Homeಕರ್ನಾಟಕಚಿತ್ರರಂಗದಿಂದ ಉಪೇಂದ್ರರನ್ನು 5 ವರ್ಷ ನಿಷೇಧ ಮಾಡಿ: ಚಲನಚಿತ್ರ ವಾಣಿಜ್ಯ ಮಂಡಳಿಗೆ ಒತ್ತಾಯ

ಚಿತ್ರರಂಗದಿಂದ ಉಪೇಂದ್ರರನ್ನು 5 ವರ್ಷ ನಿಷೇಧ ಮಾಡಿ: ಚಲನಚಿತ್ರ ವಾಣಿಜ್ಯ ಮಂಡಳಿಗೆ ಒತ್ತಾಯ

- Advertisement -
- Advertisement -

ನಟ ಉಪೇಂದ್ರ ಅವರಿಗೆ ಚಲನಚಿತ್ರ ವಾಣಿಜ್ಯ ಮಂಡಳಿ ಕನಿಷ್ಠ  5 ವರ್ಷ ನಿಷೇಧ ಹೇರಬೇಕು ಎಂದು ಸಾಮಾಜಿಕ ಕಾರ್ಯಕರ್ತ ನವೀನ್‌ ಗೌಡ ಎಂಬವರು ಆಗ್ರಹಿಸಿದ್ದಾರೆ.

ಈ ಕುರಿತು ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಿಗೆ ಪತ್ರ ಬರೆದಿರುವ ನವೀನ್‌ ಗೌಡ, ದಲಿತ ಸಮುದಾಯವನ್ನು ನಿಂದಿಸುವ ಮತ್ತು ಸಮುದಾಯಗಳನ್ನು ಜಾತಿಗಳನ್ನು ಎತ್ತಿಕಟ್ಟಿ ಅಶಾಂತಿ, ಗಲಭೆ ಹುಟ್ಟಿಸುವ ಉದ್ದೇಶದಿಂದ ದಲಿತ ನಿಂದನೆ ಮಾಡಿರುವ ಉಪೇಂದ್ರ ಅಲಿಯಾಸ್ ಉಪೇಂದ್ರರಾವ್ ಗೆ ಚಲನಚಿತ್ರ ವಾಣಿಜ್ಯ ಮಂಡಳಿ ಕನಿಷ್ಠ  5ವರ್ಷ ನಿಷೇಧ ಹೇರಬೇಕು ಎಂದು ಆಗ್ರಹಿಸಿದ್ದಾರೆ.

ಕನ್ನಡದ ನಟ ಎಂದು ಹೇಳಿಕೊಳ್ಳುತ್ತಿರುವ ಉಪೇಂದ್ರ ಅಲಿಯಾಸ್ ಉಪೇಂದ್ರರಾವ್ ಅಲಿಯಾಸ್ ಉಪ್ಪಿ ಮೊನ್ನೆ (12.08.2023) ತನ್ನದೇ  ಫೇಸ್ ಬುಕ್ ಖಾತೆಯಲ್ಲಿ ತನ್ನದೇ ಮಾತುಗಳ ವಿಡಿಯೋವನ್ನು ಪ್ರಸಾರ ಮಾಡಿರುತ್ತಾರೆ. ಅವರು ತನ್ನ ವಿಡಿಯೋದಲ್ಲಿ ಕೆಟ್ಟ ಜನಗಳು ಎಂಬುದಕ್ಕೆ ಉದಾಹರಣೆಯಾಗಿ “ಊರು ಅಂದೇಲೆ ಹೊಲಗೇರಿ ಇರುತ್ತದೆ” ಎಂದು ಹೇಳಿದ್ದಾರೆ.

ಉಪೇಂದ್ರ ಅಲಿಯಾಸ್ ಉಪೇಂದ್ರ ರಾವ್ ಅಲಿಯಾಸ್ ಉಪ್ಪಿ ಬ್ರಾಹ್ಮಣ ಸಮುದಾಯಕ್ಕೆ ಸೇರಿದ್ದು ಸಾಮಾನ್ಯವಾಗಿ ದಲಿತರು ವಾಸ ಮಾಡುವ ಪ್ರದೇಶವನ್ನು ಹೊಲಗೇರಿ ಎಂದು ಹೇಳಿದ್ದಾರೆ. ಅಂದರೆ ಈ ರೀತಿ ದಲಿತರು ವಾಸ ಮಾಡುವ ಪ್ರದೇಶಗಳು ಕೆಟ್ಟ, ಪುದೇಶಗಳಾಗಿದ್ದು, ಊರು ಅಂದರೆ ಕೆಟ್ಟ ಪ್ರದೇಶಗಳೂ, ಕೆಟ್ಟ ಜನರೂ ಇರುತ್ತಾರೆ ಎಂಬ ಅರ್ಥದಲ್ಲಿ ಹೇಳಿರುತ್ತಾರೆ. ಜನ ಕೆಟ್ಟದರ ವಿರುದ್ಧ ಇರಬೇಕು ಎಂದರೆ ಹೊಲಗೇರಿ ವಿರುದ್ಧ ಇರಬೇಕು ಎಂದು ಸಮುದಾಯಗಳನ್ನು ಹೊಲೆಯರ ವಿರುದ್ಧ ಎತ್ತಿಕಟ್ಟಿದ್ದಾರೆ. ಇದು ಸಾರ್ವಜನಿಕರಿಗೆ ಭಯ ಅಥವಾ ಎಚ್ಚರಿಕೆಯನ್ನು ಉಂಟುಮಾಡುವ ಉದ್ದೇಶದಿಂದ, ಅಥವಾ ಯಾವುದೇ ವ್ಯಕ್ತಿಯನ್ನು ಸಾರ್ವಜನಿಕ ನೆಮ್ಮದಿಯ ವಿರುದ್ಧ ಅಪರಾಧ ಮಾಡಲು ಪ್ರೇರೇಪಿಸಬಹುದಾಗಿದೆ. ಜೊತೆಗೆ ಈ ಕುರಿತು ಹಲಸೂರು ಗೇಟ್ ಠಾಣೆಯಲ್ಲಿ ದೂರು ಕೂಡ ದಾಖಲಾಗಿದೆ ಎಂದು ಹೇಳಿದ್ದಾರೆ.

ಇದನ್ನು ವಾಣಿಜ್ಯ ಮಂಡಳಿ ಗಂಭೀರವಾಗಿ ಪರಿಗಣಿಸಿ ಇತಿಹಾಸವುಳ್ಳ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಗೌರವವನ್ನು ಎತ್ತಿ ಹಿಡಿದು ಶೋಷಿತರ ಜೊತೆಗೆ ವಾಣಿಜ್ಯ ಮಂಡಳಿ ನಿಲ್ಲುತ್ತದೆ ಎಂಬ ಸಂದೇಶ ಕೊಡಲು ನಟ ಎಂದು ಹೇಳಿಕೊಳ್ಳುವ ಈತನನ್ನು ಈ ಕೂಡಲೇ ಕನಿಷ್ಠ  5 ವರ್ಷ ನಿಷೇದ ಹೇರಬೇಕೆಂದು ನವೀನ್‌ ಗೌಡ ಪತ್ರದ ಮೂಲಕ ಆಗ್ರಹಿಸಿದ್ದಾರೆ.

ಇದನ್ನು ಓದಿ: ಮಣಿಪುರ ಹಿಂಸಾಚಾರಕ್ಕೆ ಸುಳ್ಳು ಕಾರಣಗಳನ್ನು ನೀಡಿದ ಅಮಿತ್ ಶಾ: ಕುಕಿ ಸಂಘಟನೆಗಳ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...