Homeಮುಖಪುಟಕೇರಳ: ದಲಿತ ಮಹಿಳೆಗೆ ಮನೆ ಕಟ್ಟುಲು ಸಾಮಾಗ್ರಿಯನ್ನು ಕೊಂಡೊಯ್ಯಲು ಬಿಡದ ಮೇಲ್ಜಾತಿ ಕುಟುಂಬ

ಕೇರಳ: ದಲಿತ ಮಹಿಳೆಗೆ ಮನೆ ಕಟ್ಟುಲು ಸಾಮಾಗ್ರಿಯನ್ನು ಕೊಂಡೊಯ್ಯಲು ಬಿಡದ ಮೇಲ್ಜಾತಿ ಕುಟುಂಬ

- Advertisement -
- Advertisement -

ಕೇರಳದ ಆಲಪುಳ ಜಿಲ್ಲೆಯ ಪಲ್ಲನಾ ಎಂಬ ಗ್ರಾಮದ ದಲಿತ ಮಹಿಳೆಯೊಬ್ಬರು ತಮ್ಮ ಜಾಗದಲ್ಲಿ ಮನೆಕಟ್ಟುವ ಸಾಮಾಗ್ರಿಗಳನ್ನು ಕೊಂಡೊಯ್ಯುದಕ್ಕೆ ಮೇಲ್ಜಾತಿ ಕುಟುಂಬಗಳು ತಡೆಯೊಡ್ಡಿದ ಘಟನೆ ನಡೆದಿದೆ. ಸುಮಾರು ಎಂಟು ತಿಂಗಳಿನಿಂದ ಅವರು ಇದಕ್ಕೆ ಪ್ರಯತ್ನಿಸುತ್ತಿದ್ದು ಪೊಲೀಸ್‌ ಸೇರಿದಂತೆ ಹಲವು ಇಲಾಖೆಗೆ ಈ ಬಗ್ಗೆ ಮನವಿಗಳನ್ನು ನೀಡಲಾಗಿತ್ತು ಎಂದು ಮಹಿಳೆ ಹೇಳಿದ್ದಾರೆ.

ರಸ್ತೆಯೊಂದರ ವಿವಾದ ಇರುವುದರಿಂದ ಆ ರಸ್ತೆಯ ಮೂಲಕ ಅವರ ಮನೆ ನಿರ್ಮಾಣ ಸಾಮಾಗ್ರಿಗಳು ತರಬಾರದು ಎಂದು ಮೇಲ್ಜಾತಿ ಕುಟುಂಬಗಳು ಅವರನ್ನು ತಡೆದಿದೆ ಎಂದು ವರದಿಯಾಗಿದೆ. ಪಂಚಾಯತ್‌ ಅಧಿಕಾರಿಗಳು ಮಹಿಳೆಗೆ ತೊಂದರೆ ಕೊಡಬಾರದು ಎಂದು ಹೇಳಿದ್ದರೂ ಮೇಲ್ಜಾತಿ ಕುಟುಂಬ ಅವರ ಮಾತನ್ನೂ ಕೇಳಿರಲಿಲ್ಲ ಎಂದು ಸಂತ್ರಸ್ಥೆ ಮಹಿಳೆ ಚಿತ್ರಾ ಆರೋಪಿಸಿದ್ದಾರೆ.

ಇದನ್ನೂ ಓದಿ: ಕೇರಳ ದಲಿತ ವಿದ್ಯಾರ್ಥಿನಿ ಹೋರಾಟಕ್ಕೆ ಜಯ: ಜಾತಿ ತಾರತಮ್ಯವೆಸಗಿದ್ದ ಪ್ರಾಧ್ಯಾಪಕನ ವಜಾ

“ನಾವು ದಲಿತರಾಗಿರುವುದರಿಂದ ನಮಗೆ ತೊಂದರೆ ನೀಡಲಾಗುತ್ತಿದೆ. ಜೋರು ಮಳೆ ಬಂದರೆ ಈಗಿರುವ ಟೆಂಟ್‌ ಜಲಾವೃತವಾಗುತ್ತದೆ. ಪತಿ ಪಾಶ್ವವಾಯು ಪೀಡಿತರಾಗಿ ಹಾಸಿಗೆಯ ಮೇಲೆ ಮಲಗಿದ್ದಾರೆ. ಅಗತ್ಯ ಬಿದ್ದರೆ ಆಂಬ್ಯುಲೆನ್ಸ್‌ ಬರಲು ಕೂಡಾ ಬಿಡುವುದಿಲ್ಲ ಎಂಬ ಭಯವಿದೆ” ಎಂದು ಸಂತ್ರಸ್ತೆ ಚಿತ್ರ ಹೇಳಿದ್ದಾರೆ.

ಎರಡು ವರ್ಷಗಳ ಹಿಂದೆ ಹರಿಪ್ಪಾಡ್ ಬ್ಲಾಕ್ ಪಂಚಾಯಿತಿ ಸರ್ಕಾರಿ ಯೋಜನೆಯ ಅಡಿಯಲ್ಲಿ ಐದು ಸೆಂಟ್ಸ್ ಜಾಗವನ್ನು ಅವರಿಗೆ ಮಂಜೂರು ಮಾಡಿತ್ತು. ಈ ವರ್ಷದ ಆರಂಭದಲ್ಲಿ, ರಾಜ್ಯ ಸರ್ಕಾರವು ಲೈಫ್ ಮಿಷನ್ ವಸತಿ ಯೋಜನೆಯಡಿ 4 ಲಕ್ಷ ರೂಪಾಯಿಗಳನ್ನು ಮಂಜೂರು ಮಾಡಿ, ಸುಮಾರು ಎಂಟು ತಿಂಗಳ ಹಿಂದೆ ಅದರ ಮೊದಲ ಕಂತು 40,000 ರೂಪಾಯಿಯನ್ನು ಬಿಡುಗಡೆ ಮಾಡಿತ್ತು.

ಆದರೆ, ಮನೆ ನಿರ್ಮಾಣಕ್ಕಾಗಿ ಮರಳು, ಕಲ್ಲು, ಸಿಮೆಂಟ್ ತುಂಬಿಕೊಂಡು ಬರುತ್ತಿದ್ದ ಲಾರಿಗಳನ್ನು ಮೇಲ್ಜಾತಿ ಕುಟುಂಬಗಳು ತಡೆದಿದ್ದಾರೆ.

ಈ ಸುದ್ದಿಯನ್ನು ರಾಜ್ಯ ಮಟ್ಟದ ಮಾಧ್ಯಮಗಳು ವರದಿ ಮಾಡುತ್ತಿದ್ದಂತೆ ಅಧಿಕಾರಿಗಳು ಮತ್ತು ಪೊಲೀಸರ ನೆರವಿನಿಂದ ಅವರ ಮನೆ ನಿರ್ಮಾಣಕ್ಕೆ ಬೇಕಾದ ಸಾಮಾಗ್ರಿಗಳನ್ನು ಬುಧವಾರ ತಂದು ಇಳಿಸಲಾಗಿದೆ.

ಇದನ್ನೂ ಓದಿ: ಲಸಿಕೆ ಸರ್ಟಿಫಿಕೇಟ್‌ನಲ್ಲಿ ಮೋದಿ ಫೋಟೋ ತೆಗೆಯಿರಿ ಎಂದು ಕೇಳುವುದು ಅಪಾಯಕಾರಿ: ಕೇರಳ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...