Homeಮುಖಪುಟದಲಿತನೊಬ್ಬ ಗ್ರಾ.ಪಂ ಮುಖ್ಯಸ್ಥನಾದುದ್ದನ್ನು ಸಹಿಸದ ಮೇಲ್ಜಾತಿಗಳು: ಗುಂಡಿಕ್ಕಿ ಕೊಲೆ

ದಲಿತನೊಬ್ಬ ಗ್ರಾ.ಪಂ ಮುಖ್ಯಸ್ಥನಾದುದ್ದನ್ನು ಸಹಿಸದ ಮೇಲ್ಜಾತಿಗಳು: ಗುಂಡಿಕ್ಕಿ ಕೊಲೆ

300 ದಲಿತ ಕುಟಂಬಗಳಿರುವ ಬನ್ಸ್‌ಗಾಂವ್‌ನಲ್ಲಿ ಹಿಂದಿನಿಂದಲೂ ಗ್ರಾಮ ಪ್ರಧಾನ್ ದಲಿತರೇ ಆಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಠಾಕೂರ್ ಮತ್ತು ಬ್ರಾಹ್ಮಣರು ದಲಿತರ ವಿರುದ್ಧ ದ್ವೇಷ ಸಾಧಿಸುತ್ತಿದ್ದರು ಎನ್ನಲಾಗಿದೆ.

- Advertisement -
- Advertisement -

ಉತ್ತರ ಪ್ರದೇಶದ ಅಜಂಘಡ ಜಿಲ್ಲೆಯ ಬನ್ಸ್‌ಗಾಂವ್‌ನಲ್ಲಿ ಮೊದಲ ಬಾರಿಗೆ ಗ್ರಾ.ಪಂ ಮುಖ್ಯಸ್ಥನಾದ ದಲಿತ ಜಾತಿಗೆ ಸೇರಿದ ಸತ್ಯಮೇವ್ ಜಯತ್ ಆಲಿಯಾಸ್ ಪಪ್ಪು ರಾಮ್‌ ಎಂಬಾತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ಆತ ಮೇಲ್ಜಾತಿ ಠಾಕೂರರ ಮಾತು ಕೇಳದಿರುವುದೇ ಕೊಲೆಗೆ ಕಾರಣ ಎಂದು ದಲಿತರು ಆರೋಪಿಸಿದ್ದಾರೆ.

ಬನ್ಸ್‌ಗಾಂವ್‌ನಲ್ಲಿ ಮೇಲ್ಜಾತಿಗಳಿಗಿಂತ ದಲಿತರೆ ಅಧಿಕವಾಗಿರುವ ಪ್ರದೇಶವಾಗಿದೆ. ಇಲ್ಲಿಯ ಗ್ರಾಮ ಪಂಚಾಯ್ತಿಯ ಅಧಿಕಾರವು ಬ್ರಾಹ್ಮಣ ಮತ್ತು ಠಾಕೂರರಿಂದ ದಲಿತರಿಗೆ ವರ್ಗಾಹಿಸಲ್ಪಟ್ಟಿದೆ. ಇದನ್ನು ಸಹಿಸದ ಮೇಲ್ಜಾತಿಯವರು ಕೃತ್ಯವೆಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಸತ್ಯಮೇವ್ ಜಯತ್ ಕೊಲೆಯ ನಂತರ ಭಾರೀ ಪ್ರತಿಭಟನೆ ವ್ಯಕ್ತವಾಗಿದ್ದು, ಹಿಂಸಾಚಾರ ಭುಗಿಲೆದ್ದಿದೆ. ಪೊಲೀಸ್ ವಾಹನಕ್ಕೆ ಬೆಂಕಿ ಬಿದ್ದಿದ್ದು ಅದರಡಿ ಸಿಲುಕಿದ ಸೂರಜ್ ಎಂಬ 8 ವರ್ಷದ ಬಾಲಕ ಸಾವನಪ್ಪಿದ್ದಾನೆ.

