Homeದಲಿತ್ ಫೈಲ್ಸ್ದಲಿತ ಮಹಿಳೆ ತಯಾರಿಸಿದ ಊಟ ತಿನ್ನದ ಸವರ್ಣೀಯ ಮಕ್ಕಳು; ‘ಭೋಜನ್‌ ಮಾತಾ’ ಕೆಲಸದಿಂದ ಮಹಿಳೆ ವಜಾ

ದಲಿತ ಮಹಿಳೆ ತಯಾರಿಸಿದ ಊಟ ತಿನ್ನದ ಸವರ್ಣೀಯ ಮಕ್ಕಳು; ‘ಭೋಜನ್‌ ಮಾತಾ’ ಕೆಲಸದಿಂದ ಮಹಿಳೆ ವಜಾ

‘ಭೋಜನ್ ಮಾತಾ’ ಆಗಿ ನೇಮಕಗೊಂಡಿದ್ದ ದಲಿತ ಮಹಿಳೆಯನ್ನು ಉತ್ತರಖಾಂಡ್‌ ಸರ್ಕಾರ ವಜಾಗೊಳಿಸಿದೆ. ನೇಮಕಾತಿಯಲ್ಲಿ ಲೋಪವಾಗಿದೆ ಎಂದು ಕಾರಣ ನೀಡಲಾಗಿದೆ.

- Advertisement -
- Advertisement -

ಉತ್ತರಾಖಂಡ್‌ನ ಸರ್ಕಾರಿ ಶಾಲೆಯೊಂದರಲ್ಲಿ ಅಡುಗೆ ಸಿಬ್ಬಂದಿಯಾಗಿ ದಲಿತ ಮಹಿಳೆಯೊಬ್ಬರು ನೇಮಕವಾದ ಬಳಿಕ ಸವರ್ಣೀಯ ವಿದ್ಯಾರ್ಥಿಗಳು ಮಧ್ಯಾಹ್ನದ ಊಟವನ್ನು ಬಹಿಷ್ಕರಿಸಿದ್ದು ಸುದ್ದಿಯಾದ ಬೆನ್ನಲ್ಲೇ ನೇಮಕಾತಿಯಲ್ಲಿ ನಿಯಮಾವಳಿಗಳನ್ನು ಉಲ್ಲಂಘಿಸಲಾಗಿದೆ ಎಂದು ನಿರ್ಧರಿಸಿರುವ ಅಧಿಕಾರಿಗಳು ದಲಿತ ಮಹಿಳೆಯನ್ನು ಬುಧವಾರ ಕೆಲಸದಿಂದ ತೆಗೆದಿದ್ದಾರೆ.

ಸುಖಿಧಾಂಗ್ ಸರ್ಕಾರಿ ಅಂತರ ಕಾಲೇಜಿನ (ಜಿಐಸಿ) ಪ್ರಾಂಶುಪಾಲರಾದ ಪ್ರೇಮ್ ಸಿಂಗ್ ಅವರು ದಲಿತ ಮಹಿಳೆ ಸುನೀತಾ ದೇವಿ ಅವರನ್ನು ಭೋಜನ್‌ ಮಾತಾ (ಮಧ್ಯಾಹ್ನದ ಅಡುಗೆ ಮಾಡುವವರು) ಆಗಿ ನೇಮಕ ಮಾಡಿದ್ದರು. ಕಾಲೇಜಿನ ಪ್ರಾಂಶುಪಾಲರು ನೇಮಕಾತಿಯಲ್ಲಿ ನಿಯಮಗಳನ್ನು ಅನುಸರಿಸಲು ವಿಫಲರಾಗಿದ್ದಾರೆ ಎಂದು ನಾವು ವಿಚಾರಣೆಯ ಸಮಯದಲ್ಲಿ ಕಂಡುಕೊಂಡಿದ್ದೇವೆ. ಇದಾದ ನಂತರ ನಾವು ದಲಿತ ಭೋಜನ್‌ ಮಾತಾ ನೇಮಕಾತಿಯನ್ನು ಸರ್ವಾನುಮತದಿಂದ ರದ್ದುಗೊಳಿಸಿದ್ದೇವೆ ಎಂದು ಚಂಪಾವತ್ ಜಿಲ್ಲೆಯ ಮುಖ್ಯ ಶಿಕ್ಷಣ ಅಧಿಕಾರಿ (ಸಿಇಒ) ಆರ್‌.ಸಿ.ಪುರೋಹಿತ್ ಹೇಳಿದ್ದಾರೆ.

