HomeUncategorizedದಲಿತ ಬಾಲಕರ ಬರಿಗೈಯಲ್ಲಿ ಮಲ ಎತ್ತಿಸಿದ ಮೇಲ್ಜಾತಿಯ ಗುಂಪು - ಬಂಧನ

ದಲಿತ ಬಾಲಕರ ಬರಿಗೈಯಲ್ಲಿ ಮಲ ಎತ್ತಿಸಿದ ಮೇಲ್ಜಾತಿಯ ಗುಂಪು – ಬಂಧನ

"ಮಲವನ್ನು ಗೋಣಿಚೀಲದಲ್ಲಿ ತುಂಬಿ, ತಲೆಯಮೇಲೆ ಹೊತ್ತುಕೊಂಡು 100 ಮೀಟರ್ ನಡೆಯಲು ಒತ್ತಾಯಿಸಿದರು. ನಂತರ ಅದನ್ನು  ಕಾಲುವೆಯ ಬಳಿ ಹಾಕಿಸಿದ್ದಾರೆ"

- Advertisement -
- Advertisement -

ಬರಿಯ ಕೈಗಳಿಂದ ಮಲ ತೆಗೆದುಹಾಕುವಂತೆ ಮೇಲ್ಜಾತಿ ಯುವಕರ ಗುಂಪೊಂದು ದಲಿತ ಸಮುದಾಯದ ಹುಡುಗರನ್ನು ಒತ್ತಾಯಿಸಿರುವ ಅಮಾನವೀಯ ಘಟನೆ ತಮಿಳುನಾಡಿನ ಪೆರಂಬಲೂರಿನ ಸಿರುಕೂಡಲ್‌ ಹಳ್ಳಿಯಲ್ಲಿ ನಡೆದಿದೆ.

11 ರಿಂದ 15 ವರ್ಷದೊಳಗಿನ ಐದು ದಲಿತ ಹುಡುಗರನ್ನು ಬಲವಂತವಾಗಿ ಬರಿಗೈಯಲ್ಲಿ ಮಲ ಎತ್ತಲು ಒತ್ತಾಯಿಸಿದ್ದಾರೆ ಎಂಬ ದೂರಿನ ಆಧಾರದ ಮೇಲೆ ಸಿರುಕೂಡಲ್ ಗ್ರಾಮದ ನಿವಾಸಿಗಳಾದ 20 ವರ್ಷದ ಅಬಿನೇಶ್, 25 ವರ್ಷದ ಸೆಲ್ವಕುಮಾರ್ ಮತ್ತು 24 ವರ್ಷದ ಸಿಲಂಬರಸನ್ ಎಂಬ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ಮೇಲ್ಜಾತಿ ದೌರ್ಜನ್ಯವನ್ನು ರಾಷ್ಟ್ರ ಮಟ್ಟದಲ್ಲಿ ಚರ್ಚೆಗೆ ತಂದ ಕಾರಂಚೇಡು ದಲಿತರ ಹತ್ಯಾಕಾಂಡಕ್ಕೆ 35 ವರ್ಷ.

ಹುಡುಗರು ಈ ಘಟನೆಯ ಬಗ್ಗೆ ತಮ್ಮ ಪೋಷಕರಿಗೆ ತಿಳಿಸಿದ ನಂತರ ಈ ಪ್ರಕರಣ ಬೆಳಕಿಗೆ ಬಂದಿದೆ.

“ಐದು ಹುಡುಗರು ತಮ್ಮ ಹಳ್ಳಿಯಲ್ಲಿ ತೆರೆದ ಮೈದಾನದಲ್ಲಿ ಮಲವಿಸರ್ಜನೆ ಮಾಡುತ್ತಿದ್ದರು. ಮೂವರು ಯುವಕರ ಗುಂಪು ಆ ಹುಡುಗರನ್ನು ಸುತ್ತುವರೆದು ನಿಂದಿಸಿ ಮತ್ತು ಹೊಡೆಯಲು ಪ್ರಾರಂಭಿಸಿದರು. ನಂತರ ಬರಿ ಕೈಗಳಿಂದ ಮಲವನ್ನು ನೆಲದಿಂದ ತೆಗೆದುಹಾಕುವಂತೆ ಹುಡುಗರನ್ನು ಒತ್ತಾಯಿಸಿದರು” ಎಂದು ತನಿಖೆ ನಡೆಸುತ್ತಿರುವ ಪೊಲೀಸ್ ಅಧಿಕಾರಿಯೊಬ್ಬರು ಪ್ರಕರಣ.

