Homeಮುಖಪುಟಸಂತ್ರಸ್ತ ಕುಟುಂಬದ ಮೇಲೆ FIR ದಾಖಲಿಸಿ: ಮೇಲ್ಜಾತಿಗಳ ಬೃಹತ್ ಸಭೆಯಲ್ಲಿ ಒತ್ತಾಯ!

ಸಂತ್ರಸ್ತ ಕುಟುಂಬದ ಮೇಲೆ FIR ದಾಖಲಿಸಿ: ಮೇಲ್ಜಾತಿಗಳ ಬೃಹತ್ ಸಭೆಯಲ್ಲಿ ಒತ್ತಾಯ!

ವಿಧಿವಿಜ್ಞಾನ ವಿಜ್ಞಾನ ಪ್ರಯೋಗಾಲಯವು ಸಾಮೂಹಿಕ ಅತ್ಯಾಚಾರವನ್ನು ದೃಢಿಕರಿಸಿಲ್ಲ, ಆದ್ದರಿಂದ ನಾಲ್ವರು (ಆರೋಪಿಗಳನ್ನು) ಬಿಡುಗಡೆ ಮಾಡಬೇಕು ಎಂಬ ಒತ್ತಾಯ ಸಭೆಯಲ್ಲಿ ಕೇಳಿಬಂದಿದೆ.

- Advertisement -
- Advertisement -

ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿರುವ 19 ವರ್ಷದ ದಲಿತ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಆರೋಪದಡಿ ಬಂಧಿಸಲ್ಪಟ್ಟ ಆರೋಪಿಗಳನ್ನು ಬೆಂಬಲಿಸಿ ಹತ್ರಾಸ್‌ನಲ್ಲಿ ಮೇಲ್ಜಾತಿ ಎಂದು ಕರೆಯಲ್ಪಡುವ ಸಮುದಾಯದ ಸದಸ್ಯರು ಬೃಹತ್ ಸಭೆ ನಡೆಸುತ್ತಿದ್ದಾರೆ.

ನಿಷೇದಾಜ್ಞೆ ಜಾರಿಯಲ್ಲಿದ್ದರೂ, ವಿರೋಧ ಪಕ್ಷಗಳ ನಾಯಕರು ಸಂತ್ರಸ್ತ ಕುಟುಂಬ ಬೇಟಿಗೆ ತೀವ್ರ ಅಡೆತಡೆಗಳಿರುವುದರ ನಡುವೆ ಈ ಬೃಹತ್ ಸಭೆಗೆ ಅನುಮತಿ ಹೇಗೆ ನೀಡಲಾಯಿತು ಎಂಬ ಪ್ರಶ್ನೆಗಳು ಎದ್ದಿವೆ.

“ನಾವು ಸಭೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದೇವೆ. ಸಂತ್ರಸ್ತ ಯುವತಿಯ ಕುಟುಂಬದ ವಿರುದ್ಧ ಮೊದಲು ಎಫ್‌ಐಆರ್‌ ದಾಖಲಿಸಬೇಕು. ಆರೋಪಿಗಳನ್ನು ಸುಖಾಸುಮ್ಮನೆ ಗುರಿಯಾಗಿಸಲಾಗಿದೆ” ಎಂದು ಸಭೆಯ ಸಂಘಟಕರೊಬ್ಬರು ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಬಿಜೆಪಿ ನಾಯಕ ರಾಜ್ವೀರ್ ಸಿಂಗ್ ಪೆಹೆಲ್ವಾನ್ ಅವರ ಮನೆಯಲ್ಲಿ ಇಂದಿನ ಸಭೆ ನಡೆಯುತ್ತಿದೆ. ಠಾಕೂರ್‌ಗಳು ಮತ್ತು ಬ್ರಾಹ್ಮಣರು ಸೇರಿದಂತೆ ಮೇಲ್ಜಾತಿಯ ಸದಸ್ಯರು ಸಭೆಯಲ್ಲಿ ಭಾಗವಹಿಸಿದ್ದಾರೆ. ಶುಕ್ರವಾರವೂ (ಅ.02) ಸಹ ಮೃತ ಸಂತ್ರಸ್ತ ಯುವತಿ ವಾಸಿಸುತ್ತಿದ್ದ ಹಳ್ಳಿಯ ಸಮೀಪದಲ್ಲೇ ಮೇಲ್ಜಾತಿ ಸಮುದಾಯದವರು ಸಭೆ ನಡೆಸಿರುವುದು ತಡವಾಗಿ ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಹತ್ರಾಸ್ ಸಂತ್ರಸ್ತ ಕುಟುಂಬ ಕೇಳುತ್ತಿರುವುದೇನು?: 5 ಪ್ರಶ್ನೆಗಳನ್ನು ಮುಂದಿಟ್ಟ ಪ್ರಿಯಾಂಕ ಗಾಂಧಿ

