Homeಕರ್ನಾಟಕಉಪ್ಪಿನಂಗಡಿ: ಹಿಂದೂ ವರ್ತಕರ ದೂರು; ಕೋಮು ದ್ವೇಷ ಸೃಷ್ಟಿಸಲು ಯತ್ನಿಸಿದವರ ವಿರುದ್ಧ ಎಫ್‌ಐಆರ್‌‌

ಉಪ್ಪಿನಂಗಡಿ: ಹಿಂದೂ ವರ್ತಕರ ದೂರು; ಕೋಮು ದ್ವೇಷ ಸೃಷ್ಟಿಸಲು ಯತ್ನಿಸಿದವರ ವಿರುದ್ಧ ಎಫ್‌ಐಆರ್‌‌

ಹಿಂದೂ ವರ್ತಕರ ವ್ಯಾಪಾರ ಮಳಿಗೆಗಳ ಹೆಸರನ್ನು ಬಳಸಿಕೊಂಡು ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ಹರಡಿ ಮತೀಯ ಸಂಘರ್ಷ ಮೂಡಿಸಲು ಯತ್ನಿಸಲಾಗಿದೆ.

- Advertisement -
- Advertisement -

ಹಿಂದೂ ವರ್ತಕರ ವ್ಯಾಪಾರ ಮಳಿಗೆಗಳ ಹೆಸರನ್ನು ಬಳಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಡಿ ಮತೀಯ ಸಂಘರ್ಷವನ್ನು ಮೂಡಿಸಲೆತ್ನಿಸಿದ ದುಷ್ಕರ್ಮಿಗಳ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಉಪ್ಪಿನಂಗಡಿ ಪಾರಿಜಾತ ಕಾಂಪ್ಲೆಕ್ಸ್‌ನಲ್ಲಿರುವ ನ್ಯೂ ಅಶ್ವಿನಿ ಟ್ರೇಡರ್ಸ್‌ನ ವರ್ತಕ ಗಣೇಶ್‌ ಬಿ (52) ಅವರು ನೀಡಿದ ದೂರಿನ ಅನ್ವಯ ಪೊಲೀಸರು ಕ್ರಮ ಜರುಗಿಸಿದ್ದಾರೆ. ಐಪಿಸಿ ಸೆಕ್ಷನ್‌ 505 (2) (ವರ್ಗಗಳ ನಡುವೆ ದ್ವೇಷ ಸೃಷ್ಟಿಸಲು ಯತ್ನ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

“ಸುಳ್ಳು ಸುದ್ದಿ ಹರಡಿದವರು ಯಾರೆಂಬುದು ಪತ್ತೆಯಾಗಿಲ್ಲ. ತನಿಖೆ ನಡೆಸಲಾಗುತ್ತಿದೆ” ಎಂದು ಉಪ್ಪಿನಂಗಡಿ ಪೊಲೀಸ್ ಠಾಣೆ ‘ನಾನುಗೌರಿ.ಕಾಂ’ಗೆ ಖಚಿತಪಡಿಸಿದೆ. “ಬೇರ್‍ಯಾವುದೇ ಸೆಕ್ಷನ್‌ ದಾಖಲಿಸಲಾಗಿಲ್ಲ” ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಗಣೇಶ್‌ ಬಿ ಅವರು ತಮ್ಮ ದೂರಿನಲ್ಲಿ, “ಉಪ್ಪಿನಂಗಡಿಯಲ್ಲಿ ನ್ಯೂ ಅಶ್ವಿನಿ ಟ್ರೇಡರ್ಸ್ ಎಂಬ ಉದ್ಯಮವನ್ನು ನಡೆಸಿಕೊಂಡು ಬರುತ್ತಿದ್ದೇನೆ. ಸಮಾಜದ ಎಲ್ಲಾ ಸಮುದಾಯದ ಮಂದಿಯೂ ನಮ್ಮಲ್ಲಿ  ಗ್ರಾಹಕರಾಗಿದ್ದು, ವ್ಯಾಪಾರಿ ಧರ್ಮ ಪಾಲನೆಯೊಂದಿಗೆ ವ್ಯವಹಾರ ನಡೆಸಿಕೊಂಡು ಬರುತ್ತಿದ್ದಾರೆ. ಆದರೆ ಕಿಡಿಗೇಡಿಗಳು ನನ್ನ ಮಳಿಗೆಯ ಹೆಸರು ದುರ್ಬಳಕೆ ಮಾಡಿಕೊಂಡಿದ್ದಾರೆ” ಎಂದು ತಿಳಿಸಿದ್ದಾರೆ.

