Homeಮುಖಪುಟಸಂತ್ರಸ್ತ ಕುಟುಂಬದ ಮೇಲೆ FIR ದಾಖಲಿಸಿ: ಮೇಲ್ಜಾತಿಗಳ ಬೃಹತ್ ಸಭೆಯಲ್ಲಿ ಒತ್ತಾಯ!

ಸಂತ್ರಸ್ತ ಕುಟುಂಬದ ಮೇಲೆ FIR ದಾಖಲಿಸಿ: ಮೇಲ್ಜಾತಿಗಳ ಬೃಹತ್ ಸಭೆಯಲ್ಲಿ ಒತ್ತಾಯ!

ವಿಧಿವಿಜ್ಞಾನ ವಿಜ್ಞಾನ ಪ್ರಯೋಗಾಲಯವು ಸಾಮೂಹಿಕ ಅತ್ಯಾಚಾರವನ್ನು ದೃಢಿಕರಿಸಿಲ್ಲ, ಆದ್ದರಿಂದ ನಾಲ್ವರು (ಆರೋಪಿಗಳನ್ನು) ಬಿಡುಗಡೆ ಮಾಡಬೇಕು ಎಂಬ ಒತ್ತಾಯ ಸಭೆಯಲ್ಲಿ ಕೇಳಿಬಂದಿದೆ.

- Advertisement -
- Advertisement -

ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿರುವ 19 ವರ್ಷದ ದಲಿತ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಆರೋಪದಡಿ ಬಂಧಿಸಲ್ಪಟ್ಟ ಆರೋಪಿಗಳನ್ನು ಬೆಂಬಲಿಸಿ ಹತ್ರಾಸ್‌ನಲ್ಲಿ ಮೇಲ್ಜಾತಿ ಎಂದು ಕರೆಯಲ್ಪಡುವ ಸಮುದಾಯದ ಸದಸ್ಯರು ಬೃಹತ್ ಸಭೆ ನಡೆಸುತ್ತಿದ್ದಾರೆ.

ನಿಷೇದಾಜ್ಞೆ ಜಾರಿಯಲ್ಲಿದ್ದರೂ, ವಿರೋಧ ಪಕ್ಷಗಳ ನಾಯಕರು ಸಂತ್ರಸ್ತ ಕುಟುಂಬ ಬೇಟಿಗೆ ತೀವ್ರ ಅಡೆತಡೆಗಳಿರುವುದರ ನಡುವೆ ಈ ಬೃಹತ್ ಸಭೆಗೆ ಅನುಮತಿ ಹೇಗೆ ನೀಡಲಾಯಿತು ಎಂಬ ಪ್ರಶ್ನೆಗಳು ಎದ್ದಿವೆ.

“ನಾವು ಸಭೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದೇವೆ. ಸಂತ್ರಸ್ತ ಯುವತಿಯ ಕುಟುಂಬದ ವಿರುದ್ಧ ಮೊದಲು ಎಫ್‌ಐಆರ್‌ ದಾಖಲಿಸಬೇಕು. ಆರೋಪಿಗಳನ್ನು ಸುಖಾಸುಮ್ಮನೆ ಗುರಿಯಾಗಿಸಲಾಗಿದೆ” ಎಂದು ಸಭೆಯ ಸಂಘಟಕರೊಬ್ಬರು ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಬಿಜೆಪಿ ನಾಯಕ ರಾಜ್ವೀರ್ ಸಿಂಗ್ ಪೆಹೆಲ್ವಾನ್ ಅವರ ಮನೆಯಲ್ಲಿ ಇಂದಿನ ಸಭೆ ನಡೆಯುತ್ತಿದೆ. ಠಾಕೂರ್‌ಗಳು ಮತ್ತು ಬ್ರಾಹ್ಮಣರು ಸೇರಿದಂತೆ ಮೇಲ್ಜಾತಿಯ ಸದಸ್ಯರು ಸಭೆಯಲ್ಲಿ ಭಾಗವಹಿಸಿದ್ದಾರೆ. ಶುಕ್ರವಾರವೂ (ಅ.02) ಸಹ ಮೃತ ಸಂತ್ರಸ್ತ ಯುವತಿ ವಾಸಿಸುತ್ತಿದ್ದ ಹಳ್ಳಿಯ ಸಮೀಪದಲ್ಲೇ ಮೇಲ್ಜಾತಿ ಸಮುದಾಯದವರು ಸಭೆ ನಡೆಸಿರುವುದು ತಡವಾಗಿ ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಹತ್ರಾಸ್ ಸಂತ್ರಸ್ತ ಕುಟುಂಬ ಕೇಳುತ್ತಿರುವುದೇನು?: 5 ಪ್ರಶ್ನೆಗಳನ್ನು ಮುಂದಿಟ್ಟ ಪ್ರಿಯಾಂಕ ಗಾಂಧಿ

