Homeದಲಿತ್ ಫೈಲ್ಸ್ದಲಿತ ಮಹಿಳೆ ತಯಾರಿಸಿದ ಊಟ ತಿನ್ನದ ಸವರ್ಣೀಯ ಮಕ್ಕಳು; ‘ಭೋಜನ್‌ ಮಾತಾ’ ಕೆಲಸದಿಂದ ಮಹಿಳೆ ವಜಾ

ದಲಿತ ಮಹಿಳೆ ತಯಾರಿಸಿದ ಊಟ ತಿನ್ನದ ಸವರ್ಣೀಯ ಮಕ್ಕಳು; ‘ಭೋಜನ್‌ ಮಾತಾ’ ಕೆಲಸದಿಂದ ಮಹಿಳೆ ವಜಾ

‘ಭೋಜನ್ ಮಾತಾ’ ಆಗಿ ನೇಮಕಗೊಂಡಿದ್ದ ದಲಿತ ಮಹಿಳೆಯನ್ನು ಉತ್ತರಖಾಂಡ್‌ ಸರ್ಕಾರ ವಜಾಗೊಳಿಸಿದೆ. ನೇಮಕಾತಿಯಲ್ಲಿ ಲೋಪವಾಗಿದೆ ಎಂದು ಕಾರಣ ನೀಡಲಾಗಿದೆ.

- Advertisement -
- Advertisement -

ಉತ್ತರಾಖಂಡ್‌ನ ಸರ್ಕಾರಿ ಶಾಲೆಯೊಂದರಲ್ಲಿ ಅಡುಗೆ ಸಿಬ್ಬಂದಿಯಾಗಿ ದಲಿತ ಮಹಿಳೆಯೊಬ್ಬರು ನೇಮಕವಾದ ಬಳಿಕ ಸವರ್ಣೀಯ ವಿದ್ಯಾರ್ಥಿಗಳು ಮಧ್ಯಾಹ್ನದ ಊಟವನ್ನು ಬಹಿಷ್ಕರಿಸಿದ್ದು ಸುದ್ದಿಯಾದ ಬೆನ್ನಲ್ಲೇ ನೇಮಕಾತಿಯಲ್ಲಿ ನಿಯಮಾವಳಿಗಳನ್ನು ಉಲ್ಲಂಘಿಸಲಾಗಿದೆ ಎಂದು ನಿರ್ಧರಿಸಿರುವ ಅಧಿಕಾರಿಗಳು ದಲಿತ ಮಹಿಳೆಯನ್ನು ಬುಧವಾರ ಕೆಲಸದಿಂದ ತೆಗೆದಿದ್ದಾರೆ.

ಸುಖಿಧಾಂಗ್ ಸರ್ಕಾರಿ ಅಂತರ ಕಾಲೇಜಿನ (ಜಿಐಸಿ) ಪ್ರಾಂಶುಪಾಲರಾದ ಪ್ರೇಮ್ ಸಿಂಗ್ ಅವರು ದಲಿತ ಮಹಿಳೆ ಸುನೀತಾ ದೇವಿ ಅವರನ್ನು ಭೋಜನ್‌ ಮಾತಾ (ಮಧ್ಯಾಹ್ನದ ಅಡುಗೆ ಮಾಡುವವರು) ಆಗಿ ನೇಮಕ ಮಾಡಿದ್ದರು. ಕಾಲೇಜಿನ ಪ್ರಾಂಶುಪಾಲರು ನೇಮಕಾತಿಯಲ್ಲಿ ನಿಯಮಗಳನ್ನು ಅನುಸರಿಸಲು ವಿಫಲರಾಗಿದ್ದಾರೆ ಎಂದು ನಾವು ವಿಚಾರಣೆಯ ಸಮಯದಲ್ಲಿ ಕಂಡುಕೊಂಡಿದ್ದೇವೆ. ಇದಾದ ನಂತರ ನಾವು ದಲಿತ ಭೋಜನ್‌ ಮಾತಾ ನೇಮಕಾತಿಯನ್ನು ಸರ್ವಾನುಮತದಿಂದ ರದ್ದುಗೊಳಿಸಿದ್ದೇವೆ ಎಂದು ಚಂಪಾವತ್ ಜಿಲ್ಲೆಯ ಮುಖ್ಯ ಶಿಕ್ಷಣ ಅಧಿಕಾರಿ (ಸಿಇಒ) ಆರ್‌.ಸಿ.ಪುರೋಹಿತ್ ಹೇಳಿದ್ದಾರೆ.

