Homeಮುಖಪುಟದಲಿತನೊಬ್ಬ ಗ್ರಾ.ಪಂ ಮುಖ್ಯಸ್ಥನಾದುದ್ದನ್ನು ಸಹಿಸದ ಮೇಲ್ಜಾತಿಗಳು: ಗುಂಡಿಕ್ಕಿ ಕೊಲೆ

ದಲಿತನೊಬ್ಬ ಗ್ರಾ.ಪಂ ಮುಖ್ಯಸ್ಥನಾದುದ್ದನ್ನು ಸಹಿಸದ ಮೇಲ್ಜಾತಿಗಳು: ಗುಂಡಿಕ್ಕಿ ಕೊಲೆ

300 ದಲಿತ ಕುಟಂಬಗಳಿರುವ ಬನ್ಸ್‌ಗಾಂವ್‌ನಲ್ಲಿ ಹಿಂದಿನಿಂದಲೂ ಗ್ರಾಮ ಪ್ರಧಾನ್ ದಲಿತರೇ ಆಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಠಾಕೂರ್ ಮತ್ತು ಬ್ರಾಹ್ಮಣರು ದಲಿತರ ವಿರುದ್ಧ ದ್ವೇಷ ಸಾಧಿಸುತ್ತಿದ್ದರು ಎನ್ನಲಾಗಿದೆ.

- Advertisement -
- Advertisement -

ಉತ್ತರ ಪ್ರದೇಶದ ಅಜಂಘಡ ಜಿಲ್ಲೆಯ ಬನ್ಸ್‌ಗಾಂವ್‌ನಲ್ಲಿ ಮೊದಲ ಬಾರಿಗೆ ಗ್ರಾ.ಪಂ ಮುಖ್ಯಸ್ಥನಾದ ದಲಿತ ಜಾತಿಗೆ ಸೇರಿದ ಸತ್ಯಮೇವ್ ಜಯತ್ ಆಲಿಯಾಸ್ ಪಪ್ಪು ರಾಮ್‌ ಎಂಬಾತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ಆತ ಮೇಲ್ಜಾತಿ ಠಾಕೂರರ ಮಾತು ಕೇಳದಿರುವುದೇ ಕೊಲೆಗೆ ಕಾರಣ ಎಂದು ದಲಿತರು ಆರೋಪಿಸಿದ್ದಾರೆ.

ಬನ್ಸ್‌ಗಾಂವ್‌ನಲ್ಲಿ ಮೇಲ್ಜಾತಿಗಳಿಗಿಂತ ದಲಿತರೆ ಅಧಿಕವಾಗಿರುವ ಪ್ರದೇಶವಾಗಿದೆ. ಇಲ್ಲಿಯ ಗ್ರಾಮ ಪಂಚಾಯ್ತಿಯ ಅಧಿಕಾರವು ಬ್ರಾಹ್ಮಣ ಮತ್ತು ಠಾಕೂರರಿಂದ ದಲಿತರಿಗೆ ವರ್ಗಾಹಿಸಲ್ಪಟ್ಟಿದೆ. ಇದನ್ನು ಸಹಿಸದ ಮೇಲ್ಜಾತಿಯವರು ಕೃತ್ಯವೆಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಸತ್ಯಮೇವ್ ಜಯತ್ ಕೊಲೆಯ ನಂತರ ಭಾರೀ ಪ್ರತಿಭಟನೆ ವ್ಯಕ್ತವಾಗಿದ್ದು, ಹಿಂಸಾಚಾರ ಭುಗಿಲೆದ್ದಿದೆ. ಪೊಲೀಸ್ ವಾಹನಕ್ಕೆ ಬೆಂಕಿ ಬಿದ್ದಿದ್ದು ಅದರಡಿ ಸಿಲುಕಿದ ಸೂರಜ್ ಎಂಬ 8 ವರ್ಷದ ಬಾಲಕ ಸಾವನಪ್ಪಿದ್ದಾನೆ.