ಸತ್ಯಮೇವ್ ಹತ್ಯೆಗೆ ಸಂಬಂಧಿಸಿದಂತೆ ವಿವೇಕ್ ಸಿಂಗ್ ಅಲಿಯಾಸ್ ಭೋಲು, ಸೂರ್ಯನ್ಶ್ ಕುಮಾರ್ ದುಬೆ, ಬ್ರಿಜೇಂದ್ರ ಸಿಂಗ್ ಅಲಿಯಾಸ್ ಗಪ್ಪು ಮತ್ತು ವಾಸಿಮ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ದುಬೆಯ ವಿರುದ್ಧ ಕೊಲೆ ಯತ್ನ ಸೇರಿದಂತೆ ಇತರ ಐದು ಪ್ರಕರಣಗಳಿವೆ.

ನಾವು ಸತ್ಯಮೇವ್ ಕುಟುಂಬದ ಹೇಳಿಕೆ ಆಧರಿಸಿ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸುತ್ತೇವೆ. ಕೊಲೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಏನೇ ಕಾರಣವಿದ್ದರೂ ಚುನಾಯಿತ ಪ್ರತಿನಿಧಿಯ ಕೊಲೆಯೂ ಗಂಭೀರ ಅಪರಾಧವಾಗಿದೆ. ಅಲ್ಲದೇ ಸೂರಜ್ ಸಾವಿನ ವಿಷಯವನ್ನು ತನಿಖೆ ಮಾಡಲಾಗುವುದು ಎಂದು ಡಿಐಜಿ ಸುಭಾಸ್ ಚಂದ್ರ ದುಬೆ ತಿಳಿಸಿದ್ದಾರೆ.

ಜಾತಿ ಮತ್ಸರ

ಪಪ್ಪು ರಾಮ್‌ ತನ್ನ ಹೆಸರನ್ನು ಸತ್ಯಮೇವ್ ಜಯತ್ ಎಂದು ಬದಲಿಸಿಕೊಂಡಿದ್ದರು. ಸಾಕಷ್ಟು ಓದಿಕೊಂಡಿದ್ದ ಅವರು, ಅಮೇರಿಕಾದಲ್ಲಿ ಗುಲಾಮಗಿರಿಯನ್ನು ತೊಲಗಿಸಿದ ಅಂಬ್ರಾಹಂ ಲಿಂಕನ್ ನೆನಪಿಗೆ ತನ್ನ ಸೋದರಳಿಯನಿಗೆ ಲಿಂಕನ್ ಎಂದು ಹೆಸರಿಟ್ಟಿದ್ದಾರೆ. ಮತ್ತೊಬ್ಬ ಸಹೋದರನ ಮಗನಿಗೆ ರಾಮು ರಾಮ್ ಎಂದು ಹೆಸರಿಟ್ಟಿದ್ದನು.

300 ದಲಿತ ಕುಟಂಬಗಳಿರುವ ಬನ್ಸ್‌ಗಾಂವ್‌ನಲ್ಲಿ 30 ಬ್ರಾಹ್ಮಣ ಮತ್ತು 30 ಠಾಕೂರ್ ಕುಟುಂಬಗಳಿವೆ. ದಲಿತರು ಹೆಚ್ಚಿನ ಸಂಖ್ಯೆಯಲ್ಲಿರುವುದರಿಂದ ಸಹಜವಾಗಿಯೇ ಹಿಂದಿನಿಂದಲೂ ಗ್ರಾಮ ಪ್ರಧಾನ್ ದಲಿತರೇ ಆಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಠಾಕೂರ್ ಮತ್ತು ಬ್ರಾಹ್ಮಣರು ದಲಿತರ ವಿರುದ್ಧ ದ್ವೇಷ ಸಾಧಿಸುತ್ತಿದ್ದರು ಎನ್ನಲಾಗಿದೆ.

ಇತ್ತೀಚೆಗೆ ಠಾಕೂರರು ಮತ್ತು ಸತ್ಯಮೇವ್ ನಡುವೆ ವಾಗ್ದಾದ ನಡೆದಿತ್ತು. ಅವರು ಸತ್ಯಮೇವ್‌ನ ಕಂಡರೆ ಅಸೂಯೆ ಪಡುತ್ತಿದ್ದರು. ತಮ್ಮ ಮಾತು ಕೇಳದ ಕಾರಣಕ್ಕಾಗಿಯೇ ಸತ್ಯಮೇವ್‌ನನ್ನು ಕೊಂದಿದ್ದಾರೆ ಎಂದು ಸತ್ಯಮೇವ್ ಸೋದರಳಿಯಿ ಲಿಂಕನ್ ಹೇಳಿದ್ದಾರೆ.

