Homeಮುಖಪುಟದಲಿತನೊಬ್ಬ ಗ್ರಾ.ಪಂ ಮುಖ್ಯಸ್ಥನಾದುದ್ದನ್ನು ಸಹಿಸದ ಮೇಲ್ಜಾತಿಗಳು: ಗುಂಡಿಕ್ಕಿ ಕೊಲೆ

ದಲಿತನೊಬ್ಬ ಗ್ರಾ.ಪಂ ಮುಖ್ಯಸ್ಥನಾದುದ್ದನ್ನು ಸಹಿಸದ ಮೇಲ್ಜಾತಿಗಳು: ಗುಂಡಿಕ್ಕಿ ಕೊಲೆ

300 ದಲಿತ ಕುಟಂಬಗಳಿರುವ ಬನ್ಸ್‌ಗಾಂವ್‌ನಲ್ಲಿ ಹಿಂದಿನಿಂದಲೂ ಗ್ರಾಮ ಪ್ರಧಾನ್ ದಲಿತರೇ ಆಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಠಾಕೂರ್ ಮತ್ತು ಬ್ರಾಹ್ಮಣರು ದಲಿತರ ವಿರುದ್ಧ ದ್ವೇಷ ಸಾಧಿಸುತ್ತಿದ್ದರು ಎನ್ನಲಾಗಿದೆ.

- Advertisement -
- Advertisement -

ಉತ್ತರ ಪ್ರದೇಶದ ಅಜಂಘಡ ಜಿಲ್ಲೆಯ ಬನ್ಸ್‌ಗಾಂವ್‌ನಲ್ಲಿ ಮೊದಲ ಬಾರಿಗೆ ಗ್ರಾ.ಪಂ ಮುಖ್ಯಸ್ಥನಾದ ದಲಿತ ಜಾತಿಗೆ ಸೇರಿದ ಸತ್ಯಮೇವ್ ಜಯತ್ ಆಲಿಯಾಸ್ ಪಪ್ಪು ರಾಮ್‌ ಎಂಬಾತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ಆತ ಮೇಲ್ಜಾತಿ ಠಾಕೂರರ ಮಾತು ಕೇಳದಿರುವುದೇ ಕೊಲೆಗೆ ಕಾರಣ ಎಂದು ದಲಿತರು ಆರೋಪಿಸಿದ್ದಾರೆ.

ಬನ್ಸ್‌ಗಾಂವ್‌ನಲ್ಲಿ ಮೇಲ್ಜಾತಿಗಳಿಗಿಂತ ದಲಿತರೆ ಅಧಿಕವಾಗಿರುವ ಪ್ರದೇಶವಾಗಿದೆ. ಇಲ್ಲಿಯ ಗ್ರಾಮ ಪಂಚಾಯ್ತಿಯ ಅಧಿಕಾರವು ಬ್ರಾಹ್ಮಣ ಮತ್ತು ಠಾಕೂರರಿಂದ ದಲಿತರಿಗೆ ವರ್ಗಾಹಿಸಲ್ಪಟ್ಟಿದೆ. ಇದನ್ನು ಸಹಿಸದ ಮೇಲ್ಜಾತಿಯವರು ಕೃತ್ಯವೆಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಸತ್ಯಮೇವ್ ಜಯತ್ ಕೊಲೆಯ ನಂತರ ಭಾರೀ ಪ್ರತಿಭಟನೆ ವ್ಯಕ್ತವಾಗಿದ್ದು, ಹಿಂಸಾಚಾರ ಭುಗಿಲೆದ್ದಿದೆ. ಪೊಲೀಸ್ ವಾಹನಕ್ಕೆ ಬೆಂಕಿ ಬಿದ್ದಿದ್ದು ಅದರಡಿ ಸಿಲುಕಿದ ಸೂರಜ್ ಎಂಬ 8 ವರ್ಷದ ಬಾಲಕ ಸಾವನಪ್ಪಿದ್ದಾನೆ.

