HomeUncategorizedದಲಿತ ಬಾಲಕರ ಬರಿಗೈಯಲ್ಲಿ ಮಲ ಎತ್ತಿಸಿದ ಮೇಲ್ಜಾತಿಯ ಗುಂಪು - ಬಂಧನ

ದಲಿತ ಬಾಲಕರ ಬರಿಗೈಯಲ್ಲಿ ಮಲ ಎತ್ತಿಸಿದ ಮೇಲ್ಜಾತಿಯ ಗುಂಪು – ಬಂಧನ

"ಮಲವನ್ನು ಗೋಣಿಚೀಲದಲ್ಲಿ ತುಂಬಿ, ತಲೆಯಮೇಲೆ ಹೊತ್ತುಕೊಂಡು 100 ಮೀಟರ್ ನಡೆಯಲು ಒತ್ತಾಯಿಸಿದರು. ನಂತರ ಅದನ್ನು  ಕಾಲುವೆಯ ಬಳಿ ಹಾಕಿಸಿದ್ದಾರೆ"

- Advertisement -
- Advertisement -

ಬರಿಯ ಕೈಗಳಿಂದ ಮಲ ತೆಗೆದುಹಾಕುವಂತೆ ಮೇಲ್ಜಾತಿ ಯುವಕರ ಗುಂಪೊಂದು ದಲಿತ ಸಮುದಾಯದ ಹುಡುಗರನ್ನು ಒತ್ತಾಯಿಸಿರುವ ಅಮಾನವೀಯ ಘಟನೆ ತಮಿಳುನಾಡಿನ ಪೆರಂಬಲೂರಿನ ಸಿರುಕೂಡಲ್‌ ಹಳ್ಳಿಯಲ್ಲಿ ನಡೆದಿದೆ.

11 ರಿಂದ 15 ವರ್ಷದೊಳಗಿನ ಐದು ದಲಿತ ಹುಡುಗರನ್ನು ಬಲವಂತವಾಗಿ ಬರಿಗೈಯಲ್ಲಿ ಮಲ ಎತ್ತಲು ಒತ್ತಾಯಿಸಿದ್ದಾರೆ ಎಂಬ ದೂರಿನ ಆಧಾರದ ಮೇಲೆ ಸಿರುಕೂಡಲ್ ಗ್ರಾಮದ ನಿವಾಸಿಗಳಾದ 20 ವರ್ಷದ ಅಬಿನೇಶ್, 25 ವರ್ಷದ ಸೆಲ್ವಕುಮಾರ್ ಮತ್ತು 24 ವರ್ಷದ ಸಿಲಂಬರಸನ್ ಎಂಬ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ಮೇಲ್ಜಾತಿ ದೌರ್ಜನ್ಯವನ್ನು ರಾಷ್ಟ್ರ ಮಟ್ಟದಲ್ಲಿ ಚರ್ಚೆಗೆ ತಂದ ಕಾರಂಚೇಡು ದಲಿತರ ಹತ್ಯಾಕಾಂಡಕ್ಕೆ 35 ವರ್ಷ.

ಹುಡುಗರು ಈ ಘಟನೆಯ ಬಗ್ಗೆ ತಮ್ಮ ಪೋಷಕರಿಗೆ ತಿಳಿಸಿದ ನಂತರ ಈ ಪ್ರಕರಣ ಬೆಳಕಿಗೆ ಬಂದಿದೆ.

“ಐದು ಹುಡುಗರು ತಮ್ಮ ಹಳ್ಳಿಯಲ್ಲಿ ತೆರೆದ ಮೈದಾನದಲ್ಲಿ ಮಲವಿಸರ್ಜನೆ ಮಾಡುತ್ತಿದ್ದರು. ಮೂವರು ಯುವಕರ ಗುಂಪು ಆ ಹುಡುಗರನ್ನು ಸುತ್ತುವರೆದು ನಿಂದಿಸಿ ಮತ್ತು ಹೊಡೆಯಲು ಪ್ರಾರಂಭಿಸಿದರು. ನಂತರ ಬರಿ ಕೈಗಳಿಂದ ಮಲವನ್ನು ನೆಲದಿಂದ ತೆಗೆದುಹಾಕುವಂತೆ ಹುಡುಗರನ್ನು ಒತ್ತಾಯಿಸಿದರು” ಎಂದು ತನಿಖೆ ನಡೆಸುತ್ತಿರುವ ಪೊಲೀಸ್ ಅಧಿಕಾರಿಯೊಬ್ಬರು ಪ್ರಕರಣ.