 

ಸೆಪ್ಟೆಂಬರ್ 14 ರಂದು ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ 19 ವರ್ಷದ ಯುವತಿಯ ಮೇಲೆ ನಾಲ್ವರು ಮೇಲ್ಜಾತಿಯ ಪುರುಷರು ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಸೆಪ್ಟೆಂಬರ್ 29 ರಂದು ಯುವತಿ ಸಾವನ್ನಪ್ಪಿದರು, ಸ್ಥಳೀಯ ಪೊಲೀಸರು ಮರುದಿನ ಮುಂಜಾನೆ 2.30ಕ್ಕೆ ಮೃತ ಯುವತಿಯ ದೇಹವನ್ನು ಕುಟುಂಬಕ್ಕೆ ಒಪ್ಪಿಸದೇ ಸುಟ್ಟುಹಾಕಿದ್ದರು. ತಮ್ಮ ಒಪ್ಪಿಗೆಯಿಲ್ಲದೇ ಶವಸಂಸ್ಕಾರ ಬಲವಂತವಾಗಿ ಮಾಡಲಾಯಿತು ಎಂದು ಕುಟುಂಬವು ಆರೋಪಿಸಿದೆ.

ಸಾರ್ವಜನಿಕರ ಆಕ್ರೋಶ ಹೆಚ್ಚಾಗಿ, ಪ್ರತಿಭಟನೆಗಳು, ಧರಣಿಗಳು ನಡೆದ ಹಿನ್ನೆಲೆ ಹತ್ರಾಸ್‌ನಲ್ಲಿ ದೊಡ್ಡ ಸಭೆಗಳನ್ನು ನಿಷೇಧಿಸಲಾಗಿದೆ. ಆದರೆ ಇಂದಿನ ಸಭೆ ಖಾಸಗಿ ನಿವಾಸದಲ್ಲಿ ನಡೆಯುತ್ತಿರುವುದರಿಂದ ಪೊಲೀಸರ ಅನುಮತಿ ಅಗತ್ಯವಿಲ್ಲ ಎನ್ನಲಾಗಿದೆ.

ಮೊದಲ ಸಭೆಯಲ್ಲಿ ಪ್ರಕರಣದ ನಾಲ್ವರು ಆರೋಪಿಗಳು ನಿರಪರಾಧಿಗಳು ಎಂದು ಹೇಳಿದರು. ಈ ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂದು ಅವರು ಒತ್ತಾಯಿಸಿದ್ದರು. ಬಂಧಿತ ಆರೋಪಿಗಳನ್ನು ಬಿಡುಗಡೆ ಮಾಡದಿದ್ದರೆ ಆಂದೋಲನ ನಡೆಸುವುದಾಗಿ ಬೆದರಿಕೆ ಕೂಡ ಹಾಕಿದರು.