ಸವರ್ಣೀಯ ಮಹಿಳೆ ಶಕುಂತಲಾ ದೇವಿ ಅವರ ಸ್ಥಾನಕ್ಕೆ ಸುನೀತಾ ದೇವಿ ಅವರನ್ನು ಡಿಸೆಂಬರ್ 13ರಂದು ಭೋಜನ್‌ ಮಾತೆಯಾಗಿ ನೇಮಿಸಲಾಗಿತ್ತು. ದೇವಿಯವರು ನೇಮಕವಾದ ಮೊದಲ ದಿನ, ಎಲ್ಲಾ ವಿದ್ಯಾರ್ಥಿಗಳು ಮಧ್ಯಾಹ್ನದ ಊಟವನ್ನು ಒಟ್ಟಿಗೆ ಸೇವಿಸಿದರು. ಆದರೆ ಮಾರನೇ ದಿನ 6ರಿಂದ 8ನೇ ತರಗತಿಯ ಸುಮಾರು 40 ಮೇಲ್ಜಾತಿ ವಿದ್ಯಾರ್ಥಿಗಳು ಊಟಕ್ಕೆ ಬರಲಿಲ್ಲ. ಮನೆಯಿಂದ ಟಿಫಿನ್ ತರಲು ಪ್ರಾರಂಭಿಸಿದರು.

ತಮ್ಮ ಮಕ್ಕಳು ಬಹಿಷ್ಕಾರ ಹಾಕಿದ್ದನ್ನು ಸವರ್ಣೀಯ ಪೋಷಕರು ಬೆಂಬಲಿಸಿದರು. “ಹೆಚ್ಚು ಅರ್ಹ ಅಭ್ಯರ್ಥಿಯಾದ ಬ್ರಾಹ್ಮಣ ಸಮುದಾಯದ ಪುಷ್ಪಾ ಭಟ್ ಅವರನ್ನು ಕಡೆಗಣಿಸಿ ಸುನೀತಾ ದೇವಿ ಅವರನ್ನು ಭೋಜನ್‌ ಮಾತಾ ಆಗಿ ಆಯ್ಕೆ ಮಾಡಲಾಗಿದೆ” ಎಂದು ಆರೋಪಿಸಿದ್ದರು. ಈ ಘಟನೆಯು ಪ್ರತಿಭಟನೆಯ ಸ್ವರೂಪ ಪಡೆದು ತನಿಖೆಯನ್ನು ಮಾಡಲಾಯಿತು.

ಇದನ್ನೂ ಓದಿ: ಕೆ.ಆರ್ ಪೇಟೆ: ದಲಿತರ ಮೇಲೆ ದೌರ್ಜನ್ಯ – ದೂರು ನೀಡಿದ್ದಕ್ಕೆ ಅಂಗಡಿ ಮುಚ್ಚಿ ಸವರ್ಣೀಯರಿಂದ ಸಾಮಾಜಿಕ ಬಹಿಷ್ಕಾರ

ಉಪ ಶಿಕ್ಷಣಾಧಿಕಾರಿ (ಡಿಇಒ) ಅಂಶು ಬಿಷ್ತ್ ಅವರು ಮಂಗಳವಾರ ಇಂಟರ್ ಕಾಲೇಜಿಗೆ ಭೇಟಿ ನೀಡಿ ಶಾಲಾ ಆಡಳಿತ ಸಮಿತಿ (ಎಸ್‌ಎಂಸಿ), ಪೋಷಕ ಶಿಕ್ಷಕರ ಸಂಘ (ಪಿಟಿಎ) ಮತ್ತು ಗ್ರಾಮದ ಮುಖಂಡರ ಜೊತೆ ಸಭೆ ನಡೆಸಿದರು.

