Homeದಲಿತ್ ಫೈಲ್ಸ್ದಲಿತ ಮಹಿಳೆ ತಯಾರಿಸಿದ ಊಟ ತಿನ್ನದ ಸವರ್ಣೀಯ ಮಕ್ಕಳು; ‘ಭೋಜನ್‌ ಮಾತಾ’ ಕೆಲಸದಿಂದ ಮಹಿಳೆ ವಜಾ

ದಲಿತ ಮಹಿಳೆ ತಯಾರಿಸಿದ ಊಟ ತಿನ್ನದ ಸವರ್ಣೀಯ ಮಕ್ಕಳು; ‘ಭೋಜನ್‌ ಮಾತಾ’ ಕೆಲಸದಿಂದ ಮಹಿಳೆ ವಜಾ

‘ಭೋಜನ್ ಮಾತಾ’ ಆಗಿ ನೇಮಕಗೊಂಡಿದ್ದ ದಲಿತ ಮಹಿಳೆಯನ್ನು ಉತ್ತರಖಾಂಡ್‌ ಸರ್ಕಾರ ವಜಾಗೊಳಿಸಿದೆ. ನೇಮಕಾತಿಯಲ್ಲಿ ಲೋಪವಾಗಿದೆ ಎಂದು ಕಾರಣ ನೀಡಲಾಗಿದೆ.

- Advertisement -
- Advertisement -

ಉತ್ತರಾಖಂಡ್‌ನ ಸರ್ಕಾರಿ ಶಾಲೆಯೊಂದರಲ್ಲಿ ಅಡುಗೆ ಸಿಬ್ಬಂದಿಯಾಗಿ ದಲಿತ ಮಹಿಳೆಯೊಬ್ಬರು ನೇಮಕವಾದ ಬಳಿಕ ಸವರ್ಣೀಯ ವಿದ್ಯಾರ್ಥಿಗಳು ಮಧ್ಯಾಹ್ನದ ಊಟವನ್ನು ಬಹಿಷ್ಕರಿಸಿದ್ದು ಸುದ್ದಿಯಾದ ಬೆನ್ನಲ್ಲೇ ನೇಮಕಾತಿಯಲ್ಲಿ ನಿಯಮಾವಳಿಗಳನ್ನು ಉಲ್ಲಂಘಿಸಲಾಗಿದೆ ಎಂದು ನಿರ್ಧರಿಸಿರುವ ಅಧಿಕಾರಿಗಳು ದಲಿತ ಮಹಿಳೆಯನ್ನು ಬುಧವಾರ ಕೆಲಸದಿಂದ ತೆಗೆದಿದ್ದಾರೆ.

ಸುಖಿಧಾಂಗ್ ಸರ್ಕಾರಿ ಅಂತರ ಕಾಲೇಜಿನ (ಜಿಐಸಿ) ಪ್ರಾಂಶುಪಾಲರಾದ ಪ್ರೇಮ್ ಸಿಂಗ್ ಅವರು ದಲಿತ ಮಹಿಳೆ ಸುನೀತಾ ದೇವಿ ಅವರನ್ನು ಭೋಜನ್‌ ಮಾತಾ (ಮಧ್ಯಾಹ್ನದ ಅಡುಗೆ ಮಾಡುವವರು) ಆಗಿ ನೇಮಕ ಮಾಡಿದ್ದರು. ಕಾಲೇಜಿನ ಪ್ರಾಂಶುಪಾಲರು ನೇಮಕಾತಿಯಲ್ಲಿ ನಿಯಮಗಳನ್ನು ಅನುಸರಿಸಲು ವಿಫಲರಾಗಿದ್ದಾರೆ ಎಂದು ನಾವು ವಿಚಾರಣೆಯ ಸಮಯದಲ್ಲಿ ಕಂಡುಕೊಂಡಿದ್ದೇವೆ. ಇದಾದ ನಂತರ ನಾವು ದಲಿತ ಭೋಜನ್‌ ಮಾತಾ ನೇಮಕಾತಿಯನ್ನು ಸರ್ವಾನುಮತದಿಂದ ರದ್ದುಗೊಳಿಸಿದ್ದೇವೆ ಎಂದು ಚಂಪಾವತ್ ಜಿಲ್ಲೆಯ ಮುಖ್ಯ ಶಿಕ್ಷಣ ಅಧಿಕಾರಿ (ಸಿಇಒ) ಆರ್‌.ಸಿ.ಪುರೋಹಿತ್ ಹೇಳಿದ್ದಾರೆ.

