Homeಮುಖಪುಟಉತ್ತರಪ್ರದೇಶ: ಲೋಕಸಭೆ, ವಿಧಾನಸಭೆಗಳಲ್ಲಿ SC, ST, OBCಗಳಿಗಿಂತ ಹೆಚ್ಚು ಪ್ರಾತಿನಿಧ್ಯ ಪಡೆದ ಬ್ರಾಹ್ಮಣ, ಠಾಕೂರ್‌ ಮಹಿಳೆಯರು

ಉತ್ತರಪ್ರದೇಶ: ಲೋಕಸಭೆ, ವಿಧಾನಸಭೆಗಳಲ್ಲಿ SC, ST, OBCಗಳಿಗಿಂತ ಹೆಚ್ಚು ಪ್ರಾತಿನಿಧ್ಯ ಪಡೆದ ಬ್ರಾಹ್ಮಣ, ಠಾಕೂರ್‌ ಮಹಿಳೆಯರು

- Advertisement -
- Advertisement -

ಉತ್ತರಪ್ರದೇಶದಲ್ಲಿ 2009ರಿಂದ ನಡೆದ ಕಳೆದ 6 ಪ್ರಮುಖ ಚುನಾವಣೆಗಳಲ್ಲಿ ಸಂಖ್ಯಾತ್ಮಕವಾಗಿ ಪ್ರಾಬಲ್ಯ ಹೊಂದಿರುವ ಹಿಂದುಳಿದ ವರ್ಗಗಳ (ಒಬಿಸಿ) ಮಹಿಳೆಯರಿಗಿಂತ ಹೆಚ್ಚಾಗಿ ಸವರ್ಣೀಯ ಮಹಿಳೆಯರು, ಅದರಲ್ಲೂ ವಿಶೇಷವಾಗಿ ಬ್ರಾಹ್ಮಣ ಮತ್ತು ಠಾಕೂರ್ ಸಮುದಾಯದವರು ಶಾಸಕರು ಮತ್ತು ಸಂಸದರಾಗಿ ಆಯ್ಕೆಯಾಗಿದ್ದಾರೆ.

ಉತ್ತರಪ್ರದೇಶ ವಿಧಾನಸಭೆ 403 ಸದಸ್ಯ ಬಲವನ್ನು ಹೊಂದಿದೆ. ಇದು ದೇಶದ ಅತಿದೊಡ್ಡ ವಿಧಾನಸಭೆಯಾಗಿದೆ ಮತ್ತು ರಾಷ್ಟ್ರ ರಾಜಕೀಯದ ಮೇಲೆ ಅತಿ ಹೆಚ್ಚು ಪ್ರಭಾವ ಬೀರಬಲ್ಲ ರಾಜ್ಯವಾಗಿದೆ. ಉತ್ತರಪ್ರದೇಶದಿಂದ 80 ಸಂಸದರು ಲೋಕಸಭೆಗೆ ತೆರಳುತ್ತಾರೆ.

ಒಬಿಸಿಗಳನ್ನು ಹೊರತುಪಡಿಸಿ ಇತರ ಸಮುದಾಯದ ಮಹಿಳೆಯರಿಗೆ 33% ಮೀಸಲಾತಿ ನೀಡುವ ಮಹಿಳಾ ಮೀಸಲಾತಿ ಬಿಲ್ ಬಗೆಗಿನ ಚರ್ಚೆಯ ನಡುವೆ 2012 ರಿಂದ ಉತ್ತರಪ್ರದೇಶ ರಾಜ್ಯದಲ್ಲಿ ಚುನಾಯಿತರಾದ ಎಲ್ಲಾ ಮಹಿಳಾ ಶಾಸಕರ ಜಾತಿ ಹಿನ್ನೆಲೆಯ ಬಗ್ಗೆ ದಿ ವೈರ್ ಪರಿಶೀಲಿಸಿದೆ. ಇದಕ್ಕೆ ಪೂರಕವಾಗಿ ಯುಪಿ ಸೆಕ್ರೆಟರಿಯೇಟ್‌ನಿಂದ ಮಾಹಿತಿಯನ್ನು ಸಂಗ್ರಹಿಸಿದೆ.

