Homeಮುಖಪುಟಸಂತ್ರಸ್ತ ಕುಟುಂಬದ ಮೇಲೆ FIR ದಾಖಲಿಸಿ: ಮೇಲ್ಜಾತಿಗಳ ಬೃಹತ್ ಸಭೆಯಲ್ಲಿ ಒತ್ತಾಯ!

ಸಂತ್ರಸ್ತ ಕುಟುಂಬದ ಮೇಲೆ FIR ದಾಖಲಿಸಿ: ಮೇಲ್ಜಾತಿಗಳ ಬೃಹತ್ ಸಭೆಯಲ್ಲಿ ಒತ್ತಾಯ!

ವಿಧಿವಿಜ್ಞಾನ ವಿಜ್ಞಾನ ಪ್ರಯೋಗಾಲಯವು ಸಾಮೂಹಿಕ ಅತ್ಯಾಚಾರವನ್ನು ದೃಢಿಕರಿಸಿಲ್ಲ, ಆದ್ದರಿಂದ ನಾಲ್ವರು (ಆರೋಪಿಗಳನ್ನು) ಬಿಡುಗಡೆ ಮಾಡಬೇಕು ಎಂಬ ಒತ್ತಾಯ ಸಭೆಯಲ್ಲಿ ಕೇಳಿಬಂದಿದೆ.

- Advertisement -
- Advertisement -

ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿರುವ 19 ವರ್ಷದ ದಲಿತ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಆರೋಪದಡಿ ಬಂಧಿಸಲ್ಪಟ್ಟ ಆರೋಪಿಗಳನ್ನು ಬೆಂಬಲಿಸಿ ಹತ್ರಾಸ್‌ನಲ್ಲಿ ಮೇಲ್ಜಾತಿ ಎಂದು ಕರೆಯಲ್ಪಡುವ ಸಮುದಾಯದ ಸದಸ್ಯರು ಬೃಹತ್ ಸಭೆ ನಡೆಸುತ್ತಿದ್ದಾರೆ.

ನಿಷೇದಾಜ್ಞೆ ಜಾರಿಯಲ್ಲಿದ್ದರೂ, ವಿರೋಧ ಪಕ್ಷಗಳ ನಾಯಕರು ಸಂತ್ರಸ್ತ ಕುಟುಂಬ ಬೇಟಿಗೆ ತೀವ್ರ ಅಡೆತಡೆಗಳಿರುವುದರ ನಡುವೆ ಈ ಬೃಹತ್ ಸಭೆಗೆ ಅನುಮತಿ ಹೇಗೆ ನೀಡಲಾಯಿತು ಎಂಬ ಪ್ರಶ್ನೆಗಳು ಎದ್ದಿವೆ.

“ನಾವು ಸಭೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದೇವೆ. ಸಂತ್ರಸ್ತ ಯುವತಿಯ ಕುಟುಂಬದ ವಿರುದ್ಧ ಮೊದಲು ಎಫ್‌ಐಆರ್‌ ದಾಖಲಿಸಬೇಕು. ಆರೋಪಿಗಳನ್ನು ಸುಖಾಸುಮ್ಮನೆ ಗುರಿಯಾಗಿಸಲಾಗಿದೆ” ಎಂದು ಸಭೆಯ ಸಂಘಟಕರೊಬ್ಬರು ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಬಿಜೆಪಿ ನಾಯಕ ರಾಜ್ವೀರ್ ಸಿಂಗ್ ಪೆಹೆಲ್ವಾನ್ ಅವರ ಮನೆಯಲ್ಲಿ ಇಂದಿನ ಸಭೆ ನಡೆಯುತ್ತಿದೆ. ಠಾಕೂರ್‌ಗಳು ಮತ್ತು ಬ್ರಾಹ್ಮಣರು ಸೇರಿದಂತೆ ಮೇಲ್ಜಾತಿಯ ಸದಸ್ಯರು ಸಭೆಯಲ್ಲಿ ಭಾಗವಹಿಸಿದ್ದಾರೆ. ಶುಕ್ರವಾರವೂ (ಅ.02) ಸಹ ಮೃತ ಸಂತ್ರಸ್ತ ಯುವತಿ ವಾಸಿಸುತ್ತಿದ್ದ ಹಳ್ಳಿಯ ಸಮೀಪದಲ್ಲೇ ಮೇಲ್ಜಾತಿ ಸಮುದಾಯದವರು ಸಭೆ ನಡೆಸಿರುವುದು ತಡವಾಗಿ ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಹತ್ರಾಸ್ ಸಂತ್ರಸ್ತ ಕುಟುಂಬ ಕೇಳುತ್ತಿರುವುದೇನು?: 5 ಪ್ರಶ್ನೆಗಳನ್ನು ಮುಂದಿಟ್ಟ ಪ್ರಿಯಾಂಕ ಗಾಂಧಿ