ಸವರ್ಣೀಯ ಮಹಿಳೆ ಶಕುಂತಲಾ ದೇವಿ ಅವರ ಸ್ಥಾನಕ್ಕೆ ಸುನೀತಾ ದೇವಿ ಅವರನ್ನು ಡಿಸೆಂಬರ್ 13ರಂದು ಭೋಜನ್‌ ಮಾತೆಯಾಗಿ ನೇಮಿಸಲಾಗಿತ್ತು. ದೇವಿಯವರು ನೇಮಕವಾದ ಮೊದಲ ದಿನ, ಎಲ್ಲಾ ವಿದ್ಯಾರ್ಥಿಗಳು ಮಧ್ಯಾಹ್ನದ ಊಟವನ್ನು ಒಟ್ಟಿಗೆ ಸೇವಿಸಿದರು. ಆದರೆ ಮಾರನೇ ದಿನ 6ರಿಂದ 8ನೇ ತರಗತಿಯ ಸುಮಾರು 40 ಮೇಲ್ಜಾತಿ ವಿದ್ಯಾರ್ಥಿಗಳು ಊಟಕ್ಕೆ ಬರಲಿಲ್ಲ. ಮನೆಯಿಂದ ಟಿಫಿನ್ ತರಲು ಪ್ರಾರಂಭಿಸಿದರು.

ತಮ್ಮ ಮಕ್ಕಳು ಬಹಿಷ್ಕಾರ ಹಾಕಿದ್ದನ್ನು ಸವರ್ಣೀಯ ಪೋಷಕರು ಬೆಂಬಲಿಸಿದರು. “ಹೆಚ್ಚು ಅರ್ಹ ಅಭ್ಯರ್ಥಿಯಾದ ಬ್ರಾಹ್ಮಣ ಸಮುದಾಯದ ಪುಷ್ಪಾ ಭಟ್ ಅವರನ್ನು ಕಡೆಗಣಿಸಿ ಸುನೀತಾ ದೇವಿ ಅವರನ್ನು ಭೋಜನ್‌ ಮಾತಾ ಆಗಿ ಆಯ್ಕೆ ಮಾಡಲಾಗಿದೆ” ಎಂದು ಆರೋಪಿಸಿದ್ದರು. ಈ ಘಟನೆಯು ಪ್ರತಿಭಟನೆಯ ಸ್ವರೂಪ ಪಡೆದು ತನಿಖೆಯನ್ನು ಮಾಡಲಾಯಿತು.

ಇದನ್ನೂ ಓದಿ: ಕೆ.ಆರ್ ಪೇಟೆ: ದಲಿತರ ಮೇಲೆ ದೌರ್ಜನ್ಯ – ದೂರು ನೀಡಿದ್ದಕ್ಕೆ ಅಂಗಡಿ ಮುಚ್ಚಿ ಸವರ್ಣೀಯರಿಂದ ಸಾಮಾಜಿಕ ಬಹಿಷ್ಕಾರ

ಉಪ ಶಿಕ್ಷಣಾಧಿಕಾರಿ (ಡಿಇಒ) ಅಂಶು ಬಿಷ್ತ್ ಅವರು ಮಂಗಳವಾರ ಇಂಟರ್ ಕಾಲೇಜಿಗೆ ಭೇಟಿ ನೀಡಿ ಶಾಲಾ ಆಡಳಿತ ಸಮಿತಿ (ಎಸ್‌ಎಂಸಿ), ಪೋಷಕ ಶಿಕ್ಷಕರ ಸಂಘ (ಪಿಟಿಎ) ಮತ್ತು ಗ್ರಾಮದ ಮುಖಂಡರ ಜೊತೆ ಸಭೆ ನಡೆಸಿದರು.

