Homeಮುಖಪುಟದಲಿತನೊಬ್ಬ ಗ್ರಾ.ಪಂ ಮುಖ್ಯಸ್ಥನಾದುದ್ದನ್ನು ಸಹಿಸದ ಮೇಲ್ಜಾತಿಗಳು: ಗುಂಡಿಕ್ಕಿ ಕೊಲೆ

ದಲಿತನೊಬ್ಬ ಗ್ರಾ.ಪಂ ಮುಖ್ಯಸ್ಥನಾದುದ್ದನ್ನು ಸಹಿಸದ ಮೇಲ್ಜಾತಿಗಳು: ಗುಂಡಿಕ್ಕಿ ಕೊಲೆ

300 ದಲಿತ ಕುಟಂಬಗಳಿರುವ ಬನ್ಸ್‌ಗಾಂವ್‌ನಲ್ಲಿ ಹಿಂದಿನಿಂದಲೂ ಗ್ರಾಮ ಪ್ರಧಾನ್ ದಲಿತರೇ ಆಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಠಾಕೂರ್ ಮತ್ತು ಬ್ರಾಹ್ಮಣರು ದಲಿತರ ವಿರುದ್ಧ ದ್ವೇಷ ಸಾಧಿಸುತ್ತಿದ್ದರು ಎನ್ನಲಾಗಿದೆ.

- Advertisement -
- Advertisement -

ಉತ್ತರ ಪ್ರದೇಶದ ಅಜಂಘಡ ಜಿಲ್ಲೆಯ ಬನ್ಸ್‌ಗಾಂವ್‌ನಲ್ಲಿ ಮೊದಲ ಬಾರಿಗೆ ಗ್ರಾ.ಪಂ ಮುಖ್ಯಸ್ಥನಾದ ದಲಿತ ಜಾತಿಗೆ ಸೇರಿದ ಸತ್ಯಮೇವ್ ಜಯತ್ ಆಲಿಯಾಸ್ ಪಪ್ಪು ರಾಮ್‌ ಎಂಬಾತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ಆತ ಮೇಲ್ಜಾತಿ ಠಾಕೂರರ ಮಾತು ಕೇಳದಿರುವುದೇ ಕೊಲೆಗೆ ಕಾರಣ ಎಂದು ದಲಿತರು ಆರೋಪಿಸಿದ್ದಾರೆ.

ಬನ್ಸ್‌ಗಾಂವ್‌ನಲ್ಲಿ ಮೇಲ್ಜಾತಿಗಳಿಗಿಂತ ದಲಿತರೆ ಅಧಿಕವಾಗಿರುವ ಪ್ರದೇಶವಾಗಿದೆ. ಇಲ್ಲಿಯ ಗ್ರಾಮ ಪಂಚಾಯ್ತಿಯ ಅಧಿಕಾರವು ಬ್ರಾಹ್ಮಣ ಮತ್ತು ಠಾಕೂರರಿಂದ ದಲಿತರಿಗೆ ವರ್ಗಾಹಿಸಲ್ಪಟ್ಟಿದೆ. ಇದನ್ನು ಸಹಿಸದ ಮೇಲ್ಜಾತಿಯವರು ಕೃತ್ಯವೆಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಸತ್ಯಮೇವ್ ಜಯತ್ ಕೊಲೆಯ ನಂತರ ಭಾರೀ ಪ್ರತಿಭಟನೆ ವ್ಯಕ್ತವಾಗಿದ್ದು, ಹಿಂಸಾಚಾರ ಭುಗಿಲೆದ್ದಿದೆ. ಪೊಲೀಸ್ ವಾಹನಕ್ಕೆ ಬೆಂಕಿ ಬಿದ್ದಿದ್ದು ಅದರಡಿ ಸಿಲುಕಿದ ಸೂರಜ್ ಎಂಬ 8 ವರ್ಷದ ಬಾಲಕ ಸಾವನಪ್ಪಿದ್ದಾನೆ.