“ಪ್ರಾಂಶುಪಾಲರು ನೇಮಕಾತಿಯ ಮೊದಲು ಅನುಮೋದನೆಯನ್ನು ತೆಗೆದುಕೊಳ್ಳಬೇಕಾಗಿತ್ತು. ಆದರೆ ಅವರು ನಿಯಮಗಳನ್ನು ಅನುಸರಿಸಲು ವಿಫಲರಾಗಿದ್ದಾರೆ. ನಿಯಮಗಳ ಪ್ರಕಾರ, ನೇಮಕಾತಿಯ ಮೊದಲು ಡಿಇಒಯಿಂದ ಅನುಮೋದನೆ ಪಡೆಯಬೇಕು. ಹೀಗಾಗಿ ನೇಮಕಾತಿ ಪ್ರಕ್ರಿಯೆಯನ್ನು ಮತ್ತೆ ನಡೆಸಲಾಗುವುದು. ದಲಿತ ಭೋಜನ್‌ ಮಾತಾ ಮತ್ತೆ ಅರ್ಜಿ ಸಲ್ಲಿಸಬಹುದು” ಎಂದು ಪುರೋಹಿತ್ ಹೇಳಿದರು.

“ಹೊಸ ಅಡುಗೆಯವರನ್ನು ನೇಮಿಸುವವರೆಗೆ, ಇನ್ನೊಬ್ಬ ಭೋಜನ್‌ ಮಾತೆ ಅಂದರೆ ಸವರ್ಣೀಯ ಮಹಿಳೆ ಮಧ್ಯಾಹ್ನದ ಅಡುಗೆಯನ್ನು ಮಾಡುತ್ತಾರೆ. ನಾನು ಪ್ರತಿ ಜಾತಿಯ ಮಕ್ಕಳೊಂದಿಗೆ ಕುಳಿತು ಮಂಗಳವಾರ ಮಧ್ಯಾಹ್ನದ ಊಟವನ್ನು ಮಾಡಿದ್ದೇನೆ. ಈಗ ಪೋಷಕರು ಮತ್ತು ಮಕ್ಕಳ ನಡುವೆ ಯಾವುದೇ ಸಮಸ್ಯೆ ಇಲ್ಲ” ಎಂದು ಸಿಇಒ ತಿಳಿಸಿದ್ದಾರೆ.

“ನಮ್ಮ ಉನ್ನತ ಅಧಿಕಾರಿಗಳು ನೇಮಕಾತಿ ಪ್ರಕ್ರಿಯೆಯಲ್ಲಿ ಕೆಲವು ಲೋಪದೋಷಗಳನ್ನು ಕಂಡು ದಲಿತ ಭೋಜನ್‌ ಮಾತಾ ನೇಮಕಾತಿಯನ್ನು ರದ್ದುಗೊಳಿಸಿದ್ದಾರೆ. ನಾವು ಪ್ರಕ್ರಿಯೆಯನ್ನು ಮತ್ತೆ ಪ್ರಾರಂಭಿಸುತ್ತೇವೆ. ಎಲ್ಲಾ ಮಕ್ಕಳು ಇಂದಿನಿಂದ ಶಾಲೆಯಲ್ಲಿ ಮಧ್ಯಾಹ್ನದ ಊಟವನ್ನು ತಿನ್ನಲು ಪ್ರಾರಂಭಿಸಿದ್ದಾರೆ” ಎಂದು ಪ್ರೇಮ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ.

“ಮೇಲ್ವರ್ಗದ ವಿದ್ಯಾರ್ಥಿಗಳ ಪೋಷಕರು ಸರ್ಕಾರದ ನಿರ್ಧಾರದಿಂದ ಖುಷಿಯಾಗಿದ್ದಾರೆ. ಶಿಕ್ಷಣ ಅಧಿಕಾರಿಗಳ ವಿಚಾರಣೆ ಮತ್ತು ನಿರ್ಧಾರದಿಂದ ಪೋಷಕರು ತೃಪ್ತರಾಗಿದ್ದಾರೆ. ನೇಮಕಾತಿ ಪ್ರಕ್ರಿಯೆಯನ್ನು ಮತ್ತೊಮ್ಮೆ ನಡೆಸಬೇಕು. ಭೋಜನ್ಮಾತೆಯ ನೇಮಕಾತಿಯಲ್ಲಿ ಎಲ್ಲಾ ಮಾನದಂಡಗಳನ್ನು ಅನುಸರಿಸಲಾಗುವುದು. ಸವರ್ಣೀಯ ಮಕ್ಕಳು ಬಹಿಷ್ಕಾರವನ್ನು ಕೈಬಿಟ್ಟು ಹಿಂದಿನಂತೆಯೇ ಮಧ್ಯಾಹ್ನದ ಊಟ ಮಾಡುತ್ತಿದ್ದಾರೆ” ಎಂದು ಪಿಟಿಎ ಅಧ್ಯಕ್ಷ ನರೇಂದ್ರ ಜೋಶಿ ಹೇಳಿದ್ದಾರೆ.

