Homeಮುಖಪುಟದಲಿತನೊಬ್ಬ ಗ್ರಾ.ಪಂ ಮುಖ್ಯಸ್ಥನಾದುದ್ದನ್ನು ಸಹಿಸದ ಮೇಲ್ಜಾತಿಗಳು: ಗುಂಡಿಕ್ಕಿ ಕೊಲೆ

ದಲಿತನೊಬ್ಬ ಗ್ರಾ.ಪಂ ಮುಖ್ಯಸ್ಥನಾದುದ್ದನ್ನು ಸಹಿಸದ ಮೇಲ್ಜಾತಿಗಳು: ಗುಂಡಿಕ್ಕಿ ಕೊಲೆ

300 ದಲಿತ ಕುಟಂಬಗಳಿರುವ ಬನ್ಸ್‌ಗಾಂವ್‌ನಲ್ಲಿ ಹಿಂದಿನಿಂದಲೂ ಗ್ರಾಮ ಪ್ರಧಾನ್ ದಲಿತರೇ ಆಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಠಾಕೂರ್ ಮತ್ತು ಬ್ರಾಹ್ಮಣರು ದಲಿತರ ವಿರುದ್ಧ ದ್ವೇಷ ಸಾಧಿಸುತ್ತಿದ್ದರು ಎನ್ನಲಾಗಿದೆ.

- Advertisement -
- Advertisement -

ಉತ್ತರ ಪ್ರದೇಶದ ಅಜಂಘಡ ಜಿಲ್ಲೆಯ ಬನ್ಸ್‌ಗಾಂವ್‌ನಲ್ಲಿ ಮೊದಲ ಬಾರಿಗೆ ಗ್ರಾ.ಪಂ ಮುಖ್ಯಸ್ಥನಾದ ದಲಿತ ಜಾತಿಗೆ ಸೇರಿದ ಸತ್ಯಮೇವ್ ಜಯತ್ ಆಲಿಯಾಸ್ ಪಪ್ಪು ರಾಮ್‌ ಎಂಬಾತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ಆತ ಮೇಲ್ಜಾತಿ ಠಾಕೂರರ ಮಾತು ಕೇಳದಿರುವುದೇ ಕೊಲೆಗೆ ಕಾರಣ ಎಂದು ದಲಿತರು ಆರೋಪಿಸಿದ್ದಾರೆ.

ಬನ್ಸ್‌ಗಾಂವ್‌ನಲ್ಲಿ ಮೇಲ್ಜಾತಿಗಳಿಗಿಂತ ದಲಿತರೆ ಅಧಿಕವಾಗಿರುವ ಪ್ರದೇಶವಾಗಿದೆ. ಇಲ್ಲಿಯ ಗ್ರಾಮ ಪಂಚಾಯ್ತಿಯ ಅಧಿಕಾರವು ಬ್ರಾಹ್ಮಣ ಮತ್ತು ಠಾಕೂರರಿಂದ ದಲಿತರಿಗೆ ವರ್ಗಾಹಿಸಲ್ಪಟ್ಟಿದೆ. ಇದನ್ನು ಸಹಿಸದ ಮೇಲ್ಜಾತಿಯವರು ಕೃತ್ಯವೆಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಸತ್ಯಮೇವ್ ಜಯತ್ ಕೊಲೆಯ ನಂತರ ಭಾರೀ ಪ್ರತಿಭಟನೆ ವ್ಯಕ್ತವಾಗಿದ್ದು, ಹಿಂಸಾಚಾರ ಭುಗಿಲೆದ್ದಿದೆ. ಪೊಲೀಸ್ ವಾಹನಕ್ಕೆ ಬೆಂಕಿ ಬಿದ್ದಿದ್ದು ಅದರಡಿ ಸಿಲುಕಿದ ಸೂರಜ್ ಎಂಬ 8 ವರ್ಷದ ಬಾಲಕ ಸಾವನಪ್ಪಿದ್ದಾನೆ.

