Homeಮುಖಪುಟದಲಿತನೊಬ್ಬ ಗ್ರಾ.ಪಂ ಮುಖ್ಯಸ್ಥನಾದುದ್ದನ್ನು ಸಹಿಸದ ಮೇಲ್ಜಾತಿಗಳು: ಗುಂಡಿಕ್ಕಿ ಕೊಲೆ

ದಲಿತನೊಬ್ಬ ಗ್ರಾ.ಪಂ ಮುಖ್ಯಸ್ಥನಾದುದ್ದನ್ನು ಸಹಿಸದ ಮೇಲ್ಜಾತಿಗಳು: ಗುಂಡಿಕ್ಕಿ ಕೊಲೆ

300 ದಲಿತ ಕುಟಂಬಗಳಿರುವ ಬನ್ಸ್‌ಗಾಂವ್‌ನಲ್ಲಿ ಹಿಂದಿನಿಂದಲೂ ಗ್ರಾಮ ಪ್ರಧಾನ್ ದಲಿತರೇ ಆಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಠಾಕೂರ್ ಮತ್ತು ಬ್ರಾಹ್ಮಣರು ದಲಿತರ ವಿರುದ್ಧ ದ್ವೇಷ ಸಾಧಿಸುತ್ತಿದ್ದರು ಎನ್ನಲಾಗಿದೆ.

- Advertisement -
- Advertisement -

ಉತ್ತರ ಪ್ರದೇಶದ ಅಜಂಘಡ ಜಿಲ್ಲೆಯ ಬನ್ಸ್‌ಗಾಂವ್‌ನಲ್ಲಿ ಮೊದಲ ಬಾರಿಗೆ ಗ್ರಾ.ಪಂ ಮುಖ್ಯಸ್ಥನಾದ ದಲಿತ ಜಾತಿಗೆ ಸೇರಿದ ಸತ್ಯಮೇವ್ ಜಯತ್ ಆಲಿಯಾಸ್ ಪಪ್ಪು ರಾಮ್‌ ಎಂಬಾತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ಆತ ಮೇಲ್ಜಾತಿ ಠಾಕೂರರ ಮಾತು ಕೇಳದಿರುವುದೇ ಕೊಲೆಗೆ ಕಾರಣ ಎಂದು ದಲಿತರು ಆರೋಪಿಸಿದ್ದಾರೆ.

ಬನ್ಸ್‌ಗಾಂವ್‌ನಲ್ಲಿ ಮೇಲ್ಜಾತಿಗಳಿಗಿಂತ ದಲಿತರೆ ಅಧಿಕವಾಗಿರುವ ಪ್ರದೇಶವಾಗಿದೆ. ಇಲ್ಲಿಯ ಗ್ರಾಮ ಪಂಚಾಯ್ತಿಯ ಅಧಿಕಾರವು ಬ್ರಾಹ್ಮಣ ಮತ್ತು ಠಾಕೂರರಿಂದ ದಲಿತರಿಗೆ ವರ್ಗಾಹಿಸಲ್ಪಟ್ಟಿದೆ. ಇದನ್ನು ಸಹಿಸದ ಮೇಲ್ಜಾತಿಯವರು ಕೃತ್ಯವೆಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಸತ್ಯಮೇವ್ ಜಯತ್ ಕೊಲೆಯ ನಂತರ ಭಾರೀ ಪ್ರತಿಭಟನೆ ವ್ಯಕ್ತವಾಗಿದ್ದು, ಹಿಂಸಾಚಾರ ಭುಗಿಲೆದ್ದಿದೆ. ಪೊಲೀಸ್ ವಾಹನಕ್ಕೆ ಬೆಂಕಿ ಬಿದ್ದಿದ್ದು ಅದರಡಿ ಸಿಲುಕಿದ ಸೂರಜ್ ಎಂಬ 8 ವರ್ಷದ ಬಾಲಕ ಸಾವನಪ್ಪಿದ್ದಾನೆ.