2009, 2014 ಮತ್ತು 2019ರ ಸಾರ್ವತ್ರಿಕ ಚುನಾವಣೆಗಳಲ್ಲಿ ಯುಪಿಯಲ್ಲಿ ಚುನಾಯಿತರಾದ ಮಹಿಳಾ ಸಂಸದರು ಶಾಸಕರ ಜಾತಿ ಹಿನ್ನೆಲೆಯನ್ನು ಪರಿಶೀಲಿಸಿದೆ. 2012, 2017 ಮತ್ತು 2022ರಲ್ಲಿ ನಡೆದ ರಾಜ್ಯ ವಿಧಾನಸಭಾ ಚುನಾವಣೆಗಳು ಮತ್ತು ಕಾಲಕಾಲಕ್ಕೆ ನಡೆದ ಉಪಚುನಾವಣೆಗಳಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ಪರಿಗಣಿಸಲಾಗಿದೆ.

403 ಸದಸ್ಯ ಬಲದ ಯುಪಿ ವಿಧಾನಸಭೆಗೆ ಚುನಾಯಿತರಾದ ಮಹಿಳೆಯರ ಸಂಖ್ಯೆ 2012-2017ರ ಅವಧಿಯಲ್ಲಿ 40, 2017-2022ರಲ್ಲಿ 46 ಮತ್ತು 2022 ರಿಂದ ಇಂದಿನವರೆಗೆ ಅವಧಿಯಲ್ಲಿ 48ಕ್ಕೆ ಏರಿದೆ. ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾದಾಗ 2012ರಲ್ಲಿ 35, 2017ರಲ್ಲಿ 42 ಹಾಗೂ 2022ರಲ್ಲಿ 47 ಮಹಿಳೆಯರು ಆಯ್ಕೆಯಾಗಿದ್ದರು. ಉಳಿದವರು ಉಪಚುನಾವಣೆಗಳಲ್ಲಿ ಆಯ್ಕೆಯಾಗಿದ್ದರು.

2012ರಿಂದ ಚುನಾಯಿತರಾದ ಒಟ್ಟು 134 ಮಹಿಳಾ ಅಭ್ಯರ್ಥಿಗಳಲ್ಲಿ 46 ಮಂದಿ ಪರಿಶಿಷ್ಟ ಜಾತಿಗೆ ಸೇರಿದವರು. ಅವರೆಲ್ಲರೂ ಮೀಸಲು ಕ್ಷೇತ್ರಗಳಲ್ಲಿ ಗೆದ್ದಿದ್ದಾರೆ. 42 ಬ್ರಾಹ್ಮಣ ಸಮುದಾಯದ, 39 ಮಹಿಳೆಯರು OBC ಸಮುದಾಯದ ಶಾಸಕರಾಗಿದ್ದರು. 2012 ರಿಂದ ಬರೀ 7 ಮಂದಿ ಮುಸ್ಲಿಂ ಮಹಿಳಾ ಶಾಸಕರು ವಿಧಾನಸಭೆಗೆ ಪ್ರವೇಶಿಸಿದ್ದರು.

2012ರಿಂದ ಆಯ್ಕೆಯಾದ 107 ಮಹಿಳಾ ಶಾಸಕರಲ್ಲಿ OBCಗಳು 31 ಮಂದಿಯಾಗಿದ್ದರೆ, 32 ಮಂದಿ ಬ್ರಾಹ್ಮಣ, ಠಾಕೂರ್‌ ಸಮುದಾಯದ ಮಹಿಳಾ ಶಾಸಕರಿದ್ದರು. ಇದು ಕಡಿಮೆ ಜನಸಂಖ್ಯೆಯಿದ್ದರು ಸವರ್ಣಿಯರಾದ ಬ್ರಾಹ್ಮಣ ಮತ್ತು ಠಾಕೂರ್ ಸಮುದಾಯದ ಹೆಚ್ಚಿನ ಪ್ರಾತಿನಿಧ್ಯವನ್ನು ಬಹಿರಂಗಪಡಿಸುತ್ತದೆ.