 

ಸೆಪ್ಟೆಂಬರ್ 14 ರಂದು ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ 19 ವರ್ಷದ ಯುವತಿಯ ಮೇಲೆ ನಾಲ್ವರು ಮೇಲ್ಜಾತಿಯ ಪುರುಷರು ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಸೆಪ್ಟೆಂಬರ್ 29 ರಂದು ಯುವತಿ ಸಾವನ್ನಪ್ಪಿದರು, ಸ್ಥಳೀಯ ಪೊಲೀಸರು ಮರುದಿನ ಮುಂಜಾನೆ 2.30ಕ್ಕೆ ಮೃತ ಯುವತಿಯ ದೇಹವನ್ನು ಕುಟುಂಬಕ್ಕೆ ಒಪ್ಪಿಸದೇ ಸುಟ್ಟುಹಾಕಿದ್ದರು. ತಮ್ಮ ಒಪ್ಪಿಗೆಯಿಲ್ಲದೇ ಶವಸಂಸ್ಕಾರ ಬಲವಂತವಾಗಿ ಮಾಡಲಾಯಿತು ಎಂದು ಕುಟುಂಬವು ಆರೋಪಿಸಿದೆ.

ಸಾರ್ವಜನಿಕರ ಆಕ್ರೋಶ ಹೆಚ್ಚಾಗಿ, ಪ್ರತಿಭಟನೆಗಳು, ಧರಣಿಗಳು ನಡೆದ ಹಿನ್ನೆಲೆ ಹತ್ರಾಸ್‌ನಲ್ಲಿ ದೊಡ್ಡ ಸಭೆಗಳನ್ನು ನಿಷೇಧಿಸಲಾಗಿದೆ. ಆದರೆ ಇಂದಿನ ಸಭೆ ಖಾಸಗಿ ನಿವಾಸದಲ್ಲಿ ನಡೆಯುತ್ತಿರುವುದರಿಂದ ಪೊಲೀಸರ ಅನುಮತಿ ಅಗತ್ಯವಿಲ್ಲ ಎನ್ನಲಾಗಿದೆ.

ಮೊದಲ ಸಭೆಯಲ್ಲಿ ಪ್ರಕರಣದ ನಾಲ್ವರು ಆರೋಪಿಗಳು ನಿರಪರಾಧಿಗಳು ಎಂದು ಹೇಳಿದರು. ಈ ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂದು ಅವರು ಒತ್ತಾಯಿಸಿದ್ದರು. ಬಂಧಿತ ಆರೋಪಿಗಳನ್ನು ಬಿಡುಗಡೆ ಮಾಡದಿದ್ದರೆ ಆಂದೋಲನ ನಡೆಸುವುದಾಗಿ ಬೆದರಿಕೆ ಕೂಡ ಹಾಕಿದರು.