ಸವರ್ಣೀಯ ಮಹಿಳೆ ಶಕುಂತಲಾ ದೇವಿ ಅವರ ಸ್ಥಾನಕ್ಕೆ ಸುನೀತಾ ದೇವಿ ಅವರನ್ನು ಡಿಸೆಂಬರ್ 13ರಂದು ಭೋಜನ್‌ ಮಾತೆಯಾಗಿ ನೇಮಿಸಲಾಗಿತ್ತು. ದೇವಿಯವರು ನೇಮಕವಾದ ಮೊದಲ ದಿನ, ಎಲ್ಲಾ ವಿದ್ಯಾರ್ಥಿಗಳು ಮಧ್ಯಾಹ್ನದ ಊಟವನ್ನು ಒಟ್ಟಿಗೆ ಸೇವಿಸಿದರು. ಆದರೆ ಮಾರನೇ ದಿನ 6ರಿಂದ 8ನೇ ತರಗತಿಯ ಸುಮಾರು 40 ಮೇಲ್ಜಾತಿ ವಿದ್ಯಾರ್ಥಿಗಳು ಊಟಕ್ಕೆ ಬರಲಿಲ್ಲ. ಮನೆಯಿಂದ ಟಿಫಿನ್ ತರಲು ಪ್ರಾರಂಭಿಸಿದರು.

ತಮ್ಮ ಮಕ್ಕಳು ಬಹಿಷ್ಕಾರ ಹಾಕಿದ್ದನ್ನು ಸವರ್ಣೀಯ ಪೋಷಕರು ಬೆಂಬಲಿಸಿದರು. “ಹೆಚ್ಚು ಅರ್ಹ ಅಭ್ಯರ್ಥಿಯಾದ ಬ್ರಾಹ್ಮಣ ಸಮುದಾಯದ ಪುಷ್ಪಾ ಭಟ್ ಅವರನ್ನು ಕಡೆಗಣಿಸಿ ಸುನೀತಾ ದೇವಿ ಅವರನ್ನು ಭೋಜನ್‌ ಮಾತಾ ಆಗಿ ಆಯ್ಕೆ ಮಾಡಲಾಗಿದೆ” ಎಂದು ಆರೋಪಿಸಿದ್ದರು. ಈ ಘಟನೆಯು ಪ್ರತಿಭಟನೆಯ ಸ್ವರೂಪ ಪಡೆದು ತನಿಖೆಯನ್ನು ಮಾಡಲಾಯಿತು.

ಇದನ್ನೂ ಓದಿ: ಕೆ.ಆರ್ ಪೇಟೆ: ದಲಿತರ ಮೇಲೆ ದೌರ್ಜನ್ಯ – ದೂರು ನೀಡಿದ್ದಕ್ಕೆ ಅಂಗಡಿ ಮುಚ್ಚಿ ಸವರ್ಣೀಯರಿಂದ ಸಾಮಾಜಿಕ ಬಹಿಷ್ಕಾರ

ಉಪ ಶಿಕ್ಷಣಾಧಿಕಾರಿ (ಡಿಇಒ) ಅಂಶು ಬಿಷ್ತ್ ಅವರು ಮಂಗಳವಾರ ಇಂಟರ್ ಕಾಲೇಜಿಗೆ ಭೇಟಿ ನೀಡಿ ಶಾಲಾ ಆಡಳಿತ ಸಮಿತಿ (ಎಸ್‌ಎಂಸಿ), ಪೋಷಕ ಶಿಕ್ಷಕರ ಸಂಘ (ಪಿಟಿಎ) ಮತ್ತು ಗ್ರಾಮದ ಮುಖಂಡರ ಜೊತೆ ಸಭೆ ನಡೆಸಿದರು.