“ದಿನಾಂಕ 24/03/2022ರ ಗುರುವಾರದಂದು ವಾಟ್ಸಪ್‌‌ ಮೂಲಕ ಶಾಂತಿ ಭಂಗ ಹಾಗೂ ಮತೀಯ ದ್ವೇಷ ಮೂಡಿಸುವ ರೀತಿಯಲ್ಲಿ ದುಷ್ಕರ್ಮಿಗಳು ಸಂದೇಶವೊಂದನ್ನು ಸೃಷ್ಟಿಸಿ ಸಮಾಜದಲ್ಲಿ ಕ್ಲೇಷ ಮೂಡಿಸಲು ಯತ್ನಿಸಿದ್ದಾರೆ. ಆ ಮೂಲಕ ವ್ಯವಹಾರಕ್ಕೆ ತೊಂದರೆಯೊಡ್ಡುವ ಕೃತ್ಯವನ್ನು ಎಸಗಿದ್ದಾರೆ” ಎಂದು ಗಣೇಶ್ ಆರೋಪಿಸಿದ್ದಾರೆ.

“ಸದರಿ ಸಂದೇಶದಲ್ಲಿ ಹಿಂದೂ ವರ್ತಕರ ಒಕ್ಕೂಟ ಉಪ್ಪಿನಂಗಡಿ ಎಂದೂ ಉಲ್ಲೇಖಿಸಿ ನನ್ನ ಅಂಗಡಿಯ ಹೆಸರನ್ನೂ ಸೇರಿದಂತೆ 32 ಹಿಂದೂ ಸಮುದಾಯದ ಅಂಗಡಿಗಳ ಹೆಸರನ್ನು ಬಳಸಿ, -ನಮ್ಮ ಅಂಗಡಿಗಳಿಂದ ಯಾವುದೇ ಸಾಮಗ್ರಿಗಳನ್ನು ಮುಸ್ಲಿಮರಿಗೆ ಕೊಡುವುದಿಲ್ಲ. ನಮಗೆ ಹಿಂದೂ ಸಹೋದರರ ವ್ಯಾಪಾರ ಧಾರಾಳ- ಎಂಬಿತ್ಯಾದಿಯಾಗಿ ಮತೀಯ ದ್ವೇಷದ ವಾಕ್ಯಗಳನ್ನು ರಚಿಸಿ ಸಾಮಾಜಿಕ ತಾಲತಾಣಗಳಲ್ಲಿ ಹರಿಯಬಿಡಲಾಗಿದೆ” ಎಂದು ದೂರಿನಲ್ಲಿ ತಿಳಿಸಲಾಗಿದೆ.

“ಇದು ಪ್ರಸ್ತುತ ಸನ್ನಿವೇಶದಲ್ಲಿ ಮತೀಯ ಸಂಘರ್ಷವನ್ನು ಉಂಟು ಮಾಡುವ ಹುನ್ನಾರದಿಂದ ನಡೆಸಿದ ಷಡ್ಯಂತ್ರವಾಗಿದ್ದು, ಈ ಬಗ್ಗೆ ಪೊಲೀಸ್ ಇಲಾಖೆ ಸೂಕ್ತ ತನಿಖೆ ನಡೆಸಿ, ಸುಳ್ಳು ಸುದ್ದಿಯನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿಸಿದ ದುಷ್ಕರ್ಮಿಗಳ ಪತ್ತೆ ಹಚ್ಚಿ ಕಾನೂನು ಕ್ರಮಕ್ಕೆ ಒಳಪಡಿಸಬೇಕು ಎಂದು ತಮ್ಮಲ್ಲಿ ವಿನಂತಿಸಿಕೊಳ್ಳುತ್ತೇನೆ” ಎಂದು ಕೋರಿದ್ದು, ಸುಳ್ಳು ಸುದ್ದಿಯ ಸ್ಕ್ರೀನ್‌ ಶಾಟ್‌ಗಳನ್ನು ದೂರಿನಲ್ಲಿ ಲಗತ್ತಿಸಿದ್ದಾರೆ.