2012ರಿಂದ 84 ಮಹಿಳಾ ಶಾಸಕರು ಮೊದಲ ಬಾರಿಗೆ ಚುನಾಯಿತರಾಗಿದ್ದರೆ, 19 ಮಂದಿ ಎರಡು ಬಾರಿ ಆಯ್ಕೆಯಾಗಿದ್ದಾರೆ ಮತ್ತು ನಾಲ್ವರು ಮೂರು ಬಾರಿ ಗೆಲವು ಕಂಡವರು. ಎರಡು ಬಾರಿ ಚುನಾಯಿತರಾದ 19 ಮಹಿಳಾ ಶಾಸಕರ ಪೈಕಿ ಒಬಿಸಿ ಮತ್ತು ಮೇಲ್ಜಾತಿಯ ತಲಾ 6 ಮಂದಿ ಮತ್ತು ಏಳು ಮಂದಿ ದಲಿತ ಸಮುದಾಯದ ಮಹಿಳಾ ಶಾಸಕರಿದ್ದರು. ಮೂರು ಬಾರಿ ಆಯ್ಕೆಯಾದ ಶಾಸಕರಲ್ಲಿ ಒಬ್ಬರು ಒಬಿಸಿ, ಒಬ್ಬರು ದಲಿತ ಮತ್ತು ಇಬ್ಬರು ಬ್ರಾಹ್ಮಣ ಸಮುದಾಯಕ್ಕೆ ಸೇರಿದವರಾಗಿದ್ದಾರೆ.

ನರೇಂದ್ರ ಮೋದಿ ಸರ್ಕಾರವು ಪರಿಚಯಿಸಿದ 33% ಮಹಿಳಾ ಮೀಸಲಾತಿ ಮಸೂದೆಯನ್ನು ಸಂಸತ್ತಿನ ಎರಡೂ ಸದನಗಳಲ್ಲಿ ಅಂಗೀಕರಿಸಲಾಯಿತು. ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳು ಒಬಿಸಿ ಮುಸ್ಲಿಂ ಮಹಿಳೆಯರಿಗೆ ಇದೇ ರೀತಿಯ ಕೋಟಾವನ್ನು ನೀಡುವಂತೆ ಒತ್ತಾಯಿಸಿದ್ದಾರೆ.

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ OBC ಮತ್ತು ಮುಸ್ಲಿಂ ಮಹಿಳೆಯರಿಗೆ ಮೀಸಲಾತಿ ಇಲ್ಲದಿದ್ದರೆ, ನಿರ್ದಿಷ್ಟವಾಗಿ ಹಿಂದುಳಿದ ಮತ್ತು ಅಂಚಿನಲ್ಲಿರುವ ಜಾತಿಗಳು ಮತ್ತು ಸಮುದಾಯಗಳಲ್ಲಿ ಶ್ರೇಣೀಕೃತ, ಜಾತಿ-ಪೀಡಿತ ಸಮಾಜದಲ್ಲಿ ಮಸೂದೆಯ ಉದ್ದೇಶವು ಅಪೂರ್ಣವಾಗಲಿದೆ ಎಂದು ವಿರೋಧ ಪಕ್ಷದ ಸಂಸದರು ಕಳವಳ ವ್ಯಕ್ತಪಡಿಸಿದ್ದರು.

ಹೊಸ ಮಸೂದೆಯು ಸಾಂವಿಧಾನಿಕವಾಗಿ ಈಗಾಗಲೇ SC ಮತ್ತು ST ಸಮುದಾಯಗಳಿಗೆ ಮೀಸಲಿಟ್ಟಿರುವ ಸ್ಥಾನಗಳಲ್ಲಿ SC ಮತ್ತು ST ಮಹಿಳೆಯರಿಗೆ ಮೂರನೇ ಒಂದು ಮೀಸಲು ಒದಗಿಸುತ್ತದೆ ಮತ್ತು OBCಗಳು ಅಥವಾ ಮುಸ್ಲಿಮರಿಗೆ ಮೀಸಲಾತಿ ನೀಡಿಲ್ಲ. OBC ಮಹಿಳೆಯರಿಗೆ ಮೀಸಲಾತಿ ಬೇಡಿಕೆಯನ್ನು ಉತ್ತರ ಪ್ರದೇಶ ಮತ್ತು ಬಿಹಾರ ಸೇರಿ ಪ್ರಮುಖ ರಾಜ್ಯಗಳಲ್ಲಿ ಎಲ್ಲಾ ಪ್ರಮುಖ ವಿರೋಧ ಪಕ್ಷಗಳು ಆಗ್ರಹಿಸಿದೆ.