ಇದನ್ನೂ ಓದಿ: ಒಂದೇ ಊರಲ್ಲಿ ಪದೇ ಪದೇ ನಡೆಯುತ್ತಿರುವ ದಲಿತರ ಮೇಲಿನ ಅತ್ಯಾಚಾರ ಮತ್ತು ಜಾತಿ ದೌರ್ಜನ್ಯಗಳು

ಮಲವನ್ನು ಗೋಣಿಚೀಲದಲ್ಲಿ ತುಂಬಿ, ತಲೆಯಮೇಲೆ ಹೊತ್ತುಕೊಂಡು 100 ಮೀಟರ್ ನಡೆಯಲು ಒತ್ತಾಯಿಸಿದರು. ನಂತರ ಅದನ್ನು  ಕಾಲುವೆಯ ಬಳಿ ಹಾಕಿಸಿದ್ದಾರೆ ಎಂದು ಹೇಳಿದರು.

ಘಟನೆ ತಿಳಿದ ನಂತರ ಹುಡುಗರ ಪೋಷಕರು ಈ ವಿಷಯವನ್ನು ಪೊಲೀಸರಿಗೆ ತಿಳಿಸಿದರು. ನಂತರ ವಿಸಿಕೆ ಕಾರ್ಯಕರ್ತ ವೀರಾ ಸೆಂಗೋಳನ್ ಮತ್ತು ನೂರಾರು ಪಕ್ಷದ ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿ ರಸ್ತೆ ತಡೆ ನಡೆಸಿದರು.

ಇದನ್ನೂ ಓದಿ: ಕಳೆದ 5 ವರ್ಷಗಳಲ್ಲಿ ಪರಿಶಿಷ್ಟ ಜಾತಿಗಳ ಮೇಲಿನ ದೌರ್ಜನ್ಯಗಳಲ್ಲಿ 19% ಹೆಚ್ಚಳ!

ಪ್ರತಿಭಟನೆಯ ಮಾಹಿತಿ ಹರಡುತ್ತಿದ್ದಂತೆ, ಪೆರಂಬಲೂರ್ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎ.ಸಿ.ಕಾರ್ತಿಕೇಯನ್ ಮತ್ತು ಮರುವತ್ತೂರ್ ಪೊಲೀಸರು ಗ್ರಾಮಕ್ಕೆ ಆಗಮಿಸಿ ಗ್ರಾಮಸ್ಥರನ್ನು ವಿಚಾರಣೆ ನಡೆಸಿದರು ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಬಾಲಕರ ಮೇಲೆ ದೌರ್ಜನ್ಯ ಎಸಗಿದ್ದಕ್ಕಾಗಿ ಎಸ್‌ಸಿ/ಎಸ್‌ಟಿ ದೌರ್ಜನ್ಯ ಕಾಯ್ದೆ ಸೇರಿದಂತೆ ವಿವಿಧ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಎ.ಸಿ.ಕಾರ್ತಿಕೇಯನ್ ಹೇಳಿದರು.

ಇದನ್ನೂ ಓದಿ: ನ್ಯಾಯಾಲಯಕ್ಕೆ ಜಾತಿವಾದಿಗಳ ‘ಅತಿರೇಕದ ದೌರ್ಜನ್ಯ’ ಕಾಣಲಿಲ್ಲವೇಕೆ?

ಆರೋಪಿಗಳನ್ನು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿ ಪೆರಂಬಲೂರ್ ಉಪ ಜೈಲಿಗೆ ಕಳುಹಿಸಲಾಗಿದೆ.

ಈ ಘಟನೆಯ ನಂತರ, ಸ್ವಚ್ಚ್ ಭಾರತ್ ಯೋಜನೆಯ ಹೊರತಾಗಿಯೂ ಗ್ರಾಮದಲ್ಲಿ ಶೌಚಾಲಯಗಳ ಕೊರತೆ ಬೆಳಕಿಗೆ ಬಂದಿದೆ. ಕೆಲವು ಶ್ರೀಮಂತ ಕುಟುಂಬಗಳು ಶೌಚಾಲಯಗಳನ್ನು ಹೊಂದಿದ್ದರೆ. ಗ್ರಾಮದ ಹೆಚ್ಚಿನವರು ಬಯಲು ಮಲವಿಸರ್ಜನೆಯನ್ನು ಆಶ್ರಯಿಸಬೇಕಾಗಿದೆ ಎಂದು ಗ್ರಾಮಸ್ಥರು ಹೇಳಿದರು.


ಇದನ್ನೂ ಓದಿ: ಮೇಲ್ಜಾತಿ ಗೆಳೆಯರ ಊಟದ ತಟ್ಟೆ ಮುಟ್ಟಿದ್ದಕ್ಕೆ ದಲಿತ ಯುವಕನ ಹತ್ಯೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...