ಸತ್ಯಮೇವ್ ಹತ್ಯೆಗೆ ಸಂಬಂಧಿಸಿದಂತೆ ವಿವೇಕ್ ಸಿಂಗ್ ಅಲಿಯಾಸ್ ಭೋಲು, ಸೂರ್ಯನ್ಶ್ ಕುಮಾರ್ ದುಬೆ, ಬ್ರಿಜೇಂದ್ರ ಸಿಂಗ್ ಅಲಿಯಾಸ್ ಗಪ್ಪು ಮತ್ತು ವಾಸಿಮ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ದುಬೆಯ ವಿರುದ್ಧ ಕೊಲೆ ಯತ್ನ ಸೇರಿದಂತೆ ಇತರ ಐದು ಪ್ರಕರಣಗಳಿವೆ.

ನಾವು ಸತ್ಯಮೇವ್ ಕುಟುಂಬದ ಹೇಳಿಕೆ ಆಧರಿಸಿ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸುತ್ತೇವೆ. ಕೊಲೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಏನೇ ಕಾರಣವಿದ್ದರೂ ಚುನಾಯಿತ ಪ್ರತಿನಿಧಿಯ ಕೊಲೆಯೂ ಗಂಭೀರ ಅಪರಾಧವಾಗಿದೆ. ಅಲ್ಲದೇ ಸೂರಜ್ ಸಾವಿನ ವಿಷಯವನ್ನು ತನಿಖೆ ಮಾಡಲಾಗುವುದು ಎಂದು ಡಿಐಜಿ ಸುಭಾಸ್ ಚಂದ್ರ ದುಬೆ ತಿಳಿಸಿದ್ದಾರೆ.

ಜಾತಿ ಮತ್ಸರ

ಪಪ್ಪು ರಾಮ್‌ ತನ್ನ ಹೆಸರನ್ನು ಸತ್ಯಮೇವ್ ಜಯತ್ ಎಂದು ಬದಲಿಸಿಕೊಂಡಿದ್ದರು. ಸಾಕಷ್ಟು ಓದಿಕೊಂಡಿದ್ದ ಅವರು, ಅಮೇರಿಕಾದಲ್ಲಿ ಗುಲಾಮಗಿರಿಯನ್ನು ತೊಲಗಿಸಿದ ಅಂಬ್ರಾಹಂ ಲಿಂಕನ್ ನೆನಪಿಗೆ ತನ್ನ ಸೋದರಳಿಯನಿಗೆ ಲಿಂಕನ್ ಎಂದು ಹೆಸರಿಟ್ಟಿದ್ದಾರೆ. ಮತ್ತೊಬ್ಬ ಸಹೋದರನ ಮಗನಿಗೆ ರಾಮು ರಾಮ್ ಎಂದು ಹೆಸರಿಟ್ಟಿದ್ದನು.

300 ದಲಿತ ಕುಟಂಬಗಳಿರುವ ಬನ್ಸ್‌ಗಾಂವ್‌ನಲ್ಲಿ 30 ಬ್ರಾಹ್ಮಣ ಮತ್ತು 30 ಠಾಕೂರ್ ಕುಟುಂಬಗಳಿವೆ. ದಲಿತರು ಹೆಚ್ಚಿನ ಸಂಖ್ಯೆಯಲ್ಲಿರುವುದರಿಂದ ಸಹಜವಾಗಿಯೇ ಹಿಂದಿನಿಂದಲೂ ಗ್ರಾಮ ಪ್ರಧಾನ್ ದಲಿತರೇ ಆಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಠಾಕೂರ್ ಮತ್ತು ಬ್ರಾಹ್ಮಣರು ದಲಿತರ ವಿರುದ್ಧ ದ್ವೇಷ ಸಾಧಿಸುತ್ತಿದ್ದರು ಎನ್ನಲಾಗಿದೆ.

ಇತ್ತೀಚೆಗೆ ಠಾಕೂರರು ಮತ್ತು ಸತ್ಯಮೇವ್ ನಡುವೆ ವಾಗ್ದಾದ ನಡೆದಿತ್ತು. ಅವರು ಸತ್ಯಮೇವ್‌ನ ಕಂಡರೆ ಅಸೂಯೆ ಪಡುತ್ತಿದ್ದರು. ತಮ್ಮ ಮಾತು ಕೇಳದ ಕಾರಣಕ್ಕಾಗಿಯೇ ಸತ್ಯಮೇವ್‌ನನ್ನು ಕೊಂದಿದ್ದಾರೆ ಎಂದು ಸತ್ಯಮೇವ್ ಸೋದರಳಿಯಿ ಲಿಂಕನ್ ಹೇಳಿದ್ದಾರೆ.