ಇದನ್ನೂ ಓದಿ: ದಲಿತ ಯುವತಿಯ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗಳ ಪರ ನಿಂತ ಸವರ್ಣ ಪರಿಷತ್!

ಆಗ್ರಾ ಫೊರೆನ್ಸಿಕ್ ಸೈನ್ಸ್ ಲ್ಯಾಬ್‌ನ ವರದಿ ಮತ್ತು ದೆಹಲಿ ಆಸ್ಪತ್ರೆಯ ಶವಪರೀಕ್ಷೆಯ ವರದಿಯನ್ನೂ ಉಲ್ಲೇಖಿಸಿದ ಮುಖಂಡರು, ಘಟನೆ ನಡೆದು ಎಂಟು ದಿನಗಳ ನಂತರ ಅತ್ಯಾಚಾರ ಎಂದು ಹೇಗೆ ಹೇಳಲಾಯಿತು ಎಂದು ಪ್ರಶ್ನಿಸಿದ್ದಾರೆ.

Hathras ' Upper Caste ' Meet Planned Despite Sec 144

’ಆರೋಪಿಗಳ ಕುಟುಂಬ ಸದಸ್ಯರು ಮತ್ತು ಸಂತ್ರಸ್ತೆಯ ಕುಟುಂಬ ಸದಸ್ಯರ ನಾರ್ಕೊ ಪರೀಕ್ಷೆಯ ಹೊರತಾಗಿ ಈ ವಿಷಯದ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂದು ನಾವು ಒತ್ತಾಯಿಸುತ್ತೇವೆ. ಇದರಿಂದಾಗಿ ನಿಜವಾದ ಅಪರಾಧಿಗೆ ಶಿಕ್ಷೆ ಸಿಗುತ್ತದೆ. ವಿಧಿವಿಜ್ಞಾನ ವಿಜ್ಞಾನ ಪ್ರಯೋಗಾಲಯವು ಸಾಮೂಹಿಕ ಅತ್ಯಾಚಾರವನ್ನು ದೃಢಿಕರಿಸಿಲ್ಲ, ಆದ್ದರಿಂದ ನಾಲ್ವರು (ಆರೋಪಿಗಳನ್ನು) ಬಿಡುಗಡೆ ಮಾಡಬೇಕು’ ಎಂದು ಹಸಯನ್ ಬ್ಲಾಕ್ ಪ್ರಮುಖ್‌ನ ಪ್ರತಿನಿಧಿ ಸುಮಂತ್ ಕಿಶೋರ್ ಸಿಂಗ್ ಹೇಳಿದ್ದಾರೆ.

ಇತ್ತ ದೇಶವೇ ಹಸ್ರಾತ್ ಸಂತ್ರಸ್ತೆಗೆ ನ್ಯಾಯ ಸಿಗಬೇಕು ಎಂದು ಹೋರಾಟಕ್ಕೆ ಇಳಿದಿದ್ದರೇ, ತಮ್ಮ ಜಾತಿಯ ಜನರು ಯಾವುದೇ ತಪ್ಪು ಮಾಡಿಲ್ಲ, ಅವರು ಅಮಾಯಕರು ಎಂದು ಸಾಬೀತು ಮಾಡಲು ಮೇಲ್ಜಾತಿ ಸಮುದಾಯ ಪಣ ತೊಟ್ಟು ನಿಂತಿದ್ದಾರೆ. ಇದಕ್ಕೆ ಸಿಎಂ ಬೆಂಬಲ ಸಹ ಇದೆ ಎಂಬ ಆರೋಪ ಕೇಳಿಬಂದಿದೆ.


ಇದನ್ನೂ ಓದಿ: ಹತ್ರಾಸ್ ಪ್ರಕರಣ ಪಕ್ಷಕ್ಕೆ ರಾಜಕೀಯ ಹಾನಿಯುಂಟುಮಾಡಿದೆ: BJP ದಲಿತ ಸಂಸದರ ಉವಾಚ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...