Homeಮುಖಪುಟಉತ್ತರಪ್ರದೇಶ: ಲೋಕಸಭೆ, ವಿಧಾನಸಭೆಗಳಲ್ಲಿ SC, ST, OBCಗಳಿಗಿಂತ ಹೆಚ್ಚು ಪ್ರಾತಿನಿಧ್ಯ ಪಡೆದ ಬ್ರಾಹ್ಮಣ, ಠಾಕೂರ್‌ ಮಹಿಳೆಯರು

ಉತ್ತರಪ್ರದೇಶ: ಲೋಕಸಭೆ, ವಿಧಾನಸಭೆಗಳಲ್ಲಿ SC, ST, OBCಗಳಿಗಿಂತ ಹೆಚ್ಚು ಪ್ರಾತಿನಿಧ್ಯ ಪಡೆದ ಬ್ರಾಹ್ಮಣ, ಠಾಕೂರ್‌ ಮಹಿಳೆಯರು

- Advertisement -
- Advertisement -

ಉತ್ತರಪ್ರದೇಶದಲ್ಲಿ 2009ರಿಂದ ನಡೆದ ಕಳೆದ 6 ಪ್ರಮುಖ ಚುನಾವಣೆಗಳಲ್ಲಿ ಸಂಖ್ಯಾತ್ಮಕವಾಗಿ ಪ್ರಾಬಲ್ಯ ಹೊಂದಿರುವ ಹಿಂದುಳಿದ ವರ್ಗಗಳ (ಒಬಿಸಿ) ಮಹಿಳೆಯರಿಗಿಂತ ಹೆಚ್ಚಾಗಿ ಸವರ್ಣೀಯ ಮಹಿಳೆಯರು, ಅದರಲ್ಲೂ ವಿಶೇಷವಾಗಿ ಬ್ರಾಹ್ಮಣ ಮತ್ತು ಠಾಕೂರ್ ಸಮುದಾಯದವರು ಶಾಸಕರು ಮತ್ತು ಸಂಸದರಾಗಿ ಆಯ್ಕೆಯಾಗಿದ್ದಾರೆ.

ಉತ್ತರಪ್ರದೇಶ ವಿಧಾನಸಭೆ 403 ಸದಸ್ಯ ಬಲವನ್ನು ಹೊಂದಿದೆ. ಇದು ದೇಶದ ಅತಿದೊಡ್ಡ ವಿಧಾನಸಭೆಯಾಗಿದೆ ಮತ್ತು ರಾಷ್ಟ್ರ ರಾಜಕೀಯದ ಮೇಲೆ ಅತಿ ಹೆಚ್ಚು ಪ್ರಭಾವ ಬೀರಬಲ್ಲ ರಾಜ್ಯವಾಗಿದೆ. ಉತ್ತರಪ್ರದೇಶದಿಂದ 80 ಸಂಸದರು ಲೋಕಸಭೆಗೆ ತೆರಳುತ್ತಾರೆ.

ಒಬಿಸಿಗಳನ್ನು ಹೊರತುಪಡಿಸಿ ಇತರ ಸಮುದಾಯದ ಮಹಿಳೆಯರಿಗೆ 33% ಮೀಸಲಾತಿ ನೀಡುವ ಮಹಿಳಾ ಮೀಸಲಾತಿ ಬಿಲ್ ಬಗೆಗಿನ ಚರ್ಚೆಯ ನಡುವೆ 2012 ರಿಂದ ಉತ್ತರಪ್ರದೇಶ ರಾಜ್ಯದಲ್ಲಿ ಚುನಾಯಿತರಾದ ಎಲ್ಲಾ ಮಹಿಳಾ ಶಾಸಕರ ಜಾತಿ ಹಿನ್ನೆಲೆಯ ಬಗ್ಗೆ ದಿ ವೈರ್ ಪರಿಶೀಲಿಸಿದೆ. ಇದಕ್ಕೆ ಪೂರಕವಾಗಿ ಯುಪಿ ಸೆಕ್ರೆಟರಿಯೇಟ್‌ನಿಂದ ಮಾಹಿತಿಯನ್ನು ಸಂಗ್ರಹಿಸಿದೆ.