 

ಸೆಪ್ಟೆಂಬರ್ 14 ರಂದು ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ 19 ವರ್ಷದ ಯುವತಿಯ ಮೇಲೆ ನಾಲ್ವರು ಮೇಲ್ಜಾತಿಯ ಪುರುಷರು ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಸೆಪ್ಟೆಂಬರ್ 29 ರಂದು ಯುವತಿ ಸಾವನ್ನಪ್ಪಿದರು, ಸ್ಥಳೀಯ ಪೊಲೀಸರು ಮರುದಿನ ಮುಂಜಾನೆ 2.30ಕ್ಕೆ ಮೃತ ಯುವತಿಯ ದೇಹವನ್ನು ಕುಟುಂಬಕ್ಕೆ ಒಪ್ಪಿಸದೇ ಸುಟ್ಟುಹಾಕಿದ್ದರು. ತಮ್ಮ ಒಪ್ಪಿಗೆಯಿಲ್ಲದೇ ಶವಸಂಸ್ಕಾರ ಬಲವಂತವಾಗಿ ಮಾಡಲಾಯಿತು ಎಂದು ಕುಟುಂಬವು ಆರೋಪಿಸಿದೆ.

ಸಾರ್ವಜನಿಕರ ಆಕ್ರೋಶ ಹೆಚ್ಚಾಗಿ, ಪ್ರತಿಭಟನೆಗಳು, ಧರಣಿಗಳು ನಡೆದ ಹಿನ್ನೆಲೆ ಹತ್ರಾಸ್‌ನಲ್ಲಿ ದೊಡ್ಡ ಸಭೆಗಳನ್ನು ನಿಷೇಧಿಸಲಾಗಿದೆ. ಆದರೆ ಇಂದಿನ ಸಭೆ ಖಾಸಗಿ ನಿವಾಸದಲ್ಲಿ ನಡೆಯುತ್ತಿರುವುದರಿಂದ ಪೊಲೀಸರ ಅನುಮತಿ ಅಗತ್ಯವಿಲ್ಲ ಎನ್ನಲಾಗಿದೆ.

ಮೊದಲ ಸಭೆಯಲ್ಲಿ ಪ್ರಕರಣದ ನಾಲ್ವರು ಆರೋಪಿಗಳು ನಿರಪರಾಧಿಗಳು ಎಂದು ಹೇಳಿದರು. ಈ ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂದು ಅವರು ಒತ್ತಾಯಿಸಿದ್ದರು. ಬಂಧಿತ ಆರೋಪಿಗಳನ್ನು ಬಿಡುಗಡೆ ಮಾಡದಿದ್ದರೆ ಆಂದೋಲನ ನಡೆಸುವುದಾಗಿ ಬೆದರಿಕೆ ಕೂಡ ಹಾಕಿದರು.