ಸೂರ್ಯನ್ಸು ಕುಮಾರ್ ದುಬೆ ಎಂಬಾತ ಈ ಗ್ರಾಮದಲ್ಲಿ ವಾಸವಿಲ್ಲದಿದ್ದರೂ ಸಹ ಪದೇ ಪದೇ ಗ್ರಾ.ಪಂ ಗೆ ಬಂದು ವಾಸಸ್ಥಳ ದೃಢೀಕರಣ ಪತ್ರ ಕೊಡುವಂತೆ ದುಂಬಾಲು ಬಿದ್ದಿದ್ದ. ಕಳೆದ ಒಂದು ವಾರದಲ್ಲಿ ಮೂರು ಬಾರಿ ಬಂದು ಧಮಕಿ ಹಾಕಿದ್ದ. ಆದರೆ ಅವನ ಬೆದರಿಗೆಕೆ ಸತ್ಯಮೇವ್ ಬಗ್ಗಿರಲಿಲ್ಲ. ಇದರಿಂದ ಕುಪಿತಗೊಂಡಿದ್ದ ಠಾಕೂರರು ಗುಂಡು ಹಾರಿಸಿ ಸತ್ಯಮೇವ್‌ನನ್ನು ಕೊಂದಿದ್ದಾರೆ. ಕೊಲೆಯ ನಂತರ ಸತ್ಯಮೇವ್ ತಾಯಿಯ ಬಳಿ ಹೋಗಿ ಜಾತಿನಿಂದನೆ ಮಾಡಿ ಬೈಯ್ದಿದ್ದಾರೆ. ತಾನೇ ಕೊಂದಿದ್ದಾಗಿ ಹೇಳಿ ಶವವನ್ನು ಹೋಗಿ ನೋಡಿ ಎಂದು ಬೆದರಿಕೆ ಹಾಕಿದ್ದರು ಎಂದು ಲಿಂಕನ್ ಹೇಳಿದ್ದಾರೆ.

ವಿವೇಕ್ ಸಿಂಗ್‌ ಎಂಬಾತ ಬಂದು ಸತ್ಯಮೇವ್‌ರನ್ನು ತನ್ನ ಬೈಕ್‌ನಲ್ಲಿ ಕರೆದುಕೊಂಡ ಹೋದ. ನಂತರ ವೇಕ್ ಸಿಂಗ್ ಸೂರ್ಯನ್ಶ್ ಕುಮಾರ್ ದುಬೆ, ಬ್ರಿಜೇಂದ್ರ ಸಿಂಗ್ ಮತ್ತು ವಾಸಿಮ್ ಸೇರಿ ಹತ್ಯೆ ಮಾಡಿದ್ದಾರೆ ಎಂದು ಸತ್ಯಮೇವ್ ಪತ್ನಿ ಮುನ್ನಿ ದೇವಿ ಹೇಳಿದ್ದಾರೆಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ.

ಅಲ್ಲದೇ ಬಿಜೇಂದ್ರ ಸಿಂಗ್ ಎಂಬ ಆರೋಪಿಯೊಂದಿಗೆ ಕಳೆದ ತಿಂಗಳು ಜಮೀನಿನ ವಿಷಯಕ್ಕೆ ಜಗಳವಾಗಿತ್ತು. ಈ ಎಲ್ಲಾ ಅಂಶಗಳ ಹಿನ್ನೆಲೆಯಲ್ಲಿ ಹತ್ಯೆ ಮಾಡಲಾಗಿದೆ ಎಂದು ಅವರು ದೂರಿದ್ದಾರೆ.


ಉತ್ತರ ಪ್ರದೇಶದ 13 ವರ್ಷದ ಬಾಲಕಿಯ ಅತ್ಯಾಚಾರ, ಕೊಲೆ: ನಾಲಿಗೆ ಕತ್ತರಿಸಿ, ಕಣ್ಣು ಕಿತ್ತ ಪಾಪಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...