2009, 2014 ಮತ್ತು 2019ರ ಸಾರ್ವತ್ರಿಕ ಚುನಾವಣೆಗಳಲ್ಲಿ ಯುಪಿಯಲ್ಲಿ ಚುನಾಯಿತರಾದ ಮಹಿಳಾ ಸಂಸದರು ಶಾಸಕರ ಜಾತಿ ಹಿನ್ನೆಲೆಯನ್ನು ಪರಿಶೀಲಿಸಿದೆ. 2012, 2017 ಮತ್ತು 2022ರಲ್ಲಿ ನಡೆದ ರಾಜ್ಯ ವಿಧಾನಸಭಾ ಚುನಾವಣೆಗಳು ಮತ್ತು ಕಾಲಕಾಲಕ್ಕೆ ನಡೆದ ಉಪಚುನಾವಣೆಗಳಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ಪರಿಗಣಿಸಲಾಗಿದೆ.

403 ಸದಸ್ಯ ಬಲದ ಯುಪಿ ವಿಧಾನಸಭೆಗೆ ಚುನಾಯಿತರಾದ ಮಹಿಳೆಯರ ಸಂಖ್ಯೆ 2012-2017ರ ಅವಧಿಯಲ್ಲಿ 40, 2017-2022ರಲ್ಲಿ 46 ಮತ್ತು 2022 ರಿಂದ ಇಂದಿನವರೆಗೆ ಅವಧಿಯಲ್ಲಿ 48ಕ್ಕೆ ಏರಿದೆ. ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾದಾಗ 2012ರಲ್ಲಿ 35, 2017ರಲ್ಲಿ 42 ಹಾಗೂ 2022ರಲ್ಲಿ 47 ಮಹಿಳೆಯರು ಆಯ್ಕೆಯಾಗಿದ್ದರು. ಉಳಿದವರು ಉಪಚುನಾವಣೆಗಳಲ್ಲಿ ಆಯ್ಕೆಯಾಗಿದ್ದರು.

2012ರಿಂದ ಚುನಾಯಿತರಾದ ಒಟ್ಟು 134 ಮಹಿಳಾ ಅಭ್ಯರ್ಥಿಗಳಲ್ಲಿ 46 ಮಂದಿ ಪರಿಶಿಷ್ಟ ಜಾತಿಗೆ ಸೇರಿದವರು. ಅವರೆಲ್ಲರೂ ಮೀಸಲು ಕ್ಷೇತ್ರಗಳಲ್ಲಿ ಗೆದ್ದಿದ್ದಾರೆ. 42 ಬ್ರಾಹ್ಮಣ ಸಮುದಾಯದ, 39 ಮಹಿಳೆಯರು OBC ಸಮುದಾಯದ ಶಾಸಕರಾಗಿದ್ದರು. 2012 ರಿಂದ ಬರೀ 7 ಮಂದಿ ಮುಸ್ಲಿಂ ಮಹಿಳಾ ಶಾಸಕರು ವಿಧಾನಸಭೆಗೆ ಪ್ರವೇಶಿಸಿದ್ದರು.

2012ರಿಂದ ಆಯ್ಕೆಯಾದ 107 ಮಹಿಳಾ ಶಾಸಕರಲ್ಲಿ OBCಗಳು 31 ಮಂದಿಯಾಗಿದ್ದರೆ, 32 ಮಂದಿ ಬ್ರಾಹ್ಮಣ, ಠಾಕೂರ್‌ ಸಮುದಾಯದ ಮಹಿಳಾ ಶಾಸಕರಿದ್ದರು. ಇದು ಕಡಿಮೆ ಜನಸಂಖ್ಯೆಯಿದ್ದರು ಸವರ್ಣಿಯರಾದ ಬ್ರಾಹ್ಮಣ ಮತ್ತು ಠಾಕೂರ್ ಸಮುದಾಯದ ಹೆಚ್ಚಿನ ಪ್ರಾತಿನಿಧ್ಯವನ್ನು ಬಹಿರಂಗಪಡಿಸುತ್ತದೆ.