“ಪ್ರಾಂಶುಪಾಲರು ನೇಮಕಾತಿಯ ಮೊದಲು ಅನುಮೋದನೆಯನ್ನು ತೆಗೆದುಕೊಳ್ಳಬೇಕಾಗಿತ್ತು. ಆದರೆ ಅವರು ನಿಯಮಗಳನ್ನು ಅನುಸರಿಸಲು ವಿಫಲರಾಗಿದ್ದಾರೆ. ನಿಯಮಗಳ ಪ್ರಕಾರ, ನೇಮಕಾತಿಯ ಮೊದಲು ಡಿಇಒಯಿಂದ ಅನುಮೋದನೆ ಪಡೆಯಬೇಕು. ಹೀಗಾಗಿ ನೇಮಕಾತಿ ಪ್ರಕ್ರಿಯೆಯನ್ನು ಮತ್ತೆ ನಡೆಸಲಾಗುವುದು. ದಲಿತ ಭೋಜನ್‌ ಮಾತಾ ಮತ್ತೆ ಅರ್ಜಿ ಸಲ್ಲಿಸಬಹುದು” ಎಂದು ಪುರೋಹಿತ್ ಹೇಳಿದರು.

“ಹೊಸ ಅಡುಗೆಯವರನ್ನು ನೇಮಿಸುವವರೆಗೆ, ಇನ್ನೊಬ್ಬ ಭೋಜನ್‌ ಮಾತೆ ಅಂದರೆ ಸವರ್ಣೀಯ ಮಹಿಳೆ ಮಧ್ಯಾಹ್ನದ ಅಡುಗೆಯನ್ನು ಮಾಡುತ್ತಾರೆ. ನಾನು ಪ್ರತಿ ಜಾತಿಯ ಮಕ್ಕಳೊಂದಿಗೆ ಕುಳಿತು ಮಂಗಳವಾರ ಮಧ್ಯಾಹ್ನದ ಊಟವನ್ನು ಮಾಡಿದ್ದೇನೆ. ಈಗ ಪೋಷಕರು ಮತ್ತು ಮಕ್ಕಳ ನಡುವೆ ಯಾವುದೇ ಸಮಸ್ಯೆ ಇಲ್ಲ” ಎಂದು ಸಿಇಒ ತಿಳಿಸಿದ್ದಾರೆ.

“ನಮ್ಮ ಉನ್ನತ ಅಧಿಕಾರಿಗಳು ನೇಮಕಾತಿ ಪ್ರಕ್ರಿಯೆಯಲ್ಲಿ ಕೆಲವು ಲೋಪದೋಷಗಳನ್ನು ಕಂಡು ದಲಿತ ಭೋಜನ್‌ ಮಾತಾ ನೇಮಕಾತಿಯನ್ನು ರದ್ದುಗೊಳಿಸಿದ್ದಾರೆ. ನಾವು ಪ್ರಕ್ರಿಯೆಯನ್ನು ಮತ್ತೆ ಪ್ರಾರಂಭಿಸುತ್ತೇವೆ. ಎಲ್ಲಾ ಮಕ್ಕಳು ಇಂದಿನಿಂದ ಶಾಲೆಯಲ್ಲಿ ಮಧ್ಯಾಹ್ನದ ಊಟವನ್ನು ತಿನ್ನಲು ಪ್ರಾರಂಭಿಸಿದ್ದಾರೆ” ಎಂದು ಪ್ರೇಮ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ.

“ಮೇಲ್ವರ್ಗದ ವಿದ್ಯಾರ್ಥಿಗಳ ಪೋಷಕರು ಸರ್ಕಾರದ ನಿರ್ಧಾರದಿಂದ ಖುಷಿಯಾಗಿದ್ದಾರೆ. ಶಿಕ್ಷಣ ಅಧಿಕಾರಿಗಳ ವಿಚಾರಣೆ ಮತ್ತು ನಿರ್ಧಾರದಿಂದ ಪೋಷಕರು ತೃಪ್ತರಾಗಿದ್ದಾರೆ. ನೇಮಕಾತಿ ಪ್ರಕ್ರಿಯೆಯನ್ನು ಮತ್ತೊಮ್ಮೆ ನಡೆಸಬೇಕು. ಭೋಜನ್ಮಾತೆಯ ನೇಮಕಾತಿಯಲ್ಲಿ ಎಲ್ಲಾ ಮಾನದಂಡಗಳನ್ನು ಅನುಸರಿಸಲಾಗುವುದು. ಸವರ್ಣೀಯ ಮಕ್ಕಳು ಬಹಿಷ್ಕಾರವನ್ನು ಕೈಬಿಟ್ಟು ಹಿಂದಿನಂತೆಯೇ ಮಧ್ಯಾಹ್ನದ ಊಟ ಮಾಡುತ್ತಿದ್ದಾರೆ” ಎಂದು ಪಿಟಿಎ ಅಧ್ಯಕ್ಷ ನರೇಂದ್ರ ಜೋಶಿ ಹೇಳಿದ್ದಾರೆ.