ಸತ್ಯಮೇವ್ ಹತ್ಯೆಗೆ ಸಂಬಂಧಿಸಿದಂತೆ ವಿವೇಕ್ ಸಿಂಗ್ ಅಲಿಯಾಸ್ ಭೋಲು, ಸೂರ್ಯನ್ಶ್ ಕುಮಾರ್ ದುಬೆ, ಬ್ರಿಜೇಂದ್ರ ಸಿಂಗ್ ಅಲಿಯಾಸ್ ಗಪ್ಪು ಮತ್ತು ವಾಸಿಮ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ದುಬೆಯ ವಿರುದ್ಧ ಕೊಲೆ ಯತ್ನ ಸೇರಿದಂತೆ ಇತರ ಐದು ಪ್ರಕರಣಗಳಿವೆ.

ನಾವು ಸತ್ಯಮೇವ್ ಕುಟುಂಬದ ಹೇಳಿಕೆ ಆಧರಿಸಿ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸುತ್ತೇವೆ. ಕೊಲೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಏನೇ ಕಾರಣವಿದ್ದರೂ ಚುನಾಯಿತ ಪ್ರತಿನಿಧಿಯ ಕೊಲೆಯೂ ಗಂಭೀರ ಅಪರಾಧವಾಗಿದೆ. ಅಲ್ಲದೇ ಸೂರಜ್ ಸಾವಿನ ವಿಷಯವನ್ನು ತನಿಖೆ ಮಾಡಲಾಗುವುದು ಎಂದು ಡಿಐಜಿ ಸುಭಾಸ್ ಚಂದ್ರ ದುಬೆ ತಿಳಿಸಿದ್ದಾರೆ.

ಜಾತಿ ಮತ್ಸರ

ಪಪ್ಪು ರಾಮ್‌ ತನ್ನ ಹೆಸರನ್ನು ಸತ್ಯಮೇವ್ ಜಯತ್ ಎಂದು ಬದಲಿಸಿಕೊಂಡಿದ್ದರು. ಸಾಕಷ್ಟು ಓದಿಕೊಂಡಿದ್ದ ಅವರು, ಅಮೇರಿಕಾದಲ್ಲಿ ಗುಲಾಮಗಿರಿಯನ್ನು ತೊಲಗಿಸಿದ ಅಂಬ್ರಾಹಂ ಲಿಂಕನ್ ನೆನಪಿಗೆ ತನ್ನ ಸೋದರಳಿಯನಿಗೆ ಲಿಂಕನ್ ಎಂದು ಹೆಸರಿಟ್ಟಿದ್ದಾರೆ. ಮತ್ತೊಬ್ಬ ಸಹೋದರನ ಮಗನಿಗೆ ರಾಮು ರಾಮ್ ಎಂದು ಹೆಸರಿಟ್ಟಿದ್ದನು.

300 ದಲಿತ ಕುಟಂಬಗಳಿರುವ ಬನ್ಸ್‌ಗಾಂವ್‌ನಲ್ಲಿ 30 ಬ್ರಾಹ್ಮಣ ಮತ್ತು 30 ಠಾಕೂರ್ ಕುಟುಂಬಗಳಿವೆ. ದಲಿತರು ಹೆಚ್ಚಿನ ಸಂಖ್ಯೆಯಲ್ಲಿರುವುದರಿಂದ ಸಹಜವಾಗಿಯೇ ಹಿಂದಿನಿಂದಲೂ ಗ್ರಾಮ ಪ್ರಧಾನ್ ದಲಿತರೇ ಆಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಠಾಕೂರ್ ಮತ್ತು ಬ್ರಾಹ್ಮಣರು ದಲಿತರ ವಿರುದ್ಧ ದ್ವೇಷ ಸಾಧಿಸುತ್ತಿದ್ದರು ಎನ್ನಲಾಗಿದೆ.

ಇತ್ತೀಚೆಗೆ ಠಾಕೂರರು ಮತ್ತು ಸತ್ಯಮೇವ್ ನಡುವೆ ವಾಗ್ದಾದ ನಡೆದಿತ್ತು. ಅವರು ಸತ್ಯಮೇವ್‌ನ ಕಂಡರೆ ಅಸೂಯೆ ಪಡುತ್ತಿದ್ದರು. ತಮ್ಮ ಮಾತು ಕೇಳದ ಕಾರಣಕ್ಕಾಗಿಯೇ ಸತ್ಯಮೇವ್‌ನನ್ನು ಕೊಂದಿದ್ದಾರೆ ಎಂದು ಸತ್ಯಮೇವ್ ಸೋದರಳಿಯಿ ಲಿಂಕನ್ ಹೇಳಿದ್ದಾರೆ.