2012ರಿಂದ 84 ಮಹಿಳಾ ಶಾಸಕರು ಮೊದಲ ಬಾರಿಗೆ ಚುನಾಯಿತರಾಗಿದ್ದರೆ, 19 ಮಂದಿ ಎರಡು ಬಾರಿ ಆಯ್ಕೆಯಾಗಿದ್ದಾರೆ ಮತ್ತು ನಾಲ್ವರು ಮೂರು ಬಾರಿ ಗೆಲವು ಕಂಡವರು. ಎರಡು ಬಾರಿ ಚುನಾಯಿತರಾದ 19 ಮಹಿಳಾ ಶಾಸಕರ ಪೈಕಿ ಒಬಿಸಿ ಮತ್ತು ಮೇಲ್ಜಾತಿಯ ತಲಾ 6 ಮಂದಿ ಮತ್ತು ಏಳು ಮಂದಿ ದಲಿತ ಸಮುದಾಯದ ಮಹಿಳಾ ಶಾಸಕರಿದ್ದರು. ಮೂರು ಬಾರಿ ಆಯ್ಕೆಯಾದ ಶಾಸಕರಲ್ಲಿ ಒಬ್ಬರು ಒಬಿಸಿ, ಒಬ್ಬರು ದಲಿತ ಮತ್ತು ಇಬ್ಬರು ಬ್ರಾಹ್ಮಣ ಸಮುದಾಯಕ್ಕೆ ಸೇರಿದವರಾಗಿದ್ದಾರೆ.

ನರೇಂದ್ರ ಮೋದಿ ಸರ್ಕಾರವು ಪರಿಚಯಿಸಿದ 33% ಮಹಿಳಾ ಮೀಸಲಾತಿ ಮಸೂದೆಯನ್ನು ಸಂಸತ್ತಿನ ಎರಡೂ ಸದನಗಳಲ್ಲಿ ಅಂಗೀಕರಿಸಲಾಯಿತು. ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳು ಒಬಿಸಿ ಮುಸ್ಲಿಂ ಮಹಿಳೆಯರಿಗೆ ಇದೇ ರೀತಿಯ ಕೋಟಾವನ್ನು ನೀಡುವಂತೆ ಒತ್ತಾಯಿಸಿದ್ದಾರೆ.

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ OBC ಮತ್ತು ಮುಸ್ಲಿಂ ಮಹಿಳೆಯರಿಗೆ ಮೀಸಲಾತಿ ಇಲ್ಲದಿದ್ದರೆ, ನಿರ್ದಿಷ್ಟವಾಗಿ ಹಿಂದುಳಿದ ಮತ್ತು ಅಂಚಿನಲ್ಲಿರುವ ಜಾತಿಗಳು ಮತ್ತು ಸಮುದಾಯಗಳಲ್ಲಿ ಶ್ರೇಣೀಕೃತ, ಜಾತಿ-ಪೀಡಿತ ಸಮಾಜದಲ್ಲಿ ಮಸೂದೆಯ ಉದ್ದೇಶವು ಅಪೂರ್ಣವಾಗಲಿದೆ ಎಂದು ವಿರೋಧ ಪಕ್ಷದ ಸಂಸದರು ಕಳವಳ ವ್ಯಕ್ತಪಡಿಸಿದ್ದರು.

ಹೊಸ ಮಸೂದೆಯು ಸಾಂವಿಧಾನಿಕವಾಗಿ ಈಗಾಗಲೇ SC ಮತ್ತು ST ಸಮುದಾಯಗಳಿಗೆ ಮೀಸಲಿಟ್ಟಿರುವ ಸ್ಥಾನಗಳಲ್ಲಿ SC ಮತ್ತು ST ಮಹಿಳೆಯರಿಗೆ ಮೂರನೇ ಒಂದು ಮೀಸಲು ಒದಗಿಸುತ್ತದೆ ಮತ್ತು OBCಗಳು ಅಥವಾ ಮುಸ್ಲಿಮರಿಗೆ ಮೀಸಲಾತಿ ನೀಡಿಲ್ಲ. OBC ಮಹಿಳೆಯರಿಗೆ ಮೀಸಲಾತಿ ಬೇಡಿಕೆಯನ್ನು ಉತ್ತರ ಪ್ರದೇಶ ಮತ್ತು ಬಿಹಾರ ಸೇರಿ ಪ್ರಮುಖ ರಾಜ್ಯಗಳಲ್ಲಿ ಎಲ್ಲಾ ಪ್ರಮುಖ ವಿರೋಧ ಪಕ್ಷಗಳು ಆಗ್ರಹಿಸಿದೆ.

