Homeದಲಿತ್ ಫೈಲ್ಸ್ದಲಿತ ಮಹಿಳೆ ತಯಾರಿಸಿದ ಊಟ ತಿನ್ನದ ಸವರ್ಣೀಯ ಮಕ್ಕಳು; ‘ಭೋಜನ್‌ ಮಾತಾ’ ಕೆಲಸದಿಂದ ಮಹಿಳೆ ವಜಾ

ದಲಿತ ಮಹಿಳೆ ತಯಾರಿಸಿದ ಊಟ ತಿನ್ನದ ಸವರ್ಣೀಯ ಮಕ್ಕಳು; ‘ಭೋಜನ್‌ ಮಾತಾ’ ಕೆಲಸದಿಂದ ಮಹಿಳೆ ವಜಾ

‘ಭೋಜನ್ ಮಾತಾ’ ಆಗಿ ನೇಮಕಗೊಂಡಿದ್ದ ದಲಿತ ಮಹಿಳೆಯನ್ನು ಉತ್ತರಖಾಂಡ್‌ ಸರ್ಕಾರ ವಜಾಗೊಳಿಸಿದೆ. ನೇಮಕಾತಿಯಲ್ಲಿ ಲೋಪವಾಗಿದೆ ಎಂದು ಕಾರಣ ನೀಡಲಾಗಿದೆ.

- Advertisement -
- Advertisement -

ಉತ್ತರಾಖಂಡ್‌ನ ಸರ್ಕಾರಿ ಶಾಲೆಯೊಂದರಲ್ಲಿ ಅಡುಗೆ ಸಿಬ್ಬಂದಿಯಾಗಿ ದಲಿತ ಮಹಿಳೆಯೊಬ್ಬರು ನೇಮಕವಾದ ಬಳಿಕ ಸವರ್ಣೀಯ ವಿದ್ಯಾರ್ಥಿಗಳು ಮಧ್ಯಾಹ್ನದ ಊಟವನ್ನು ಬಹಿಷ್ಕರಿಸಿದ್ದು ಸುದ್ದಿಯಾದ ಬೆನ್ನಲ್ಲೇ ನೇಮಕಾತಿಯಲ್ಲಿ ನಿಯಮಾವಳಿಗಳನ್ನು ಉಲ್ಲಂಘಿಸಲಾಗಿದೆ ಎಂದು ನಿರ್ಧರಿಸಿರುವ ಅಧಿಕಾರಿಗಳು ದಲಿತ ಮಹಿಳೆಯನ್ನು ಬುಧವಾರ ಕೆಲಸದಿಂದ ತೆಗೆದಿದ್ದಾರೆ.

ಸುಖಿಧಾಂಗ್ ಸರ್ಕಾರಿ ಅಂತರ ಕಾಲೇಜಿನ (ಜಿಐಸಿ) ಪ್ರಾಂಶುಪಾಲರಾದ ಪ್ರೇಮ್ ಸಿಂಗ್ ಅವರು ದಲಿತ ಮಹಿಳೆ ಸುನೀತಾ ದೇವಿ ಅವರನ್ನು ಭೋಜನ್‌ ಮಾತಾ (ಮಧ್ಯಾಹ್ನದ ಅಡುಗೆ ಮಾಡುವವರು) ಆಗಿ ನೇಮಕ ಮಾಡಿದ್ದರು. ಕಾಲೇಜಿನ ಪ್ರಾಂಶುಪಾಲರು ನೇಮಕಾತಿಯಲ್ಲಿ ನಿಯಮಗಳನ್ನು ಅನುಸರಿಸಲು ವಿಫಲರಾಗಿದ್ದಾರೆ ಎಂದು ನಾವು ವಿಚಾರಣೆಯ ಸಮಯದಲ್ಲಿ ಕಂಡುಕೊಂಡಿದ್ದೇವೆ. ಇದಾದ ನಂತರ ನಾವು ದಲಿತ ಭೋಜನ್‌ ಮಾತಾ ನೇಮಕಾತಿಯನ್ನು ಸರ್ವಾನುಮತದಿಂದ ರದ್ದುಗೊಳಿಸಿದ್ದೇವೆ ಎಂದು ಚಂಪಾವತ್ ಜಿಲ್ಲೆಯ ಮುಖ್ಯ ಶಿಕ್ಷಣ ಅಧಿಕಾರಿ (ಸಿಇಒ) ಆರ್‌.ಸಿ.ಪುರೋಹಿತ್ ಹೇಳಿದ್ದಾರೆ.