ಇದನ್ನೂ ಓದಿ: ದಲಿತ ಯುವತಿಯ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗಳ ಪರ ನಿಂತ ಸವರ್ಣ ಪರಿಷತ್!

ಆಗ್ರಾ ಫೊರೆನ್ಸಿಕ್ ಸೈನ್ಸ್ ಲ್ಯಾಬ್‌ನ ವರದಿ ಮತ್ತು ದೆಹಲಿ ಆಸ್ಪತ್ರೆಯ ಶವಪರೀಕ್ಷೆಯ ವರದಿಯನ್ನೂ ಉಲ್ಲೇಖಿಸಿದ ಮುಖಂಡರು, ಘಟನೆ ನಡೆದು ಎಂಟು ದಿನಗಳ ನಂತರ ಅತ್ಯಾಚಾರ ಎಂದು ಹೇಗೆ ಹೇಳಲಾಯಿತು ಎಂದು ಪ್ರಶ್ನಿಸಿದ್ದಾರೆ.

Hathras ' Upper Caste ' Meet Planned Despite Sec 144

’ಆರೋಪಿಗಳ ಕುಟುಂಬ ಸದಸ್ಯರು ಮತ್ತು ಸಂತ್ರಸ್ತೆಯ ಕುಟುಂಬ ಸದಸ್ಯರ ನಾರ್ಕೊ ಪರೀಕ್ಷೆಯ ಹೊರತಾಗಿ ಈ ವಿಷಯದ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂದು ನಾವು ಒತ್ತಾಯಿಸುತ್ತೇವೆ. ಇದರಿಂದಾಗಿ ನಿಜವಾದ ಅಪರಾಧಿಗೆ ಶಿಕ್ಷೆ ಸಿಗುತ್ತದೆ. ವಿಧಿವಿಜ್ಞಾನ ವಿಜ್ಞಾನ ಪ್ರಯೋಗಾಲಯವು ಸಾಮೂಹಿಕ ಅತ್ಯಾಚಾರವನ್ನು ದೃಢಿಕರಿಸಿಲ್ಲ, ಆದ್ದರಿಂದ ನಾಲ್ವರು (ಆರೋಪಿಗಳನ್ನು) ಬಿಡುಗಡೆ ಮಾಡಬೇಕು’ ಎಂದು ಹಸಯನ್ ಬ್ಲಾಕ್ ಪ್ರಮುಖ್‌ನ ಪ್ರತಿನಿಧಿ ಸುಮಂತ್ ಕಿಶೋರ್ ಸಿಂಗ್ ಹೇಳಿದ್ದಾರೆ.

ಇತ್ತ ದೇಶವೇ ಹಸ್ರಾತ್ ಸಂತ್ರಸ್ತೆಗೆ ನ್ಯಾಯ ಸಿಗಬೇಕು ಎಂದು ಹೋರಾಟಕ್ಕೆ ಇಳಿದಿದ್ದರೇ, ತಮ್ಮ ಜಾತಿಯ ಜನರು ಯಾವುದೇ ತಪ್ಪು ಮಾಡಿಲ್ಲ, ಅವರು ಅಮಾಯಕರು ಎಂದು ಸಾಬೀತು ಮಾಡಲು ಮೇಲ್ಜಾತಿ ಸಮುದಾಯ ಪಣ ತೊಟ್ಟು ನಿಂತಿದ್ದಾರೆ. ಇದಕ್ಕೆ ಸಿಎಂ ಬೆಂಬಲ ಸಹ ಇದೆ ಎಂಬ ಆರೋಪ ಕೇಳಿಬಂದಿದೆ.


ಇದನ್ನೂ ಓದಿ: ಹತ್ರಾಸ್ ಪ್ರಕರಣ ಪಕ್ಷಕ್ಕೆ ರಾಜಕೀಯ ಹಾನಿಯುಂಟುಮಾಡಿದೆ: BJP ದಲಿತ ಸಂಸದರ ಉವಾಚ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...