ಸತ್ಯಮೇವ್ ಹತ್ಯೆಗೆ ಸಂಬಂಧಿಸಿದಂತೆ ವಿವೇಕ್ ಸಿಂಗ್ ಅಲಿಯಾಸ್ ಭೋಲು, ಸೂರ್ಯನ್ಶ್ ಕುಮಾರ್ ದುಬೆ, ಬ್ರಿಜೇಂದ್ರ ಸಿಂಗ್ ಅಲಿಯಾಸ್ ಗಪ್ಪು ಮತ್ತು ವಾಸಿಮ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ದುಬೆಯ ವಿರುದ್ಧ ಕೊಲೆ ಯತ್ನ ಸೇರಿದಂತೆ ಇತರ ಐದು ಪ್ರಕರಣಗಳಿವೆ.

ನಾವು ಸತ್ಯಮೇವ್ ಕುಟುಂಬದ ಹೇಳಿಕೆ ಆಧರಿಸಿ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸುತ್ತೇವೆ. ಕೊಲೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಏನೇ ಕಾರಣವಿದ್ದರೂ ಚುನಾಯಿತ ಪ್ರತಿನಿಧಿಯ ಕೊಲೆಯೂ ಗಂಭೀರ ಅಪರಾಧವಾಗಿದೆ. ಅಲ್ಲದೇ ಸೂರಜ್ ಸಾವಿನ ವಿಷಯವನ್ನು ತನಿಖೆ ಮಾಡಲಾಗುವುದು ಎಂದು ಡಿಐಜಿ ಸುಭಾಸ್ ಚಂದ್ರ ದುಬೆ ತಿಳಿಸಿದ್ದಾರೆ.

ಜಾತಿ ಮತ್ಸರ

ಪಪ್ಪು ರಾಮ್‌ ತನ್ನ ಹೆಸರನ್ನು ಸತ್ಯಮೇವ್ ಜಯತ್ ಎಂದು ಬದಲಿಸಿಕೊಂಡಿದ್ದರು. ಸಾಕಷ್ಟು ಓದಿಕೊಂಡಿದ್ದ ಅವರು, ಅಮೇರಿಕಾದಲ್ಲಿ ಗುಲಾಮಗಿರಿಯನ್ನು ತೊಲಗಿಸಿದ ಅಂಬ್ರಾಹಂ ಲಿಂಕನ್ ನೆನಪಿಗೆ ತನ್ನ ಸೋದರಳಿಯನಿಗೆ ಲಿಂಕನ್ ಎಂದು ಹೆಸರಿಟ್ಟಿದ್ದಾರೆ. ಮತ್ತೊಬ್ಬ ಸಹೋದರನ ಮಗನಿಗೆ ರಾಮು ರಾಮ್ ಎಂದು ಹೆಸರಿಟ್ಟಿದ್ದನು.

300 ದಲಿತ ಕುಟಂಬಗಳಿರುವ ಬನ್ಸ್‌ಗಾಂವ್‌ನಲ್ಲಿ 30 ಬ್ರಾಹ್ಮಣ ಮತ್ತು 30 ಠಾಕೂರ್ ಕುಟುಂಬಗಳಿವೆ. ದಲಿತರು ಹೆಚ್ಚಿನ ಸಂಖ್ಯೆಯಲ್ಲಿರುವುದರಿಂದ ಸಹಜವಾಗಿಯೇ ಹಿಂದಿನಿಂದಲೂ ಗ್ರಾಮ ಪ್ರಧಾನ್ ದಲಿತರೇ ಆಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಠಾಕೂರ್ ಮತ್ತು ಬ್ರಾಹ್ಮಣರು ದಲಿತರ ವಿರುದ್ಧ ದ್ವೇಷ ಸಾಧಿಸುತ್ತಿದ್ದರು ಎನ್ನಲಾಗಿದೆ.

ಇತ್ತೀಚೆಗೆ ಠಾಕೂರರು ಮತ್ತು ಸತ್ಯಮೇವ್ ನಡುವೆ ವಾಗ್ದಾದ ನಡೆದಿತ್ತು. ಅವರು ಸತ್ಯಮೇವ್‌ನ ಕಂಡರೆ ಅಸೂಯೆ ಪಡುತ್ತಿದ್ದರು. ತಮ್ಮ ಮಾತು ಕೇಳದ ಕಾರಣಕ್ಕಾಗಿಯೇ ಸತ್ಯಮೇವ್‌ನನ್ನು ಕೊಂದಿದ್ದಾರೆ ಎಂದು ಸತ್ಯಮೇವ್ ಸೋದರಳಿಯಿ ಲಿಂಕನ್ ಹೇಳಿದ್ದಾರೆ.

