Homeಕರ್ನಾಟಕಉಪ್ಪಿನಂಗಡಿ: ಹಿಂದೂ ವರ್ತಕರ ದೂರು; ಕೋಮು ದ್ವೇಷ ಸೃಷ್ಟಿಸಲು ಯತ್ನಿಸಿದವರ ವಿರುದ್ಧ ಎಫ್‌ಐಆರ್‌‌

ಉಪ್ಪಿನಂಗಡಿ: ಹಿಂದೂ ವರ್ತಕರ ದೂರು; ಕೋಮು ದ್ವೇಷ ಸೃಷ್ಟಿಸಲು ಯತ್ನಿಸಿದವರ ವಿರುದ್ಧ ಎಫ್‌ಐಆರ್‌‌

ಹಿಂದೂ ವರ್ತಕರ ವ್ಯಾಪಾರ ಮಳಿಗೆಗಳ ಹೆಸರನ್ನು ಬಳಸಿಕೊಂಡು ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ಹರಡಿ ಮತೀಯ ಸಂಘರ್ಷ ಮೂಡಿಸಲು ಯತ್ನಿಸಲಾಗಿದೆ.

- Advertisement -
- Advertisement -

ಹಿಂದೂ ವರ್ತಕರ ವ್ಯಾಪಾರ ಮಳಿಗೆಗಳ ಹೆಸರನ್ನು ಬಳಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಡಿ ಮತೀಯ ಸಂಘರ್ಷವನ್ನು ಮೂಡಿಸಲೆತ್ನಿಸಿದ ದುಷ್ಕರ್ಮಿಗಳ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಉಪ್ಪಿನಂಗಡಿ ಪಾರಿಜಾತ ಕಾಂಪ್ಲೆಕ್ಸ್‌ನಲ್ಲಿರುವ ನ್ಯೂ ಅಶ್ವಿನಿ ಟ್ರೇಡರ್ಸ್‌ನ ವರ್ತಕ ಗಣೇಶ್‌ ಬಿ (52) ಅವರು ನೀಡಿದ ದೂರಿನ ಅನ್ವಯ ಪೊಲೀಸರು ಕ್ರಮ ಜರುಗಿಸಿದ್ದಾರೆ. ಐಪಿಸಿ ಸೆಕ್ಷನ್‌ 505 (2) (ವರ್ಗಗಳ ನಡುವೆ ದ್ವೇಷ ಸೃಷ್ಟಿಸಲು ಯತ್ನ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

“ಸುಳ್ಳು ಸುದ್ದಿ ಹರಡಿದವರು ಯಾರೆಂಬುದು ಪತ್ತೆಯಾಗಿಲ್ಲ. ತನಿಖೆ ನಡೆಸಲಾಗುತ್ತಿದೆ” ಎಂದು ಉಪ್ಪಿನಂಗಡಿ ಪೊಲೀಸ್ ಠಾಣೆ ‘ನಾನುಗೌರಿ.ಕಾಂ’ಗೆ ಖಚಿತಪಡಿಸಿದೆ. “ಬೇರ್‍ಯಾವುದೇ ಸೆಕ್ಷನ್‌ ದಾಖಲಿಸಲಾಗಿಲ್ಲ” ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಗಣೇಶ್‌ ಬಿ ಅವರು ತಮ್ಮ ದೂರಿನಲ್ಲಿ, “ಉಪ್ಪಿನಂಗಡಿಯಲ್ಲಿ ನ್ಯೂ ಅಶ್ವಿನಿ ಟ್ರೇಡರ್ಸ್ ಎಂಬ ಉದ್ಯಮವನ್ನು ನಡೆಸಿಕೊಂಡು ಬರುತ್ತಿದ್ದೇನೆ. ಸಮಾಜದ ಎಲ್ಲಾ ಸಮುದಾಯದ ಮಂದಿಯೂ ನಮ್ಮಲ್ಲಿ  ಗ್ರಾಹಕರಾಗಿದ್ದು, ವ್ಯಾಪಾರಿ ಧರ್ಮ ಪಾಲನೆಯೊಂದಿಗೆ ವ್ಯವಹಾರ ನಡೆಸಿಕೊಂಡು ಬರುತ್ತಿದ್ದಾರೆ. ಆದರೆ ಕಿಡಿಗೇಡಿಗಳು ನನ್ನ ಮಳಿಗೆಯ ಹೆಸರು ದುರ್ಬಳಕೆ ಮಾಡಿಕೊಂಡಿದ್ದಾರೆ” ಎಂದು ತಿಳಿಸಿದ್ದಾರೆ.