ಸವರ್ಣೀಯ ಮಹಿಳೆ ಶಕುಂತಲಾ ದೇವಿ ಅವರ ಸ್ಥಾನಕ್ಕೆ ಸುನೀತಾ ದೇವಿ ಅವರನ್ನು ಡಿಸೆಂಬರ್ 13ರಂದು ಭೋಜನ್‌ ಮಾತೆಯಾಗಿ ನೇಮಿಸಲಾಗಿತ್ತು. ದೇವಿಯವರು ನೇಮಕವಾದ ಮೊದಲ ದಿನ, ಎಲ್ಲಾ ವಿದ್ಯಾರ್ಥಿಗಳು ಮಧ್ಯಾಹ್ನದ ಊಟವನ್ನು ಒಟ್ಟಿಗೆ ಸೇವಿಸಿದರು. ಆದರೆ ಮಾರನೇ ದಿನ 6ರಿಂದ 8ನೇ ತರಗತಿಯ ಸುಮಾರು 40 ಮೇಲ್ಜಾತಿ ವಿದ್ಯಾರ್ಥಿಗಳು ಊಟಕ್ಕೆ ಬರಲಿಲ್ಲ. ಮನೆಯಿಂದ ಟಿಫಿನ್ ತರಲು ಪ್ರಾರಂಭಿಸಿದರು.

ತಮ್ಮ ಮಕ್ಕಳು ಬಹಿಷ್ಕಾರ ಹಾಕಿದ್ದನ್ನು ಸವರ್ಣೀಯ ಪೋಷಕರು ಬೆಂಬಲಿಸಿದರು. “ಹೆಚ್ಚು ಅರ್ಹ ಅಭ್ಯರ್ಥಿಯಾದ ಬ್ರಾಹ್ಮಣ ಸಮುದಾಯದ ಪುಷ್ಪಾ ಭಟ್ ಅವರನ್ನು ಕಡೆಗಣಿಸಿ ಸುನೀತಾ ದೇವಿ ಅವರನ್ನು ಭೋಜನ್‌ ಮಾತಾ ಆಗಿ ಆಯ್ಕೆ ಮಾಡಲಾಗಿದೆ” ಎಂದು ಆರೋಪಿಸಿದ್ದರು. ಈ ಘಟನೆಯು ಪ್ರತಿಭಟನೆಯ ಸ್ವರೂಪ ಪಡೆದು ತನಿಖೆಯನ್ನು ಮಾಡಲಾಯಿತು.

ಇದನ್ನೂ ಓದಿ: ಕೆ.ಆರ್ ಪೇಟೆ: ದಲಿತರ ಮೇಲೆ ದೌರ್ಜನ್ಯ – ದೂರು ನೀಡಿದ್ದಕ್ಕೆ ಅಂಗಡಿ ಮುಚ್ಚಿ ಸವರ್ಣೀಯರಿಂದ ಸಾಮಾಜಿಕ ಬಹಿಷ್ಕಾರ

ಉಪ ಶಿಕ್ಷಣಾಧಿಕಾರಿ (ಡಿಇಒ) ಅಂಶು ಬಿಷ್ತ್ ಅವರು ಮಂಗಳವಾರ ಇಂಟರ್ ಕಾಲೇಜಿಗೆ ಭೇಟಿ ನೀಡಿ ಶಾಲಾ ಆಡಳಿತ ಸಮಿತಿ (ಎಸ್‌ಎಂಸಿ), ಪೋಷಕ ಶಿಕ್ಷಕರ ಸಂಘ (ಪಿಟಿಎ) ಮತ್ತು ಗ್ರಾಮದ ಮುಖಂಡರ ಜೊತೆ ಸಭೆ ನಡೆಸಿದರು.