“ಪ್ರಾಂಶುಪಾಲರು ನೇಮಕಾತಿಯ ಮೊದಲು ಅನುಮೋದನೆಯನ್ನು ತೆಗೆದುಕೊಳ್ಳಬೇಕಾಗಿತ್ತು. ಆದರೆ ಅವರು ನಿಯಮಗಳನ್ನು ಅನುಸರಿಸಲು ವಿಫಲರಾಗಿದ್ದಾರೆ. ನಿಯಮಗಳ ಪ್ರಕಾರ, ನೇಮಕಾತಿಯ ಮೊದಲು ಡಿಇಒಯಿಂದ ಅನುಮೋದನೆ ಪಡೆಯಬೇಕು. ಹೀಗಾಗಿ ನೇಮಕಾತಿ ಪ್ರಕ್ರಿಯೆಯನ್ನು ಮತ್ತೆ ನಡೆಸಲಾಗುವುದು. ದಲಿತ ಭೋಜನ್‌ ಮಾತಾ ಮತ್ತೆ ಅರ್ಜಿ ಸಲ್ಲಿಸಬಹುದು” ಎಂದು ಪುರೋಹಿತ್ ಹೇಳಿದರು.

“ಹೊಸ ಅಡುಗೆಯವರನ್ನು ನೇಮಿಸುವವರೆಗೆ, ಇನ್ನೊಬ್ಬ ಭೋಜನ್‌ ಮಾತೆ ಅಂದರೆ ಸವರ್ಣೀಯ ಮಹಿಳೆ ಮಧ್ಯಾಹ್ನದ ಅಡುಗೆಯನ್ನು ಮಾಡುತ್ತಾರೆ. ನಾನು ಪ್ರತಿ ಜಾತಿಯ ಮಕ್ಕಳೊಂದಿಗೆ ಕುಳಿತು ಮಂಗಳವಾರ ಮಧ್ಯಾಹ್ನದ ಊಟವನ್ನು ಮಾಡಿದ್ದೇನೆ. ಈಗ ಪೋಷಕರು ಮತ್ತು ಮಕ್ಕಳ ನಡುವೆ ಯಾವುದೇ ಸಮಸ್ಯೆ ಇಲ್ಲ” ಎಂದು ಸಿಇಒ ತಿಳಿಸಿದ್ದಾರೆ.

“ನಮ್ಮ ಉನ್ನತ ಅಧಿಕಾರಿಗಳು ನೇಮಕಾತಿ ಪ್ರಕ್ರಿಯೆಯಲ್ಲಿ ಕೆಲವು ಲೋಪದೋಷಗಳನ್ನು ಕಂಡು ದಲಿತ ಭೋಜನ್‌ ಮಾತಾ ನೇಮಕಾತಿಯನ್ನು ರದ್ದುಗೊಳಿಸಿದ್ದಾರೆ. ನಾವು ಪ್ರಕ್ರಿಯೆಯನ್ನು ಮತ್ತೆ ಪ್ರಾರಂಭಿಸುತ್ತೇವೆ. ಎಲ್ಲಾ ಮಕ್ಕಳು ಇಂದಿನಿಂದ ಶಾಲೆಯಲ್ಲಿ ಮಧ್ಯಾಹ್ನದ ಊಟವನ್ನು ತಿನ್ನಲು ಪ್ರಾರಂಭಿಸಿದ್ದಾರೆ” ಎಂದು ಪ್ರೇಮ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ.

“ಮೇಲ್ವರ್ಗದ ವಿದ್ಯಾರ್ಥಿಗಳ ಪೋಷಕರು ಸರ್ಕಾರದ ನಿರ್ಧಾರದಿಂದ ಖುಷಿಯಾಗಿದ್ದಾರೆ. ಶಿಕ್ಷಣ ಅಧಿಕಾರಿಗಳ ವಿಚಾರಣೆ ಮತ್ತು ನಿರ್ಧಾರದಿಂದ ಪೋಷಕರು ತೃಪ್ತರಾಗಿದ್ದಾರೆ. ನೇಮಕಾತಿ ಪ್ರಕ್ರಿಯೆಯನ್ನು ಮತ್ತೊಮ್ಮೆ ನಡೆಸಬೇಕು. ಭೋಜನ್ಮಾತೆಯ ನೇಮಕಾತಿಯಲ್ಲಿ ಎಲ್ಲಾ ಮಾನದಂಡಗಳನ್ನು ಅನುಸರಿಸಲಾಗುವುದು. ಸವರ್ಣೀಯ ಮಕ್ಕಳು ಬಹಿಷ್ಕಾರವನ್ನು ಕೈಬಿಟ್ಟು ಹಿಂದಿನಂತೆಯೇ ಮಧ್ಯಾಹ್ನದ ಊಟ ಮಾಡುತ್ತಿದ್ದಾರೆ” ಎಂದು ಪಿಟಿಎ ಅಧ್ಯಕ್ಷ ನರೇಂದ್ರ ಜೋಶಿ ಹೇಳಿದ್ದಾರೆ.