ಇದನ್ನೂ ಓದಿ: ಒಂದೇ ಊರಲ್ಲಿ ಪದೇ ಪದೇ ನಡೆಯುತ್ತಿರುವ ದಲಿತರ ಮೇಲಿನ ಅತ್ಯಾಚಾರ ಮತ್ತು ಜಾತಿ ದೌರ್ಜನ್ಯಗಳು

ಮಲವನ್ನು ಗೋಣಿಚೀಲದಲ್ಲಿ ತುಂಬಿ, ತಲೆಯಮೇಲೆ ಹೊತ್ತುಕೊಂಡು 100 ಮೀಟರ್ ನಡೆಯಲು ಒತ್ತಾಯಿಸಿದರು. ನಂತರ ಅದನ್ನು  ಕಾಲುವೆಯ ಬಳಿ ಹಾಕಿಸಿದ್ದಾರೆ ಎಂದು ಹೇಳಿದರು.

ಘಟನೆ ತಿಳಿದ ನಂತರ ಹುಡುಗರ ಪೋಷಕರು ಈ ವಿಷಯವನ್ನು ಪೊಲೀಸರಿಗೆ ತಿಳಿಸಿದರು. ನಂತರ ವಿಸಿಕೆ ಕಾರ್ಯಕರ್ತ ವೀರಾ ಸೆಂಗೋಳನ್ ಮತ್ತು ನೂರಾರು ಪಕ್ಷದ ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿ ರಸ್ತೆ ತಡೆ ನಡೆಸಿದರು.

ಇದನ್ನೂ ಓದಿ: ಕಳೆದ 5 ವರ್ಷಗಳಲ್ಲಿ ಪರಿಶಿಷ್ಟ ಜಾತಿಗಳ ಮೇಲಿನ ದೌರ್ಜನ್ಯಗಳಲ್ಲಿ 19% ಹೆಚ್ಚಳ!

ಪ್ರತಿಭಟನೆಯ ಮಾಹಿತಿ ಹರಡುತ್ತಿದ್ದಂತೆ, ಪೆರಂಬಲೂರ್ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎ.ಸಿ.ಕಾರ್ತಿಕೇಯನ್ ಮತ್ತು ಮರುವತ್ತೂರ್ ಪೊಲೀಸರು ಗ್ರಾಮಕ್ಕೆ ಆಗಮಿಸಿ ಗ್ರಾಮಸ್ಥರನ್ನು ವಿಚಾರಣೆ ನಡೆಸಿದರು ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಬಾಲಕರ ಮೇಲೆ ದೌರ್ಜನ್ಯ ಎಸಗಿದ್ದಕ್ಕಾಗಿ ಎಸ್‌ಸಿ/ಎಸ್‌ಟಿ ದೌರ್ಜನ್ಯ ಕಾಯ್ದೆ ಸೇರಿದಂತೆ ವಿವಿಧ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಎ.ಸಿ.ಕಾರ್ತಿಕೇಯನ್ ಹೇಳಿದರು.

ಇದನ್ನೂ ಓದಿ: ನ್ಯಾಯಾಲಯಕ್ಕೆ ಜಾತಿವಾದಿಗಳ ‘ಅತಿರೇಕದ ದೌರ್ಜನ್ಯ’ ಕಾಣಲಿಲ್ಲವೇಕೆ?

ಆರೋಪಿಗಳನ್ನು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿ ಪೆರಂಬಲೂರ್ ಉಪ ಜೈಲಿಗೆ ಕಳುಹಿಸಲಾಗಿದೆ.

ಈ ಘಟನೆಯ ನಂತರ, ಸ್ವಚ್ಚ್ ಭಾರತ್ ಯೋಜನೆಯ ಹೊರತಾಗಿಯೂ ಗ್ರಾಮದಲ್ಲಿ ಶೌಚಾಲಯಗಳ ಕೊರತೆ ಬೆಳಕಿಗೆ ಬಂದಿದೆ. ಕೆಲವು ಶ್ರೀಮಂತ ಕುಟುಂಬಗಳು ಶೌಚಾಲಯಗಳನ್ನು ಹೊಂದಿದ್ದರೆ. ಗ್ರಾಮದ ಹೆಚ್ಚಿನವರು ಬಯಲು ಮಲವಿಸರ್ಜನೆಯನ್ನು ಆಶ್ರಯಿಸಬೇಕಾಗಿದೆ ಎಂದು ಗ್ರಾಮಸ್ಥರು ಹೇಳಿದರು.


ಇದನ್ನೂ ಓದಿ: ಮೇಲ್ಜಾತಿ ಗೆಳೆಯರ ಊಟದ ತಟ್ಟೆ ಮುಟ್ಟಿದ್ದಕ್ಕೆ ದಲಿತ ಯುವಕನ ಹತ್ಯೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...