“ಪ್ರಾಂಶುಪಾಲರು ನೇಮಕಾತಿಯ ಮೊದಲು ಅನುಮೋದನೆಯನ್ನು ತೆಗೆದುಕೊಳ್ಳಬೇಕಾಗಿತ್ತು. ಆದರೆ ಅವರು ನಿಯಮಗಳನ್ನು ಅನುಸರಿಸಲು ವಿಫಲರಾಗಿದ್ದಾರೆ. ನಿಯಮಗಳ ಪ್ರಕಾರ, ನೇಮಕಾತಿಯ ಮೊದಲು ಡಿಇಒಯಿಂದ ಅನುಮೋದನೆ ಪಡೆಯಬೇಕು. ಹೀಗಾಗಿ ನೇಮಕಾತಿ ಪ್ರಕ್ರಿಯೆಯನ್ನು ಮತ್ತೆ ನಡೆಸಲಾಗುವುದು. ದಲಿತ ಭೋಜನ್‌ ಮಾತಾ ಮತ್ತೆ ಅರ್ಜಿ ಸಲ್ಲಿಸಬಹುದು” ಎಂದು ಪುರೋಹಿತ್ ಹೇಳಿದರು.

“ಹೊಸ ಅಡುಗೆಯವರನ್ನು ನೇಮಿಸುವವರೆಗೆ, ಇನ್ನೊಬ್ಬ ಭೋಜನ್‌ ಮಾತೆ ಅಂದರೆ ಸವರ್ಣೀಯ ಮಹಿಳೆ ಮಧ್ಯಾಹ್ನದ ಅಡುಗೆಯನ್ನು ಮಾಡುತ್ತಾರೆ. ನಾನು ಪ್ರತಿ ಜಾತಿಯ ಮಕ್ಕಳೊಂದಿಗೆ ಕುಳಿತು ಮಂಗಳವಾರ ಮಧ್ಯಾಹ್ನದ ಊಟವನ್ನು ಮಾಡಿದ್ದೇನೆ. ಈಗ ಪೋಷಕರು ಮತ್ತು ಮಕ್ಕಳ ನಡುವೆ ಯಾವುದೇ ಸಮಸ್ಯೆ ಇಲ್ಲ” ಎಂದು ಸಿಇಒ ತಿಳಿಸಿದ್ದಾರೆ.

“ನಮ್ಮ ಉನ್ನತ ಅಧಿಕಾರಿಗಳು ನೇಮಕಾತಿ ಪ್ರಕ್ರಿಯೆಯಲ್ಲಿ ಕೆಲವು ಲೋಪದೋಷಗಳನ್ನು ಕಂಡು ದಲಿತ ಭೋಜನ್‌ ಮಾತಾ ನೇಮಕಾತಿಯನ್ನು ರದ್ದುಗೊಳಿಸಿದ್ದಾರೆ. ನಾವು ಪ್ರಕ್ರಿಯೆಯನ್ನು ಮತ್ತೆ ಪ್ರಾರಂಭಿಸುತ್ತೇವೆ. ಎಲ್ಲಾ ಮಕ್ಕಳು ಇಂದಿನಿಂದ ಶಾಲೆಯಲ್ಲಿ ಮಧ್ಯಾಹ್ನದ ಊಟವನ್ನು ತಿನ್ನಲು ಪ್ರಾರಂಭಿಸಿದ್ದಾರೆ” ಎಂದು ಪ್ರೇಮ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ.

“ಮೇಲ್ವರ್ಗದ ವಿದ್ಯಾರ್ಥಿಗಳ ಪೋಷಕರು ಸರ್ಕಾರದ ನಿರ್ಧಾರದಿಂದ ಖುಷಿಯಾಗಿದ್ದಾರೆ. ಶಿಕ್ಷಣ ಅಧಿಕಾರಿಗಳ ವಿಚಾರಣೆ ಮತ್ತು ನಿರ್ಧಾರದಿಂದ ಪೋಷಕರು ತೃಪ್ತರಾಗಿದ್ದಾರೆ. ನೇಮಕಾತಿ ಪ್ರಕ್ರಿಯೆಯನ್ನು ಮತ್ತೊಮ್ಮೆ ನಡೆಸಬೇಕು. ಭೋಜನ್ಮಾತೆಯ ನೇಮಕಾತಿಯಲ್ಲಿ ಎಲ್ಲಾ ಮಾನದಂಡಗಳನ್ನು ಅನುಸರಿಸಲಾಗುವುದು. ಸವರ್ಣೀಯ ಮಕ್ಕಳು ಬಹಿಷ್ಕಾರವನ್ನು ಕೈಬಿಟ್ಟು ಹಿಂದಿನಂತೆಯೇ ಮಧ್ಯಾಹ್ನದ ಊಟ ಮಾಡುತ್ತಿದ್ದಾರೆ” ಎಂದು ಪಿಟಿಎ ಅಧ್ಯಕ್ಷ ನರೇಂದ್ರ ಜೋಶಿ ಹೇಳಿದ್ದಾರೆ.