ಲೋಕಸಭೆಯ ಮಟ್ಟದಲ್ಲಿಯೂ, 2009, 2014 ಮತ್ತು 2019ರಲ್ಲಿ ನಡೆದ ಕೊನೆಯ ಮೂರು ಸಾರ್ವತ್ರಿಕ ಚುನಾವಣೆಗಳಲ್ಲಿ OBC ಮಹಿಳೆಯರು ಮತ್ತು ದಲಿತ ಮಹಿಳೆಯರಿಗಿಂತ ಸವರ್ಣಿಯ ಮಹಿಳೆಯರು ಹೆಚ್ಚಿನ ಪ್ರಾತಿನಿಧ್ಯ ಪಡೆದುಕೊಂಡಿದ್ದಾರೆ. 2009ರಲ್ಲಿ 11 ಮಹಿಳಾ ಸಂಸದರು ಯುಪಿಯಲ್ಲಿ ಚುನಾಯಿತರಾದರು ಅದರಲ್ಲಿ ಆರು ಸವರ್ಣಿಯ, ಇಬ್ಬರು ಮುಸ್ಲಿಮ್ ಸಂಸದರು, ಇಬ್ಬರು ದಲಿತ ಸಮುದಾಯಗಳು ಮತ್ತು ಒಬ್ಬರು ಒಬಿಸಿ ಸಮುದಾಯದಿಂದ ಆಯ್ಕೆಯಾಗಿದ್ದರು.

2014ರಲ್ಲಿ 13 ಮಹಿಳಾ ಸಂಸದರು ಚುನಾಯಿತರಾಗಿದ್ದರು. ಅವರಲ್ಲಿ ತಲಾ ಐದು ದಲಿತ ಮತ್ತು ಒಬಿಸಿ ಸಮುದಾಯದಿಂದ ಆಯ್ಕೆಯಾದರೆ, ಮೂವರು ಸವರ್ಣಿಯ ಸಮುದಾಯದ ಮಹಿಳೆಯರು ಸಂಸದರಾಗಿ ಆಯ್ಕೆಯಾಗಿದ್ದರು.

2019ರಲ್ಲಿ ಚುನಾಯಿತರಾದ 11 ಮಹಿಳಾ ಸಂಸದರಲ್ಲಿ ತಲಾ ಐದು ಮಂದಿ ಒಬಿಸಿ ಮತ್ತು ಬ್ರಾಹ್ಮಣ ಸಮುದಾಯದ ಸಂಸದರು ಮತ್ತು ಒಬ್ಬರು ದಲಿತ ಸಮುದಾಯದವರಾಗಿದ್ದರು. ಈ ಅಂಕಿ ಅಂಶಗಳನ್ನು ನೋಡಿದಾಗ ಉತ್ತರಪ್ರದೇಶದಲ್ಲಿ ಬ್ರಾಹ್ಮಣ , ಠಾಕೂರ್ ಸಮುದಾಯದ ಜನರ ಸಂಖ್ಯೆ ಕಡಿಮೆಯಿದ್ದರೂ ಅವರು ಇತರ ಒಬಿಸಿ ಮುಸ್ಲಿಮರಿಗಿಂತ ಹೆಚ್ಚು ರಾಜಕೀಯ ಪ್ರಾತಿನಿಧ್ಯವನ್ನು ಗಿಟ್ಟಿಸಿಕೊಂಡಿದ್ದಾರೆ.

ಇದನ್ನು ಓದಿ: ‘ದಿ ವೈರ್’ ಸಂಪಾದಕರಿಂದ ವಶಪಡಿಸಿಕೊಂಡ ಎಲೆಕ್ಟ್ರಾನಿಕ್ಸ್ ಸಾಧನಗಳನ್ನು ಹಿಂತಿರುಗಿಸಲು ಕೋರ್ಟ್ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...