ಇದನ್ನೂ ಓದಿರಿ: ಹರಿಹರಪುರ ಅಟ್ರಾಸಿಟಿ ಪ್ರಕರಣ: ದಲಿತ ಮುಖಂಡರನ್ನು ಬಳಸಿ ಪ್ರಕರಣ ಮುಚ್ಚಲು ಯತ್ನ?

ದೇವಿಯನ್ನು ವಜಾಗೊಳಿಸುವ ಕ್ರಮವನ್ನು ಅನೇಕ ಕಾರ್ಯಕರ್ತರು ಮತ್ತು ಮಾನವ ಹಕ್ಕುಗಳ ಹೋರಾಟಗಾರರು ಕಟುವಾಗಿ ಟೀಕಿಸಿದ್ದಾರೆ. ಇದು ಜಾತಿ ತಾರತಮ್ಯ ಮತ್ತು ಪಕ್ಷಪಾತವನ್ನು ತೋರುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

“ದಲಿತ ಮಹಿಳೆ ಮಾಡಿದ ಮಧ್ಯಾಹ್ನದ ಊಟವನ್ನು ಸವರ್ಣೀಯ ವಿದ್ಯಾರ್ಥಿಗಳು ಬಹಿಷ್ಕರಿಸುವುದು ಸಾಮಾಜಿಕ ಅನಿಷ್ಟ. ಈ ಸಂದರ್ಭದಲ್ಲಿ, ಅಧಿಕಾರಿಗಳು ಮತ್ತೊಮ್ಮೆ ಅವರನ್ನು ನೇಮಿಸಬೇಕು” ಎಂದು ಉತ್ತರಾಖಂಡ್ ಪರಿವರ್ತನ್ ಪಕ್ಷದ ಅಧ್ಯಕ್ಷ ಪಿ.ಸಿ.ತಿವಾರಿ ಆಗ್ರಹಿಸಿದ್ದಾರೆ.

ನವೆಂಬರ್ 25 ರಂದು ದಲಿತ ಸಮುದಾಯದ ಸುನಿತಾ ಅವರು ’ಭೋಜನ್ ಮಾತಾ’ (ಅಡುಗೆಯವರು) ಆಗಿ ಕೆಲಸ ಪಡೆದರು. ಅವರ ಮಾಸಿಕ ವೇತನವು 3,000 ರೂ. ಆಗಿತ್ತು. ತನ್ನ ಇಬ್ಬರು ಮಕ್ಕಳು ಮತ್ತು ಅನಾರೋಗ್ಯಕ್ಕೆ ತುತ್ತಾಗಿರುವ ನಿರುದ್ಯೋಗಿ ಪತಿಯನ್ನು ಪೋಷಿಸಲು ಈ ಕೆಲಸ ತುಂಬಾ ಮುಖ್ಯವಾಗಿತ್ತು ಎಂದು ವರದಿಗಳಾಗಿವೆ.

ಸುನೀತಾ ಅವರು ಡಿಸೆಂಬರ್ 14ರಂದು ಶಾಲೆಯಲ್ಲಿ ಅಡುಗೆ ಮಾಡಿದ ಬಳಿಕ ಬಹಿಷ್ಕಾರ ಮಾಡಲಾಯಿತು. ಸುನೀತಾ ತಮ್ಮ ಮಕ್ಕಳಿಗೆ ಅಡುಗೆ ಮಾಡಿದ್ದರಿಂದ ಸವರ್ಣೀಯ ವಿದ್ಯಾರ್ಥಿಗಳ ಪೋಷಕರು ಆಕ್ರೋಶಗೊಂಡಿದ್ದರು.