ಸತ್ಯಮೇವ್ ಹತ್ಯೆಗೆ ಸಂಬಂಧಿಸಿದಂತೆ ವಿವೇಕ್ ಸಿಂಗ್ ಅಲಿಯಾಸ್ ಭೋಲು, ಸೂರ್ಯನ್ಶ್ ಕುಮಾರ್ ದುಬೆ, ಬ್ರಿಜೇಂದ್ರ ಸಿಂಗ್ ಅಲಿಯಾಸ್ ಗಪ್ಪು ಮತ್ತು ವಾಸಿಮ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ದುಬೆಯ ವಿರುದ್ಧ ಕೊಲೆ ಯತ್ನ ಸೇರಿದಂತೆ ಇತರ ಐದು ಪ್ರಕರಣಗಳಿವೆ.

ನಾವು ಸತ್ಯಮೇವ್ ಕುಟುಂಬದ ಹೇಳಿಕೆ ಆಧರಿಸಿ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸುತ್ತೇವೆ. ಕೊಲೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಏನೇ ಕಾರಣವಿದ್ದರೂ ಚುನಾಯಿತ ಪ್ರತಿನಿಧಿಯ ಕೊಲೆಯೂ ಗಂಭೀರ ಅಪರಾಧವಾಗಿದೆ. ಅಲ್ಲದೇ ಸೂರಜ್ ಸಾವಿನ ವಿಷಯವನ್ನು ತನಿಖೆ ಮಾಡಲಾಗುವುದು ಎಂದು ಡಿಐಜಿ ಸುಭಾಸ್ ಚಂದ್ರ ದುಬೆ ತಿಳಿಸಿದ್ದಾರೆ.

ಜಾತಿ ಮತ್ಸರ

ಪಪ್ಪು ರಾಮ್‌ ತನ್ನ ಹೆಸರನ್ನು ಸತ್ಯಮೇವ್ ಜಯತ್ ಎಂದು ಬದಲಿಸಿಕೊಂಡಿದ್ದರು. ಸಾಕಷ್ಟು ಓದಿಕೊಂಡಿದ್ದ ಅವರು, ಅಮೇರಿಕಾದಲ್ಲಿ ಗುಲಾಮಗಿರಿಯನ್ನು ತೊಲಗಿಸಿದ ಅಂಬ್ರಾಹಂ ಲಿಂಕನ್ ನೆನಪಿಗೆ ತನ್ನ ಸೋದರಳಿಯನಿಗೆ ಲಿಂಕನ್ ಎಂದು ಹೆಸರಿಟ್ಟಿದ್ದಾರೆ. ಮತ್ತೊಬ್ಬ ಸಹೋದರನ ಮಗನಿಗೆ ರಾಮು ರಾಮ್ ಎಂದು ಹೆಸರಿಟ್ಟಿದ್ದನು.

300 ದಲಿತ ಕುಟಂಬಗಳಿರುವ ಬನ್ಸ್‌ಗಾಂವ್‌ನಲ್ಲಿ 30 ಬ್ರಾಹ್ಮಣ ಮತ್ತು 30 ಠಾಕೂರ್ ಕುಟುಂಬಗಳಿವೆ. ದಲಿತರು ಹೆಚ್ಚಿನ ಸಂಖ್ಯೆಯಲ್ಲಿರುವುದರಿಂದ ಸಹಜವಾಗಿಯೇ ಹಿಂದಿನಿಂದಲೂ ಗ್ರಾಮ ಪ್ರಧಾನ್ ದಲಿತರೇ ಆಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಠಾಕೂರ್ ಮತ್ತು ಬ್ರಾಹ್ಮಣರು ದಲಿತರ ವಿರುದ್ಧ ದ್ವೇಷ ಸಾಧಿಸುತ್ತಿದ್ದರು ಎನ್ನಲಾಗಿದೆ.

ಇತ್ತೀಚೆಗೆ ಠಾಕೂರರು ಮತ್ತು ಸತ್ಯಮೇವ್ ನಡುವೆ ವಾಗ್ದಾದ ನಡೆದಿತ್ತು. ಅವರು ಸತ್ಯಮೇವ್‌ನ ಕಂಡರೆ ಅಸೂಯೆ ಪಡುತ್ತಿದ್ದರು. ತಮ್ಮ ಮಾತು ಕೇಳದ ಕಾರಣಕ್ಕಾಗಿಯೇ ಸತ್ಯಮೇವ್‌ನನ್ನು ಕೊಂದಿದ್ದಾರೆ ಎಂದು ಸತ್ಯಮೇವ್ ಸೋದರಳಿಯಿ ಲಿಂಕನ್ ಹೇಳಿದ್ದಾರೆ.