ಉಪ್ಪಿನಂಗಡಿ ವರ್ತಕರು (PC: VarthaBharati)

ಉಪ್ಪಿನಂಗಡಿ ವರ್ತಕರ ಖಂಡನೆ

ಸುಳ್ಳು ಸುದ್ದಿ ಹರಿಬಿಟ್ಟವರ ವಿರುದ್ಧ ಕ್ರಮ ಜರುಗಿಸಬೇಕೆಂದು ಉಪ್ಪಿನಂಗಡಿ ಹಿಂದೂ ವರ್ತಕರು ಆಗ್ರಹಿಸಿರುವುದಾಗಿ ‘ವಾರ್ತಾ ಭಾರತಿ’ ವರದಿ ಮಾಡಿದೆ.

“ಉಪ್ಪಿನಂಗಡಿಯ ಹಿಂದೂ ವರ್ತಕರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವರದಿಯನ್ನು ಉಪ್ಪಿನಂಗಡಿಯ ಎಲ್ಲಾ ವರ್ತಕರು ಖಂಡಿಸಿದ್ದು, ಇದರ ಬಗ್ಗೆ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕೆಂದು ವರ್ತಕರ ನಿಯೋಗ ಪುತ್ತೂರು ಡಿವೈಎಸ್‌ಪಿ ಗಾನಕುಮಾರಿ ಮತ್ತು ಉಪ್ಪಿನಂಗಡಿ ಸಬ್‌ ಇನ್‌ಸ್ಪೆಕ್ಟರ್‌ ಕಾಂಬಳೆ ಅವರನ್ನು ಭೇಟಿಯಾಗಿ ದೂರು ನೀಡಿದೆ” ಎಂದು ವರದಿಯಾಗಿದೆ.

ನಿಯೋಗದಲ್ಲಿ ಯತೀಶ್‌ ಶೆಟ್ಟಿ ಸುವ್ಯ ಕ್ರೀಮ್‌ ಪಾರ್ಲರ್‌, ಸದಾನಂದ ಕಾರ್‌ ಕ್ಲಬ್‌, ಶಿವಪ್ರಸಾದ್ ರಾಮ್‌ ಮೆಡಿಕಲ್ಸ್‌, ಸಂದೀಶ್ ಶೆಟ್ಟಿ ಟಿಫಿನ್ ಹಾಲ್‌, ಪ್ರಕಾಶ್‌ ಮತ್ತು ಸಹೋದರರು ಅಶ್ವಿನಿ ಟ್ರೇಡರ್ಸ್, ಜಗದೀಶ್ ನಾಯಕ್ ಕರಾಯ, ಚೇತನ್‌ ನಾಯಕ್ ಕರಾಯ, ನಿತ್ಯಾನಂದ ಕಿಣಿ ಕರಾಯ, ಜಯರಾಮ್‌ ಅನ್ನಪೂರ್ಣ, ವೆಂಕಟರಮಣ ನಾಯಕ್‌, ಬಿಜ್ರೇಶ್‌ ಬಿ ಡಾಟ್‌ ಹಾಜರಿದ್ದರು.

ಇವರೊಂದಿಗೆ ವರ್ತಕ ಸಂಘದ ಅಧ್ಯಕ್ಷರಾದ ಪ್ರಶಾಂತ್ ಡಿಕೋಸ್ತಾ, ಉಪಾಧ್ಯಕ್ಷರಾದ ಶಬೀರ್‌ ಕೆಂಪಿ, ಕಾರ್ಯದರ್ಶಿಗಳಾದ ಅಬ್ದುಲ್‌ ರಹಿಮಾನ್ ಯೂನಿಕ್‌, ಸದಸ್ಯರಾದ ಇರ್ಷಾದ್ ಯು.ಟಿ., ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಅಬ್ದುಲ್‌ ರಹಿಮಾನ್ ಮಠ, ಗ್ರಾಮ ಪಂಚಾಯಿತಿ ಸದಸ್ಯರಾದ ತೌಫೀನ್‌ ಯು.ಟಿ., ಇಬ್ರಾಹಿಂ ಆಚಿ, ಜಲೀಲ್ ಮುಕ್ರಿ, ಉಕ್ಬಾಲ್ ಪಾಂಡೇಲ್‌ ಉಪಸ್ಥಿತರಿದ್ದರು.


ಇದನ್ನೂ ಓದಿರಿ: ಹರ್ಷ ಹತ್ಯೆ ಬಳಿಕ ಹಿಂಸಾಚಾರ: ಸಚಿವ ಈಶ್ವರಪ್ಪ ವಿರುದ್ಧ ಪ್ರಕರಣ ದಾಖಲಿಸುವಂತೆ ಕೋರಿ ನ್ಯಾಯಾಲಯದಲ್ಲಿ ಖಾಸಗಿ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...