ಇದನ್ನೂ ಓದಿ: ದಲಿತ ಯುವತಿಯ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗಳ ಪರ ನಿಂತ ಸವರ್ಣ ಪರಿಷತ್!

ಆಗ್ರಾ ಫೊರೆನ್ಸಿಕ್ ಸೈನ್ಸ್ ಲ್ಯಾಬ್‌ನ ವರದಿ ಮತ್ತು ದೆಹಲಿ ಆಸ್ಪತ್ರೆಯ ಶವಪರೀಕ್ಷೆಯ ವರದಿಯನ್ನೂ ಉಲ್ಲೇಖಿಸಿದ ಮುಖಂಡರು, ಘಟನೆ ನಡೆದು ಎಂಟು ದಿನಗಳ ನಂತರ ಅತ್ಯಾಚಾರ ಎಂದು ಹೇಗೆ ಹೇಳಲಾಯಿತು ಎಂದು ಪ್ರಶ್ನಿಸಿದ್ದಾರೆ.

Hathras ' Upper Caste ' Meet Planned Despite Sec 144

’ಆರೋಪಿಗಳ ಕುಟುಂಬ ಸದಸ್ಯರು ಮತ್ತು ಸಂತ್ರಸ್ತೆಯ ಕುಟುಂಬ ಸದಸ್ಯರ ನಾರ್ಕೊ ಪರೀಕ್ಷೆಯ ಹೊರತಾಗಿ ಈ ವಿಷಯದ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂದು ನಾವು ಒತ್ತಾಯಿಸುತ್ತೇವೆ. ಇದರಿಂದಾಗಿ ನಿಜವಾದ ಅಪರಾಧಿಗೆ ಶಿಕ್ಷೆ ಸಿಗುತ್ತದೆ. ವಿಧಿವಿಜ್ಞಾನ ವಿಜ್ಞಾನ ಪ್ರಯೋಗಾಲಯವು ಸಾಮೂಹಿಕ ಅತ್ಯಾಚಾರವನ್ನು ದೃಢಿಕರಿಸಿಲ್ಲ, ಆದ್ದರಿಂದ ನಾಲ್ವರು (ಆರೋಪಿಗಳನ್ನು) ಬಿಡುಗಡೆ ಮಾಡಬೇಕು’ ಎಂದು ಹಸಯನ್ ಬ್ಲಾಕ್ ಪ್ರಮುಖ್‌ನ ಪ್ರತಿನಿಧಿ ಸುಮಂತ್ ಕಿಶೋರ್ ಸಿಂಗ್ ಹೇಳಿದ್ದಾರೆ.

ಇತ್ತ ದೇಶವೇ ಹಸ್ರಾತ್ ಸಂತ್ರಸ್ತೆಗೆ ನ್ಯಾಯ ಸಿಗಬೇಕು ಎಂದು ಹೋರಾಟಕ್ಕೆ ಇಳಿದಿದ್ದರೇ, ತಮ್ಮ ಜಾತಿಯ ಜನರು ಯಾವುದೇ ತಪ್ಪು ಮಾಡಿಲ್ಲ, ಅವರು ಅಮಾಯಕರು ಎಂದು ಸಾಬೀತು ಮಾಡಲು ಮೇಲ್ಜಾತಿ ಸಮುದಾಯ ಪಣ ತೊಟ್ಟು ನಿಂತಿದ್ದಾರೆ. ಇದಕ್ಕೆ ಸಿಎಂ ಬೆಂಬಲ ಸಹ ಇದೆ ಎಂಬ ಆರೋಪ ಕೇಳಿಬಂದಿದೆ.


ಇದನ್ನೂ ಓದಿ: ಹತ್ರಾಸ್ ಪ್ರಕರಣ ಪಕ್ಷಕ್ಕೆ ರಾಜಕೀಯ ಹಾನಿಯುಂಟುಮಾಡಿದೆ: BJP ದಲಿತ ಸಂಸದರ ಉವಾಚ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...