ಇದನ್ನೂ ಓದಿರಿ: ಹರಿಹರಪುರ ಅಟ್ರಾಸಿಟಿ ಪ್ರಕರಣ: ದಲಿತ ಮುಖಂಡರನ್ನು ಬಳಸಿ ಪ್ರಕರಣ ಮುಚ್ಚಲು ಯತ್ನ?

ದೇವಿಯನ್ನು ವಜಾಗೊಳಿಸುವ ಕ್ರಮವನ್ನು ಅನೇಕ ಕಾರ್ಯಕರ್ತರು ಮತ್ತು ಮಾನವ ಹಕ್ಕುಗಳ ಹೋರಾಟಗಾರರು ಕಟುವಾಗಿ ಟೀಕಿಸಿದ್ದಾರೆ. ಇದು ಜಾತಿ ತಾರತಮ್ಯ ಮತ್ತು ಪಕ್ಷಪಾತವನ್ನು ತೋರುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

“ದಲಿತ ಮಹಿಳೆ ಮಾಡಿದ ಮಧ್ಯಾಹ್ನದ ಊಟವನ್ನು ಸವರ್ಣೀಯ ವಿದ್ಯಾರ್ಥಿಗಳು ಬಹಿಷ್ಕರಿಸುವುದು ಸಾಮಾಜಿಕ ಅನಿಷ್ಟ. ಈ ಸಂದರ್ಭದಲ್ಲಿ, ಅಧಿಕಾರಿಗಳು ಮತ್ತೊಮ್ಮೆ ಅವರನ್ನು ನೇಮಿಸಬೇಕು” ಎಂದು ಉತ್ತರಾಖಂಡ್ ಪರಿವರ್ತನ್ ಪಕ್ಷದ ಅಧ್ಯಕ್ಷ ಪಿ.ಸಿ.ತಿವಾರಿ ಆಗ್ರಹಿಸಿದ್ದಾರೆ.

ನವೆಂಬರ್ 25 ರಂದು ದಲಿತ ಸಮುದಾಯದ ಸುನಿತಾ ಅವರು ’ಭೋಜನ್ ಮಾತಾ’ (ಅಡುಗೆಯವರು) ಆಗಿ ಕೆಲಸ ಪಡೆದರು. ಅವರ ಮಾಸಿಕ ವೇತನವು 3,000 ರೂ. ಆಗಿತ್ತು. ತನ್ನ ಇಬ್ಬರು ಮಕ್ಕಳು ಮತ್ತು ಅನಾರೋಗ್ಯಕ್ಕೆ ತುತ್ತಾಗಿರುವ ನಿರುದ್ಯೋಗಿ ಪತಿಯನ್ನು ಪೋಷಿಸಲು ಈ ಕೆಲಸ ತುಂಬಾ ಮುಖ್ಯವಾಗಿತ್ತು ಎಂದು ವರದಿಗಳಾಗಿವೆ.

ಸುನೀತಾ ಅವರು ಡಿಸೆಂಬರ್ 14ರಂದು ಶಾಲೆಯಲ್ಲಿ ಅಡುಗೆ ಮಾಡಿದ ಬಳಿಕ ಬಹಿಷ್ಕಾರ ಮಾಡಲಾಯಿತು. ಸುನೀತಾ ತಮ್ಮ ಮಕ್ಕಳಿಗೆ ಅಡುಗೆ ಮಾಡಿದ್ದರಿಂದ ಸವರ್ಣೀಯ ವಿದ್ಯಾರ್ಥಿಗಳ ಪೋಷಕರು ಆಕ್ರೋಶಗೊಂಡಿದ್ದರು.