ಸೂರ್ಯನ್ಸು ಕುಮಾರ್ ದುಬೆ ಎಂಬಾತ ಈ ಗ್ರಾಮದಲ್ಲಿ ವಾಸವಿಲ್ಲದಿದ್ದರೂ ಸಹ ಪದೇ ಪದೇ ಗ್ರಾ.ಪಂ ಗೆ ಬಂದು ವಾಸಸ್ಥಳ ದೃಢೀಕರಣ ಪತ್ರ ಕೊಡುವಂತೆ ದುಂಬಾಲು ಬಿದ್ದಿದ್ದ. ಕಳೆದ ಒಂದು ವಾರದಲ್ಲಿ ಮೂರು ಬಾರಿ ಬಂದು ಧಮಕಿ ಹಾಕಿದ್ದ. ಆದರೆ ಅವನ ಬೆದರಿಗೆಕೆ ಸತ್ಯಮೇವ್ ಬಗ್ಗಿರಲಿಲ್ಲ. ಇದರಿಂದ ಕುಪಿತಗೊಂಡಿದ್ದ ಠಾಕೂರರು ಗುಂಡು ಹಾರಿಸಿ ಸತ್ಯಮೇವ್‌ನನ್ನು ಕೊಂದಿದ್ದಾರೆ. ಕೊಲೆಯ ನಂತರ ಸತ್ಯಮೇವ್ ತಾಯಿಯ ಬಳಿ ಹೋಗಿ ಜಾತಿನಿಂದನೆ ಮಾಡಿ ಬೈಯ್ದಿದ್ದಾರೆ. ತಾನೇ ಕೊಂದಿದ್ದಾಗಿ ಹೇಳಿ ಶವವನ್ನು ಹೋಗಿ ನೋಡಿ ಎಂದು ಬೆದರಿಕೆ ಹಾಕಿದ್ದರು ಎಂದು ಲಿಂಕನ್ ಹೇಳಿದ್ದಾರೆ.

ವಿವೇಕ್ ಸಿಂಗ್‌ ಎಂಬಾತ ಬಂದು ಸತ್ಯಮೇವ್‌ರನ್ನು ತನ್ನ ಬೈಕ್‌ನಲ್ಲಿ ಕರೆದುಕೊಂಡ ಹೋದ. ನಂತರ ವೇಕ್ ಸಿಂಗ್ ಸೂರ್ಯನ್ಶ್ ಕುಮಾರ್ ದುಬೆ, ಬ್ರಿಜೇಂದ್ರ ಸಿಂಗ್ ಮತ್ತು ವಾಸಿಮ್ ಸೇರಿ ಹತ್ಯೆ ಮಾಡಿದ್ದಾರೆ ಎಂದು ಸತ್ಯಮೇವ್ ಪತ್ನಿ ಮುನ್ನಿ ದೇವಿ ಹೇಳಿದ್ದಾರೆಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ.

ಅಲ್ಲದೇ ಬಿಜೇಂದ್ರ ಸಿಂಗ್ ಎಂಬ ಆರೋಪಿಯೊಂದಿಗೆ ಕಳೆದ ತಿಂಗಳು ಜಮೀನಿನ ವಿಷಯಕ್ಕೆ ಜಗಳವಾಗಿತ್ತು. ಈ ಎಲ್ಲಾ ಅಂಶಗಳ ಹಿನ್ನೆಲೆಯಲ್ಲಿ ಹತ್ಯೆ ಮಾಡಲಾಗಿದೆ ಎಂದು ಅವರು ದೂರಿದ್ದಾರೆ.


ಉತ್ತರ ಪ್ರದೇಶದ 13 ವರ್ಷದ ಬಾಲಕಿಯ ಅತ್ಯಾಚಾರ, ಕೊಲೆ: ನಾಲಿಗೆ ಕತ್ತರಿಸಿ, ಕಣ್ಣು ಕಿತ್ತ ಪಾಪಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...