ಸತ್ಯಮೇವ್ ಹತ್ಯೆಗೆ ಸಂಬಂಧಿಸಿದಂತೆ ವಿವೇಕ್ ಸಿಂಗ್ ಅಲಿಯಾಸ್ ಭೋಲು, ಸೂರ್ಯನ್ಶ್ ಕುಮಾರ್ ದುಬೆ, ಬ್ರಿಜೇಂದ್ರ ಸಿಂಗ್ ಅಲಿಯಾಸ್ ಗಪ್ಪು ಮತ್ತು ವಾಸಿಮ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ದುಬೆಯ ವಿರುದ್ಧ ಕೊಲೆ ಯತ್ನ ಸೇರಿದಂತೆ ಇತರ ಐದು ಪ್ರಕರಣಗಳಿವೆ.

ನಾವು ಸತ್ಯಮೇವ್ ಕುಟುಂಬದ ಹೇಳಿಕೆ ಆಧರಿಸಿ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸುತ್ತೇವೆ. ಕೊಲೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಏನೇ ಕಾರಣವಿದ್ದರೂ ಚುನಾಯಿತ ಪ್ರತಿನಿಧಿಯ ಕೊಲೆಯೂ ಗಂಭೀರ ಅಪರಾಧವಾಗಿದೆ. ಅಲ್ಲದೇ ಸೂರಜ್ ಸಾವಿನ ವಿಷಯವನ್ನು ತನಿಖೆ ಮಾಡಲಾಗುವುದು ಎಂದು ಡಿಐಜಿ ಸುಭಾಸ್ ಚಂದ್ರ ದುಬೆ ತಿಳಿಸಿದ್ದಾರೆ.

ಜಾತಿ ಮತ್ಸರ

ಪಪ್ಪು ರಾಮ್‌ ತನ್ನ ಹೆಸರನ್ನು ಸತ್ಯಮೇವ್ ಜಯತ್ ಎಂದು ಬದಲಿಸಿಕೊಂಡಿದ್ದರು. ಸಾಕಷ್ಟು ಓದಿಕೊಂಡಿದ್ದ ಅವರು, ಅಮೇರಿಕಾದಲ್ಲಿ ಗುಲಾಮಗಿರಿಯನ್ನು ತೊಲಗಿಸಿದ ಅಂಬ್ರಾಹಂ ಲಿಂಕನ್ ನೆನಪಿಗೆ ತನ್ನ ಸೋದರಳಿಯನಿಗೆ ಲಿಂಕನ್ ಎಂದು ಹೆಸರಿಟ್ಟಿದ್ದಾರೆ. ಮತ್ತೊಬ್ಬ ಸಹೋದರನ ಮಗನಿಗೆ ರಾಮು ರಾಮ್ ಎಂದು ಹೆಸರಿಟ್ಟಿದ್ದನು.

300 ದಲಿತ ಕುಟಂಬಗಳಿರುವ ಬನ್ಸ್‌ಗಾಂವ್‌ನಲ್ಲಿ 30 ಬ್ರಾಹ್ಮಣ ಮತ್ತು 30 ಠಾಕೂರ್ ಕುಟುಂಬಗಳಿವೆ. ದಲಿತರು ಹೆಚ್ಚಿನ ಸಂಖ್ಯೆಯಲ್ಲಿರುವುದರಿಂದ ಸಹಜವಾಗಿಯೇ ಹಿಂದಿನಿಂದಲೂ ಗ್ರಾಮ ಪ್ರಧಾನ್ ದಲಿತರೇ ಆಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಠಾಕೂರ್ ಮತ್ತು ಬ್ರಾಹ್ಮಣರು ದಲಿತರ ವಿರುದ್ಧ ದ್ವೇಷ ಸಾಧಿಸುತ್ತಿದ್ದರು ಎನ್ನಲಾಗಿದೆ.

ಇತ್ತೀಚೆಗೆ ಠಾಕೂರರು ಮತ್ತು ಸತ್ಯಮೇವ್ ನಡುವೆ ವಾಗ್ದಾದ ನಡೆದಿತ್ತು. ಅವರು ಸತ್ಯಮೇವ್‌ನ ಕಂಡರೆ ಅಸೂಯೆ ಪಡುತ್ತಿದ್ದರು. ತಮ್ಮ ಮಾತು ಕೇಳದ ಕಾರಣಕ್ಕಾಗಿಯೇ ಸತ್ಯಮೇವ್‌ನನ್ನು ಕೊಂದಿದ್ದಾರೆ ಎಂದು ಸತ್ಯಮೇವ್ ಸೋದರಳಿಯಿ ಲಿಂಕನ್ ಹೇಳಿದ್ದಾರೆ.