ಇದನ್ನೂ ಓದಿರಿ: ಹರಿಹರಪುರ ಅಟ್ರಾಸಿಟಿ ಪ್ರಕರಣ: ದಲಿತ ಮುಖಂಡರನ್ನು ಬಳಸಿ ಪ್ರಕರಣ ಮುಚ್ಚಲು ಯತ್ನ?

ದೇವಿಯನ್ನು ವಜಾಗೊಳಿಸುವ ಕ್ರಮವನ್ನು ಅನೇಕ ಕಾರ್ಯಕರ್ತರು ಮತ್ತು ಮಾನವ ಹಕ್ಕುಗಳ ಹೋರಾಟಗಾರರು ಕಟುವಾಗಿ ಟೀಕಿಸಿದ್ದಾರೆ. ಇದು ಜಾತಿ ತಾರತಮ್ಯ ಮತ್ತು ಪಕ್ಷಪಾತವನ್ನು ತೋರುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

“ದಲಿತ ಮಹಿಳೆ ಮಾಡಿದ ಮಧ್ಯಾಹ್ನದ ಊಟವನ್ನು ಸವರ್ಣೀಯ ವಿದ್ಯಾರ್ಥಿಗಳು ಬಹಿಷ್ಕರಿಸುವುದು ಸಾಮಾಜಿಕ ಅನಿಷ್ಟ. ಈ ಸಂದರ್ಭದಲ್ಲಿ, ಅಧಿಕಾರಿಗಳು ಮತ್ತೊಮ್ಮೆ ಅವರನ್ನು ನೇಮಿಸಬೇಕು” ಎಂದು ಉತ್ತರಾಖಂಡ್ ಪರಿವರ್ತನ್ ಪಕ್ಷದ ಅಧ್ಯಕ್ಷ ಪಿ.ಸಿ.ತಿವಾರಿ ಆಗ್ರಹಿಸಿದ್ದಾರೆ.

ನವೆಂಬರ್ 25 ರಂದು ದಲಿತ ಸಮುದಾಯದ ಸುನಿತಾ ಅವರು ’ಭೋಜನ್ ಮಾತಾ’ (ಅಡುಗೆಯವರು) ಆಗಿ ಕೆಲಸ ಪಡೆದರು. ಅವರ ಮಾಸಿಕ ವೇತನವು 3,000 ರೂ. ಆಗಿತ್ತು. ತನ್ನ ಇಬ್ಬರು ಮಕ್ಕಳು ಮತ್ತು ಅನಾರೋಗ್ಯಕ್ಕೆ ತುತ್ತಾಗಿರುವ ನಿರುದ್ಯೋಗಿ ಪತಿಯನ್ನು ಪೋಷಿಸಲು ಈ ಕೆಲಸ ತುಂಬಾ ಮುಖ್ಯವಾಗಿತ್ತು ಎಂದು ವರದಿಗಳಾಗಿವೆ.

ಸುನೀತಾ ಅವರು ಡಿಸೆಂಬರ್ 14ರಂದು ಶಾಲೆಯಲ್ಲಿ ಅಡುಗೆ ಮಾಡಿದ ಬಳಿಕ ಬಹಿಷ್ಕಾರ ಮಾಡಲಾಯಿತು. ಸುನೀತಾ ತಮ್ಮ ಮಕ್ಕಳಿಗೆ ಅಡುಗೆ ಮಾಡಿದ್ದರಿಂದ ಸವರ್ಣೀಯ ವಿದ್ಯಾರ್ಥಿಗಳ ಪೋಷಕರು ಆಕ್ರೋಶಗೊಂಡಿದ್ದರು.

