ್ಯಕ್ತವಾಗಿದೆ. ವಾಹನವನ್ನು ಜಪ್ತಿ ಮಾಡಿ ಮತ್ತು 10 ವರ್ಷಗಳ ಪರವಾನಗಿಯನ್ನು ರದ್ದುಗೊಳಿಸಿ. ಸಾರ್ವಜನಿಕವಾಗಿ ಅನುಚಿತ ವರ್ತನೆಗಾಗಿ ಕಾನೂನು ಕ್ರಮ ಜರುಗಿಸಿ ಎಂದು ಸಾಮಾಜಿಕ ಜಾಲತಾಣದ ಬಳಕೆದಾರರೊಬ್ಬರು ಆಗ್ರಹಿಸಿದ್ದಾರೆ.

ಸಿದ್ದಾರ್ಥ್‌ ದಾಸ್‌ ಎಂಬವರು ಈ ಕುರಿತು ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ್ದು, ‘ಅಲಹಾಬಾದ್‌ನಂತಹ ಸಣ್ಣ ಪಟ್ಟಣದಲ್ಲಿ ಇವರು ಇದನ್ನು ಹೇಗೆ ಮಾಡುತ್ತಾರೆ ಮತ್ತು ಕಾನೂನು ಕ್ರಮದಿಂದ ತಪ್ಪಿಸಿಕೊಳ್ಳಬಹುದು ಎಂದು ಹೇಗೆ ಭಾವಿಸಿದರು?’ ಎಂದು ಪ್ರಶ್ನಿಸಿದ್ದಾರೆ.

ಲುಪ್ಪಿ ಎಂಬವರು ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, ರಾಮರಾಜ್ಯದಲ್ಲಿ ಯುವಕರು ಕುಡಿದಿದ್ದಾರೆ ಎಂದು ಬರೆದಿದ್ದಾರೆ. ಪುನೀತ್‌ ಗೋಯಲ್‌ ಎಂಬವರು ಈ ಕುರಿತು ಪ್ರತಿಕ್ರಿಯಿಸಿ ಇದು ಬಾಬಾನ ಸರ್ಕಾರ, ನಶೆಯಿಂದ ಹೊರಬರಬೇಕಿತ್ತು ಎಂದು ಹೇಳಿದ್ದಾರೆ.

ಕಾರ್ತಿಕೇಯನ್‌ ಎಂಬವರು ಪ್ರತಿಕ್ರಿಯಿಸಿ, ಸಮಾಜದಲ್ಲಿ ಶಾಂತಿ ನೆಲೆಸಲು ರಾಮಮಂದಿರ ಅಗತ್ಯ ಎಂದು ಯಾರೋ ಹೇಳಿದ್ದರು ಎಂದು ಬರೆದುಕೊಂಡಿದ್ದಾರೆ.

ಇದನ್ನು ಓದಿ: ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಇಬ್ಬರ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...