“ಡಿಸೆಂಬರ್ 13 ರಂದು ನಾನು ಶಾಲೆಗೆ ಸೇರಿದಾಗ, ಎಲ್ಲಾ ವಿದ್ಯಾರ್ಥಿಗಳು ಯಾವುದೇ ತೊಂದರೆಯಿಲ್ಲದೆ ಊಟವನ್ನು ಸೇವಿಸಿದ್ದರು. ಆದರೆ, ಮಾರನೇ ದಿನ ನಾನು ತಯಾರಿಸಿದ ಆಹಾರವನ್ನು ತಿನ್ನಲು ಮಕ್ಕಳು ನಿರಾಕರಿಸಿದಾಗ ನನಗೆ ಆಘಾತವಾಯಿತು. ಊಟ ಮಾಡಬೇಡಿ ಎಂದು ವಿದ್ಯಾರ್ಥಿಗಳಿಗೆ ಪೋಷಕರು ಹೇಳಿದ್ದರು. ನಾನು ದಲಿತ ಸಮುದಾಯದವಳು ಎಂಬ ಕಾರಣಕ್ಕೆ ಮಕ್ಕಳಿಗೆ ಅಡುಗೆ ಮಾಡಬೇಡಿ ಎಂದು ಹೇಳಲಾಗಿತ್ತು. ಇದು ತುಂಬಾ ಅವಮಾನಕರವಾಗಿತ್ತು. ನಾನು ನ್ಯಾಯ ಕೇಳೀ ಮತ್ತೆ ಎಲ್ಲಿಗೂ ಹೋಗುವುದಿಲ್ಲ” ಎಂದು ಸುನೀತಾ ನೋವು ತೋಡಿಕೊಂಡಿದ್ದರು.

ಸ್ಥಳೀಯ ‘ಸವರ್ಣೀಯ’ ಗ್ರಾಮಸ್ಥರಿಂದ ಅವಮಾನಕ್ಕೊಳಗಾದ ನಂತರ ದಲಿತ ಮಹಿಳೆ ಸುನೀತಾ ಅವರು ತೀವ್ರ ಆಘಾತಕ್ಕೆ ಒಳಗಾಗಿದ್ದಾರೆ. “ಸವರ್ಣೀಯರು ಶಕ್ತಿಶಾಲಿಗಳಾಗಿದ್ದು, ನನಗೆ ಶಾಲೆಯಲ್ಲಿ ಕೆಲಸ ಮಾಡಲು ಬಿಡುವುದಿಲ್ಲ. ನನ್ನ ನೇಮಕಾತಿಯನ್ನು ಅಸಿಂಧುಗೊಳಿಸಿ ಸವರ್ಣೀಯ ಮಹಿಳೆಗೆ ಕೆಲಸ ಕೊಟ್ಟರೂ ಆಶ್ಚರ್ಯವಿಲ್ಲ” ಎಂದು ದೇವಿಯವರು ಘಟನೆ ನಡೆದ ಬಳಿಕ ಹೇಳಿಕೆ ನೀಡಿದ್ದು, ಅವರ ಆತಂಕ ಈಗ ನಿಜವಾಗಿದೆ.

ಉತ್ತರಾಖಂಡದಲ್ಲಿ, ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನದ ಊಟದ ಯೋಜನೆಗಾಗಿ, ಮಹಿಳೆಯರನ್ನು ಅಡುಗೆ ಮಾಡಲು ನೇಮಿಸಲಾಗುತ್ತದೆ ಮತ್ತು ಅವರನ್ನು “ಭೋಜನ್ ಮಾತಾಗಳು” ಎಂದು ಕರೆಯಲಾಗುತ್ತದೆ.


ಇದನ್ನೂ ಓದಿ: ಸಾರ್ವಜನಿಕ ರಸ್ತೆ ಬಳಸಿದ್ದಕ್ಕೆ ದಲಿತ ಯುವಕನ ಮೇಲೆ ತೀವ್ರ ಹಲ್ಲೆ: ಕ್ರೂರ ಅಸ್ಪೃಶ್ಯತೆ ಆಚರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....