“ದಿನಾಂಕ 24/03/2022ರ ಗುರುವಾರದಂದು ವಾಟ್ಸಪ್‌‌ ಮೂಲಕ ಶಾಂತಿ ಭಂಗ ಹಾಗೂ ಮತೀಯ ದ್ವೇಷ ಮೂಡಿಸುವ ರೀತಿಯಲ್ಲಿ ದುಷ್ಕರ್ಮಿಗಳು ಸಂದೇಶವೊಂದನ್ನು ಸೃಷ್ಟಿಸಿ ಸಮಾಜದಲ್ಲಿ ಕ್ಲೇಷ ಮೂಡಿಸಲು ಯತ್ನಿಸಿದ್ದಾರೆ. ಆ ಮೂಲಕ ವ್ಯವಹಾರಕ್ಕೆ ತೊಂದರೆಯೊಡ್ಡುವ ಕೃತ್ಯವನ್ನು ಎಸಗಿದ್ದಾರೆ” ಎಂದು ಗಣೇಶ್ ಆರೋಪಿಸಿದ್ದಾರೆ.

“ಸದರಿ ಸಂದೇಶದಲ್ಲಿ ಹಿಂದೂ ವರ್ತಕರ ಒಕ್ಕೂಟ ಉಪ್ಪಿನಂಗಡಿ ಎಂದೂ ಉಲ್ಲೇಖಿಸಿ ನನ್ನ ಅಂಗಡಿಯ ಹೆಸರನ್ನೂ ಸೇರಿದಂತೆ 32 ಹಿಂದೂ ಸಮುದಾಯದ ಅಂಗಡಿಗಳ ಹೆಸರನ್ನು ಬಳಸಿ, -ನಮ್ಮ ಅಂಗಡಿಗಳಿಂದ ಯಾವುದೇ ಸಾಮಗ್ರಿಗಳನ್ನು ಮುಸ್ಲಿಮರಿಗೆ ಕೊಡುವುದಿಲ್ಲ. ನಮಗೆ ಹಿಂದೂ ಸಹೋದರರ ವ್ಯಾಪಾರ ಧಾರಾಳ- ಎಂಬಿತ್ಯಾದಿಯಾಗಿ ಮತೀಯ ದ್ವೇಷದ ವಾಕ್ಯಗಳನ್ನು ರಚಿಸಿ ಸಾಮಾಜಿಕ ತಾಲತಾಣಗಳಲ್ಲಿ ಹರಿಯಬಿಡಲಾಗಿದೆ” ಎಂದು ದೂರಿನಲ್ಲಿ ತಿಳಿಸಲಾಗಿದೆ.

“ಇದು ಪ್ರಸ್ತುತ ಸನ್ನಿವೇಶದಲ್ಲಿ ಮತೀಯ ಸಂಘರ್ಷವನ್ನು ಉಂಟು ಮಾಡುವ ಹುನ್ನಾರದಿಂದ ನಡೆಸಿದ ಷಡ್ಯಂತ್ರವಾಗಿದ್ದು, ಈ ಬಗ್ಗೆ ಪೊಲೀಸ್ ಇಲಾಖೆ ಸೂಕ್ತ ತನಿಖೆ ನಡೆಸಿ, ಸುಳ್ಳು ಸುದ್ದಿಯನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿಸಿದ ದುಷ್ಕರ್ಮಿಗಳ ಪತ್ತೆ ಹಚ್ಚಿ ಕಾನೂನು ಕ್ರಮಕ್ಕೆ ಒಳಪಡಿಸಬೇಕು ಎಂದು ತಮ್ಮಲ್ಲಿ ವಿನಂತಿಸಿಕೊಳ್ಳುತ್ತೇನೆ” ಎಂದು ಕೋರಿದ್ದು, ಸುಳ್ಳು ಸುದ್ದಿಯ ಸ್ಕ್ರೀನ್‌ ಶಾಟ್‌ಗಳನ್ನು ದೂರಿನಲ್ಲಿ ಲಗತ್ತಿಸಿದ್ದಾರೆ.