ಲೋಕಸಭೆಯ ಮಟ್ಟದಲ್ಲಿಯೂ, 2009, 2014 ಮತ್ತು 2019ರಲ್ಲಿ ನಡೆದ ಕೊನೆಯ ಮೂರು ಸಾರ್ವತ್ರಿಕ ಚುನಾವಣೆಗಳಲ್ಲಿ OBC ಮಹಿಳೆಯರು ಮತ್ತು ದಲಿತ ಮಹಿಳೆಯರಿಗಿಂತ ಸವರ್ಣಿಯ ಮಹಿಳೆಯರು ಹೆಚ್ಚಿನ ಪ್ರಾತಿನಿಧ್ಯ ಪಡೆದುಕೊಂಡಿದ್ದಾರೆ. 2009ರಲ್ಲಿ 11 ಮಹಿಳಾ ಸಂಸದರು ಯುಪಿಯಲ್ಲಿ ಚುನಾಯಿತರಾದರು ಅದರಲ್ಲಿ ಆರು ಸವರ್ಣಿಯ, ಇಬ್ಬರು ಮುಸ್ಲಿಮ್ ಸಂಸದರು, ಇಬ್ಬರು ದಲಿತ ಸಮುದಾಯಗಳು ಮತ್ತು ಒಬ್ಬರು ಒಬಿಸಿ ಸಮುದಾಯದಿಂದ ಆಯ್ಕೆಯಾಗಿದ್ದರು.

2014ರಲ್ಲಿ 13 ಮಹಿಳಾ ಸಂಸದರು ಚುನಾಯಿತರಾಗಿದ್ದರು. ಅವರಲ್ಲಿ ತಲಾ ಐದು ದಲಿತ ಮತ್ತು ಒಬಿಸಿ ಸಮುದಾಯದಿಂದ ಆಯ್ಕೆಯಾದರೆ, ಮೂವರು ಸವರ್ಣಿಯ ಸಮುದಾಯದ ಮಹಿಳೆಯರು ಸಂಸದರಾಗಿ ಆಯ್ಕೆಯಾಗಿದ್ದರು.

2019ರಲ್ಲಿ ಚುನಾಯಿತರಾದ 11 ಮಹಿಳಾ ಸಂಸದರಲ್ಲಿ ತಲಾ ಐದು ಮಂದಿ ಒಬಿಸಿ ಮತ್ತು ಬ್ರಾಹ್ಮಣ ಸಮುದಾಯದ ಸಂಸದರು ಮತ್ತು ಒಬ್ಬರು ದಲಿತ ಸಮುದಾಯದವರಾಗಿದ್ದರು. ಈ ಅಂಕಿ ಅಂಶಗಳನ್ನು ನೋಡಿದಾಗ ಉತ್ತರಪ್ರದೇಶದಲ್ಲಿ ಬ್ರಾಹ್ಮಣ , ಠಾಕೂರ್ ಸಮುದಾಯದ ಜನರ ಸಂಖ್ಯೆ ಕಡಿಮೆಯಿದ್ದರೂ ಅವರು ಇತರ ಒಬಿಸಿ ಮುಸ್ಲಿಮರಿಗಿಂತ ಹೆಚ್ಚು ರಾಜಕೀಯ ಪ್ರಾತಿನಿಧ್ಯವನ್ನು ಗಿಟ್ಟಿಸಿಕೊಂಡಿದ್ದಾರೆ.

ಇದನ್ನು ಓದಿ: ‘ದಿ ವೈರ್’ ಸಂಪಾದಕರಿಂದ ವಶಪಡಿಸಿಕೊಂಡ ಎಲೆಕ್ಟ್ರಾನಿಕ್ಸ್ ಸಾಧನಗಳನ್ನು ಹಿಂತಿರುಗಿಸಲು ಕೋರ್ಟ್ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...