ಇದನ್ನೂ ಓದಿರಿ: ಹರಿಹರಪುರ ಅಟ್ರಾಸಿಟಿ ಪ್ರಕರಣ: ದಲಿತ ಮುಖಂಡರನ್ನು ಬಳಸಿ ಪ್ರಕರಣ ಮುಚ್ಚಲು ಯತ್ನ?

ದೇವಿಯನ್ನು ವಜಾಗೊಳಿಸುವ ಕ್ರಮವನ್ನು ಅನೇಕ ಕಾರ್ಯಕರ್ತರು ಮತ್ತು ಮಾನವ ಹಕ್ಕುಗಳ ಹೋರಾಟಗಾರರು ಕಟುವಾಗಿ ಟೀಕಿಸಿದ್ದಾರೆ. ಇದು ಜಾತಿ ತಾರತಮ್ಯ ಮತ್ತು ಪಕ್ಷಪಾತವನ್ನು ತೋರುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

“ದಲಿತ ಮಹಿಳೆ ಮಾಡಿದ ಮಧ್ಯಾಹ್ನದ ಊಟವನ್ನು ಸವರ್ಣೀಯ ವಿದ್ಯಾರ್ಥಿಗಳು ಬಹಿಷ್ಕರಿಸುವುದು ಸಾಮಾಜಿಕ ಅನಿಷ್ಟ. ಈ ಸಂದರ್ಭದಲ್ಲಿ, ಅಧಿಕಾರಿಗಳು ಮತ್ತೊಮ್ಮೆ ಅವರನ್ನು ನೇಮಿಸಬೇಕು” ಎಂದು ಉತ್ತರಾಖಂಡ್ ಪರಿವರ್ತನ್ ಪಕ್ಷದ ಅಧ್ಯಕ್ಷ ಪಿ.ಸಿ.ತಿವಾರಿ ಆಗ್ರಹಿಸಿದ್ದಾರೆ.

ನವೆಂಬರ್ 25 ರಂದು ದಲಿತ ಸಮುದಾಯದ ಸುನಿತಾ ಅವರು ’ಭೋಜನ್ ಮಾತಾ’ (ಅಡುಗೆಯವರು) ಆಗಿ ಕೆಲಸ ಪಡೆದರು. ಅವರ ಮಾಸಿಕ ವೇತನವು 3,000 ರೂ. ಆಗಿತ್ತು. ತನ್ನ ಇಬ್ಬರು ಮಕ್ಕಳು ಮತ್ತು ಅನಾರೋಗ್ಯಕ್ಕೆ ತುತ್ತಾಗಿರುವ ನಿರುದ್ಯೋಗಿ ಪತಿಯನ್ನು ಪೋಷಿಸಲು ಈ ಕೆಲಸ ತುಂಬಾ ಮುಖ್ಯವಾಗಿತ್ತು ಎಂದು ವರದಿಗಳಾಗಿವೆ.

ಸುನೀತಾ ಅವರು ಡಿಸೆಂಬರ್ 14ರಂದು ಶಾಲೆಯಲ್ಲಿ ಅಡುಗೆ ಮಾಡಿದ ಬಳಿಕ ಬಹಿಷ್ಕಾರ ಮಾಡಲಾಯಿತು. ಸುನೀತಾ ತಮ್ಮ ಮಕ್ಕಳಿಗೆ ಅಡುಗೆ ಮಾಡಿದ್ದರಿಂದ ಸವರ್ಣೀಯ ವಿದ್ಯಾರ್ಥಿಗಳ ಪೋಷಕರು ಆಕ್ರೋಶಗೊಂಡಿದ್ದರು.