ಸೂರ್ಯನ್ಸು ಕುಮಾರ್ ದುಬೆ ಎಂಬಾತ ಈ ಗ್ರಾಮದಲ್ಲಿ ವಾಸವಿಲ್ಲದಿದ್ದರೂ ಸಹ ಪದೇ ಪದೇ ಗ್ರಾ.ಪಂ ಗೆ ಬಂದು ವಾಸಸ್ಥಳ ದೃಢೀಕರಣ ಪತ್ರ ಕೊಡುವಂತೆ ದುಂಬಾಲು ಬಿದ್ದಿದ್ದ. ಕಳೆದ ಒಂದು ವಾರದಲ್ಲಿ ಮೂರು ಬಾರಿ ಬಂದು ಧಮಕಿ ಹಾಕಿದ್ದ. ಆದರೆ ಅವನ ಬೆದರಿಗೆಕೆ ಸತ್ಯಮೇವ್ ಬಗ್ಗಿರಲಿಲ್ಲ. ಇದರಿಂದ ಕುಪಿತಗೊಂಡಿದ್ದ ಠಾಕೂರರು ಗುಂಡು ಹಾರಿಸಿ ಸತ್ಯಮೇವ್‌ನನ್ನು ಕೊಂದಿದ್ದಾರೆ. ಕೊಲೆಯ ನಂತರ ಸತ್ಯಮೇವ್ ತಾಯಿಯ ಬಳಿ ಹೋಗಿ ಜಾತಿನಿಂದನೆ ಮಾಡಿ ಬೈಯ್ದಿದ್ದಾರೆ. ತಾನೇ ಕೊಂದಿದ್ದಾಗಿ ಹೇಳಿ ಶವವನ್ನು ಹೋಗಿ ನೋಡಿ ಎಂದು ಬೆದರಿಕೆ ಹಾಕಿದ್ದರು ಎಂದು ಲಿಂಕನ್ ಹೇಳಿದ್ದಾರೆ.

ವಿವೇಕ್ ಸಿಂಗ್‌ ಎಂಬಾತ ಬಂದು ಸತ್ಯಮೇವ್‌ರನ್ನು ತನ್ನ ಬೈಕ್‌ನಲ್ಲಿ ಕರೆದುಕೊಂಡ ಹೋದ. ನಂತರ ವೇಕ್ ಸಿಂಗ್ ಸೂರ್ಯನ್ಶ್ ಕುಮಾರ್ ದುಬೆ, ಬ್ರಿಜೇಂದ್ರ ಸಿಂಗ್ ಮತ್ತು ವಾಸಿಮ್ ಸೇರಿ ಹತ್ಯೆ ಮಾಡಿದ್ದಾರೆ ಎಂದು ಸತ್ಯಮೇವ್ ಪತ್ನಿ ಮುನ್ನಿ ದೇವಿ ಹೇಳಿದ್ದಾರೆಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ.

ಅಲ್ಲದೇ ಬಿಜೇಂದ್ರ ಸಿಂಗ್ ಎಂಬ ಆರೋಪಿಯೊಂದಿಗೆ ಕಳೆದ ತಿಂಗಳು ಜಮೀನಿನ ವಿಷಯಕ್ಕೆ ಜಗಳವಾಗಿತ್ತು. ಈ ಎಲ್ಲಾ ಅಂಶಗಳ ಹಿನ್ನೆಲೆಯಲ್ಲಿ ಹತ್ಯೆ ಮಾಡಲಾಗಿದೆ ಎಂದು ಅವರು ದೂರಿದ್ದಾರೆ.


ಉತ್ತರ ಪ್ರದೇಶದ 13 ವರ್ಷದ ಬಾಲಕಿಯ ಅತ್ಯಾಚಾರ, ಕೊಲೆ: ನಾಲಿಗೆ ಕತ್ತರಿಸಿ, ಕಣ್ಣು ಕಿತ್ತ ಪಾಪಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....