“ಡಿಸೆಂಬರ್ 13 ರಂದು ನಾನು ಶಾಲೆಗೆ ಸೇರಿದಾಗ, ಎಲ್ಲಾ ವಿದ್ಯಾರ್ಥಿಗಳು ಯಾವುದೇ ತೊಂದರೆಯಿಲ್ಲದೆ ಊಟವನ್ನು ಸೇವಿಸಿದ್ದರು. ಆದರೆ, ಮಾರನೇ ದಿನ ನಾನು ತಯಾರಿಸಿದ ಆಹಾರವನ್ನು ತಿನ್ನಲು ಮಕ್ಕಳು ನಿರಾಕರಿಸಿದಾಗ ನನಗೆ ಆಘಾತವಾಯಿತು. ಊಟ ಮಾಡಬೇಡಿ ಎಂದು ವಿದ್ಯಾರ್ಥಿಗಳಿಗೆ ಪೋಷಕರು ಹೇಳಿದ್ದರು. ನಾನು ದಲಿತ ಸಮುದಾಯದವಳು ಎಂಬ ಕಾರಣಕ್ಕೆ ಮಕ್ಕಳಿಗೆ ಅಡುಗೆ ಮಾಡಬೇಡಿ ಎಂದು ಹೇಳಲಾಗಿತ್ತು. ಇದು ತುಂಬಾ ಅವಮಾನಕರವಾಗಿತ್ತು. ನಾನು ನ್ಯಾಯ ಕೇಳೀ ಮತ್ತೆ ಎಲ್ಲಿಗೂ ಹೋಗುವುದಿಲ್ಲ” ಎಂದು ಸುನೀತಾ ನೋವು ತೋಡಿಕೊಂಡಿದ್ದರು.

ಸ್ಥಳೀಯ ‘ಸವರ್ಣೀಯ’ ಗ್ರಾಮಸ್ಥರಿಂದ ಅವಮಾನಕ್ಕೊಳಗಾದ ನಂತರ ದಲಿತ ಮಹಿಳೆ ಸುನೀತಾ ಅವರು ತೀವ್ರ ಆಘಾತಕ್ಕೆ ಒಳಗಾಗಿದ್ದಾರೆ. “ಸವರ್ಣೀಯರು ಶಕ್ತಿಶಾಲಿಗಳಾಗಿದ್ದು, ನನಗೆ ಶಾಲೆಯಲ್ಲಿ ಕೆಲಸ ಮಾಡಲು ಬಿಡುವುದಿಲ್ಲ. ನನ್ನ ನೇಮಕಾತಿಯನ್ನು ಅಸಿಂಧುಗೊಳಿಸಿ ಸವರ್ಣೀಯ ಮಹಿಳೆಗೆ ಕೆಲಸ ಕೊಟ್ಟರೂ ಆಶ್ಚರ್ಯವಿಲ್ಲ” ಎಂದು ದೇವಿಯವರು ಘಟನೆ ನಡೆದ ಬಳಿಕ ಹೇಳಿಕೆ ನೀಡಿದ್ದು, ಅವರ ಆತಂಕ ಈಗ ನಿಜವಾಗಿದೆ.

ಉತ್ತರಾಖಂಡದಲ್ಲಿ, ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನದ ಊಟದ ಯೋಜನೆಗಾಗಿ, ಮಹಿಳೆಯರನ್ನು ಅಡುಗೆ ಮಾಡಲು ನೇಮಿಸಲಾಗುತ್ತದೆ ಮತ್ತು ಅವರನ್ನು “ಭೋಜನ್ ಮಾತಾಗಳು” ಎಂದು ಕರೆಯಲಾಗುತ್ತದೆ.


ಇದನ್ನೂ ಓದಿ: ಸಾರ್ವಜನಿಕ ರಸ್ತೆ ಬಳಸಿದ್ದಕ್ಕೆ ದಲಿತ ಯುವಕನ ಮೇಲೆ ತೀವ್ರ ಹಲ್ಲೆ: ಕ್ರೂರ ಅಸ್ಪೃಶ್ಯತೆ ಆಚರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...