“ಡಿಸೆಂಬರ್ 13 ರಂದು ನಾನು ಶಾಲೆಗೆ ಸೇರಿದಾಗ, ಎಲ್ಲಾ ವಿದ್ಯಾರ್ಥಿಗಳು ಯಾವುದೇ ತೊಂದರೆಯಿಲ್ಲದೆ ಊಟವನ್ನು ಸೇವಿಸಿದ್ದರು. ಆದರೆ, ಮಾರನೇ ದಿನ ನಾನು ತಯಾರಿಸಿದ ಆಹಾರವನ್ನು ತಿನ್ನಲು ಮಕ್ಕಳು ನಿರಾಕರಿಸಿದಾಗ ನನಗೆ ಆಘಾತವಾಯಿತು. ಊಟ ಮಾಡಬೇಡಿ ಎಂದು ವಿದ್ಯಾರ್ಥಿಗಳಿಗೆ ಪೋಷಕರು ಹೇಳಿದ್ದರು. ನಾನು ದಲಿತ ಸಮುದಾಯದವಳು ಎಂಬ ಕಾರಣಕ್ಕೆ ಮಕ್ಕಳಿಗೆ ಅಡುಗೆ ಮಾಡಬೇಡಿ ಎಂದು ಹೇಳಲಾಗಿತ್ತು. ಇದು ತುಂಬಾ ಅವಮಾನಕರವಾಗಿತ್ತು. ನಾನು ನ್ಯಾಯ ಕೇಳೀ ಮತ್ತೆ ಎಲ್ಲಿಗೂ ಹೋಗುವುದಿಲ್ಲ” ಎಂದು ಸುನೀತಾ ನೋವು ತೋಡಿಕೊಂಡಿದ್ದರು.

ಸ್ಥಳೀಯ ‘ಸವರ್ಣೀಯ’ ಗ್ರಾಮಸ್ಥರಿಂದ ಅವಮಾನಕ್ಕೊಳಗಾದ ನಂತರ ದಲಿತ ಮಹಿಳೆ ಸುನೀತಾ ಅವರು ತೀವ್ರ ಆಘಾತಕ್ಕೆ ಒಳಗಾಗಿದ್ದಾರೆ. “ಸವರ್ಣೀಯರು ಶಕ್ತಿಶಾಲಿಗಳಾಗಿದ್ದು, ನನಗೆ ಶಾಲೆಯಲ್ಲಿ ಕೆಲಸ ಮಾಡಲು ಬಿಡುವುದಿಲ್ಲ. ನನ್ನ ನೇಮಕಾತಿಯನ್ನು ಅಸಿಂಧುಗೊಳಿಸಿ ಸವರ್ಣೀಯ ಮಹಿಳೆಗೆ ಕೆಲಸ ಕೊಟ್ಟರೂ ಆಶ್ಚರ್ಯವಿಲ್ಲ” ಎಂದು ದೇವಿಯವರು ಘಟನೆ ನಡೆದ ಬಳಿಕ ಹೇಳಿಕೆ ನೀಡಿದ್ದು, ಅವರ ಆತಂಕ ಈಗ ನಿಜವಾಗಿದೆ.

ಉತ್ತರಾಖಂಡದಲ್ಲಿ, ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನದ ಊಟದ ಯೋಜನೆಗಾಗಿ, ಮಹಿಳೆಯರನ್ನು ಅಡುಗೆ ಮಾಡಲು ನೇಮಿಸಲಾಗುತ್ತದೆ ಮತ್ತು ಅವರನ್ನು “ಭೋಜನ್ ಮಾತಾಗಳು” ಎಂದು ಕರೆಯಲಾಗುತ್ತದೆ.


ಇದನ್ನೂ ಓದಿ: ಸಾರ್ವಜನಿಕ ರಸ್ತೆ ಬಳಸಿದ್ದಕ್ಕೆ ದಲಿತ ಯುವಕನ ಮೇಲೆ ತೀವ್ರ ಹಲ್ಲೆ: ಕ್ರೂರ ಅಸ್ಪೃಶ್ಯತೆ ಆಚರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...