ಉಪ್ಪಿನಂಗಡಿ ವರ್ತಕರು (PC: VarthaBharati)

ಉಪ್ಪಿನಂಗಡಿ ವರ್ತಕರ ಖಂಡನೆ

ಸುಳ್ಳು ಸುದ್ದಿ ಹರಿಬಿಟ್ಟವರ ವಿರುದ್ಧ ಕ್ರಮ ಜರುಗಿಸಬೇಕೆಂದು ಉಪ್ಪಿನಂಗಡಿ ಹಿಂದೂ ವರ್ತಕರು ಆಗ್ರಹಿಸಿರುವುದಾಗಿ ‘ವಾರ್ತಾ ಭಾರತಿ’ ವರದಿ ಮಾಡಿದೆ.

“ಉಪ್ಪಿನಂಗಡಿಯ ಹಿಂದೂ ವರ್ತಕರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವರದಿಯನ್ನು ಉಪ್ಪಿನಂಗಡಿಯ ಎಲ್ಲಾ ವರ್ತಕರು ಖಂಡಿಸಿದ್ದು, ಇದರ ಬಗ್ಗೆ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕೆಂದು ವರ್ತಕರ ನಿಯೋಗ ಪುತ್ತೂರು ಡಿವೈಎಸ್‌ಪಿ ಗಾನಕುಮಾರಿ ಮತ್ತು ಉಪ್ಪಿನಂಗಡಿ ಸಬ್‌ ಇನ್‌ಸ್ಪೆಕ್ಟರ್‌ ಕಾಂಬಳೆ ಅವರನ್ನು ಭೇಟಿಯಾಗಿ ದೂರು ನೀಡಿದೆ” ಎಂದು ವರದಿಯಾಗಿದೆ.

ನಿಯೋಗದಲ್ಲಿ ಯತೀಶ್‌ ಶೆಟ್ಟಿ ಸುವ್ಯ ಕ್ರೀಮ್‌ ಪಾರ್ಲರ್‌, ಸದಾನಂದ ಕಾರ್‌ ಕ್ಲಬ್‌, ಶಿವಪ್ರಸಾದ್ ರಾಮ್‌ ಮೆಡಿಕಲ್ಸ್‌, ಸಂದೀಶ್ ಶೆಟ್ಟಿ ಟಿಫಿನ್ ಹಾಲ್‌, ಪ್ರಕಾಶ್‌ ಮತ್ತು ಸಹೋದರರು ಅಶ್ವಿನಿ ಟ್ರೇಡರ್ಸ್, ಜಗದೀಶ್ ನಾಯಕ್ ಕರಾಯ, ಚೇತನ್‌ ನಾಯಕ್ ಕರಾಯ, ನಿತ್ಯಾನಂದ ಕಿಣಿ ಕರಾಯ, ಜಯರಾಮ್‌ ಅನ್ನಪೂರ್ಣ, ವೆಂಕಟರಮಣ ನಾಯಕ್‌, ಬಿಜ್ರೇಶ್‌ ಬಿ ಡಾಟ್‌ ಹಾಜರಿದ್ದರು.

ಇವರೊಂದಿಗೆ ವರ್ತಕ ಸಂಘದ ಅಧ್ಯಕ್ಷರಾದ ಪ್ರಶಾಂತ್ ಡಿಕೋಸ್ತಾ, ಉಪಾಧ್ಯಕ್ಷರಾದ ಶಬೀರ್‌ ಕೆಂಪಿ, ಕಾರ್ಯದರ್ಶಿಗಳಾದ ಅಬ್ದುಲ್‌ ರಹಿಮಾನ್ ಯೂನಿಕ್‌, ಸದಸ್ಯರಾದ ಇರ್ಷಾದ್ ಯು.ಟಿ., ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಅಬ್ದುಲ್‌ ರಹಿಮಾನ್ ಮಠ, ಗ್ರಾಮ ಪಂಚಾಯಿತಿ ಸದಸ್ಯರಾದ ತೌಫೀನ್‌ ಯು.ಟಿ., ಇಬ್ರಾಹಿಂ ಆಚಿ, ಜಲೀಲ್ ಮುಕ್ರಿ, ಉಕ್ಬಾಲ್ ಪಾಂಡೇಲ್‌ ಉಪಸ್ಥಿತರಿದ್ದರು.


ಇದನ್ನೂ ಓದಿರಿ: ಹರ್ಷ ಹತ್ಯೆ ಬಳಿಕ ಹಿಂಸಾಚಾರ: ಸಚಿವ ಈಶ್ವರಪ್ಪ ವಿರುದ್ಧ ಪ್ರಕರಣ ದಾಖಲಿಸುವಂತೆ ಕೋರಿ ನ್ಯಾಯಾಲಯದಲ್ಲಿ ಖಾಸಗಿ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...