ಸೂರ್ಯನ್ಸು ಕುಮಾರ್ ದುಬೆ ಎಂಬಾತ ಈ ಗ್ರಾಮದಲ್ಲಿ ವಾಸವಿಲ್ಲದಿದ್ದರೂ ಸಹ ಪದೇ ಪದೇ ಗ್ರಾ.ಪಂ ಗೆ ಬಂದು ವಾಸಸ್ಥಳ ದೃಢೀಕರಣ ಪತ್ರ ಕೊಡುವಂತೆ ದುಂಬಾಲು ಬಿದ್ದಿದ್ದ. ಕಳೆದ ಒಂದು ವಾರದಲ್ಲಿ ಮೂರು ಬಾರಿ ಬಂದು ಧಮಕಿ ಹಾಕಿದ್ದ. ಆದರೆ ಅವನ ಬೆದರಿಗೆಕೆ ಸತ್ಯಮೇವ್ ಬಗ್ಗಿರಲಿಲ್ಲ. ಇದರಿಂದ ಕುಪಿತಗೊಂಡಿದ್ದ ಠಾಕೂರರು ಗುಂಡು ಹಾರಿಸಿ ಸತ್ಯಮೇವ್‌ನನ್ನು ಕೊಂದಿದ್ದಾರೆ. ಕೊಲೆಯ ನಂತರ ಸತ್ಯಮೇವ್ ತಾಯಿಯ ಬಳಿ ಹೋಗಿ ಜಾತಿನಿಂದನೆ ಮಾಡಿ ಬೈಯ್ದಿದ್ದಾರೆ. ತಾನೇ ಕೊಂದಿದ್ದಾಗಿ ಹೇಳಿ ಶವವನ್ನು ಹೋಗಿ ನೋಡಿ ಎಂದು ಬೆದರಿಕೆ ಹಾಕಿದ್ದರು ಎಂದು ಲಿಂಕನ್ ಹೇಳಿದ್ದಾರೆ.

ವಿವೇಕ್ ಸಿಂಗ್‌ ಎಂಬಾತ ಬಂದು ಸತ್ಯಮೇವ್‌ರನ್ನು ತನ್ನ ಬೈಕ್‌ನಲ್ಲಿ ಕರೆದುಕೊಂಡ ಹೋದ. ನಂತರ ವೇಕ್ ಸಿಂಗ್ ಸೂರ್ಯನ್ಶ್ ಕುಮಾರ್ ದುಬೆ, ಬ್ರಿಜೇಂದ್ರ ಸಿಂಗ್ ಮತ್ತು ವಾಸಿಮ್ ಸೇರಿ ಹತ್ಯೆ ಮಾಡಿದ್ದಾರೆ ಎಂದು ಸತ್ಯಮೇವ್ ಪತ್ನಿ ಮುನ್ನಿ ದೇವಿ ಹೇಳಿದ್ದಾರೆಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ.

ಅಲ್ಲದೇ ಬಿಜೇಂದ್ರ ಸಿಂಗ್ ಎಂಬ ಆರೋಪಿಯೊಂದಿಗೆ ಕಳೆದ ತಿಂಗಳು ಜಮೀನಿನ ವಿಷಯಕ್ಕೆ ಜಗಳವಾಗಿತ್ತು. ಈ ಎಲ್ಲಾ ಅಂಶಗಳ ಹಿನ್ನೆಲೆಯಲ್ಲಿ ಹತ್ಯೆ ಮಾಡಲಾಗಿದೆ ಎಂದು ಅವರು ದೂರಿದ್ದಾರೆ.


ಉತ್ತರ ಪ್ರದೇಶದ 13 ವರ್ಷದ ಬಾಲಕಿಯ ಅತ್ಯಾಚಾರ, ಕೊಲೆ: ನಾಲಿಗೆ ಕತ್ತರಿಸಿ, ಕಣ್ಣು ಕಿತ್ತ ಪಾಪಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...