ಸೂರ್ಯನ್ಸು ಕುಮಾರ್ ದುಬೆ ಎಂಬಾತ ಈ ಗ್ರಾಮದಲ್ಲಿ ವಾಸವಿಲ್ಲದಿದ್ದರೂ ಸಹ ಪದೇ ಪದೇ ಗ್ರಾ.ಪಂ ಗೆ ಬಂದು ವಾಸಸ್ಥಳ ದೃಢೀಕರಣ ಪತ್ರ ಕೊಡುವಂತೆ ದುಂಬಾಲು ಬಿದ್ದಿದ್ದ. ಕಳೆದ ಒಂದು ವಾರದಲ್ಲಿ ಮೂರು ಬಾರಿ ಬಂದು ಧಮಕಿ ಹಾಕಿದ್ದ. ಆದರೆ ಅವನ ಬೆದರಿಗೆಕೆ ಸತ್ಯಮೇವ್ ಬಗ್ಗಿರಲಿಲ್ಲ. ಇದರಿಂದ ಕುಪಿತಗೊಂಡಿದ್ದ ಠಾಕೂರರು ಗುಂಡು ಹಾರಿಸಿ ಸತ್ಯಮೇವ್‌ನನ್ನು ಕೊಂದಿದ್ದಾರೆ. ಕೊಲೆಯ ನಂತರ ಸತ್ಯಮೇವ್ ತಾಯಿಯ ಬಳಿ ಹೋಗಿ ಜಾತಿನಿಂದನೆ ಮಾಡಿ ಬೈಯ್ದಿದ್ದಾರೆ. ತಾನೇ ಕೊಂದಿದ್ದಾಗಿ ಹೇಳಿ ಶವವನ್ನು ಹೋಗಿ ನೋಡಿ ಎಂದು ಬೆದರಿಕೆ ಹಾಕಿದ್ದರು ಎಂದು ಲಿಂಕನ್ ಹೇಳಿದ್ದಾರೆ.

ವಿವೇಕ್ ಸಿಂಗ್‌ ಎಂಬಾತ ಬಂದು ಸತ್ಯಮೇವ್‌ರನ್ನು ತನ್ನ ಬೈಕ್‌ನಲ್ಲಿ ಕರೆದುಕೊಂಡ ಹೋದ. ನಂತರ ವೇಕ್ ಸಿಂಗ್ ಸೂರ್ಯನ್ಶ್ ಕುಮಾರ್ ದುಬೆ, ಬ್ರಿಜೇಂದ್ರ ಸಿಂಗ್ ಮತ್ತು ವಾಸಿಮ್ ಸೇರಿ ಹತ್ಯೆ ಮಾಡಿದ್ದಾರೆ ಎಂದು ಸತ್ಯಮೇವ್ ಪತ್ನಿ ಮುನ್ನಿ ದೇವಿ ಹೇಳಿದ್ದಾರೆಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ.

ಅಲ್ಲದೇ ಬಿಜೇಂದ್ರ ಸಿಂಗ್ ಎಂಬ ಆರೋಪಿಯೊಂದಿಗೆ ಕಳೆದ ತಿಂಗಳು ಜಮೀನಿನ ವಿಷಯಕ್ಕೆ ಜಗಳವಾಗಿತ್ತು. ಈ ಎಲ್ಲಾ ಅಂಶಗಳ ಹಿನ್ನೆಲೆಯಲ್ಲಿ ಹತ್ಯೆ ಮಾಡಲಾಗಿದೆ ಎಂದು ಅವರು ದೂರಿದ್ದಾರೆ.


ಉತ್ತರ ಪ್ರದೇಶದ 13 ವರ್ಷದ ಬಾಲಕಿಯ ಅತ್ಯಾಚಾರ, ಕೊಲೆ: ನಾಲಿಗೆ ಕತ್ತರಿಸಿ, ಕಣ್ಣು ಕಿತ್ತ ಪಾಪಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...