ಸೂರ್ಯನ್ಸು ಕುಮಾರ್ ದುಬೆ ಎಂಬಾತ ಈ ಗ್ರಾಮದಲ್ಲಿ ವಾಸವಿಲ್ಲದಿದ್ದರೂ ಸಹ ಪದೇ ಪದೇ ಗ್ರಾ.ಪಂ ಗೆ ಬಂದು ವಾಸಸ್ಥಳ ದೃಢೀಕರಣ ಪತ್ರ ಕೊಡುವಂತೆ ದುಂಬಾಲು ಬಿದ್ದಿದ್ದ. ಕಳೆದ ಒಂದು ವಾರದಲ್ಲಿ ಮೂರು ಬಾರಿ ಬಂದು ಧಮಕಿ ಹಾಕಿದ್ದ. ಆದರೆ ಅವನ ಬೆದರಿಗೆಕೆ ಸತ್ಯಮೇವ್ ಬಗ್ಗಿರಲಿಲ್ಲ. ಇದರಿಂದ ಕುಪಿತಗೊಂಡಿದ್ದ ಠಾಕೂರರು ಗುಂಡು ಹಾರಿಸಿ ಸತ್ಯಮೇವ್‌ನನ್ನು ಕೊಂದಿದ್ದಾರೆ. ಕೊಲೆಯ ನಂತರ ಸತ್ಯಮೇವ್ ತಾಯಿಯ ಬಳಿ ಹೋಗಿ ಜಾತಿನಿಂದನೆ ಮಾಡಿ ಬೈಯ್ದಿದ್ದಾರೆ. ತಾನೇ ಕೊಂದಿದ್ದಾಗಿ ಹೇಳಿ ಶವವನ್ನು ಹೋಗಿ ನೋಡಿ ಎಂದು ಬೆದರಿಕೆ ಹಾಕಿದ್ದರು ಎಂದು ಲಿಂಕನ್ ಹೇಳಿದ್ದಾರೆ.

ವಿವೇಕ್ ಸಿಂಗ್‌ ಎಂಬಾತ ಬಂದು ಸತ್ಯಮೇವ್‌ರನ್ನು ತನ್ನ ಬೈಕ್‌ನಲ್ಲಿ ಕರೆದುಕೊಂಡ ಹೋದ. ನಂತರ ವೇಕ್ ಸಿಂಗ್ ಸೂರ್ಯನ್ಶ್ ಕುಮಾರ್ ದುಬೆ, ಬ್ರಿಜೇಂದ್ರ ಸಿಂಗ್ ಮತ್ತು ವಾಸಿಮ್ ಸೇರಿ ಹತ್ಯೆ ಮಾಡಿದ್ದಾರೆ ಎಂದು ಸತ್ಯಮೇವ್ ಪತ್ನಿ ಮುನ್ನಿ ದೇವಿ ಹೇಳಿದ್ದಾರೆಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ.

ಅಲ್ಲದೇ ಬಿಜೇಂದ್ರ ಸಿಂಗ್ ಎಂಬ ಆರೋಪಿಯೊಂದಿಗೆ ಕಳೆದ ತಿಂಗಳು ಜಮೀನಿನ ವಿಷಯಕ್ಕೆ ಜಗಳವಾಗಿತ್ತು. ಈ ಎಲ್ಲಾ ಅಂಶಗಳ ಹಿನ್ನೆಲೆಯಲ್ಲಿ ಹತ್ಯೆ ಮಾಡಲಾಗಿದೆ ಎಂದು ಅವರು ದೂರಿದ್ದಾರೆ.


ಉತ್ತರ ಪ್ರದೇಶದ 13 ವರ್ಷದ ಬಾಲಕಿಯ ಅತ್ಯಾಚಾರ, ಕೊಲೆ: ನಾಲಿಗೆ ಕತ್ತರಿಸಿ, ಕಣ್ಣು ಕಿತ್ತ ಪಾಪಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...