“ಡಿಸೆಂಬರ್ 13 ರಂದು ನಾನು ಶಾಲೆಗೆ ಸೇರಿದಾಗ, ಎಲ್ಲಾ ವಿದ್ಯಾರ್ಥಿಗಳು ಯಾವುದೇ ತೊಂದರೆಯಿಲ್ಲದೆ ಊಟವನ್ನು ಸೇವಿಸಿದ್ದರು. ಆದರೆ, ಮಾರನೇ ದಿನ ನಾನು ತಯಾರಿಸಿದ ಆಹಾರವನ್ನು ತಿನ್ನಲು ಮಕ್ಕಳು ನಿರಾಕರಿಸಿದಾಗ ನನಗೆ ಆಘಾತವಾಯಿತು. ಊಟ ಮಾಡಬೇಡಿ ಎಂದು ವಿದ್ಯಾರ್ಥಿಗಳಿಗೆ ಪೋಷಕರು ಹೇಳಿದ್ದರು. ನಾನು ದಲಿತ ಸಮುದಾಯದವಳು ಎಂಬ ಕಾರಣಕ್ಕೆ ಮಕ್ಕಳಿಗೆ ಅಡುಗೆ ಮಾಡಬೇಡಿ ಎಂದು ಹೇಳಲಾಗಿತ್ತು. ಇದು ತುಂಬಾ ಅವಮಾನಕರವಾಗಿತ್ತು. ನಾನು ನ್ಯಾಯ ಕೇಳೀ ಮತ್ತೆ ಎಲ್ಲಿಗೂ ಹೋಗುವುದಿಲ್ಲ” ಎಂದು ಸುನೀತಾ ನೋವು ತೋಡಿಕೊಂಡಿದ್ದರು.

ಸ್ಥಳೀಯ ‘ಸವರ್ಣೀಯ’ ಗ್ರಾಮಸ್ಥರಿಂದ ಅವಮಾನಕ್ಕೊಳಗಾದ ನಂತರ ದಲಿತ ಮಹಿಳೆ ಸುನೀತಾ ಅವರು ತೀವ್ರ ಆಘಾತಕ್ಕೆ ಒಳಗಾಗಿದ್ದಾರೆ. “ಸವರ್ಣೀಯರು ಶಕ್ತಿಶಾಲಿಗಳಾಗಿದ್ದು, ನನಗೆ ಶಾಲೆಯಲ್ಲಿ ಕೆಲಸ ಮಾಡಲು ಬಿಡುವುದಿಲ್ಲ. ನನ್ನ ನೇಮಕಾತಿಯನ್ನು ಅಸಿಂಧುಗೊಳಿಸಿ ಸವರ್ಣೀಯ ಮಹಿಳೆಗೆ ಕೆಲಸ ಕೊಟ್ಟರೂ ಆಶ್ಚರ್ಯವಿಲ್ಲ” ಎಂದು ದೇವಿಯವರು ಘಟನೆ ನಡೆದ ಬಳಿಕ ಹೇಳಿಕೆ ನೀಡಿದ್ದು, ಅವರ ಆತಂಕ ಈಗ ನಿಜವಾಗಿದೆ.

ಉತ್ತರಾಖಂಡದಲ್ಲಿ, ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನದ ಊಟದ ಯೋಜನೆಗಾಗಿ, ಮಹಿಳೆಯರನ್ನು ಅಡುಗೆ ಮಾಡಲು ನೇಮಿಸಲಾಗುತ್ತದೆ ಮತ್ತು ಅವರನ್ನು “ಭೋಜನ್ ಮಾತಾಗಳು” ಎಂದು ಕರೆಯಲಾಗುತ್ತದೆ.


ಇದನ್ನೂ ಓದಿ: ಸಾರ್ವಜನಿಕ ರಸ್ತೆ ಬಳಸಿದ್ದಕ್ಕೆ ದಲಿತ ಯುವಕನ ಮೇಲೆ ತೀವ್ರ ಹಲ್ಲೆ: ಕ್ರೂರ ಅಸ್ಪೃಶ್ಯತೆ ಆಚರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....